Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಶೇ.12 ಡಿವಿಡೆಂಡ್‌ ಘೋಷಣೆ
    News

    ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಶೇ.12 ಡಿವಿಡೆಂಡ್‌ ಘೋಷಣೆ

    adminBy adminSeptember 4, 2024

    ಉಡುಪಿ: ಶ್ರೀ ಮಹಾಲಿಂಗೇಶ್ವರ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಲಿ ತೆಕ್ಕಟ್ಟೆ ಇದರ ಆರನೇ ವರ್ಷದ ವಾರ್ಷಿಕ ಮಹಾಸಭೆ ಇತ್ತೀಚೆಗೆ ತೆಕ್ಕಟ್ಟೆಯ ಹಯಗ್ರೀವ ಸಭಾಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಅಶೋಕ ಕುಮಾರ್‌ ಪಿ ಅಧ್ಯಕ್ಷತೆಯಲ್ಲಿ ನಡೆಯಿತು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ಸಂಸ್ಥೆಯ ಉಪಾಧ್ಯಕ್ಷ ಸುಧಾಕರ್‌ ಶೆಟ್ಟಿ, ನಿರ್ದೇಶಕರಾದ ಸುಬ್ಬಣ್ಣ ಉಪಾಧ್ಯಾಯ , ಎನ್‌.ಕರುಣಾಕರ ಶೆಟ್ಟಿ, ಎಂ.ಬಾಬು ಪೂಜಾರಿ, ಕೆ.ಪುಷ್ಪಲತಾ ಶೆಟ್ಟಿ, ವಿಜಯಲಕ್ಷ್ಮಿ ಅಡಿಗ, ಹಾಗೂ ಶಾಲಿನಿ ವಿ.ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಚಂದ್ರಕಾಂತ ಶೆಟ್ಟಿ ಸ್ವಾಗತಿಸಿ ವಾರ್ಷಿಕ ವರದಿ ಮಂಡಿಸಿದರು.

    ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಧಾರ್ಮಿಕ ದತ್ತಿ ಮುಜರಾಯಿ ಇಲಾಖೆ ಸಹಾಯಕ ಆಯುಕ್ತ ಪ್ರಶಾಂತ ಶೆಟ್ಟಿ ಹಾಗೂ ವೈದಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಕುಸುಮಾಕರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಗಣ್ಯರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕೆದೂರು ಸದಾನಂದ ಶೆಟ್ಟಿ, ಲೆಕ್ಕಪರಿಶೋಧಕ ರಾಜೀವ್‌ ಶೆಟ್ಟಿ ಮಲ್ಯಾಡಿ , ವಿಜಯ ಬ್ಯಾಂಕ್‌ ನಿವೃತ್ತ ಸೀನಿಯರ್‌ ಮ್ಯಾನೇಜರ್‌ ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಉತ್ತಮ ಗ್ರಾಹಕರನ್ನು ಹಾಗೂ ಸಂಸ್ಥೆಯ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಪಿಗ್ಮಿ ಏಜೆಂಟ್‌ ಅವರನ್ನು ಗುರುತಿಸಿ ಗೌರವಿಸಲಾಯಿತು. ಅಶಕ್ತ ಸದಸ್ಯರಾದ ಶ್ರೀಮತಿ ಶೆಡ್ತಿ ಹಲ್ತೂರು, ಗಿರಿಜಮ್ಮ ಶೆಡ್ತಿ ಕೆದೂರು, ಚಂದ್ರಮತಿ ಆಚಾರ್ತಿ ಉಳ್ತೂರು, ರಾಮ ಮೊಗವೀರ ಮಲ್ಯಾಡಿ , ರಾಧಾ ತೆಕ್ಕಟ್ಟೆ ಅವರಿಗೆ ಸಹಾಯಧನ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಅಶೋಕ ಕುಮಾರ್‌ ಪಿ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸಂಸ್ಥೆಯು ವರದಿ ವರ್ಷದಲ್ಲಿ ರೂ. 31,19,700.15 ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್‌ ಘೋಷಿಸಿದರು.


    ಮೂಕಾಂಬಿಕಾ ಅಡಿಗ ಪ್ರಾರ್ಥಿಸಿದರು. ಸಿಬ್ಬಂದಿ ಅಮೃತಾ ಶೆಣೈ ಕಾರ್ಯಕ್ರಮ ನಿರೂಪಿಸಿದರು. ರೇಷ್ಮಾ ಶೆಟ್ಟಿ ಸಹಕರಿಸಿದರು. ಶಾಖಾ ಪ್ರಬಂಧಕ ಕೆ.ವಿಶ್ವನಾಥ ಶೆಟ್ಟಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Sahakara Spandana Shree Mahalingeshwara Souharda Credit Co Operative Society Shree Mahalingeshwara Souharda Credit Cooperative Society Souharda Sahakari Spandana NEws Tekkatte
    Previous Articleವೃತ್ತಿಪರ ನಿರ್ವಹಣಾ ಅಭ್ಯಾಸ ರೂಢಿಸಿಕೊಳ್ಳಿ
    Next Article ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್‌ ಮಹಾಸಭೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.