Top News

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿಬ್ಬಂದಿಗೆ ಉತ್ತಮ ಮನೋಭಾವ, ಕೆಲಸದ ಮೇಲೆ ತೃಪ್ತಿ: ಎಂಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಾನ್ ವಾಸ್ ಅಭಿಪ್ರಾಯ
    News

    ಸಿಬ್ಬಂದಿಗೆ ಉತ್ತಮ ಮನೋಭಾವ, ಕೆಲಸದ ಮೇಲೆ ತೃಪ್ತಿ: ಎಂಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಾನ್ ವಾಸ್ ಅಭಿಪ್ರಾಯ

    adminBy adminJune 14, 2024

    ಮಂಗಳೂರು: ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ (ಎಂ.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಇತ್ತೀಚೆಗೆ ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆಯಲ್ಲಿ ನಡೆಯಿತು.

    ಮಂಗಳೂರು ಧರ್ಮಪ್ರಾಂತ ಮಾಜಿ ಪ್ರೊ ಕುರೇಟರ್ ಜಾನ್ ವಾಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬ್ಯಾಂಕಿನ ಸಿಬ್ಬಂದಿ ಬ್ಯಾಂಕಿನಲ್ಲಿ ಕೆಲಸ ಮಾಡಲು ಉತ್ತಮ ಮನೋಭಾವ ಹೊಂದಿರಬೇಕು ಹಾಗೂ ಕೆಲಸದ ಮೇಲೆ ಅವರಿಗೆ ತೃಪ್ತಿ ಇರಬೇಕು. ಬ್ಯಾಂಕಿನ ಪ್ರಗತಿ ಹೆಚ್ಚಿಸಲು ನಿಗದಿತ ಗುರಿ ಸಾಧಿಸುವುದು ಅತಿ ಆಗತ್ಯ ಎಂದು ಬಣ್ಣಿಸಿದರು. ಆಕಾಶದತ್ತ ಗುರಿಯಿಡಿ, ನೀವು ಮರದ ತುದಿಯನ್ನು ತಲುಪುತ್ತೀರಿ ಎಂಬ ಮಾತು ನೆನಪಿಸಿಕೊಂಡ ಅವರು, ಕಳೆದ ದಶಕದಲ್ಲಿ ಎಂ.ಸಿ.ಸಿ ಬ್ಯಾಂಕಿನ ಸಾಧಿಸಿದ ಅಗಾಧ ಪ್ರಗತಿಗಾಗಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗವನ್ನು ಅಭಿನಂದಿಸಿದರು.

    ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಸಮರ್ಪಿತ ಸೇವೆಗಾಗಿ ಬ್ಯಾಂಕಿನ ಸಿಬ್ಬಂದಿಯನ್ನು ಶ್ಲಾಘಿಸಿ, ಅಬಿನಂದಿಸಿದರು. ಬಳಿಕ ಮಾತನಾಡಿದ ಅವರು, ೨೦೨೩-೨೪ನೇ ಹಣಕಾಸು ವರ್ಷದಲ್ಲಿ ವೈಯಕ್ತಿಕ ಮೈಲಿಗಲ್ಲು ಮತ್ತು ಶೇರು ಬಂಡವಾಳ ಗುರಿಯನ್ನು ಸಾಧಿಸಿದ ಎಲ್ಲ ವ್ಯವಸ್ಥಾಪಕರು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿ ಮುಂದಿನ ವರ್ಷ ಎಲ್ಲಾ ಶಾಖೆಗಳು ಗುರಿ ಸಾಧಿಸಿ ಪ್ರಶಸ್ತಿ ಪಡೆಯಲಿ ಎಂದು ಹಾರೈಸಿದರು. ಸಿಬ್ಬಂದಿಗಳ ಸಾಮೂಹಿಕ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಎಲ್ಲಾ ಶಾಖೆಗಳು ಶ್ರಮ ವಹಿಸಿ ಗುರಿ ಸಾಧಿಸಬೇಕು ಎಂದು ಕರೆ ನೀಡಿದರು.

    ಜಾನ್ ಡಿಸಿಲ್ವಾ ಶುಭ ಹಾರೈಸಿದರು.ಬ್ಯಾಂಕಿನ ಸಲಹೆಗಾರರಾದ ಎಸ್.ಎಚ್.ವಿಶ್ವೇಶ್ವರಯ್ಯ ಬ್ಯಾಂಕಿನ ೨೦೨೩-೨೪ನೇ ಸಾಲಿನ ಕಾರ್ಯಕ್ಷಮತೆಯ ವಿಮರ್ಶೆ ಮಾಡಿ, ೨೦೨೪-೨೫ನೇ ಗುರಿ ತಲುಪುವ ಬಗ್ಗೆ ಮಾಹಿತಿ ನೀಡಿದರು. ೨೦೨೩-೨೪ನೇ ಸಾಲಿನಲ್ಲಿ ಅತ್ಯುತ್ತಮ ಪ್ರಗತಿಯನ್ನು ಸಾಧಿಸಿ ಗುರು ತಲುಪಿದ ಸಂಸ್ಥಾಪಕರ ಶಾಖೆ, ಕಂಕನಾಡಿ, ಕುಲಶೇಖರ, ಬಜ್ಪೆ, ಸುರತ್ಕಲ್ ಮತ್ತು ಕುಂದಾಪುರ ಶಾಖಾ ವ್ಯವಸ್ಥಾಪಕರನ್ನು ಗೌರವಿಸಲಾಯಿತು. ವೈಯಕ್ತಿಕ, ಮೈಲಿಗಲ್ಲು ಕೊಡುಗೆ ಹಾಗೂ ಶೇರು ಬಂಡವಾಳ ಗುರಿ ಸಾಧಿಸಿದ ಸಿಬ್ಬಂದಿಗಳನ್ನೂ ಗೌರವಿಸಲಾಯಿತು. ನಿರ್ದೇಶಕರಾದ ಅನಿಲ್ ಪತ್ರಾವೊ, ಹೆರಾಲ್ಡ್ ಮೊಂತೇರೊ, ಮೆಲ್ವಿನ್ ವಾಸ್, ಜೆ.ಪಿ. ರೊಡ್ರಿಗಸ್, ಡಾ|ಜೆರಾಲ್ಡ್ ಪಿಂಟೊ, ಐರಿನ್ ರೆಬೆಲ್ಲೊ, ಡಾ|ಫ್ರೀಡಾ ಡಿಸೋಜ, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಫೆಲಿಕ್ಸ್ ಡಿಕ್ರೂಜ್ ಹಾಜರಿದ್ದರು. ಮಹಾಪ್ರಬಂಧಕ ಸುನಿಲ್ ಮಿನೇಜಸ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಿರ್ವಹಿಸಿದರು. ಶಿರ್ವ ಶಾಖಾ ಸಿಬ್ಬಂದಿ ರಿತೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿ ಉಪ ಮಹಾಪ್ರಬಂಧಕ ರಾಜ್ ಎಫ್. ಮಿನೇಜಸ್ ವಂದಿಸಿದರು.

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ವಿಳಾಸಕ್ಕೆ ಮೇಲ್ ಮಾಡಿ: sahakaraspandana@gmail.com

    ಮಾಹಿತಿಗೆ: 9901319694.

    Athmashakthi Cooperative High Court on Loan Law related to loan recovery Loan Recovery of Cooperative Society Sahakara Spandana
    Previous Articleಆತ್ಮಶಕ್ತಿ ಸಹಕಾರಿ ೩.೩ ಕೋಟಿ ರೂ ಲಾಭ ವರದಿರ‍್ಷದಲ್ಲಿ ೨೦೦೦ ಕೋಟಿ ರೂ,ಅಧಿಕ ವ್ಯವಹಾರ
    Next Article ನಾಳೆ ನೇತ್ರ ತಪಾಸಣಾ, ವೈದ್ಯಕೀಯ ಶಿಬಿರ.

    Related Posts

    News

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025
    News

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025
    News

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಅಡಕೆ ಹಾಳೆಯ ಪ್ಲೇಟ್‌ನಿಂದ ಕ್ಯಾನ್ಸರ್‌ ಹರಡುತ್ತದೆ ಎಂಬುದೇ ಹಾಸ್ಯಾಸ್ಪದ

    June 4, 2025

    ಸೌಹಾರ್ದ ಸಹಕಾರಿಗಳ ನಿರ್ದೇಶಕರಿಗೆ ತರಬೇತಿ ಕಾರ್ಯಕ್ರಮ

    June 3, 2025

    ಸಹಕಾರಿ ಪಿತಾಮಹ ಸಿದ್ದರಾಮನ ಗೌಡ ಸಣ್ಣರಾಮನ ಗೌಡ ಜನ್ಮದಿನ ಆಚರಣೆ

    June 3, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.