Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನರ ವಿಶ್ವಾಸವೇ ಸಹಕಾರಿ ಕ್ಷೇತ್ರದ ಶಕ್ತಿ
    News

    ಜನರ ವಿಶ್ವಾಸವೇ ಸಹಕಾರಿ ಕ್ಷೇತ್ರದ ಶಕ್ತಿ

    adminBy adminMarch 2, 2026

    ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪದಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಭಿಪ್ರಾಯ

    ಮೂಡುಬಿದಿರೆ: ಜನರ ವಿಶ್ವಾಸವೇ ಸಹಕಾರಿ ಕ್ಷೇತ್ರದ ನಿಜವಾದ ಶಕ್ತಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ನೆತ್ತೋಡಿ–ಮಾರೂರಿನ ಎ.ಪಿ. ಗಾರ್ಡನ್‌ನಲ್ಲಿ ಶನಿವಾರ ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಾಣಿಜ್ಯ ಬ್ಯಾಂಕ್‌ಗಳು ಗ್ರಾಮೀಣ ಪ್ರದೇಶಗಳಲ್ಲಿ ಶಾಖೆಗಳನ್ನು ಮುಚ್ಚುತ್ತಿರುವ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ್‌ಗಳು ಜನರಿಗೆ ಇನ್ನಷ್ಟು ಹತ್ತಿರವಾಗುತ್ತಿವೆ. ಕೃಷಿಕರು, ಕೂಲಿ ಕಾರ್ಮಿಕರು ಹಾಗೂ ಸಣ್ಣ ವ್ಯಾಪಾರಸ್ಥರ ಆರ್ಥಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ಸಾಲ ಸೌಲಭ್ಯ ಒದಗಿಸುವುದು ಸಹಕಾರಿ ಬ್ಯಾಂಕ್‌ಗಳ ಬದ್ಧತೆಯಾಗಿದೆ. ಸಹಕಾರಿ ಸಂಘಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಸವಿನೆನಪಿಗಾಗಿ 100 ಕೋಟಿ ರೂ. ಗಿಂತ ಅಧಿಕ ವ್ಯವಹಾರದ ಗುರಿ ಹೊಂದುವಂತೆ ಯೋಜನೆ ರೂಪಿಸಬೇಕು. ಆಡಳಿತ ಮಂಡಳಿ ದೃಢಸಂಕಲ್ಪದಿಂದ ಶ್ರಮಿಸಿದರೆ ಈ ಗುರಿ ಕೆಲವೇ ವರ್ಷಗಳಲ್ಲಿ ಸಾಧಿಸಬಹುದು ಎಂದರು.
    ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆ ಹಲವು ಸಾಧ್ಯತೆಗಳ ಸಾಗರವಾಗಿದೆ. ಸಹಕಾರಿ ಕ್ಷೇತ್ರವನ್ನು ಹೊಸ ಮಾದರಿಯಾಗಿ ರೂಪಿಸುವ ಅಗತ್ಯವಿದೆ. ಕೃತಕ ಹವಾಮಾನ ನಿಯಂತ್ರಿತ ಗ್ರೀನ್‌ಹೌಸ್ ನಿರ್ಮಿಸಿ ಮಹಿಳೆಯರನ್ನು ಉದ್ಯೋಗದಲ್ಲಿ ತೊಡಗಿಸಿ ತರಕಾರಿ ಬೆಳೆ ಬೆಳೆಸಿ ವಿದೇಶಗಳಿಗೆ ರಫ್ತು ಮಾಡಿದರೆ ಮಹಿಳೆಯರ ಸ್ವಾವಲಂಬನೆಗೆ ದಾರಿ ತೆರೆದಂತಾಗುತ್ತದೆ ಎಂದು ಹೇಳಿದರು.
    ಸಂಘದ ಅಧ್ಯಕ್ಷ ಅಶ್ವಿನ್ ಜೊಸ್ಸಿ ಪಿರೇರ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಶಾಲೆಟ್ ಪಿಂಟೊ ಶುಭ ಹಾರೈಸಿದರು.


    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ತಾಕೋಡೆ ಪವಿತ್ರ ಶಿಲುಬೆಯ ದೇವಾಲಯದ ಧರ್ಮಗುರು ರೋಹನ್ ಲೋಬೋ, ಹನ್ನೆರಡು ಕವಲು ಪಂಚಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಸದಾಶಿವ ಭಟ್ ಮುಖ್ಯ ಅತಿಥಿಗಳಾಗಿದ್ದರು. ಬ್ಯಾಂಕ್ ವತಿಯಿಂದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ಎಡ್ವಿನ್ ಡಿಸೋಜ, ನಿರ್ದೇಶಕರಾದ ರತ್ನಾಕರ ಶೆಟ್ಟಿ, ಶೇಖರ ಎಂ., ದಿವಾಕರ, ಜೋನ್ ರೇಗೋ, ಪೂವಪ್ಪ ಎಂ.ಅಂಚನ್, ಜಯಶ್ರೀ ಎಸ್., ಪಾವ್ಲಿನ್ ಪ್ಲೋಸಿ ಪಿಂಟೋ, ಸಂಜಯ್ ಅತಿಕಾರಿ ಉಪಸ್ಥಿತರಿದ್ದರು.
    ಸಂಘದ ನಿರ್ದೇಶಕ ಜೋಯ್ಲಸ್ ಡಿಸೋಜ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಫ್ರಾನ್ಸಿಸ್ ಮೆಂಡೋನ್ಸ ವರದಿ ಮಂಡಿಸಿದರು. ನಿರ್ದೇಶಕರಾದ ರೋಹನ್‌ ಕರ್ಡೋಜ, ಅಶ್ವಿನ್ ಜೊಸ್ಸಿ ಪಿರೇರ ಹಾಗೂ ಮಾಜಿ ಅಧ್ಯಕ್ಷರನ್ನು ಪರಿಚಯಿಸಿದರು. ಸುಹಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ರೆಕ್ಸನ್ ಪಿಂಟೋ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Dr. M.N Rajendrakumar Karinje Seva Sahakari Sangha PA Garden Shalet Pinto
    Previous Articleಸಹಕಾರ ಭಾರತಿ ಕ್ರೀಡೋತ್ಸವದಲ್ಲಿ ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ
    Next Article ಸಹಕಾರಿ ಬ್ಯಾಂಕ್‌ಗಳಿಂದ ಸ್ವಾವಲಂಬಿ ಬದುಕು

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.