Close Menu
    Top News

    ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರೂ.51.13 ಲಕ್ಷ ನಿವ್ವಳ ಲಾಭ ಶೇ.25 ಡಿವಿಡೆಂಡ್ ಘೋಷಣೆ

    August 24, 2026

    ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ 14ನೇ ವಾರ್ಷಿಕ ಮಹಾಸಭೆ

    August 24, 2026

    ಎನ್‌ಸಿಯುಐ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿ ಒಲವು

    August 24, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎನ್‌ಸಿಯುಐ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿ ಒಲವು
    News

    ಎನ್‌ಸಿಯುಐ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿ ಒಲವು

    adminBy adminAugust 24, 2026

    ಅಧ್ಯಕ್ಷ ಸ್ಥಾನಕ್ಕೆ ಡಿ.ಎನ್. ಠಾಕೂರ್, ಉಪಾಧ್ಯಕ್ಷ ಸ್ಥಾನಕ್ಕೆ ಅಣ್ಣಾಸಾಹೇಬ್ ಜೊಲ್ಲೆ ಹೆಸರು ಮುನ್ನೆಲೆಯಲ್ಲಿ

    ನವದೆಹಲಿ: ನ್ಯಾಷನಲ್ ಕೋ-ಆಪರೇಟಿವ್ ಯೂನಿಯನ್ ಆಫ್ ಇಂಡಿಯಾ (ಎನ್‌ಸಿಯುಐ)ದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಚುನಾವಣೆ ಶೀಘ್ರದಲ್ಲೇ ನಡೆಯುವ ಸಾಧ್ಯತೆ ಇದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತನ್ನದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಹಕಾರ ಭಾರತಿ ಮುಂದಾಗಿದೆ ಎಂದು ವರದಿಯಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಎನ್‌ಸಿಯುಐ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತಿಯೊಂದಿಗೆ ಗುರುತಿಸಿಕೊಂಡಿರುವ ಅಭ್ಯರ್ಥಿಗಳು 21 ಸ್ಥಾನಗಳ ಪೈಕಿ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ನಿಲುವಿನಲ್ಲಿ ಬದಲಾವಣೆ ಬಂದಿದೆ ಎನ್ನಲಾಗಿದೆ. ಈ ಹಿಂದೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಒಮ್ಮತದ ಅಭ್ಯರ್ಥಿಗಳನ್ನು ಬೆಂಬಲಿಸುವ ಸಾಧ್ಯತೆಯನ್ನು ಸಹಕಾರ ಭಾರತಿ ಹೊಂದಿತ್ತು. ಆದರೆ ಆಡಳಿತ ಮಂಡಳಿಯಲ್ಲಿ ತನ್ನ ಬೆಂಬಲಿತ ಸದಸ್ಯರ ಸಂಖ್ಯೆಯನ್ನು ಪರಿಗಣಿಸಿ ಇದೀಗ ಉನ್ನತ ಹುದ್ದೆಗಳಿಗೆ ನೇರವಾಗಿ ಹಕ್ಕೊತ್ತಾಯ ಮಂಡಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
    ಸಹಕಾರ ಭಾರತಿಯ ಆಂತರಿಕ ವಲಯದಲ್ಲಿ ಸಂಸ್ಥೆಯ ಪೋಷಕರಾಗಿರುವ ಡಿ.ಎನ್. ಠಾಕೂರ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕರ್ನಾಟಕದ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಪರಿಗಣಿಸಲಾಗಿದೆ ಎಂದು ತಿಳಿದುಬಂದಿದೆ. ಆಡಳಿತ ಮಂಡಳಿಯಲ್ಲಿ ಬಹುಮತದ ಬೆಂಬಲ ಹೊಂದಿರುವ ಸಂಘಟನೆಯ ನಿಲುವಿಗೆ ವಿರುದ್ಧವಾಗಿ ಅಧ್ಯಕ್ಷರು ಆಯ್ಕೆಯಾದರೆ, ಪ್ರಮುಖ ನೀತಿ ಮತ್ತು ಆಡಳಿತಾತ್ಮಕ ನಿರ್ಧಾರಗಳಲ್ಲಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆಯಿದೆ ಎಂಬುದು ಸಹಕಾರ ಭಾರತಿಯ ವಲಯದ ಅಭಿಪ್ರಾಯವಾಗಿದೆ.

    ಸುಪ್ರೀಂಕೋರ್ಟ್‌ನಿಂದ ಕಾನೂನು ತೊಡಕು ನಿವಾರಣೆ
    ಎನ್‌ಸಿಯುಐ ಪದಾಧಿಕಾರಿಗಳ ಚುನಾವಣೆಗೆ ಎದುರಾಗಿದ್ದ ಕಾನೂನು ತೊಡಕು ಕೂಡ ಇತ್ತೀಚೆಗೆ ನಿವಾರಣೆಯಾಗಿದೆ. ಆಗಸ್ಟ್ 14ರಂದು ಸುಪ್ರೀಂಕೋರ್ಟ್, ಎನ್‌ಸಿಯುಐ ಆಡಳಿತ ಮಂಡಳಿ ಚುನಾವಣೆಗೆ ಸಂಬಂಧಿಸಿದ ಬಾಕಿ ಇದ್ದ ವಿಶೇಷ ಅನುಮತಿ ಅರ್ಜಿಗಳನ್ನು (SLPs) ಕಾಲಹರಣದಿಂದಾಗಿ infructuous ಎಂದು ಪರಿಗಣಿಸಿ ವಜಾಗೊಳಿಸಿತ್ತು. ಸಂಬಂಧಿತ ಕಾನೂನು ಪ್ರಶ್ನೆಗಳನ್ನು ಸೂಕ್ತ ಪ್ರಕರಣದಲ್ಲಿ ಪರಿಗಣಿಸಲು ನ್ಯಾಯಾಲಯ ಮುಕ್ತ ಅವಕಾಶವನ್ನೂ ಉಳಿಸಿಕೊಂಡಿದೆ. ಇದಕ್ಕೂ ಮುನ್ನ ಮೇ 4ರಂದು ನ್ಯಾಯಾಲಯವು ನ್ಯಾಷನಲ್ ಕೋ-ಆಪರೇಟಿವ್ ಎಕ್ಸ್‌ಪೋರ್ಟ್ಸ್ ಲಿಮಿಟೆಡ್ (NCEL), ನ್ಯಾಷನಲ್ ಕೋ-ಆಪರೇಟಿವ್ ಆರ್ಗ್ಯಾನಿಕ್ಸ್ ಲಿಮಿಟೆಡ್ (NCOL) ಹಾಗೂ ಭಾರತೀಯ ಬೀಜ ಸಹಕಾರಿ ಸಮಿತಿ ಲಿಮಿಟೆಡ್ (BBSSL)ಗಳಿಗೆ ಎನ್‌ಸಿಯುಐ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ನೀಡಿತ್ತು. ಈ ಮೂರು ಮತಗಳನ್ನು ಸೀಲ್ಡ್ ಕವರ್‌ನಲ್ಲಿ ಇರಿಸುವಂತೆ ಸೂಚಿಸಲಾಗಿತ್ತು.

    ಪದಾಧಿಕಾರಿಗಳ ಚುನಾವಣೆ ಮುಂದಿನ ಪ್ರಮುಖ ಹಂತ
    ಕೇಂದ್ರ ಸಹಕಾರ ಸಚಿವಾಲಯದ ಅಧೀನದಲ್ಲಿರುವ ಕೋ-ಆಪರೇಟಿವ್ ಎಲೆಕ್ಷನ್ ಅಥಾರಿಟಿ (CEA) ಜುಲೈ 31ರಂದು ಎನ್‌ಸಿಯುಐ ಆಡಳಿತ ಮಂಡಳಿ ಚುನಾವಣೆಯ ಫಲಿತಾಂಶಗಳಿಗೆ ಸಂಬಂಧಿಸಿದ ಶಿಫಾರಸುಗಳನ್ನು ಅನುಮೋದಿಸಿತ್ತು. ಎನ್‌ಸಿಯುಐ ಚುನಾವಣಾ ಮಾಹಿತಿಯ ಪ್ರಕಾರ ಬಹುತೇಕ ಕ್ಷೇತ್ರಗಳ ಫಲಿತಾಂಶಗಳು ಪ್ರಕಟವಾಗಿವೆ. ರಾಷ್ಟ್ರೀಯ ಸಹಕಾರಿ ಮಹಾಸಂಘಗಳ ಕ್ಷೇತ್ರಕ್ಕೆ ಸಂಬಂಧಿಸಿದ ಗ್ರೂಪ್–IIನ ಐದು ಸ್ಥಾನಗಳು ಮಾತ್ರ ಚುನಾವಣಾ ಪ್ರಕ್ರಿಯೆಯ ಅಂತಿಮ ಹಂತದಲ್ಲಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ, ಆಡಳಿತ ಮಂಡಳಿ ರಚನೆಯಾದ ಬಳಿಕ ನಡೆಯಲಿರುವ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಇದೀಗ ಸಹಕಾರ ಕ್ಷೇತ್ರದ ಗಮನ ಸೆಳೆದಿದೆ. ಸಹಕಾರ ಭಾರತಿಯು ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಕಣಕ್ಕಿಳಿಸುತ್ತದೆಯೇ ಅಥವಾ ಅಂತಿಮ ಹಂತದಲ್ಲಿ ಆಡಳಿತ ಮಂಡಳಿಯಲ್ಲಿ ಒಮ್ಮತದ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.
    ಕರ್ನಾಟಕದ ದೃಷ್ಟಿಯಿಂದಲೂ ಈ ಚುನಾವಣೆ ಮಹತ್ವದ್ದಾಗಿದೆ. ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರ ಹೆಸರು ಉಪಾಧ್ಯಕ್ಷ ಸ್ಥಾನಕ್ಕೆ ಮುನ್ನೆಲೆಗೆ ಬಂದಿರುವುದರಿಂದ, ಎನ್‌ಸಿಯುಐನ ಮುಂದಿನ ನಾಯಕತ್ವದಲ್ಲಿ ಕರ್ನಾಟಕಕ್ಕೆ ದೊರೆಯುವ ಪ್ರಾತಿನಿಧ್ಯದ ಕುರಿತು ಸಹಕಾರ ವಲಯದಲ್ಲಿ ಕುತೂಹಲ ಮೂಡಿದೆ.

    Annasaheb Jolle D.N. Thakur National Cooperative Union of India NCUI Sahakar Bharati
    Previous Articleದಿ ಮೈಸೂರು ಕೋ ಆಪರೇಟಿವ್‌ ಬ್ಯಾಂಕ್‌ ಯಶಸ್ವಿ 120ನೇ ವಾರ್ಷಿಕ ಮಹಾಸಭೆ
    Next Article ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ 14ನೇ ವಾರ್ಷಿಕ ಮಹಾಸಭೆ

    Related Posts

    ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರೂ.51.13 ಲಕ್ಷ ನಿವ್ವಳ ಲಾಭ ಶೇ.25 ಡಿವಿಡೆಂಡ್ ಘೋಷಣೆ

    August 24, 2026

    ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ 14ನೇ ವಾರ್ಷಿಕ ಮಹಾಸಭೆ

    August 24, 2026

    ದಿ ಮೈಸೂರು ಕೋ ಆಪರೇಟಿವ್‌ ಬ್ಯಾಂಕ್‌ ಯಶಸ್ವಿ 120ನೇ ವಾರ್ಷಿಕ ಮಹಾಸಭೆ

    August 24, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರೂ.51.13 ಲಕ್ಷ ನಿವ್ವಳ ಲಾಭ ಶೇ.25 ಡಿವಿಡೆಂಡ್ ಘೋಷಣೆ

    August 24, 2026

    ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ 14ನೇ ವಾರ್ಷಿಕ ಮಹಾಸಭೆ

    August 24, 2026

    ಎನ್‌ಸಿಯುಐ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿ ಒಲವು

    August 24, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.