Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ಬೋಳಾರ ಶಾಖೆ ನಾಳೆ ಉದ್ಘಾಟನೆ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ಬೋಳಾರ ಶಾಖೆ ನಾಳೆ ಉದ್ಘಾಟನೆ

    adminBy adminMarch 24, 2026

    ಮಂಗಳೂರು: ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ನೂತನ ಬೋಳಾರ ಶಾಖೆಯು ಮಾರ್ಚ್ 25ರಂದು ಉದ್ಘಾಟನೆಗೊಳ್ಳಲಿದೆ. ಆತ್ಮಶಕ್ತಿ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ 33 ಶಾಖೆಗಳನ್ನು ಹೊಂದಿದ್ದು, ತನ್ನ ನೂತನ 34ನೇ ಬೋಳಾರ ಶಾಖೆಯನ್ನು ಯುನಿಕ್ ಸ್ಟಿಕ್ ಕಾಂಪ್ಲೆಕ್ಸ್ ಭಗಿನಿ ಸಮಾಜದ ಬಳಿ ಜೆಪ್ಪು ಮಾರ್ಕೆಟ್, ಬೋಳಾರ, ಮಂಗಳೂರು, ಇಲ್ಲಿ ಮಾರ್ಚ್ 25ರಂದು ಬುಧವಾರ ಪೂರ್ವಾಹ್ನ 11 ಗಂಟೆಗೆ ಸಾರ್ವಜನಿಕ ಸೇವೆಗಾಗಿ ಲೋಕಾರ್ಪಣೆಗೊಳ್ಳಲಿದೆ.

    https://chat.whatsapp.com/FCEnlTkAKCC0MGPhXtX4i4
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್ ವಹಿಸಲಿದ್ದಾರೆ. ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್ ನೂತನ ಶಾಖೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಸಮಾಜ ಸೇವಕಿ ತಾರಾ ಹೇಮಚಂದ್ರ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಅಂಬಾ ಮಹೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಸೀತಾರಾಮ್ ಎ. ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ. ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಸಿ. ಪ್ರಸಾದ್ ರೆಡ್ಡಿ ಗಣಕೀಕೃತ ಬ್ಯಾಂಕಿಂಗ್ ಗೆ ಚಾಲನೆ ನೀಡಲಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಮಾಜಿ ಮಹಾಪೌರರಾದ ಪ್ರೇಮಾನಂದ ಶೆಟ್ಟಿ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮಂಗಳೂರು ಕೋ-ಆಪರೇಟಿವ್ ಬಿಲ್ಡಿಂಗ್ ಸೊಸೈಟಿಯ ಅಧ್ಯಕ್ಷರಾದ ರಂಜನ್ ಮಿಜಾರ್ ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮಂಗಳಾದೇವಿ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಅಶೋಕ್ ಕುಮಾರ್ ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ. ದ.ಕ ಜಿಲ್ಲಾ ಅಮೆಚೂರು ಕುಸ್ತಿ ಫೆಡರೇಷನ್‌ನ ಅಧ್ಯಕ್ಷರಾದ ದಿಲ್‌ರಾಜ್ ಆಳ್ವ ಭವಿಷ್ಯ ಸುರಕ್ಷಾ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಿಲ್ಲವ ಸಂಘ ಮಂಗಳಾದೇವಿಯ ಅಧ್ಯಕ್ಷರಾದ ರಾಜರತ್ನ ಸನಿಲ್ ಉಳಿತಾಯ ಖಾತೆಗೆ ಚಾಲನೆ ನೀಡಲಿದ್ದಾರೆ. ದ.ಕ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್ ಆವರ್ತನ ಠೇವಣಿಗೆ ಚಾಲನೆ ನೀಡಲಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಭಾನುಮತಿ ಪಿಗ್ಮಿ ಖಾತೆಗೆ ಚಾಲನೆ ನೀಡಲಿದ್ದಾರೆ. ಬೋಳಾರದ ಉದ್ಯಮಿ ರಮಾನಂದ ಪೂಜಾರಿ ಹಾಗೂ ಕಟ್ಟಡದ ಮಾಲಿಕರಾದ ಜೆನೆಟ್ ಮೆಲ್ವಿನ್ ಡಿಸೋಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ 100 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.8.50, 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10.00 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10.50 ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ. ಸಹಕಾರಿ ಸಂಘದ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿಯ ಪ್ರಯೋಜನ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakthi Vividhoddesha Sahakari Sangha Bolara Branch Krishna J Palemar
    Previous Articleಸ್ವಚ್ಛತೆಯ ಕಾರ್ಯ ಅತ್ಯಂತ ಶ್ಲಾಘನೀಯ
    Next Article ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯ ನೆರವು ಹಸ್ತಾಂತರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.