Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಣವ ಸೌಹಾರ್ದದ ಬೆಳವಣಿಗೆ ಶ್ಲಾಘನೀಯ
    News

    ಪ್ರಣವ ಸೌಹಾರ್ದದ ಬೆಳವಣಿಗೆ ಶ್ಲಾಘನೀಯ

    adminBy adminJuly 15, 2024

    ಕುಶಾಲನಗರ ಶಾಖೆ ಉದ್ಘಾಟಿಸಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯ

    ಮಂಗಳೂರು: ಪ್ರಣವ ಸೌಹಾರ್ದ ಸಹಕಾರಿ ಸಂಘದ ಬೆಳವಣಿಗೆ ಶ್ಲಾಘನೀಯವಾದುದು. ಉತ್ತಮ, ಪ್ರಾಮಾಣಿಕ ಆಡಳಿತದಿಂದ ಸಂಸ್ಥೆ ಉನ್ನತಿ ಹೊಂದುತ್ತಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

    ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಪ್ರಣವ ಸೌಹಾರ್ದ ಸಹಕಾರಿ ಸಂಘದ ಎಂಟನೇ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.  ಸಹಕಾರ ತತ್ವದಡಿ ಕೆಲಸ ಮಾಡುವಾಗ ಸಾಮಾಜಿಕ ಬದ್ಧತೆಯನ್ನೂ ಗಣನೆಗೆ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/Ge11n7QCiMj5QyPvCc0H19

    ಪ್ರಣವ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ.ಆರ್‌.ಪ್ರಸಾದ್‌ ಸ್ವಾಗತಿಸಿ, ಪ್ರಣವ ಸೌಹಾರ್ದದ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಕಾರ್ಯಕರ್ತ ಭಾರತೀಶ್‌ ದೇಶದ ಈಗಿನ ವ್ಯವಸ್ಥೆ ಹಾಗೂ ನಮ್ಮ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು. ಧ್ವನಿ ಫೌಂಡೇಶನ್‌ ಅಧ್ಯಕ್ಷೆ ಶ್ವೇತಾ ಮಡಪ್ಪಾಡಿ ಮಾತನಾಡಿ, ಆರ್ಥಿಕ ಸಂಸ್ಥೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಸಹಾಯಕ್ಕೆ ನಿಲ್ಲಬೇಕು ಎಂದು ಆಶಯ ವ್ಯಕ್ತಪಡಿಸಿದರು. ಮೈಸೂರು, ಮಂಡ್ಯ, ಕೊಡಗು ಜಿಲ್ಲೆಯ ಸೌಹಾರ್ದ ಒಕ್ಕೂಟ ಅಧ್ಯಕ್ಷ ನಾರಾಯಣ ರಾವ್‌, ಕುಶಾಲನಗರ ನಳಂದ ಇಂಟರ್‌ನ್ಯಾಶನಲ್‌ ಸ್ಕೂಲ್‌ ನಿರ್ದೇಶಕ ನಾಮ್‌ಗೇಲ್‌ ಶುಭ ಹಾರೈಸಿದರು.

    ಪ್ರಣವ ಸೌಹಾರ್ದ ಸಹಕಾರಿಯ ಆಡಳಿತ ಮಂಡಳಿ ನಿರ್ದೇಶಕರು, ಕುಶಾಲನಗರ ಶಾಖೆಯ ಸಲಹಾ ಸಮಿತಿ ಸದಸ್ಯರಾದ ನವೀನ್‌, ರಘು, ನಿಸಾರ್‌ ಅಹಮದ್‌, ಲೂವಿಸ್‌ ರಾಡ್ರಿಗಸ್‌, ಸಂಗಮೇಶ್‌, ಅರ್ಚನಾ ಉಪಸ್ಥಿತರಿದ್ದರು. ಬಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಜಿ.ಪ್ರಶಾಂತ್‌ ಪೈ ವಂದಿಸಿದರು.

     

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
    ಇಮೇಲ್: sahakaraspandana@gmail.com
    ಮಾಹಿತಿಗೆ: 9901319694.

    Cooperative Odiyuru Shree Pranava Souharda Sahakara Spandana Souharda Sahakari Spandana Cooperative
    Previous Articleಯುವ ಸ್ಪಂದನ ಅಧ್ಯಕ್ಷರಾಗಿ ಜಿತಿನ್‌ ಜೀಜೋ, ಉಪಾಧ್ಯಕ್ಷರಾಗಿ ಡಿ.ಎಂ.ದೀಕ್ಷಾ ಆಯ್ಕೆ
    Next Article ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಶಂಭು ಪೂಜಾರಿ ಅವಿರೋಧ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.