Author: admin

ಸಹಕಾರಿ ಸಂಘಗಳ ಮೂಲಕ ವಿತರಿಸಲು ಬಜೆಟ್‌ನಲ್ಲಿ ಘೋಷಣೆ ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿರುವ ಬಜೆಟ್‌ನಲ್ಲಿ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿ 38 ಲಕ್ಷ ರೈತರಿಗೆ ಸಹಕಾರಿ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡುವ ಯೋಜನೆಯನ್ನು ಪ್ರಕಟಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿ ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ರೈತರು ತಮ್ಮ ಹತ್ತಿರದ ಸಹಕಾರ ಬ್ಯಾಂಕ್‌ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವ್ಯವಸಾಯ ಸೇವಾ ಸಹಕಾರಿ ಸಂಘಗಳನ್ನು ಸಂಪರ್ಕಿಸಿ ಅಲ್ಲಿ ಹೊಸದಾಗಿ ಈ ಕೃಷಿ ಸಾಲ ಪಡೆಯಬಹುದು ಅಥವಾ ಹಳೆಯ ಸಾಲವನ್ನು ನವೀಕರಿಸಬಹುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ. ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಈ ಸಾಲ ಸೌಲಭ್ಯದಿಂದ ರಾಜ್ಯದ ರೈತಾಪಿ ಸಮುದಾಯಕ್ಕೆ ಸಾಕಷ್ಟು ನೆರವಾಗಲಿದೆ. ಅಲ್ಲದೆ ಸಹಕಾರ ಸಂಘಗಳ ನಿಬಂಧಕರ ಹಂತದಲ್ಲಿನ ವಿವಿಧ ಸೇವೆಗಳನ್ನು…

Read More

ದೇಶದಲ್ಲಿ ಅತ್ಯಧಿಕ ಬಜೆಟ್ ಮಂಡಿಸಿದ್ದು ವಜುಬಾಯಿ ವಾಲಾ, 18 ಬಜೆಟ್‌ ಮಂಡಿಸಿದ ದಾಖಲೆ ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯ ಬಜೆಟ್‌ ಮಂಡಿಸಿದ್ದಾರೆ. ತನ್ಮೂಲಕ ಅವರು 17ನೇ ರಾಜ್ಯ ಬಜೆಟ್ ಮಂಡಿಸಿದ್ದು ಮತ್ತೊಂದು ದಾಖಲೆ ಬರೆದಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂದು ಅವರು ಗುರುತಿಸಿಕೊಂಡಿದ್ದಾರೆ. https://chat.whatsapp.com/FCEnlTkAKCC0MGPhXtX4i4 ದೇಶದ ವಿವಿಧ ರಾಜ್ಯಗಳಲ್ಲಿ ಹಣಕಾಸು ಸಚಿವರಾಗಿ ಹಾಗೂ ಮುಖ್ಯಮಂತ್ರಿಗಳಾಗಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಯಾ ಹೆಸರಲ್ಲಿದೆ ಎಂಬ ಕುತೂಹಲ ಸಹಜ. ಈ ಪಟ್ಟಿಯನ್ನು ನೋಡೊದರೆ, ರಾಷ್ಟ್ರಮಟ್ಟದಲ್ಲಿ ಅತಿಹೆಚ್ಚು ಬಜೆಟ್ ಮಂಡಿಸಿದ ಗುಜರಾತ್‌ನ ಮಾಜಿ ಹಣಕಾಸು ಸಚಿವ, ಕರ್ನಾಟಕದ ಮಾಜಿ ರಾಜ್ಯಪಾಲರೂ ಆಗಿದ್ದ ವಜುಭಾಯಿ ವಾಲಾ ಅವರ ಹೆಸರಲ್ಲಿದೆ. ಅವರು 18 ಬಾರಿ ಬಜೆಟ್ ಮಂಡಿಸಿ ಮೊದಲ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಹಾಲಿ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಒಟ್ಟು 17 ಬಾರಿ ಬಜೆಟ್ ಮಂಡಿಸುವ ಮೂಲಕ ದೇಶದಲ್ಲೇ ಎರಡನೇ ಅತಿ…

Read More

ಮಂಗಳೂರು: ಅಡ್ಯಾರಿನ ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜು ಮೈದಾನದಲ್ಲಿ ಭಾನುವಾರ ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕಗಳ ವತಿಯಿಂದ ನಡೆದ ಸಹಕಾರಿ ಕ್ರೀಡೋತ್ಸವದಲ್ಲಿ  ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. https://chat.whatsapp.com/FCEnlTkAKCC0MGPhXtX4i4 ಆರೆಸ್ಸೆಸ್ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಿ.ಎಸ್. ಪ್ರಕಾಶ್, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯ ಕ್ಯಾ.ಬ್ರಿಜೇಶ್‌ ಚೌಟ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ.ಸುಧಾಕರ ರೈ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಿ.ಆರ್‌ ಪ್ರಸಾದ್‌, ಜನತಾ ಬಜಾರ್ ಅಧ್ಯಕ್ಷ ಪ್ರಸನ್ನ ಕೆ., ಬಿಲ್ಡಿಂಗ್ ಸೊಸೈಟಿ ಅಧ್ಯಕ್ಷ ರಂಜನ್ ಮಿಜಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕಾರ್ಯದರ್ಶಿ ಸುರೇಶ್ ಆಳ್ವ ಮೊದಲಾದವರು ಬಹುಮಾನ ವಿತರಣಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಹಕಾರ ಭಾರತಿ ರಾಜ್ಯ ಸಹ ಕಾರ್ಯದರ್ಶಿ ಗಣೇಶ್‌ ಶೆಣೈ, ಮಂಗಳೂರು ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ…

Read More

ಬಳ್ಳಾರಿ: ಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್‌ ಮತ್ತು ಕಿಷ್ಕಿಂಧಾ ವಿಶ್ವವಿದ್ಯಾಲಯವು ಬ್ಯಾಂಕಿಂಗ್‌ ಮತ್ತು ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ವೃತ್ತಿ ನೈಪುಣ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಜ್ಞಾನ ವಿನಿಮಯದ ಒಪ್ಪಂದ ಮಾಡಿಕೊಂಡಿವೆ. https://chat.whatsapp.com/FCEnlTkAKCC0MGPhXtX4i4 ಸುಕೋ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಜಿ.ಎಸ್‌ ರವಿಸುಧಾಕರ ಕಿಷ್ಕಿಂಧಾ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಟಿ.ಎನ್‌ ನಾಗಭೂಷಣ ಅವರು ಈ ಒಪ್ಪಂದಕ್ಕೆ ಗುರುವಾರ ಸಹಿ ಹಾಕಿದ್ದಾರೆ. ಸುಕೋ ಬ್ಯಾಂಕಿನ ಅಧ್ಯಕ್ಷರಾದ ಮೋಹಿತ್‌ ಮಸ್ಕಿ ಅವರು, ಬ್ಯಾಂಕಿಂಗ್‌ ಮತ್ತು ಉನ್ನತ ಶಿಕ್ಷಣದ ಜ್ಞಾನ ವಿನಿಮಯವನ್ನು ಉತ್ತೇಜಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಕಿಷ್ಕಿಂಧಾ ವಿಶ್ವವಿದ್ಯಾಲಯದ ಸಹಕುಲಪತಿಗಳಾದ ಅಮರರಾಜ್‌ ಭೂಪಾಲ್ ಅವರು, ಕಿಷ್ಕಿಂಧಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಚಟುವಟಿಕೆಗಳಲ್ಲಿ ಪ್ರಾಯೋಗಿಕ ಅನುಭವದ ಅವಕಾಶ ಒದಗಿಸುವ ಶೈಕ್ಷಣಿಕ ಕಲಿಕೆ ಮತ್ತು ಬ್ಯಾಂಕಿಂಗ್ ಕ್ಷೇತ್ರದ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಈ ಒಡಂಬಡಿಕೆ ಹೊಂದಿದೆ ಎಂದು ತಿಳಿಸಿದ್ದಾರೆ. ಸುಕೋ ಬ್ಯಾಂಕ್, ಕಿಷ್ಕಿಂಧಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಅತಿಥಿ ಉಪನ್ಯಾಸಗಳನ್ನು, ತಜ್ಞರ…

Read More

ಕೇಂದ್ರ ಹಣಕಾಸು ಸಚಿವರಿಗೆ ಕರ್ನಾಟಕದ ಪಟ್ಟಣ ಸಹಕಾರಿ ಬ್ಯಾಂಕುಗಳ ಮನವಿ ಬೆಂಗಳೂರು: 2025ರ ಆದಾಯ ತೆರಿಗೆ ಕಾಯ್ದೆಯ ಅಡಿಯಲ್ಲಿ ಸಹಕಾರಿ ಸಂಘಗಳಿಗೆ ರಿಯಾಯಿತಿಯ ತೆರಿಗೆ ಚೌಕಟ್ಟನ್ನು ತರ್ಕಬದ್ಧಗೊಳಿಸುವಂತೆ ಕೋರಿ ಹಲವಾರು ಪಟ್ಟಣ ಸಹಕಾರಿ ಬ್ಯಾಂಕುಗಳು (ಯುಸಿಬಿ) ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದಿದ್ದು, ಶೇ.22ರ ತೆರಿಗೆ ದರವನ್ನು ಶೇ.18ಕ್ಕೆ ಇಳಿಸುವಂತೆ ಮನವಿ ಮಾಡಿದೆ. https://chat.whatsapp.com/FCEnlTkAKCC0MGPhXtX4i4 ಕಾರ್ಪೊರೇಟ್ ಬ್ಯಾಂಕುಗಳೊಂದಿಗೆ ಸ್ಪರ್ಧಾತ್ಮಕ ಸಮಾನತೆ ಹೊಂದಲು ಮತ್ತು ಸಹಕಾರಿ ಬ್ಯಾಂಕಿಂಗ್ ಪರಿಸರ ವ್ಯವಸ್ಥೆಯ ದೀರ್ಘಕಾಲದ ಸ್ಥಿರತೆ ಕಾಯ್ದುಕೊಳ್ಳಲು ಕರ್ನಾಟಕದ ನಗರ ಸಹಕಾರಿ ಬ್ಯಾಂಕಿಂಗ್ ವಲಯವು ತೆರಿಗೆ ಪ್ರಮಾಣವನ್ನು ಕಡಿಮೆ ಮಾಡಲು ಕೋರಿದೆ. ತೆರಿಗೆ ವಿನಾಯಿತಿಯ ವಿಷಯದಲ್ಲಿ ಪಟ್ಟಣ ಸಹಕಾರಿ ಸಂಘಗಳು ಕೆಲವು ಷರತ್ತುಗಳಿಗೆ ಒಳಪಟ್ಟು ರಿಯಾಯಿತಿ ತೆರಿಗೆ ಆಡಳಿತವನ್ನು ಆಯ್ಕೆ ಮಾಡಲು ಅನುವು ಮಾಡಿಕೊಡುತ್ತದೆ. ತೆರಿಗೆ ರಿಯಾಯಿತಿಯನ್ನು ಮುಂದುವರಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪಟ್ಟಣ ಸಹಕಾರಿ ಬ್ಯಾಂಕುಗಳು ಸ್ವಾಗತಿಸಿದರೂ, ಸಹಕಾರಿ ಬ್ಯಾಂಕುಗಳ ಮೇಲಿನ ಪರಿಣಾಮಕಾರಿ ತೆರಿಗೆ ಹೊರೆ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು…

Read More

ಮಂಗಳೂರು: ಬಿ.ಸಿ. ರೋಡ್‌ನಲ್ಲಿ 2012ರಿಂದ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಿ.ಸಿ. ರೋಡ್ ಶಾಖೆಯು ಸಂಘದ ಸದಸ್ಯರ ಅಪೇಕ್ಷೆಯಂತೆ ವಿಸ್ತಾರಗೊಂಡು ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಯಾಗಿ ಪರಿವರ್ತಿತಗೊಂಡಿದ್ದು ಮಾರ್ಚ್ 6ರಂದು ಶುಕ್ರವಾರ ಸಂಜೆ 4.35ಕ್ಕೆ ನವೀಕೃತ, ವಿಸ್ತರಿತ ಹಾಗೂ ಹವಾನಿಯಂತ್ರಿತ ಬಿ.ಸಿ ರೋಡ್ ಶಾಖೆ ಲೋಕಾರ್ಪಣೆಗೊಳ್ಳಲಿದೆ. ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ.ರಮಾನಾಥ ರೈಯವರು ಸ್ಥಳೀಯ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಉದ್ಘಾಟಿಸಲಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸಹಕಾರ ತತ್ವದ ಮೂಲಕ ಸಾರ್ವಜನಿಕ ಸೇವೆಯ ಸದುದ್ದೇಶದ ಧ್ಯೇಯದೊಂದಿಗೆ ಸಾಕಾರಗೊಳಿಸುವ ಮುಖ್ಯ ಉದ್ದೇಶದೊಂದಿಗೆ ಮಂಗಳೂರು ತಾಲೂಕಿನ ಬೆಂದೂರ್‌ವೆಲ್‌ನಲ್ಲಿ 30-01-2012ರಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವರಾದ ಬಿ.ಜನಾರ್ದನ ಪೂಜಾರಿಯವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡು, ದಶಮಾನೋತ್ಸವ ಸಂದರ್ಭದಲ್ಲಿ ಸ್ವಂತ ಆಡಳಿತ ಹಾಗೂ ಪ್ರಧಾನ ಕಚೇರಿಯನ್ನು ಪಡೀಲ್‌ನಲ್ಲಿ ಹೊಂದಿ, ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉನ್ನತ ಸಾಧನೆಯ ಹಾದಿಯಲ್ಲಿದೆ. ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ಸುಸಜ್ಜಿತವಾದ ಹವಾನಿಯಂತ್ರಿತ ಸ್ವಂತ ಕಟ್ಟಡವನ್ನು ಹೊಂದಿದ ದಕ್ಷಿಣ ಕನ್ನಡ ಜಿಲ್ಲೆಯ ಏಕಮಾತ್ರ ವಿವಿಧೋದ್ದೇಶ ಸಹಕಾರಿ ಸಂಘವಾಗಿದೆ.…

Read More

ಬೆಂಗಳೂರು: ಸೌಹಾರ್ದ ಸಹಕಾರ ಬ್ಯಾಂಕುಗಳು ತಮ್ಮ ಠೇವಣಿಯ ಶೇ.20ರಷ್ಟು ಮೊತ್ತವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕುಗಳಲ್ಲಿ ಇರಿಸಬೇಕು. ಬ್ಯಾಂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿವರ್ಷ ತಮ್ಮ ಆಸ್ತಿ ಘೋಷಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ಒಳಗೊಂಡ ಕರ್ನಾಟಕ ಸೌಹಾರ್ದ ಸಹಕಾರ (ತಿದ್ದುಪಡಿ) ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. https://chat.whatsapp.com/FCEnlTkAKCC0MGPhXtX4i4 ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತದ ಅಧ್ಯಕ್ಷ ಜಿ.ನಂಜನಗೌಡ ಹಾಗೂ 12 ಸಹಕಾರ ಸಂಘಗಳು ಸಲ್ಲಿಸಿದ ಈ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಡೆಸಿದೆ. ಹೊಸ ಕಾಯ್ದೆಯು ಠೇವಣಿಯ ಶೇ.20ರಷ್ಟು ಮೊತ್ತವನ್ನು ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕುಗಳಲ್ಲಿ ಇರಿಸಬೇಕು ಮತ್ತು ಪದಾಧಿಕಾರಿಗಳು ಪ್ರತಿವರ್ಷ ಆಸ್ತಿ ಘೋಷಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ಈ ತಿದ್ದುಪಡಿಗಳು ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುತ್ತವೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಅರ್ಜಿ…

Read More

ಮಹಿಳಾ ಹಗ್ಗಜಗ್ಗಾಟದಲ್ಲಿ ಪ್ರಥಮ, ವೈಯಕ್ತಿಕ ಸ್ಪರ್ಧೆಗಳಲ್ಲೂ ಹಲವು ಪ್ರಶಸ್ತಿ ಪುತ್ತೂರು: ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವತಿಯಿಂದ ಭಾನುವಾರ ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದ ಸಹಕಾರಿ ಕ್ರೀಡೋತ್ಸವದಲ್ಲಿ ಕ್ಯಾಂಪ್ಕೋ ಸಂಸ್ಥೆಯ ಕಾವು ಘಟಕ ಹಲವು ಪ್ರಶಸ್ತಿಗಳನ್ನು ಗೆದ್ದಿದೆ. https://chat.whatsapp.com/FCEnlTkAKCC0MGPhXtX4i4 ಮಹಿಳಾ ಹಗ್ಗಜಗ್ಗಾಟದಲ್ಲಿ ಕ್ಯಾಂಪ್ಕೊ ಕಾವು ತಂಡ ಪ್ರಥಮ ಬಹುಮಾನ ತಮ್ಮದಾಗಿಸಿಕೊಂಡಿದೆ. ಹರಿಣಾಕ್ಷಿ ಕೆ, ವಿನೋಧಿನಿ, ಜ್ಯೋತಿ, ಮಮತಾ ಎನ್‌, ವಿನುತಾ ಎಸ್‌., ಶೈಲಜಾ ಸಿ.ಎಚ್‌., ದಿವ್ಯಾ ಡಿ ಅವರಿದ್ದ ತಂಡ ಎದುರಾಳಿ ತಂಡವನ್ನು ಸೋಲಿಸಿ ಬಹುಮಾನ ಗೆದ್ದುಕೊಂಡಿತು. ಆಶುಭಾಷಣ ಸ್ಪರ್ಧೆಯಲ್ಲಿ ಹರಿಣಾಕ್ಷಿ ಕೆ ಪ್ರಥಮ ಬಹುಮಾನ ತಮ್ಮದಾಗಿಸಿಕೊಂಡರು. 35 ವರ್ಷದವರೊಳಗಿನ 100 ಮೀಟರ್‌ ಓಟದ ಸ್ಪರ್ಧೆಯಲ್ಲಿ ಹರಿಣಾಕ್ಷಿ ಡಿ ಪ್ರಥಮ ಬಹುಮಾನ ಪಡೆದರೆ, ಅಕ್ಷತಾ ತೃತೀಯ ಸ್ಥಾನ ಪಡೆದರು. 200 ಮೀಟರ್‌ ಓಟದ 35 ವರ್ಷದ ಕೆಳಗಿನವರ ವಿಭಾಗದಲ್ಲಿ ಹರಿಣಾಕ್ಷಿ ಡಿ ಪ್ರಥಮ ಬಹುಮಾನ ಪಡೆದರೆ, ಅಕ್ಷತಾ ತೃತೀಯ ಸ್ಥಾನ ಪಡೆದರು. 35-50…

Read More

ಮಂಗಳೂರು: ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಭಾನುವಾರ ಮಂಗಳೂರಿನ ಅಡ್ಯಾರ್‌ ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದ ಸಹಕಾರಿ ಕ್ರೀಡೋತ್ಸವದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾಣಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಥಮ ಬಹುಮಾನ ತಮ್ಮದಾಗಿಸಿಕೊಂಡಿದೆ. https://chat.whatsapp.com/FCEnlTkAKCC0MGPhXtX4i4 ಮೂರು ಸುತ್ತುಗಳಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಡಬ ತಾಲೂಕಿನ ಕಾಣಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ್ಪರ್ಧಿಸಿದ್ದ ಸಂಘದ ಅಧ್ಯಕ್ಷರಾದ ಸುರೇಶ್‌ ಓಡಬಾಯಿ ಹಾಗೂ ವಿನಯ್‌ ಕುಮಾರ್‌ ಅವರು ಪ್ರಥಮ ಸ್ಥಾನ ಪಡೆದರು. ಮಂಗಳೂರು ಯೆಯ್ಯಾಡಿಯ ಪ್ರಣವ ಸೌಹಾರ್ದ ಸಹಕಾರಿ ಸಂಘವು ದ್ವಿತೀಯ ಸ್ಥಾನ ಪಡೆಯಿತು. ವಿಟ್ಲ ಗ್ರಾಮೀಣ ಸಹಕಾರಿ ಸಂಘ ತೃತೀಯ ಸ್ಥಾನ ಪಡೆಯಿತು. ಒಟ್ಟು ಹದಿನೇಳು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸಹಕಾರಿ ಕ್ಷೇತ್ರ, ಪ್ರಚಲಿತ ವಿದ್ಯಮಾನ ಹಾಗೂ ಸಾಮಾನ್ಯ ಜ್ಞಾನದ ವಿಷಯದಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಮೋಹನ್‌ದಾಸ್‌ ಮರಕಡ ಕ್ವಿಜ್‌ ಮಾಸ್ಟರ್‌ ಆಗಿ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಬಹುಮಾನ ವಿತರಣಾ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ…

Read More

ಬೋಳೂರಿನಲ್ಲಿ ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಸ್ವಂತ ಕಚೇರಿ ಉದ್ಘಾಟಿಸಿ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಹೇಳಿಕೆ ಮಂಗಳೂರು: ವಾಣಿಜ್ಯ ಬ್ಯಾಂಕ್‌ಗಳು ಸಂಕುಚಿತವಾಗಿ ವಿಲೀನವಾಗುವ ಪರಿಸ್ಥಿತಿಗೆ ಬಂದಿವೆ. ಸಿರಿವಂತರಿಗೆ ಮಾತ್ರ ಅಲ್ಲಿ ಸಾಲ ಸಿಗುವ ಪರಿಸ್ಥಿತಿ ಇದೆ. ಆದರೆ, ಸಹಕಾರಿ ಬ್ಯಾಂಕುಗಳು ಇಂದು ಊರಿನ ಪ್ರತಿಯೊಬ್ಬರಿಗೂ ಸುಲಭದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಪ್ರತೀ ಮನೆಗೂ ಬೆಳಕಾಗಿದೆ ಹಾಗೂ ಮಹಿಳೆಯರಿಗೆ ಸ್ವಾವಲಂಬಿ ಬದುಕು ಸಾಧ್ಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಬೋಳೂರು ಶಾಖೆಯ ನೂತನ ಸ್ವಂತ ಕಚೇರಿ ಕಟ್ಟಡ ‘ಸಹಕಾರ ಸೌಧʼವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ ಸಾಲ ಅತೀ ಹೆಚ್ಚು ನೀಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರ ಅದ್ವಿತೀಯ ಸಾಧನೆ ಮಾಡಿದೆ. ಕಳೆದ 29 ವರ್ಷಗಳಲ್ಲಿ ಕೃಷಿ ಸಾಲ ಶೇ.100ರಷ್ಟು ಮರುಪಾವತಿ ಮಾಡುವ ಮೂಲಕ…

Read More