Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಾಲ ನೀಡುವಾಗ ಕ್ರಮಬದ್ಧ ದಾಖಲೆ ಪತ್ರಗಳ ಪರಿಶೀಲನೆ
    News

    ಸಾಲ ನೀಡುವಾಗ ಕ್ರಮಬದ್ಧ ದಾಖಲೆ ಪತ್ರಗಳ ಪರಿಶೀಲನೆ

    adminBy adminSeptember 5, 2024

    ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್‌ ರಮೇಶ್‌ ಅಭಿಪ್ರಾಯ

    ಮಂಗಳೂರು: ಸಹಕಾರ ಸಂಘಗಳು ಪ್ರತಿ ತಿಂಗಳ ಜಮಾ -ಖರ್ಚುಗಳನ್ನು ಜಿಲ್ಲಾ ಕಚೇರಿಗೆ ತಲುಪಿಸಬೇಕು. ಕಾಲಕಾಲಕ್ಕೆ ಲೆಕ್ಕಪತ್ರ ನಿರ್ವಹಣೆ ಮಾಡಬೇಕು. ಸಾಲ ನೀಡುವಾಗ ಕರಾರುವಕ್ಕಾದ ದಾಖಲೆ ಪತ್ರಗಳನ್ನು ತೆಗೆದುಕೊಂಡು ಕ್ರಮಬದ್ಧವಾಗಿ ಪರಿಶೀಲಿಸಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕ ಹೆಚ್‌.ಎನ್‌ ರಮೇಶ್‌ ಕಿವಿಮಾತು ಹೇಳಿದರು.
    ಮಂಗಳೂರಿನ ಜನತಾ ಬಜಾರ್‌ನಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ದಕ್ಷಿಣ ಕನ್ನಡ ಜಿಲ್ಲಾ ಕಛೇರಿ ಉದ್ಘಾಟನೆ ಹಾಗೂ ಶ್ರೀನಿವಾಸ ಹೋಟೆಲ್‌ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡ ವಿಷಯಾಧಾರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


    ಯಾವುದೇ ಸಹಕಾರಿ ಸಂಘವಾಗಿರಲಿ, ಜಮೆ ಮತ್ತು ಖರ್ಚುಗಳ ಬಗ್ಗೆ ಹಾಗೂ ಬಾಕಿ ಹಣದ ಬಗ್ಗೆ ಕಾಲಕಾಲಕ್ಕೆ ಮಾಹಿತಿ ದೃಢೀಕರಿಸಿಕೊಳ್ಳಬೇಕು. ಯಾವುದೇ ಕೆಲಸವನ್ನು ಕಾನೂನಿನ ಚೌಕಟ್ಟಿನಲ್ಲಿ, ಕ್ರಮಬದ್ಧವಾಗಿ ಮಾಡಿದರೆ, ಮುಂದೆ ವ್ಯಾಜ್ಯಗಳು ಬರದಂತೆ ತಡೆಯಬಹುದು ಎಂದು ಹೇಳಿದರು.


    ಕೇಂದ್ರ ಸಹಕಾರ ಸಚಿವಾಲಯವು ಏಕರೂಪ ತಂತ್ರಾಂಶ ಅಳವಡಿಸುವ ಮೂಲಕ ಎಲ್ಲ ರೀತಿಯ ಸಹಕಾರ ಸಂಘಗಳು ಒಂದೇ ಸೂತ್ರದಡಿ ತರುವ ಯೋಜನೆ ರೂಪಿಸುತ್ತಿದೆ. ಇದರಿಂದ ಯಾವುದೇ ವ್ಯವಹಾರ ನಡೆದರೂ ಅದು ಏಕರೂಪ ತಂತ್ರಾಂಶದ ಮೂಲಕ ಸರಕಾರದ ಮಾಹಿತಿಗೆ ಸಿಗುತ್ತದೆ ಎಂದು ಹೆಚ್‌.ಎನ್‌ ರಮೇಶ್‌ ತಿಳಿಸಿದರು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ್‌ ಎಸ್‌.ಕೆ ಮುಖ್ಯ ಅತಿಥಿಯಾಗಿ ಮಾತನಾಡಿ, ಸಹಕಾರಿ ಸಂಘಗಳು ಪ್ರಾದೇಶಿಕವಾಗಿ, ದೇಶಕ್ಕಾಗಿ, ಸಮಾಜಕ್ಕಾಗಿ ಏನು ಕೊಡುಗೆ ನೀಡಿವೆ ಎಂಬುದನ್ನು ಪ್ರಶ್ನಿಸಿಕೊಳ್ಳಬೇಕು. 100 ಸಂಸ್ಥೆಗಳು 100 ಗ್ರಾಮಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡುವ ಪಣ ತೊಡಬೇಕು. ಗ್ರಾಮದಲ್ಲಿ ಪ್ಲಾಸ್ಟಿಕ್‌ ನಿರ್ಮೂಲನೆ, ಮಳೆ ಕೊಯ್ಲು ಅಭಿಯಾನದಂ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುವಂತಾಗಬೇಕು. ಸಾಮಾಜಿಕ ನಾಯಕತ್ವದ ಪರಿಕಲ್ಪನೆ ಇಟ್ಟುಕೊಂಡು ಮುನ್ನಡೆಯುವ ಕೆಲಸವಾಗಬೇಕು ಎಂದು ಅಭಿಪ್ರಾಯ ಪಟ್ಟರು.
    ಜನತಾ ಬಜಾರ್‌ನ ಅಧ್ಯಕ್ಷ ಪುರುಷೋತ್ತಮ ಭಟ್‌ ಮಾತನಾಡಿ, ಸಹಕಾರಿ ಸಂಸ್ಥೆಗಳು ಸುಸ್ಥಿತಿಯಲ್ಲಿ ಕೆಲಸ ಮಾಡಲು ಒಳ್ಳೆಯ ಸಾಲಗಾರನೂ ಬೇಕು. ನಾವು ಬಳಸುವ ಸ್ವಾತಂತ್ರ್ಯ ಸ್ವೇಚ್ಛಾಚಾರ ಆಗಬಾರದು. ವಿವೇಚನೆಯಿಂದ ಬಳಸಬೇಕು. ಹೀಗಾದರೆ ಆದರ್ಶ ಸಹಕಾರಿ ಬೆಳೆಯಲು ಸಾಧ್ಯ ಎಂದರು.


    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕ ಶರಣು ಗೌಡ ಪಾಟೀಲ್‌ ಪ್ರಾಸ್ತಾವಿಕ ಮಾತನಾಡಿ, ಸಹಕಾರಿಗಳು ಉತ್ಕೃಷ್ಟವಾಗಿ ಬೆಳೆಯಬೇಕು. ಒಗ್ಗೂಡಿ ಕೆಲಸ ಮಾಡಿದರೆ ಉತ್ತಮವಾಗಿ ಕಾರ್ಯನಿರ್ವಹಿಸಬಹುದು ಎಂದು ಹೇಳಿದರು.


    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್‌ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ ದೇವಸ್ಯ, ಉಪಾಧ್ಯಕ್ಷ ಸಂಜೀವ ಅಡ್ಯಾರ್‌, ನಿಕಟಪೂರ್ವ ಅಧ್ಯಕ್ಷ ಎ.ಸುರೇಶ್‌ ರೈ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ನೂತನ ನಿರ್ದೇಶಕರನ್ನು ಅಭಿನಂದಿಸಲಾಯಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ವಲಯ ಅಧಿಕಾರಿ ಗುರುಪ್ರಸಾದ್‌ ಬಂಗೇರ ಸ್ವಾಗತಿಸಿದರು. ಸಂಯುಕ್ತ ಸಹಕಾರಿಯ ದ.ಕ. ಜಿಲ್ಲಾ ಅಧಿಕಾರಿ ವಿಜಯ ಬಿ.ಎಸ್‌ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Bhaskara Devasya Co Operative ministry Cooperative Cooperative Department Cooperative Registrar Guruprasad Bangera Karnataka Rajya Samyukta Souharda Sahakari Lion Suresh Rai Sahakara Spandana Souharda Sahakari Spandana Cooperative Spandana NEws
    Previous Articleಕೆ.ಬಿ.ಜಯಪಾಲ ಶೆಟ್ಟಿ ಪ್ರತಿಭಾ ಪುರಸ್ಕಾರ ಪ್ರದಾನ
    Next Article ಸೆ.7ರಂದು ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಪ್ರಧಾನ ಕಚೇರಿಯ ಶಿಲಾನ್ಯಾಸ ಸಮಾರಂಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.