ಕುಂದಾಪುರ: ಹೊಸಾಡು ಸೇವಾ ಸಹಕಾರ ಸಂಘ ನಿ. ಮುಳ್ಳಿಕಟ್ಟೆ ಇದರ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಗುರುವಾರ ಹೊಸಾಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ಸಂಘದ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಲೆಕ್ಕಪರಿಶೋಧನಾ ವರದಿ ವಾಚಿಸಿದರು. ನಿರ್ದೇಶಕರಾದ ಸತೀಶ್ ಶೆಟ್ಟಿ ಯಳೂರು ಸ್ವಾಗತಿಸಿದರು. ನಿರ್ದೇಶಕರಾದ ರೇಖಾ ಪುತ್ರನ್ ತಿಳುವಳಿಕೆ ಪತ್ರ ವಾಚಿಸಿದರು. ವರದಿ ವರ್ಷದಲ್ಲಿ ಸಂಘವು ಗಳಿಸಿದ ಲಾಭಾಂಶ ಹಂಚಿಕೆ ಮಾಡಿ ಎ ವರ್ಗದ ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಿಸಲಾಯಿತು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಗುರುತಿಸಿ ಗೌರವಿಸಿಲಾಯಿತು.
ಸಂಘದ ಉಪಾಧ್ಯಕ್ಷರಾದ ಚಂದ್ರಶೇಖರ, ನಿರ್ದೇಶಕರಾದ ನವೀನ್ ಫೆರ್ನಾಂಡಿಸ್, ದಿನೇಶ್ ಜೋಗಿ, ಪ್ರದೀಪ ಬಿಲ್ಲವ, ರಾಮ ಗಾಣಿಗ, ರೇಖಾ ಪುತ್ರನ್, ಅಕ್ಷತಾ ರವೀಂದ್ರ ಹಾಗೂ ಸಂಘದ ಸದಸ್ಯರು ಹಾಜರಿದ್ದರು. ಸಂಘದ ಸಿಬ್ಬಂದಿ ಶಿಲ್ಪಾ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಪ್ರಶಾಂತ್ ವಂದಿಸಿದರು.











