Close Menu
    Top News

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 28ನೇ ಶಾಖೆ ನಾಳೆ ಕೈಕಂಬದಲ್ಲಿ ಉದ್ಘಾಟನೆ
    News

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 28ನೇ ಶಾಖೆ ನಾಳೆ ಕೈಕಂಬದಲ್ಲಿ ಉದ್ಘಾಟನೆ

    adminBy adminJune 18, 2026

    ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ, ಬೆಳ್ತಂಗಡಿ ಇದರ 28ನೇ ನೂತನ ಶಾಖೆಯು ಗುರುಪುರ-ಕೈಕಂಬದ ಅನಂತ ಮಹಲ್ ಕಾಂಪ್ಲೆಕ್ಸ್‌ನಲ್ಲಿ ಜೂನ್‌ 19ರಂದು ಉದ್ಘಾಟನೆಗೊಳ್ಳಲಿದೆ.

    https://chat.whatsapp.com/FCEnlTkAKCC0MGPhXtX4i4
    ನೂತನ ಶಾಖೆಯ ಕಚೇರಿಯ ಉದ್ಘಾಟನೆಯನ್ನು ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಶೆಟ್ಟಿ ಏತಮೊಗರು ದೊಡ್ಡಮನೆ ಅವರು ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ. ಅವರು ವಹಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಬಿಲ್ಲವ ಸಮಾಜ ಸೇವಾ ಸಂಘ, ಬಂಟ್ವಾಳ ಇದರ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಭದ್ರತಾ ಕೋಶವನ್ನು ಎಸ್‌ಆರ್‌ಆರ್ ಮಸಾಲ ಇಂಡಸ್ಟ್ರೀಸ್ ಮಂಗಳೂರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶೈಲೇಂದ್ರ ವೈ.ಸುವರ್ಣ, ಗಣಕ ಯಂತ್ರವನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ, ಕೈಕಂಬ ಇದರ ಅಧ್ಯಕ್ಷ ವಿನೋದ್ ಮಾಡ ಅವರು ಉದ್ಘಾಟಿಸಲಿದ್ದಾರೆ. ನಿರಖು ಠೇವಣಿ ಪತ್ರವನ್ನು ಹೊಟೇಲ್ ಶ್ರೀರಾಮ್ ಕೈಕಂಬದ ಮಾಲಕ ಎಂ.ಹರಿರಾವ್, ಉಳಿತಾಯ ಖಾತೆ ಪುಸ್ತಕವನ್ನು ಗಂಜಿಮಠ ಗ್ರಾಮ ಪಂಚಾಯತ್‌ ನಿಕಟಪೂರ್ವ ಅಧ್ಯಕ್ಷೆ ಮಾಲತಿ ಎಂ. ವಿತರಿಸಲಿದ್ದಾರೆ.
    ಮುಖ್ಯ ಅತಿಥಿಯಾಗಿ ಬಿಲ್ಲವ ಸಮಾಜ ಸೇವಾ ಸಂಘ, ಗುರುಪುರ ಇದರ ಅಧ್ಯಕ್ಷ ಬಾಲಕೃಷ್ಣ ಕೋಟ್ಯಾನ್, ಉದ್ಯಮಿಗಳಾದ ರೋಮನ್ಸ್ ಬೇಸಿಲ್ ಲೋಬೋ, ಗೋಪಾಲಕೃಷ್ಣಕೆ., ಎಂ.ಎಫ್.ಮುಸ್ತಫಾ, ಸತೀಶ್ಚಂದ್ರ ಇರುವೈಲು ಪಾಣಿಲ, ಕಟ್ಟಡದ ಮಾಲಕ ರಾಜೇಶ್ ಪೈ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಸುನಿಲ್, ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಕಂದಾವರ ಇದರ ಅಧ್ಯಕ್ಷ ದಿನೇಶ್, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಮಳಲಿ ಇದರ ಅಧ್ಯಕ್ಷ ಕೇಶವ ಪೂಜಾರಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಬೂಬ ಪೂಜಾರಿ ಮಳಲಿ ಮುಂತಾದವರು ಆಗಮಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Bhageeratha G Bhuvanesh pacchindaka Buba Poojary Malali Karnataka Tulu Sahitya Academy Shree Gurudeva Vividhoddesha Sahakara Sangha Beltangady
    Previous Articleಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪಡೀಲ್ ಶಾಖೆ ದ.ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಸ್ಥಳಾಂತರ
    Next Article ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿಯ ಮಾಹಿತಿ ಅಗತ್ಯ

    Related Posts

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.