ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಆಶ್ರಯದಲ್ಲಿ ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು, ಲಯನ್ಸ್ ಹಾಗೂ ಲಿಯೋ ಕ್ಲಬ್ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಡಾಕ್ಟರ್ ಅಗರವಾಲ್ಸ್ ಕಣ್ಣಿನ ಆಸ್ಪತ್ರೆ, ಮಂಗಳೂರು ಎ.ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಮಂಗಳೂರು, ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್, ಕದ್ರಿ, ಮಂಗಳೂರು ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಆಗಸ್ಟ್ 30ರಂದು 9.30ರಿಂದ ಅಪರಾಹ್ನ 12.00ರವರೆಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ನಡೆಯಲಿದೆ.
https://chat.whatsapp.com/FCEnlTkAKCC0MGPhXtX4i4
ಸ್ಥಳ : 2ನೇ ಮಹಡಿ, ರಾಜ್ಯ ಸರಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡ, ಮಂಗಳೂರು ಇಲ್ಲಿ ಶಿಬಿರ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಆತ್ಮಶಕ್ತಿ ಸಹಕಾರ ಸಂಘದ ಪ್ರಕಟಣೆ ತಿಳಿಸಿದೆ.

