Author: admin

ಮಂಗಳೂರು: ನಮ್ಮ ನಮ್ಮ ಪರಿಸರದ ನಿರ್ವಹಣೆ, ಸ್ವಚ್ಛತೆ ಇದು ಕೇವಲ ಸರಕಾರ, ಸರಕಾರಿ ಯಂತ್ರಗಳು ಅಥವಾ ಸಾಮಾಜಿಕ ಸಂಘಟನೆಗಳು ಮಾಡುವ ಕಾರ್ಯವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯ. ಸಮಾಜದಲ್ಲಿ ನಾಗರಿಕ ಶಿಷ್ಟಾಚಾರದ ಅರಿವು ಮೂಡಿಸಿ ಜಾಗೃತಗೊಳಿಸಿದಾಗ ಇದು ಸಾಧ್ಯವಾಗುತ್ತದೆ ಎಂದು ಖ್ಯಾತ ಪರಿಸರವಾದಿ ಡಾ. ರಾಧಾಕೃಷ್ಣ ನಾಯರ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ ಸ್ಟ್ರೀಟ್ ಶಾಖೆಯ ವತಿಯಿಂದ ಭಾನುವಾರ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ನಡೆದ 50ನೇ ಸ್ವಚ್ಛತಾ ಶ್ರಮದಾನದ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಂದುವರಿದು ಮಾತನಾಡಿದ ಅವರು ಇಂತಹ ಸ್ವಚ್ಛತಾ ಕಾರ್ಯಕ್ರಮಗಳು ನಿತ್ಯ ನಿರಂತರವಾದರೆ ಮಾತ್ರ ನಮ್ಮ ಪರಿಸರ ಸುರಕ್ಷಿತವಾಗಿರುತ್ತದೆ, ಮತ್ತು ಈ ನಿಟ್ಟಿನಲ್ಲಿ ಸಮಾಜದಲ್ಲಿ ಸ್ವಚ್ಛತೆಯ ಅರಿವನ್ನು ಮೂಡಿಸುತ್ತಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್ ನಂತಹ ಆರ್ಥಿಕ ವ್ಯವಹಾರದಿಂದ ಕೂಡಿದ ಸಮಾಜಮುಖಿ ಸಂಸ್ಥೆಗಳ ಪಾತ್ರ ಶ್ಲಾಘನೀಯ. ಸ್ವಚ್ಛತಾ ಶ್ರಮದಾನ ಹಾಗೂ ವನಮೋತ್ಸವ ಕಾರ್ಯಕ್ರಮಗಳಲ್ಲಿ ನಮ್ಮ ಮುಂದಿನ ಪೀಳಿಗೆಯನ್ನು ಭಾಗವಹಿಸುವಂತೆ ನೋಡಿಕೊಳ್ಳುವುದು ಅತ್ಯಂತ ಅಗತ್ಯ…

Read More

ಮಂಗಳೂರು: ಪ್ರಣವ ಸೌಹಾರ್ದ ಸೊಸೈಟಿಯ ಆಶ್ರಯದಲ್ಲಿ ಟೀಂ ಉಬಾರ್, ಸುಳ್ಯ ರೈತ ಉತ್ಪಾದಕ ಕಂಪನಿ, ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ, ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿ ಹಲಸು ಮತ್ತು ಮಾವು ಮೇಳವನ್ನು ಜೂನ್‌ 12ರಿಂದ 14ರ ತನಕ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ವಠಾರ, ಕೇರ್ಪಳ ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಜೂನ್‌ 12ರ ಶುಕ್ರವಾರ ಬೆಳಗ್ಗೆ 10ಕ್ಕೆಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಪ್ರಣವ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ, ಹಲಸು-ಮಾವು ಮೇಳ-2026ರ ಗೌರವಾಧ್ಯಕ್ಷರಾದ ಜಿ.ಆರ್. ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಮೇಳವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ತಹಸೀಲ್ದಾರ್‌ ಮಂಜುಳಾ ಎಂ., ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ ಚಿದಾನಂದ, ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ ಎಸ್.ಆರ್., ಹಲಸು ಮಾವು ಮೇಳದ…

Read More

ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ ತಮ್ಮ ಸ್ವರ್ಣ ಸಂಭ್ರಮದ ಅಂಗವಾಗಿ ಹಮ್ಮಿಕೊಂಡ ಸ್ವಚ್ಛ ಭಾರತ್‌ -ಸ್ವಚ್ಛತಾ ಶ್ರಮದಾನದ ಸಮಾರೋಪ ಸಮಾರಂಭ ಜೂನ್‌ 7ರಂದು ನಡೆಯಲಿದೆ. ವಿಶ್ವಕರ್ಮ ಸಹಕಾರ ಬ್ಯಾಂಕಿನ ವಿವಿಧ ಬ್ರಾಂಚ್‌ಗಳಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಮಂಗಳೂರು ಶಾಖೆಯ ವತಿಯಿಂದ ಬೆಳಗ್ಗೆ 7 ಗಂಟೆಗೆ ಕಾರ್‌ಸ್ಟ್ರೀಟ್‌ ಮಿಷನ್‌ ಹೈಸ್ಕೂಲ್‌ ರಸ್ತೆಯ ಬಿಇಎಂ ವಿದ್ಯಾಸಂಸ್ಥೆಯ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರೋಟರಿ ಕ್ಲಬ್‌ ಮಂಗಳೂರು ಸೆಂಟ್ರಲ್‌ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. ಗ್ರೀನ್‌ ಮ್ಯಾನ್‌ ಆಫ್‌ ಇಂಡಿಯಾ ಖ್ಯಾತಿಯ ಡಾ.ರಾದಾಕೃಷ್ಣ ನಾಯರ್‌ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಕಳ ಬ್ರಾಂಚ್‌ನ ವತಿಯಿಂದ ಬೆಳಗ್ಗೆ 7ರಿಂದ 9ರ ತನಕ ಕಾರ್ಕಳ ಬಸ್‌ ನಿಲ್ದಾಣ ಹಾಗೂ ಮಾರಿಗುಡಿ ದೇವಸ್ಥಾನದ ಪರಿಸರದಲ್ಲಿ, ಉಜಿರೆ ಬ್ರಾಂಚ್‌ ವತಿಯಿಂದ ಬೆಳಗ್ಗೆ 7ರಿಂದ 9.30ರ ತನಕ ಉಜಿರೆ ಬಸ್‌ ನಿಲ್ದಾಣ ಹಾಗೂ ಕಾಲೇಜು ರಸ್ತೆಯಲ್ಲಿ, ಮೆಲ್ಕಾರ್‌ ಬ್ರಾಂಚ್‌ ವತಿಯಿಂದ ಮೆಲ್ಕಾರ್‌ ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಂಘದ ಪ್ರಧಾನ ಕಚೇರಿಯ ಬಳಿಯಿರುವ ಬೈರಾಡಿ ಕೆರೆಯ ವ್ಯಾಪ್ತಿಯಲ್ಲಿ ಸಸಿಗಳನ್ನು ನೆಡಲಾಯಿತು. ಪರಿಸರ ಪ್ರೇಮಿ ಮಾಧವ ಉಳ್ಳಾಲ ಮಾರ್ಗದರ್ಶನದಲ್ಲಿ ಬೈರಾಡಿ ಕೆರೆಯ ಸುತ್ತಮುತ್ತ ಸಸಿಗಳನ್ನು ನೆಡಲಾಯಿತು. ಬೈರಾಡಿ ಕೆರೆ ಸಂರಕ್ಷಣಾ ಹಾಗೂ ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಡಾ.ಅಣ್ಣಯ್ಯ ಕುಲಾಲ್ ಉಳ್ತೂರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರ ಕಾರ್ಯಕ್ರಮಗಳನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ನೇತೃತ್ವದಲ್ಲಿ ಹಮ್ಮಿಕೊಂಡು ಬರುತ್ತಿದೆ. ಬೈರಾಡಿ ಕೆರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮುಂದಿನ ದಿನಗಳಲ್ಲಿ ನಮ್ಮೊಂದಿಗೆ ಕೈ ಜೋಡಿಸಬೇಕೆಂದು ವಿನಂತಿಸಿದರು. ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ “ಸಂಘದ ವತಿಯಿಂದ ಕಳೆದ 14 ವರ್ಷಗಳಿಂದ ವಿಶ್ವ ಪರಿಸರ ದಿನಾಚರಣೆ ಮಾಡಿಕೊಂಡು ಬರಲಾಗುತ್ತಿದೆ. ಈ ಹಿಂದೆ ವಿಶ್ವ ಪರಿಸರ ದಿನದಂದು ಪಡೀಲ್ ರಾಷ್ಟ್ರೀಯ…

Read More

570 ಕೋಟಿ ರೂ. ವ್ಯವಹಾರ, 1.15 ಕೋಟಿ ರೂ. ನಿವ್ವಳ ಲಾಭ ಕೋಟ: ಕೋಟ ಮೂರ್ತೆದಾರರ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ 570 ಕೋಟಿ ರೂ. ವ್ಯವಹಾರ ನಡೆಸಿದ್ದು, ರೂ. 1.15 ಕೋಟಿ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಡ್‌ ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಕೆ.ಕೊರಗ ಪೂಜಾರಿ ಘೋಷಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆದ ಸಂಘದ 35ನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರು ಈ ವಿಷಯಗಳನ್ನು ಘೋಷಿಸಿದರು. ಸಂಘದ ಆರು ಶಾಖೆಗಳ ಮೂಲಕ ರೂ.102.67 ಕೋಟಿ ಠೇವಣಿ ಸಂಗ್ರಹಿಸಿದ್ದು, ಕಳೆದ ಬಾರಿಗೆ ಹೋಲಿಸಿದರೆ ಠೇವಣಿ ಸಂಗ್ರಹಣೆಯಲ್ಲಿ ಶೇ.23ರಷ್ಟು ಹೆಚ್ಚಳವಾಗಿದೆ. ಸಂಘದ ಸಾಲ ಮುಂಗಡಗಳು ರೂ.88.08 ಕೋಟಿ, ಪಾಲು ಬಂಡವಾಳ 1.45 ಕೋಟಿ, ವಿವಿಧ ಸಹಕಾರಿ ಸಂಘ ಹಾಗೂ ಬ್ಯಾಂಕ್‌ನಲ್ಲಿ ರೂ. 26.64 ಕೋಟಿ ವಿನಿಯೋಗಿಸಲಾಗಿದೆ. ವಿವಿಧ ನಿಧಿಗಳು ರೂ. 12.09 ಕೋಟಿ ಆಗಿದೆ. ಸಂಘದ ದುಡಿಯುವ ಬಂಡವಾಳ 125.20 ಕೋಟಿಗೂ ಮೀರಿದೆ. ಸತತ 30 ವರ್ಷಗಳಿಂದ ‘ಎ’…

Read More

ಮೈಸೂರು: ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ವತಿಯಿಂದ ಸಂಸ್ಥಾಪಕರಾದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜನ್ಮ ಜಯಂತಿ ಆಚರಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಈ ಸಂದರ್ಭದಲ್ಲಿ ಬ್ಯಾಂಕಿನ ಸದಸ್ಯರು ಹಾಗೂ ಅಧ್ಯಕ್ಷರಾದ ಜೆ.ಯೋಗೇಶ್, ನಿರ್ದೇಶಕರುಗಳಾದ ಎಸ್. ಬಿ.ಎಂ.ಮಂಜು, ಎನ್.ಯೋಗಾನಂದ, ಜಿ.ನಿರಂಜನ್, ಹೆಚ್.ಹರೀಶ್ ಕುಮಾರ್, ಆರ್.ರವಿಕುಮಾರ್, ಕೆ. ಗಿರೀಶ್, ಪಡುವಾರಹಳ್ಳಿ ಎಂ. ರಾಮಕೃಷ್ಣ, ಸಿ. ಚಂದ್ರಶೇಖರ, ಪಿ. ರಾಜೇಶ್ವರಿ, ಪ್ರಮೀಳಾ ಲೋಕೇಶ್ ಹಾಗೂ ಕಾರ್ಯದರ್ಶಿ ಹರ್ಷಿತ್ ಗೌಡ. ಕೆ, ವೃತ್ತಿಪರ ನಿರ್ದೇಶಕರಾದ ಸಿ.ಎಸ್. ರಾಮಕೃಷ್ಣಯ್ಯ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಅಭಿಪ್ರಾಯ ಮಂಗಳೂರು: ಭಾರತದ ಗ್ರಾಮೀಣ ಪ್ರದೇಶದ ಹೆಚ್ಚಿನ ಜನ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಭಾರತ ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ. ದೇಶದಲ್ಲಿ ಉತ್ಪಾದನೆಯಾಗುವ ಹಾಲಿನ ಪ್ರಮಾಣದಲ್ಲಿ ಶೇ.80ರಷ್ಟು ಹಾಲು ಗ್ರಾಮೀಣ ಭಾಗದಿಂದಲೇ ಬರುತ್ತಿದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಅಭಿಪ್ರಾಯಪಟ್ಟರು. https://chat.whatsapp.com/FCEnlTkAKCC0MGPhXtX4i4 ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮತ್ತು ಭಾರತೀಯ ಡೇರಿ ಅಸೋಸಿಯೇಶನ್ ರಾಜ್ಯ ಶಾಖೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ವಿಶ್ವ ಹಾಲು ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ, ಸ್ವಾವಲಂಬಿ ಜೀವನ ನಡೆಸಲು ಹೈನುಗಾರಿಕೆಯಲ್ಲಿ ಉತ್ತಮ ಅವಕಾಶವಿದೆ. ಹೈನುಗಾರಿಕೆ ನಂಬಿದರೆ ಜೀವನದಲ್ಲಿ ಯಶಸ್ಸು ಸಾಧ್ಯವಿದೆ. ದಕ್ಷಿಣ ಕನ್ನಡ ಹಾಲು ಒಕ್ಕೂಟದಲ್ಲಿ ಕಳೆದ ವರ್ಷ 3.30 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗಿತ್ತು, ಈ ವರ್ಷ ಪ್ರಗತಿ ಕಂಡಿದ್ದು 4.70 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಹೈನುಗಾರಿಕೆಗೆ ಸರ್ಕಾರ, ಸಹಕಾರಿ…

Read More

ಉಡುಪಿ: ಉಡುಪಿ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್​ ಸೊಸೈಟಿ ಕಿನ್ನಿಮೂಲ್ಕಿ ಇದರ ಸಿಬ್ಬಂದಿಗೆ ಮಣಿಪಾಲದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಶಿರ್ವ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಸಾದ್​ ಶೆಟ್ಟಿ ಕುತ್ಯಾರು ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಅರುಣಕುಮಾರ್​ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಇನ್​ಸ್ಟಿಟ್ಯೂಟ್​ ಆಫ್​ ಮ್ಯಾನೇಜ್​ಮೆಂಟ್​ನ ಉಪನ್ಯಾಸಕಿ ಪ್ರೊ.ಬಿಂದು ನಾಯರ್​ ‘ಟೋಟಲ್​ ಕ್ವಾಲಿಟಿ ಆಫ್​ ಮ್ಯಾನೇಜ್​ಮೆಂಟ್​’ ಎಂಬ ವಿಷಯದ ಕುರಿತು ತರಬೇತಿ ನೀಡಿದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್​ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಕಾರ್ಯದರ್ಶಿ ಅನುಷಾ ಕೋಟ್ಯಾನ್​, ಉಡುಪಿ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್​ ಸೊಸೈಟಿಯ ಉಪಾಧ್ಯಕ್ಷ ಎಂ.ಗಣೇಶ್​ ಕಿಣಿ, ಹಿರಿಯ ನಿರ್ದೇಶಕ ನಾರಾಯಣ ಬಲ್ಲಾಳ್​, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್​ ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಬಂಟ್ವಾಳ: 2025-2026ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ್ಯಾಂಕ್‌ ಪಡೆದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯ ಸದಸ್ಯರ ಮಕ್ಕಳನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸಂಘದ ಸದಸ್ಯ ಡೊಂಬಯ ಡಿ.ಅರಳ ಇವರ ಮಗಳು ಜ್ಞಾನಶ್ರೀ ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600ರಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದ ನಾಲ್ಕನೇ ಸ್ಥಾನ, ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಮೂರನೇ ಸ್ಥಾನ ಹಾಗೂ ಬಂಟ್ವಾಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದರು. ಸಂಘದ ಇನ್ನೊಬ್ಬ ಸದಸ್ಯ ನವೀನ ಶೆಟ್ಟಿ ಕರಿಂಕಿಜೆ ಇವರ ಮಗಳು ಕೃತ್ವಿ ಎನ್. ಶೆಟ್ಟಿ ರೋಟರಿ ಪದವಿಪೂರ್ವ ಕಾಲೇಜಿನಲ್ಲಿ 600ರಲ್ಲಿ 590 ಅಂಕಗಳೊಂದಿಗೆ ರಾಜ್ಯದಲ್ಲಿ ಹತ್ತನೇ ಸ್ಥಾನ, ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದರು. ಈ ಇಬ್ಬರನ್ನೂ ಸಂಘದ ಆಡಳಿತ ಮಂಡಳಿಯಿಂದ ಅಭಿನಂದಿಸಲಾಯಿತು. ಅಭಿನಂದಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸಿದ್ದಕಟ್ಟೆ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಬರುವ…

Read More

ನವದೆಹಲಿ: ಪಟ್ಟಣ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಮಹತ್ವದ ಹೆಜ್ಜೆಯಾಗಿ, ಭಾರತೀಯ ರಿಸರ್ವ್ ಬ್ಯಾಂಕ್, ಪಟ್ಟಣ ಸಹಕಾರಿ ಬ್ಯಾಂಕುಗಳ (ಯುಸಿಬಿ) ಮಾದರಿ ಉಪನಿಯಮಗಳನ್ನು (ಮಾದರಿ ಬೈಲಾ) ಸಿದ್ಧಪಡಿಸಲು ಐವರು ಸದಸ್ಯರ ಸಮಿತಿಯನ್ನು ರಚಿಸಿದೆ. 1979ರಲ್ಲಿ ರಚಿಸಿದ್ದ ಮಾಧವ ದಾಸ್ ಸಮಿತಿಯನ್ನು ರಚಿಸಿದ್ದ ಐದು ದಶಕಗಳ ಬಳಿಕ ಆರ್‌ಬಿಐ ಈ ಮಹತ್ವದ ಕಾರ್ಯಕ್ಕೆ ಮುಂದಾಗಿದೆ. https://chat.whatsapp.com/FCEnlTkAKCC0MGPhXtX4i4 ಆರ್‌ಬಿಐ ಸೋಮವಾರ ಹೊರಡಿಸಿದ ಪ್ರಕಟಣೆಯಲ್ಲಿ ಹೊಸ ಸಮಿತಿಯ ರಚನೆಯನ್ನು ಘೋಷಿಸಿದೆ. ಮಹಾರಾಷ್ಟ್ರ ಸರ್ಕಾರದ ಸಹಕಾರ ಇಲಾಖೆಯ ಹೆಚ್ಚುವರಿ ಆಯುಕ್ತ ಹಾಗೂ ವಿಶೇಷ ನಿಬಂಧಕರಾಗಿ (ನಿವೃತ್ತ) ಸೇವೆ ಸಲ್ಲಿಸಿದ್ದ ದಿನೇಶ್ ಔಲ್ಕರ್ ಅವರು ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ವಕೀಲ ಹಾಗೂ ಡೊಂಬಿವಿಲಿ ನಗರಿ ಸಹಕಾರಿ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷ ಗಣೇಶ್ ಧಾರ್ಗಲ್ಕರ್, ಟಿಜೆಎಸ್‌ಬಿ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಕವಿ ಆರ್.ಸಿ.ವಿ. ಶೇಷಾಚಲಂ, ಆರ್‌ಬಿಐ ಮುಖ್ಯ ಮಹಾಪ್ರಬಂಧಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಪಿ.ಕೆ. ಅರೋರಾ, ಪುಣೆಯ ಕೃಷಿ ಬ್ಯಾಂಕಿಂಗ್ ಕಾಲೇಜು (ಸಿಎಬಿ) ಇದರ ಉಪ ಮಹಾಪ್ರಬಂಧಕ ಹಾಗೂ ಅಧ್ಯಾಪಕ ಸದಸ್ಯ ಮುರಳೀಕೃಷ್ಣ…

Read More