ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಆಚಾರ್ಯ ಹೇಳಿಕೆ
ಮೂಡುಬಿದಿರೆ: ವಿಶ್ವಕರ್ಮ ಬ್ಯಾಂಕ್ ಬ್ಯಾಂಕಿಂಗ್ ಚಟುವಟಿಕೆಗಳೊಂದಿಗೆ ಸಮಾಜಮುಖಿಯಾಗಿ ಸ್ವಚ್ಛತೆಯಂತಹ ಪರಿಸರ ಜಾಗೃತಿಯ ಗುರುತರವಾದ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಕೃಷ್ಣ ಆಚಾರ್ಯ ಹೇಳಿದರು.
https://news.sahakaraspandana.in/archives/15217
ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಧ್ಯೇಯದಂತೆ ಭಾನುವಾರ ನಡೆದ 30ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂಸೇವಕರನ್ನು ಉದ್ದೇಶಿಸಿ ಹೇಳಿದರು.
ವಿಶ್ವಕರ್ಮ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಸೀತಾರಾಮ ಆಚಾರ್ಯ ಬೆಳುವಾಯಿ ಹಾಗೂ ರೋಟರಿ ಕ್ಲಬ್ ಟೆಂಪಲ್ ಟೌನ್ ಮೂಡುಬಿದಿರೆ ಇದರ ಅಧ್ಯಕ್ಷ ಹರೀಶ್ ಎಂ.ಕೆ. ಹಸಿರು ನಿಶಾನೆ ತೋರುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು.
ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನ ಪರಿಸರ, ಜೈನಪೇಟೆ ಹಾಗೂ ಆಲಂಗಾರು ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.





ಬ್ಯಾಂಕಿನ ಹಿರಿಯ ನಿರ್ದೇಶಕರಾದ ಡಿ.ಭಾಸ್ಕರ್ ಆಚಾರ್ಯ, ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಪದಾಧಿಕಾರಿಗಳು ಹಾಗೂ ಸದಸ್ಯರು, ಕಾಳಿಕಾಂಬಾ ಸೇವಾ ಸಮಿತಿ ಅಧ್ಯಕ್ಷ ಶ್ರೀನಾಥ್ ಆಚಾರ್ಯ ಹಾಗೂ ಸದಸ್ಯರು, ಪ್ರೆಸ್ ಕ್ಲಬ್ ಮೂಡುಬಿದಿರೆ ಇದರ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು, ರೋಟರಿ ಕ್ಲಬ್ ಟೆಂಪಲ್ ಟೌನ್ ಮೂಡುಬಿದಿರೆ, ಜವನೆರ್ ಬೆದ್ರ ಫೌಂಡೇಶನ್ ಮೂಡುಬಿದಿರೆ, ಕಾಳಿಕಾಂಬಾ ಮಹಿಳಾ ಸಮಿತಿ, ಗುರು ಕಾಷ್ಠ ಶಿಲ್ಪಕಲಾ ಸಂಘ, ಚಿನ್ನದ ಕೆಲಸಗಾರರ ಹಿತರಕ್ಷಣಾ ವೇದಿಕೆ, ಕಾಳಿಕಾಂಬಾ ಭಜನಾ ಮಂಡಳಿ, ಪ್ರೇರಣಾ ಸೇವಾ ಟ್ರಸ್ಟ್ ಮುಂತಾದ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ಶಾಖಾಧಿಕಾರಿ ನಿತಿನ್ ಕೆ. ಹಾಗೂ ಸಿಬ್ಬಂದಿಗಳು, ಬ್ಯಾಂಕಿನ ಸದಸ್ಯರು, ಗ್ರಾಹಕರು ಹಾಗೂ ಹಿತೈಷಿಗಳು ಭಾಗವಹಿಸಿ ಶ್ರಮದಾನದಲ್ಲಿ ಕೈ ಜೋಡಿಸಿ ಸಹಕರಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

