ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ ವ್ಯಾಪ್ತಿಗೊಳಪಟ್ಟ ಸವಣೂರು, ಪುಣ್ಚಪ್ಪಾಡಿ, ಕುದ್ಮಾರು, ಬೆಳಂದೂರು ಮತ್ತು ಕ್ಯಾಮಣ ಗ್ರಾಮದ ಸದಸ್ಯರ ಮನೆಯ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಮತ್ತು ಪದವಿಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಅರ್ಹ ವಿದ್ಯಾರ್ಥಿಗಳನ್ನು ಆ.16ರಂದು ನಡೆಯುವ ಸಂಘದ ಮಹಾಸಭೆಯಲ್ಲಿ ಗೌರವಧನದೊಂದಿಗೆ ಪುರಸ್ಕರಿಸಲಾಗುವುದು. ಆ.10ರೊಳಗೆ ಅರ್ಹ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್, ಭಾವಚಿತ್ರ ಮತ್ತು ಅಂಕಪಟ್ಟಿ ಪ್ರತಿಗಳನ್ನು ಸಂಘದ ಸವಣೂರಿನ ಪ್ರಧಾನ ಕಚೇರಿಗೆ ಸಲ್ಲಿಸಬೇಕು ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು ಹಾಗೂ ನಿರ್ದೆಶಕರುಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ. ತಿಳಿಸಿದ್ದಾರೆ.


