ಮೈಸೂರು: ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಇದರ 17ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜುಲೈ 26ರಂದು ಅಧ್ಯಕ್ಷರಾದ ಬಿ.ಎಸ್ ಶ್ರೀನಾಥ್ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.
https://chat.whatsapp.com/FCEnlTkAKCC0MGPhXtX4i4
ಸಂಘವು 2025-26ನೇ ಸಾಲಿನಲ್ಲಿ 6,25,234 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಸದಸ್ಯರು ಸಂಘದ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದೆಯೂ ಇದೇ ರೀತಿ ಪ್ರಗತಿಯತ್ತ ಸಂಸ್ಥೆ ನಡೆಯಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಏಳಿಗೆಗೆ ಸಹಕರಿಸಿದ ಸದಸ್ಯರನ್ನು ಸನ್ಮಾನಿಸಲಾಯಿತು.
ಇದೇ ವೇಳೆ ವಾರ್ಷಿಕ ಸಭೆಯ ದಿನದಂದು ಸದಸ್ಯರಿಗೆ ಎಜಿಎಸ್ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ನೇತ್ರ ಚಿಕಿತ್ಸಾ ತಪಾಸಣೆಯನ್ನು ನಡೆಸಲಾಯಿತು.







