ವಿಶ್ವಕರ್ಮ ಸಹಕಾರ ಬ್ಯಾಂಕಿನಲ್ಲಿ ಯೋಗ ದಿನ ಆಚರಣೆ
ಮಂಗಳೂರು: ಇಂದಿನ ಜಗತ್ತಿನಲ್ಲಿ ಮಾನವನ ಜೀವನ ಶೈಲಿ ಬದಲಾಗುತ್ತಿದೆ. ಪರಿಸರ ಆಹಾರ ಪದ್ಧತಿ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಉದ್ಯೋಗ ಕ್ಷೇತ್ರ, ಉದ್ಯಮ ಕ್ಷೇತ್ರ ಹೆಚ್ಚು ಹೆಚ್ಚು ಒತ್ತಡ ಹೇರುತ್ತಿದೆ. ಇಂದು ಒತ್ತಡ ನಿಭಾವಣೆಯೇ ಅತ್ಯಂತ ಸವಾಲಿನದ್ದಾಗುತ್ತಿದೆ. ಯೋಗಾಧಾರಿತ ಜೀವನ ಕ್ರಮವನ್ನು ಅನುಸರಿಸಿದರೆ ಒತ್ತಡ ರಹಿತ ಜೀವನ ಸಾಧ್ಯ ಎಂದು ತರ್ಜನಿ ಕಮ್ಯುನಿಕೇಷನ್ನ ರಮೇಶ್ ಪ್ರಭು ಹೇಳಿದರು.
https://chat.whatsapp.com/FCEnlTkAKCC0MGPhXtX4i4
ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನಲ್ಲಿ ಜರುಗಿದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ನಿರಂತರ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸಮತೋಲನ ವೃದ್ಧಿಯಾಗುತ್ತದೆ. ನಿಯಮಿತವಾಗಿ ಯೋಗ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಬಹುದು ಹಾಗೂ ಉತ್ತಮ ಜೀವನಶೈಲಿಯನ್ನು ರೂಪಿಸಿಕೊಳ್ಳಬಹುದಾಗಿದೆ ಎಂದು ಯೋಗದ ಮಹತ್ವವನ್ನು ತಿಳಿಸಿದರು.
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಗುರುಗಳಾದ ಲೋಕೇಶ್ ಆಚಾರ್ಯ ಹಾಗೂ ಜಯಂತಿ ಲೋಕೇಶ್ ಆಚಾರ್ಯ ಅವರು ನೇತೃತ್ವ ವಹಿಸಿ ಯೋಗಾಭ್ಯಾಸ ನಡೆಸಿಕೊಟ್ಟರು. ಬ್ಯಾಂಕಿನ ನಿರ್ದೇಶಕರಾದ ಭರತ್ ನಿಡ್ಪಳ್ಳಿ, ವ್ಯವಸ್ಥಾಪಕ ನಿರ್ದೇಶಕರಾದ ವಸಂತ ಅಡ್ಯಂತಾಯ ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com





