ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಭಿಪ್ರಾಯ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪ್ರಧಾನ ಕಚೇರಿಯಲ್ಲಿ ಶನಿವಾರ ಸ್ವಾತಂತ್ಯೋತ್ಸವ ಆಚರಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ನಿವೃತ್ತ ಯೋಧ ರಾಜೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸೇನೆಯ ಸೇವೆಯಲ್ಲಿರುವಾಗ ತಾವು ಪಾಲ್ಗೊಂಡಿದ್ದ ಕಾರ್ಯಾಚರಣೆ ಬಗ್ಗೆ ಪ್ರಸ್ತಾಪಿಸಿ, ಕರಾವಳಿಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ 15 ವರ್ಷಗಳಲ್ಲಿ 35 ಶಾಖೆಗಳನ್ನು ಸ್ಥಾಪಿಸಿ, ಹೆಚ್ಚಿನ ಜನರಿಗೆ ಉದ್ಯೋಗಾವಕಾಶ ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು.


ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ಪ್ರತಿ ವರ್ಷ ಸ್ವಾತಂತ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕಾಗಿ ಸೇವೆಗೈದ ಯೋಧರನ್ನು ಸನ್ಮಾನಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸುತ್ತ ಬರುತ್ತಿದೆ. ಈ ಬಾರಿಯ ಸ್ವಾತಂತ್ಯೋತ್ಸವದಲ್ಲಿ ನಮ್ಮ ಕರಾವಳಿಯ ಹೆಮ್ಮೆಯ ನಿವೃತ್ತ ಯೋಧ ರಾಜೇಶ್ ಅವರನ್ನು ಸನ್ಮಾನಿಸಲು ನಮ್ಮ ಸಂಘ ತುಂಬಾ ಹೆಮ್ಮೆ ಪಡುತ್ತಿದೆ. ದೇಶಕೋಸ್ಕರ ಹಲವು ಯುದ್ಧದಲ್ಲಿ ಭಾಗವಹಿಸಿ ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡ ಯೋಧರನ್ನು ಸನ್ಮಾನಿಸುವುದು ನಮ್ಮ ಭಾಗ್ಯ ಎಂದು ಹೇಳಿದರು.
ನಿವೃತ್ತ ಯೋಧ ರಾಜೇಶ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಸಂಘದ ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ದಿವಾಕರ್ ಬಿ.ಪಿ., ಗೋಪಾಲ್ ಎಮ್, ಉಮಾವತಿ, ಚಂದ್ರಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಗೌರವ ಅಧ್ಯಕ್ಷರಾದ ವಾಮನ್ ಕೆ.,
ಅಧ್ಯಕ್ಷರಾದ ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಶಾಖಾಧಿಕಾರಿ ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.


