ಮೂಡುಬಿದಿರೆ: 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಭಾನುವಾರ ಮೂಡುಬಿದಿರೆಯ ವಂದೇಮಾತರಂ ಸೌಹಾರ್ದ ಸಹಕಾರಿ ಸಂಘದಲ್ಲಿ ಗ್ರಾಹಕರ ಸಮಾವೇಶ ಹಮ್ಮಿಕೊಳ್ಳಲಾಯಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರಿಯ ಅಧ್ಯಕ್ಷರಾದ ಪ್ರೊ. ಎಂ.ವಾಸುದೇವ ಭಟ್ ರವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವಿಶ್ವಕರ್ಮ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದ ವಸಂತ ಅಡ್ಯಂತಾಯರು,ಬ್ಯಾಂಕರ್ ಮತ್ತು ಗ್ರಾಹಕ ಸಂಬಂಧದ ಬಗ್ಗೆ ವಿಷಯ ಮಂಡಿಸಿದರು. ಮುಖ್ಯ ಅತಿಥಿಗಳಾದ ಉಮೇಶ್ ರಾವ್ ಎಂ. ಲೆಕ್ಕಪರಿಶೋಧಕರು ಮೂಡುಬಿದರೆ ಇವರು ಕಾನೂನಿನ ಬಗ್ಗೆ ಸಲಹೆ ನೀಡಿದರು. ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಕೇಶ್ ಉಪಸ್ಥಿತರಿದ್ದರು. ಸಹಕಾರಿಯ ನಿರ್ದೇಶಕರು, ಸಿಬ್ಬಂದಿಗಳು, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಸಹಕಾರಿಯ ಸದಸ್ಯರು ಭಾಗವಹಿಸಿದರು.



