Close Menu
    Top News

    ಆರ್‌ಬಿಐ ನಿರ್ಬಂಧದಡಿ 87 ಪಟ್ಟಣ ಸಹಕಾರಿ ಬ್ಯಾಂಕ್‌ಗಳು; ಇನ್ನೂ 27 ಬ್ಯಾಂಕ್‌ಗಳ ಮೇಲೆ ನಿಯಂತ್ರಣ ಮುಂದುವರಿಕೆ

    August 27, 2026

    ಪುತ್ತೂರು ಟೌನ್‌ ಬ್ಯಾಂಕಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಿಶೇಷ ಸಾಧನಾ ಪ್ರಶಸ್ತಿ

    August 27, 2026

    ಆಗಸ್ಟ್ 29ರಂದು ಆತ್ಮಶಕ್ತಿ ಸಹಕಾರ ಸಂಘದಲ್ಲಿ ಸಹಕಾರ ಸಂಘಗಳ ಕಾನೂನು, ಭದ್ರತೆ, ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ

    August 26, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಗಸ್ಟ್ 29ರಂದು ಆತ್ಮಶಕ್ತಿ ಸಹಕಾರ ಸಂಘದಲ್ಲಿ ಸಹಕಾರ ಸಂಘಗಳ ಕಾನೂನು, ಭದ್ರತೆ, ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ
    News

    ಆಗಸ್ಟ್ 29ರಂದು ಆತ್ಮಶಕ್ತಿ ಸಹಕಾರ ಸಂಘದಲ್ಲಿ ಸಹಕಾರ ಸಂಘಗಳ ಕಾನೂನು, ಭದ್ರತೆ, ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ

    adminBy adminAugust 26, 2026

    ಮಂಗಳೂರು: ಸಹಕಾರ ಸಂಘಗಳ ಕಾನೂನು, ಭದ್ರತೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಸಹಕಾರಿ ಸಂಘಗಳ ಆಡಳಿತ ಮಂಡಳಿ, ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಗಸ್ಟ್ 29ರಂದು ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಹಕಾರ ಸಂಘಗಳಿಗೆ ವಿಶೇಷ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4

    ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಇವರ ಸಹಯೋಗದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡೀಲ್, ಮಂಗಳೂರು ಇದರ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.
    ಬೆಳಗ್ಗೆ 10 ಗಂಟೆಗೆ ಆತ್ಮಶಕ್ತಿ ಸೌಧದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಹಕಾರ ಸಂಘಗಳಿಗೆ ಸಂಬAಧಿಸಿದ ಕಾನೂನು ವಿಚಾರಗಳು, ಸಂಘಗಳ ಭದ್ರತೆ ಮತ್ತು ಸುರಕ್ಷತಾ ಕ್ರಮಗಳು, ಕಾನೂನು ಸಮಸ್ಯೆಗಳಿಗೆ ಲಭ್ಯವಿರುವ ನೆರವು ಹಾಗೂ ಸಹಕಾರ ಸಂಘಗಳ ಸುಭದ್ರತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಜ್ಞರಿಂದ ಮಾಹಿತಿ ನೀಡಲಾಗುವುದು. ಸಹಕಾರ ಸಂಘಗಳ ಕಾರ್ಯನಿರ್ವಹಣೆಯಲ್ಲಿ ಎದುರಾಗಬಹುದಾದ ಕಾನೂನು ಮತ್ತು ಸುರಕ್ಷತಾ ಸವಾಲುಗಳ ಕುರಿತು ಸಂವಾದಕ್ಕೂ ಅವಕಾಶ ಕಲ್ಪಿಸಲಾಗಿದೆ.
    ಬೆಳಗ್ಗೆ 10ಕ್ಕೆ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಐ. ತಾರಾನಾಥ ಪೂಜಾರಿ ಕಾರ್ಯಕ್ರಮ ಉದ್ಘಾಟಿಸುವರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಜೈಬುನ್ನೀಸಾ, ಸಹಕಾರ ಚುನಾವಣಾ ಪ್ರಾಧಿಕಾರದ ಜಂಟಿ ನಿಬಂಧಕರಾದ ಬಿ.ಕೆ ಸಲೀಂ, ಸಹಕಾರ ಸಂಘಗಳ ದ.ಕ ಜಿಲ್ಲಾ ಉಪನಿಬಂಧಕರಾದ ಎಚ್ ಎನ್ ರಮೇಶ್, ಕಂಕನಾಡಿ ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಗುರುರಾಜ್, ದ.ಕ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಜಗದೀಶ್ ಶೇಣವ, ಪಾಲಿಸಿ ಗ್ರೇಸ್ ಇನ್ಶೂರೆನ್ಸ್ ಮುಖ್ಯ ವ್ಯವಹಾರ ಅಧಿಕಾರಿ ರಾಹುಲ್ ಶೆಟ್ಟಿ ಭಾಗವಹಿಸಲಿದ್ದಾರೆ.

    ಉದ್ಘಾಟನಾ ಕಾರ್ಯಕ್ರಮದ ಬಳಿಕ ವಿವಿಧ ವಿಷಯಗಳ ಕುರಿತು ತಜ್ಞರಿಂದ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮಗಳು ನಡೆಯಲಿವೆ. 10.45ರಿಂದ 11.30ರ ತನಕ ಖಾಯಂ ಜನತಾ ನ್ಯಾಯಾಲಯದ ಬಗ್ಗೆ ಕಾನೂನು ಅರಿವು ಮಾಹಿತಿ, 11.30ರಿಂದ 12.15ರ ತನಕ ಸಹಕಾರ ಸಂಘಗಳು ಅನುಸರಿಸಬೇಕಾದ ಭದ್ರತೆ ಹಾಗೂ ಸುರಕ್ಷತಾ ಕ್ರಮಗಳು, 12.15ರಿಂದ ಮಧ್ಯಾಹ್ನ 1ರ ತನಕ ಸಹಕಾರ ಸಂಘಗಳ ಸುಭದ್ರ ಭವಿಷ್ಯಕ್ಕಾಗಿ ವಿಮಾ ಯೋಜನೆಗಳ ಲಾಭಗಳು ಮತ್ತು ಪ್ರಾಮುಖ್ಯತೆ ಇವುಗಳ ಬಗ್ಗೆ ವಿಚಾರ ವಿಮರ್ಶೆ ನಡೆಯಲಿದೆ. ಮಧ್ಯಾಹ್ನ 1ರಿಂದ 1.30ರ ತನಕ ಪ್ರಶ್ನಾವಳಿ ಹಾಗೂ ಸಂವಾದ ನಡೆಯಲಿದೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

    Athma Athmashakthi Vividhoddesha Sahakara Sangha Athmashakti Soudha Co Operative ministry Cooperative Cooperative Department
    Previous Articleಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ಆಯ್ಕೆ
    Next Article ಪುತ್ತೂರು ಟೌನ್‌ ಬ್ಯಾಂಕಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಿಶೇಷ ಸಾಧನಾ ಪ್ರಶಸ್ತಿ

    Related Posts

    ಆರ್‌ಬಿಐ ನಿರ್ಬಂಧದಡಿ 87 ಪಟ್ಟಣ ಸಹಕಾರಿ ಬ್ಯಾಂಕ್‌ಗಳು; ಇನ್ನೂ 27 ಬ್ಯಾಂಕ್‌ಗಳ ಮೇಲೆ ನಿಯಂತ್ರಣ ಮುಂದುವರಿಕೆ

    August 27, 2026

    ಪುತ್ತೂರು ಟೌನ್‌ ಬ್ಯಾಂಕಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಿಶೇಷ ಸಾಧನಾ ಪ್ರಶಸ್ತಿ

    August 27, 2026

    ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ಆಯ್ಕೆ

    August 25, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆರ್‌ಬಿಐ ನಿರ್ಬಂಧದಡಿ 87 ಪಟ್ಟಣ ಸಹಕಾರಿ ಬ್ಯಾಂಕ್‌ಗಳು; ಇನ್ನೂ 27 ಬ್ಯಾಂಕ್‌ಗಳ ಮೇಲೆ ನಿಯಂತ್ರಣ ಮುಂದುವರಿಕೆ

    August 27, 2026

    ಪುತ್ತೂರು ಟೌನ್‌ ಬ್ಯಾಂಕಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಿಶೇಷ ಸಾಧನಾ ಪ್ರಶಸ್ತಿ

    August 27, 2026

    ಆಗಸ್ಟ್ 29ರಂದು ಆತ್ಮಶಕ್ತಿ ಸಹಕಾರ ಸಂಘದಲ್ಲಿ ಸಹಕಾರ ಸಂಘಗಳ ಕಾನೂನು, ಭದ್ರತೆ, ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ

    August 26, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.