ವಿಜಯಪುರ: ಇಲ್ಲಿನ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಗೆ ಪರಶುರಾಮ ಚಿಂಚಲಿ ಹಾಗೂ ದೀಪಕ ಶಿಂತ್ರೆ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
https://chat.whatsapp.com/FCEnlTkAKCC0MGPhXtX4i4
ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಯ ಸದಸ್ಯರ ಸಭೆ ಅಧ್ಯಕ್ಷರಾದ ಸಂಜಯ ಪಾಟೀಲ ಕನಮಡಿ ಅವರ ಅಧ್ಯಕ್ಷತೆಯಲ್ಲಿ ಚಾಲುಕ್ಯ ನಗರದ ಕಚೇರಿಯಲ್ಲಿ ಜರುಗಿತು. ಈ ಸಭೆಯಲ್ಲಿ ಆಡಳಿತ ಮಂಡಳಿಗೆ ಸಹಕಾರಿ ಕ್ಷೇತ್ರದಲ್ಲಿ ಅನುಭವಿಗಳನ್ನು, ಪರಿಣಿತರನ್ನು ಸೇರಿಸಿಕೊಳ್ಳಲು ತೀರ್ಮಾನಿಸಿ ಸಹಕಾರ ಇಲಾಖೆಯ ನಿವೃತ್ತ ಅಧಿಕಾರಿ ಪರಶುರಾಮ ಚಿಂಚಲಿ ಹಾಗೂ ಸುಮಾರು ೨೫ ವರ್ಷಗಳ ಕಾಲ ಸಹಕಾರ ಕ್ಷೇತ್ರದ ಅನುಭವವಿರುವ ದೀಪಕ ಶಿಂತ್ರೆ ಇವರುಗಳನ್ನು ಒಕ್ಕೂಟದ ಆಡಳಿತ ಮಂಡಳಿಗೆ ನಾಮನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಚಂದ್ರಶೇಖರ್ ಕವಟಗಿ, ಆಡಳಿತ ಮಂಡಳಿಯ ಸದಸ್ಯರಾದ ಸುರೇಶ ಬಿರಾದಾರ, ಸಿದ್ದು ಮಲ್ಲಿಕಾರ್ಜುನಮಠ, ಅರುಣ್ ವಾರದ, ಅರುಣ್ ಮಠ , ಬಾಲಚಂದ್ರ ಮುಂಜಾಣೆ, ಯಮನಪ್ಪ ಸಾತಿಹಾಳ, ಕಾಂತುಗೌಡ ಪಾಟೀಲ,(ಚಂದ್ರಕಾಂತ ), ರಾಜು ಹಂಚಾಟೆ, ಮಲ್ಕಪ್ಪ ರೊಟ್ಟಿ, ಆರ್ ಡಿ ಕುಲಕರ್ಣಿ, ವಿವೇಕಾನಂದ ಶಿರೋಳಕರ, ಸತೀಶ್ ಶಿಂತ್ರೆ, ಮೌನೇಶ ಪತ್ತಾರ ಮೊದಲಾದವರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com




