ಮೂಡುಬಿದಿರೆ: ಇಲ್ಲಿನ ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನೂತನ ಸ್ಥಳಾಂತರಿತ ಸ್ವಂತ ಕಟ್ಟಡದ ಉದ್ಘಾಟನಾ ಸಮಾರಂಭ ಜನವರಿ 22ರ ಗುರುವಾರ ಮೂಡುಬಿದಿರೆ ಪುರಸಭೆಯ ಎದುರಿನ ಫಾರ್ಚೂನ್ ನೀತಿ ಹೈಟ್ಸ್ ಕಟ್ಟಡದಲ್ಲಿ ನಡೆಯಲಿದೆ.
https://chat.whatsapp.com/FCEnlTkAKCC0MGPhXtX4i4
ಬೆಳಗ್ಗೆ 10ಕ್ಕೆ ಶಾಸಕ ಉಮಾನಾಥ ಎ.ಕೋಟ್ಯಾನ್ ಉದ್ಘಾಟನೆ ನೆರವೇರಿಸಲಿದ್ದು, ಮೂಡುಬಿದಿರೆ ಶ್ರೀ ದಿಗಂಬರ ಜೈನ ಮಠದ ಜಗದ್ಗುರು ಡಾ.ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ರಂಜಿತ್ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವ, ಉದ್ಯಮಿಗಳಾದ ಕೆ.ಶ್ರೀಪತಿ ಭಟ್, ಶಶಿಧರ ಶೆಟ್ಟಿ ನವಶಕ್ತಿ ಬೆಳ್ತಂಗಡಿ, ಮಾಜಿ ಸಚಿವರಾದ ಕೃಷ್ಣ ಜೆ.ಪಾಲೇಮಾರ್, ಅಭಯಚಂದ್ರ ಜೈನ್, ಅಸೋಸಿಯೇಟ್ ಡೀನ್ ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ., ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಸಹಕಾರಿ ರತ್ನ ಭಾಸ್ಕರ್ ಎಸ್ ಕೋಟ್ಯಾನ್, ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಯ ಅಧ್ಯಕ್ಷರಾದ ಎಂ.ಬಾಹುಬಲಿ ಪ್ರಸಾದ್, ಶ್ರೇಷ್ಠ ಡೆವಲಪರ್ಸ್ನ ಮೇಘನಾಥ ಶೆಟ್ಟಿ, ಉದ್ಯಮಿಗಳಾದ ಅಬುಲಾಲ್ ಪುತ್ತಿಗೆ ಮತ್ತು ಅಶ್ವಿನ್ ಜೆ.ಪಿರೇರ ಭಾಗವಹಿಸಲಿದ್ದಾರೆ.
ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶಂಕರನಾರಾಯಣ ಭಟ್, ನಿರ್ದೇಶಕರಾದ ಸುರೇಶ್ ಪೂಜಾರಿ ಎಂ., ರಮೇಶ್ ಎಸ್. ಶೆಟ್ಟಿ, ರವೀಂದ್ರ ಕರ್ಕೇರ, ಗೋಪಾಲ್ ಶೆಟ್ಟಿಗಾರ್, ರಾಜೇಂದ್ರ ಬಿ., ಶರತ್ ಜೆ.ಶೆಟ್ಟಿ, ಉಷಾ ಭಂಡಾರಿ, ರತ್ನಾಕರ ಪೂಜಾರಿ, ನಾಗೇಶ್ ನಾಯ್ಕ, ಮೀನಾಕ್ಷಿ ಅಂಚನ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ರಾಜಶೇಖರ್ ಮಧ್ಯಸ್ಥ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com



