Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022ರ ಅಂಗವಾಗಿ ವಿವಿ ಕಾಲೇಜು ಮಂಗಳೂರನಲ್ಲಿ ವಿಚಾರಣ ಸಂಕಿರಣ ಆಯೋಜಿಸಲಾಯಿತು
    News

    69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022ರ ಅಂಗವಾಗಿ ವಿವಿ ಕಾಲೇಜು ಮಂಗಳೂರನಲ್ಲಿ ವಿಚಾರಣ ಸಂಕಿರಣ ಆಯೋಜಿಸಲಾಯಿತು

    adminBy adminSeptember 25, 2023

    ಮಂಗಳೂರು: 69ನೇ ಅಖಿಲ ಭಾರತ ಸಹಕಾರ ಸಪ್ತಾಹ – 2022 ರ ಆಚರಣೆಯ ಅಂಗವಾಗಿ ಬುಧವಾರ  ಕರ್ನಾಟಕ  ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ರಾಷ್ಟ್ರೀ ಯ ಸೇವಾಯೋಜನೆ ಹಾಗೂ ಯೋಜನಾ ವೇದಿಕೆ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಸಹಭಾಗಿತ್ವದಲ್ಲಿ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ವಿಚಾರ ಸಂಕಿರಣ ಅಯೋಜಿಸಲಾಯಿತು. ಕಾರ್ಯಕ್ರಮದಲ್ಲಿ  “ಸಹಕಾರಿ ಕ್ಷೇತ್ರದ ಹುಟ್ಟು, ಬೆಳವಣಿಗೆ ಬಗ್ಗೆ ನಾವು ಅರಿವು ಮೂಡಿಸಿಕೊಳ್ಳಬೇಕು.  ಸಹಕಾರಿ ಕ್ಷೇತ್ರದ ಹುಟ್ಟಿನಿಂದ ಇಲ್ಲಿಯವರೆಗೂ ಇದರ ಪಯಣ, ಸಾಧನೆ ಅಪ್ರತಿಮವಾದುದು” ಎಂದು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ಅಭಿಪ್ರಾಯಪಟ್ಟರು.ಕಾರ್ಯಕ್ರಮದ ಮುಖ್ಯ ಅತಿಥಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್,  ಸಹಕಾರ ಅಧ್ಯಾಯನ ಮತ್ತು ಅಭಿವೃದ್ದಿ ಸಂಸ್ಥೆ ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಸ್.ಆರ್‌ ಹರೀಷ್ ಆಚಾರ್ಯ  ಇವರು ಮಾತನಾಡಿ, ಜಾತಿ, ಧರ್ಮ, ರಾಜಕೀಯ ನಿಲುವುಗಳು, ಲಿಂಗ ಭಿನ್ನತೆಯನ್ನು ಮೀರಿ ಸಹಕಾರಿ ತತ್ವ ಎಲ್ಲಾ ಕ್ಷೇತ್ರಗಳಲ್ಲಿಯೂ ಬೆಳೆಯುತ್ತಿದೆ.  ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು ಇದರ ಅಧ್ಯಕ್ಷ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ಸಹಕಾರಿ ಇಲಾಖೆಯ, ಅಧೀಕ್ಷಕ ಎನ್.ಜೆ.ಗೋಪಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಹಕಾರಿ ಸಂಘದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ನಿರ್ದೇಶಕರಾದ ವಿನಯ್ಕುಮಾರ್ ಸೂರಿಂಜೆ, ಚಿತ್ತರಂಜನ್  ಬೋಳಾರ್, ಅನುಪಮಾ ಎ.ರಾವ್, ಕಾಲೇಜಿನ ಎನ್.ಎಸ್.ಎಸ್‌  ಕಾರ್ಯಕ್ರಮ ಅಧಿಕಾರಿಗಳಾದ ಡಾ.ಸುರೇಶ್, ಡಾ.ಗಾಯತ್ರಿ ಎನ್ ಉಪಸ್ಥಿತರಿದ್ದರು.

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು ಇದರ ನಿರ್ದೇಶಕಿ ಸಾವಿತ್ರಿ ರೈ. ಕೆ ಕಾರ್ಯಕ್ರಮ ನಿರ್ವಹಿಸಿದರು. ರಾಷ್ಟ್ರೀಯ ಸೇವಾಯೋಜನೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು . ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    Previous Articleಸಹಕಾರ ಕ್ಷೇತ್ರದ ಅತ್ಯುನ್ನತ ಗೌರವವಾದ “ಸಹಕಾರ ರತ್ನ” ಪ್ರಶಸ್ತಿಗೆ ಆಯ್ಕೆಯಾದ‌ ನಮ್ಮ ಹೆಮ್ಮೆಯ ಸಹಕಾರಿಗಳಿಗೆ ಅಭಿನಂದನೆಗಳು
    Next Article ಸಹಕಾರ ಸಂಘಗಳ ಕೇಂದ್ರೀಯ ರಿಜಿಸ್ಟ್ರಾರ್ ಡಿಜಿಟಲ್ ಪೋರ್ಟಲ್ ಪ್ರಾರಂಭ!

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.