Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ರೂ.123 ಲಕ್ಷ ನಿವ್ವಳ ಲಾಭ
    News

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ರೂ.123 ಲಕ್ಷ ನಿವ್ವಳ ಲಾಭ

    adminBy adminSeptember 15, 2024

    ಐದನೇ ವಾರ್ಷಿಕ ಮಹಾಸಭೆಯಲ್ಲಿ 25% ಡಿವಿಡೆಂಡ್‌ ಘೋಷಣೆ

    ಮಂಗಳೂರು: ಶ್ರೀಶಾ ಕೋ ಆಪರೇಟಿವ್ ಸೊಸೈಟಿಯ ಐದನೇ ವಾರ್ಷಿಕ ಮಹಾಸಭೆ ಭಾನುವಾರ ಶ್ರೀನಿವಾಸ ಹೋಟೆಲ್‌ನ ಸಭಾಂಗಣದಲ್ಲಿ ನಡೆಯಿತು.


    ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಶಾ ಸೊಸೈಟಿಯ ಅಧ್ಯಕ್ಷ ಶ್ರೀ ಎಂ.ಎಸ್‌.ಗುರುರಾಜ್, ಶ್ರೀಶಾ ಸೊಸೈಟಿ ಆರಂಭವಾಗಿ ಕೇವಲ ಐದು ವರ್ಷಗಳಲ್ಲೇ ಐದು ಸುಸಜ್ಜಿತ ಶಾಖೆಗಳನ್ನು ತೆರೆದಿದೆ. 2023-24ನೇ ಸಾಲಿನಲ್ಲಿ ಅಭೂತಪೂರ್ವ ವ್ಯವಹಾರ ನಡೆಸಿ 123 ಲಕ್ಷ ರೂ. ನಿವ್ವಳ ಲಾಭ ಗಳಿಸಿ ಇಂದು ಸದಸ್ಯರಿಗೆ ನೀಡುತ್ತಿರುವುದು 25% ಡಿವಿಡೆಂಡ್‌ ತಮಗೆ ಅತೀವ ಸಂತಸ ತಂದಿದೆ. ಲಾಭ ಗಳಿಕೆಯೊಂದೇ ಧ್ಯೇಯವಾಗಿರದೆ ಗಳಿಸಿದ ಲಾಭಾಂಶದಲ್ಲಿ ದೊಡ್ಡ ಪಾಲನ್ನು ಮರಳಿ ಸಮಾಜ ಸೇವಾ ಕಾರ್ಯಗಳಿಗೆ ವಿನಿಯೋಗಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಶ್ರೀಶಾ ಸೊಸೈಟಿಯು ಐದು ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ 10 ದೊಡ್ಡ ಮಟ್ಟದ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಅವುಗಳಲ್ಲಿ ಹೆಚ್ಚಿನವುಗಳನ್ನು ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ಮತ್ತು ಅಲ್ಲಿನ ವಿದ್ಯಾರ್ಥಿಗಳಿಗೆ ಮೀಸಲಿಟ್ಟಿದ್ದೇವೆ. ಮುಂದಿನ ವರ್ಷದಲ್ಲಿ ಮತ್ತೆರೆಡು ಶಾಖೆಗಳನ್ನು ತೆರೆಯುವ ಮೂಲಕ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದೆ ಎಂದು ಹೇಳಿದರು.

    https://chat.whatsapp.com/Ge11n7QCiMj5QyPvCc0H19
    ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿತ್ರಾ ಡಿಸೋಜ ವಾರ್ಷಿಕ ಲೆಕ್ಕಪತ್ರ, ಲಾಭ ಗಳಿಕೆ ಮತ್ತು ನಿವ್ವಳ ಲಾಭ ವಿಂಗಡಣೆಯನ್ನು ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದರು. 2023 -24ನೇ ಸಾಲಿನಲ್ಲಿ ಆಯ ವ್ಯಯಕ್ಕಿಂತ ಹೆಚ್ಚಿಗೆ ಖರ್ಚು ಆಗಿದ್ದಕ್ಕೆ ವಿವರಣೆ ನೀಡುವ ಮೂಲಕ ಹಂಪನಕಟ್ಟೆ ಶಾಖೆಯ ನಿಬಂಧಕಿ ಲಕ್ಷ್ಮಿ ಸಭೆಯ ಒಪ್ಪಿಗೆ ಪಡೆದರು. ಹಾಗೆಯೇ ವಿವಿಧ ವಿಷಯಗಳ ಬಗ್ಗೆ ಇತರ ಶಾಖೆಗಳ ನಿಬಂಧಕರು ಪ್ರಸ್ತುತ ಪಡಿಸಿ ಸರ್ವ ಸದಸ್ಯರ ಒಪ್ಪಿಗೆ ಪಡೆದರು.


    ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ಹೋ ಮಾತನಾಡಿ, ಶ್ರೀಶಾ ಸೊಸೈಟಿಯ ವ್ಯಾವಹಾರಿಕ ವೃತ್ತಿಪರತೆ, ಶಿಸ್ತು ಜೊತೆಗೆ ನಿಸ್ವಾರ್ಥ ಸೇವಾ ಕಾರ್ಯಗಳು ತನಗೆ ನಿಜಕ್ಕೂ ಆಶ್ಚರ್ಯ ತಂದಿದೆ. ಇಂತಹ ಸಂಸ್ಥೆಗಳು ಸಮಾಜದ ಆಸ್ತಿ” ಎಂದರು. ವಿದ್ಯಾ ರಾವ್‌ ಕಾರ್ಯಕ್ರಮ ನಿರೂಪಿಸಿದರು. ರಾಧಾ ಪ್ರಾರ್ಥನೆ ಹಾಡಿದರು. ಪ್ರಸನ್ನ ಕುಮಾರ್‌ ವಂದಿಸಿದರು.

    ವಿವಿಧ ಸೇವಾಕಾರ್ಯಗಳು:
    ಮಹಾಸಭೆಯಲ್ಲಿ ಸಹಕಾರಿಯ ವತಿಯಿಂದ ದ.ಕ.ಜಿಲ್ಲಾ ನಿವೃತ್ತ ಸೈನಿಕರ ಸಂಘಕ್ಕೆ 50000/- ರೂ.ಗಳ ಚೆಕ್ ದೇಣಿಗೆ ನೀಡಲಾಯಿತು. ಸುರತ್ಕಲ್ ನ ಗೋವಿಂದದಾಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರ ಶುಲ್ಕವಾಗಿ 65000/ ರೂ.ಗಳ ಚೆಕ್ ನೀಡಲಾಯಿತು. ಬಿಜೈ ಕಾಪಿಕಾಡ್‌ನನಲ್ಲಿನ ಸರಕಾರಿ ಕನ್ನಡ ಮಾಧ್ಯಮ ಶಾಲೆಯ 78 ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ನೀಡಲಾಯಿತು. ಶಾಲೆಯ ಪರವಾಗಿ ಶಾಲೆಯ ಮುಖ್ಯ ಶಿಕ್ಷಕಿ ಲೀನಾ ಮತ್ತು ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ಹೋ ಅವರಿಗೆ ಹಸ್ತಾಂತರಿಸಲಾಯಿತು. ಸಾಮಾಜಿಕವಾಗಿ ಹಿಂದುಳಿದ ವರ್ಗದ ಮೂರು ಜನರಿಗೆ ವೀಲ್‌ಚೇರ್ ನೀಡಲಾಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Banking Cooperative Cooperative Department Cooperative Registrar M S Gururaj Shreesha Souharda Co Operative Society Spandana Spandana Trust
    Previous Articleಎಪಿವೈ ಪ್ರಶಸ್ತಿ, ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಮುಡಿಗೇರಿಸಿಕೊಂಡ ಎಸ್‌ಸಿಡಿಸಿಸಿ ಬ್ಯಾಂಕ್
    Next Article ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ಯಶಸ್ವಿ ಕಾರ್ಯನಿರ್ವಹಣೆ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.