ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ರಾಜ್ಯದ ಸೌಹಾರ್ದ ಸಹಕಾರಿಗಳ ನಿರ್ದೇಶಕರುಗಳಿಗೆ ಆಡಳಿತ ಪರಿಣತಿ ಹಾಗೂ ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಮಂಗಳವಾರ ಹಾಗೂ ಬುಧವಾರ ಮಲ್ಲೇಶ್ವರಂನಲ್ಲಿ ಸಹಕಾರಿ ಸೌಧದಲ್ಲಿ ಆಯೋಜಿಸಲಾಗಿತ್ತು.
https://chat.whatsapp.com/FCEnlTkAKCC0MGPhXtX4i4
ಕಾರ್ಯಕ್ರಮವನ್ನು ಸಹಕಾರಿ ನಿಬಂಧಕರಾದ ಡಾ. ವೆಂಕಟೇಶ್ ಎಂ.ವಿ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ. ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ. ನಂಜನಗೌಡ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಬಿ.ಹೆಚ್. ಕೃಷ್ಣಾರೆಡ್ಡಿ ಹಾಗೂ ಬಿ.ಎಸ್. ಗುಂಡೂರಾವ್, ಸಹಕಾರ ಸಂಘಗಳ ನಿಬಂಧಕರಾದ ಡಾ.ಜಗದೀಶ್, ವೆಂಕಟೇಶ್, ಕವಿತಾ, ಶಶಿಧರ್ ಪಾಲ್ಗೊಂಡಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಸಹಕಾರ ಸಂಘಗಳ ಅಪರ ನಿಬಂಧಕ ಎಚ್ ಎಸ್ ನಾಗರಾಜಯ್ಯ ತರಬೇತಿ ನಡೆಸಿಕೊಟ್ಟರು.
ಸಂಯುಕ್ತ ಸಹಕಾರಿಯ ಸಹ ಪ್ರಧಾನ ವ್ಯವಸ್ಥಾಪಕರಾದ ರಾಜಶೇಖರ.ಹೆಚ್ ಹೂಗಾರ್ ಸ್ವಾಗತಿಸಿದರು. ಹರ್ಷಪ್ರಭಾ ಪ್ರಾರ್ಥಿಸಿದರು. ತರಬೇತಿ ವಿಭಾಗದ ಅಧಿಕಾರಿ ಕವಿತಾ ಆರ್ ಕಾರ್ಯಕ್ರಮ ನಿರೂಪಿಸಿದರು. ತರಬೇತಿ ಸಲಹೆಗಾರ ವಿ.ಜೆ ಕಾರ್ಕುನ್ ವಂದಿಸಿದರು. ತರಬೇತಿ ಕಾರ್ಯಕ್ರಮದಲ್ಲಿ 96 ಸೌಹಾರ್ದ ಸಹಕಾರಿ ಸಂಘಗಳಿಂದ 146 ಪ್ರತಿನಿಧಿಗಳು ಭಾಗವಹಿಸಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

