Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹೊಸ ಸಹಕಾರ ಸಚಿವಾಲಯ : ಹರೀಶ್ ಆಚಾರ್ಯ ಹರ್ಷ
    News

    ಹೊಸ ಸಹಕಾರ ಸಚಿವಾಲಯ : ಹರೀಶ್ ಆಚಾರ್ಯ ಹರ್ಷ

    adminBy adminSeptember 25, 2023

    ಸಹಕಾರ ಕ್ಷೇತ್ರಕ್ಕೆ ವಿಶೇಷ ಮಾನ್ಯತೆಯನ್ನು ನೀಡಿ ‘ಸಹಕಾರದಿಂದ ಸಮೃದ್ಧಿ’ ಎಂಬ ಘೋಷ ವಾಕ್ಯದೊಂದಿಗೆ ಪ್ರತ್ಯೇಕ ನೂತನ ಸಹಕಾರ ಸಚಿವಾಲಯವನ್ನು ರಚಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು  ಒಂದು ಐತಿಹಾಸಿಕ ನಿರ್ಧಾರವೆಂದು ಬಣ್ಣಿಸಿ ಹರ್ಷ ವ್ಯಕ್ತಪಡಿಸಿ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಕೇಂದ್ರದ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್ಯ ಅವರು ಸ್ವಾಗತಿಸಿದ್ದಾರೆ.

    ಇದುವರೆಗೆ ಕೇಂದ್ರ ಸರಕಾರದ ಕೃಷಿ ಸಚಿವಾಲಯದ ಅಧೀನದಲ್ಲಿದ್ದ ಸಹಕಾರ ಇಲಾಖೆಯನ್ನು ಕೇಂದ್ರ ಸರಕಾರವು ಪ್ರತ್ಯೇಕಿಸಿ ಹೊಸ ಸಹಕಾರ ಸಚಿವಾಲಯ ರಚಿಸಿ ಮಾನ್ಯತೆಯನ್ನು ನೀಡಿರುವುದರಿಂದ ಸಹಕಾರ ಕ್ಷೇತ್ರಕ್ಕೆ ದೇಶಾದ್ಯಂತ ವಿಶೇಷವಾದ ಪರಿಗಣನೆ ಸಿಕ್ಕಿದಂತಾಗಿದೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ
    ಪ್ರತ್ಯೇಕ ಸಚಿವಾಲಯವನ್ನು ತೆರೆಯಲು ನಿರಂತರ ಪ್ರಯತ್ನವನ್ನು ಮಾಡಿದ ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶಕರು, ಸಹಕಾರ ಭಾರತಿಯ ಸಂರಕ್ಷಕರೂ ಆದ ಶ್ರೀ ಸತೀಶ್ ಕಾಶೀನಾಥ್ ಮರಾಠೆಯವರನ್ನು ಅವರು ಈ ಸಂದರ್ಭದಲ್ಲಿ ವಿಶೇಷವಾಗಿ ಅಭಿನಂದಿಸಿದ್ದಾರೆ.

    ಸಹಕಾರ ವಿಷಯವು ಇಂದು ರಾಜ್ಯದ ವಿಷಯವಾಗಿದೆ. ರಾಜ್ಯ ಸರಕಾರದ ಸಹಕಾರ ನೀತಿಯು ಬೇರೆ ಬೇರೆ ರಾಜ್ಯಗಳಲ್ಲಿ ವಿಭಿನ್ನವಾಗಿದೆ. ಇದರಿಂದ ಸಹಕಾರದ ಮೂಲಕ ಜನ ಸಮುದಾಯದ ಅತ್ಯಂತ ತಳಮಟ್ಟದ ಕೃಷಿಕರು, ಕಾರ್ಮಿಕರು, ಮಹಿಳೆಯರು, ದೀನ-ದಲಿತರು
    ಸೇರಿದಂತೆ ನಿಮ್ನ ವರ್ಗದ ಸಮಗ್ರ ಅಭಿವೃದ್ಧಿಗೆ ತೊಡಕು ಉಂಟಾಗುತಿತ್ತು. ಕೇಂದ್ರ ಸರಕಾರವೇ ಪ್ರತ್ಯೇಕ ಸಹಕಾರ ಸಚಿವಾಲಯವನ್ನು ರಚಿಸಿರುವುದರಿಂದ ಕೇಂದ್ರ ನೀತಿ ಆಯೋಗದ ವರದಿ ಹಾಗೂ ಕಾರ್ಯಯೋಜನೆಯಂತೆ ಪ್ರತಿಯೊಂದು ರಾಜ್ಯಗಳು ಸಾಮಾನ್ಯ ಒಂದೇ ರೀತಿಯ ಸಹಕಾರ ನೀತಿಯನ್ನು ಅಳವಡಿಸಿಕೊಳ್ಳುವುದು ಮುಂದಿನ ದಿನಗಳಲ್ಲಿ ಸಾಧ್ಯವಾಗುತ್ತದೆ. ಆದುದರಿಂದ ಕೇಂದ್ರ ಸರಕಾರದ ಈ ನೀತಿಯು ತಳಮಟ್ಟದ ಜನಸಮುದಾಯದ ಅಮೂಲಾಗ್ರ ಅಭಿವೃದ್ಧಿಗೆ ಕ್ರಾಂತಿಕಾರಿ ಕ್ರಮವಾಗಿದೆ ಎಂದು ಶ್ರೀ ಹರೀಶ್ ಆಚಾರ್ಯ ಇವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

    Previous Articleಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಮಾರ್ಗದರ್ಶನದಲ್ಲಿ ಸಹಕಾರಿಗಳಿಗಾಗಿ ಎರಡನೇ ಲಸಿಕಾ ಶಿಬಿರವು ಯಶಸ್ವಿಯಾಗಿ ನೆರವೇರಿತು
    Next Article “ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗಾಗಿ” ಎಂಬ ಧ್ಯೇಯದೊಂದಿಗೆ ಆರಂಭಿಸಿರುವ ಯುವ ಸ್ಪಂದನ ಕೋಆಪರೇಟಿವ್ ಸೊಸೈಟಿ ಲಿ. ನ ಜಾಲತಾಣ ಲೋಕಾರ್ಪಣೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.