ಕ್ಯಾಂಪ್ಕೊ ಸಂಸ್ಥೆಗೆ ನೂತನ ಸಾರಥ್ಯ: ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ ಆಯ್ಕೆ
ಮಂಗಳೂರು: ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೋ ಮಾರ್ಕೆಟಿಂಗ್ ಆಂಡ್ ಪ್ರೋಸೆಸ್ಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ), ಮಂಗಳೂರು – ಇದರ ನೂತನ ಅಧ್ಯಕ್ಷರಾಗಿ ಎಸ್. ಆರ್ ಸತೀಶ್ಚಂದ್ರ, ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
https://chat.whatsapp.com/JVAtKKe2M19AFO3W5629ZS?mode=ems_copy_t
2025-2030ರ ಅವಧಿಯ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ, ಎಸ್. ಆರ್. ಸತೀಶ್ಚ0ದ್ರ ಅವರನ್ನು ನೂತನ ಅಧ್ಯಕ್ಷರನ್ನಾಗಿ ಹಾಗೂ ಶ್ರೀ ಪದ್ಮರಾಜ್ ಪಟ್ಟಾಜೆ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದವರಾದ ಎಸ್. ಆರ್. ಸತೀಶ್ಚಂದ್ರ ಅವರು ಸಹಕಾರಿ ಕ್ಷೇತ್ರದಲ್ಲಿ ಹಿರಿಯರಾಗಿದ್ದು ಎರಡೂವರೆ ದಶಕಗಳಿಗೂ ಹೆಚ್ಚಿನ ಸುದೀರ್ಘ ಅನುಭವ ಹೊಂದಿದ್ದಾರೆ. ಇವರು 2015-2020ರ ಅವಧಿಯಲ್ಲೂ ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ನಿರ್ಗಮಿತ ಆಡಳಿತ ಮಂಡಳಿಯಲ್ಲಿ ನಿರ್ದೇಶಕರಾಗಿದ್ದರು. ಕೃಷಿ ಹಾಗೂ ಸಹಕಾರಿ ವಲಯದಲ್ಲಿ ಇವರ ನಾಯಕತ್ವಕ್ಕೆ ಅಪಾರ ಮನ್ನಣೆಯಿದೆ.
ಕಾಸರಗೋಡಿನ ಪಟ್ಟಾಜೆ-ಬದಿಯಡ್ಕ ಮೂಲದ ಪ್ರಗತಿಪರ ಕೃಷಿಕರಾದ ಪದ್ಮರಾಜ್ ಪಟ್ಟಾಜೆ ಅವರು ದೀರ್ಘಕಾಲದಿಂದ ಸಹಕಾರಿ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರು ಸತತ ಎರಡು ಅವಧಿಗೆ ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಸಾಲಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ಇತರ ವಿವಿಧ ಪ್ರಮುಖ ಸಹಕಾರಿ ಸಂಸ್ಥೆಗಳಲ್ಲಿಯೂ ಮಹತ್ತರ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ.
ಈ ಮೇಲಿನ ಚುನಾವಣಾ ಫಲಿತಾಂಶಗಳು ನವದೆಹಲಿಯ ಭಾರತ ಸರ್ಕಾರದ ಸಹಕಾರ ಸಚಿವಾಲಯದ ಅಡಿಯಲ್ಲಿ ಬರುವ ‘ಸಹಕಾರಿ ಚುನಾವಣಾ ಪ್ರಾಧಿಕಾರ’ದ (Cooperative Election Authority) ಅಧಿಕೃತ ಅನುಮೋದನೆಯನ್ನು ಪಡೆದ ಬಳಿಕವಷ್ಟೇ ಅಧಿಕೃತವಾಗಿ ಘೋಷಣೆಯಾಗಲಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

