Author: admin
ಭಾರತಿ ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರಿಯ ಅಧ್ಯಕ್ಷರಾಗಿ ಮೋಹನ್ ಕುಮಾರ್ ಕುಂಬ್ಳೇಕರ್, ಉಪಾಧ್ಯಕ್ಷರಾಗಿ ಗಣೇಶ್ ಕುಮಾರ್ ಪರಕಟ್ಟ ಆಯ್ಕೆ
ಮಂಗಳೂರು: ಭಾರತಿ ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರಿ ಲಿಮಿಟೆಡ್ನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಕುಂಬ್ಳೇಕರ್, ಉಪಾಧ್ಯಕ್ಷರಾಗಿ ಗಣೇಶ್ ಕುಮಾರ್ ಪರಕಟ್ಟ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹು-ರಾಜ್ಯ ಸಹಕಾರಿ ಸಂಘವಾಗಿರುವ ಭಾರತಿ ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರಿ ಸಂಘವು 18.03.2004ರಂದು ನೋಂದಾಯಿಸಲ್ಪಟ್ಟು ಗೋವಾ, ಕೇರಳ ಮತ್ತು ಕರ್ನಾಟಕದಲ್ಲಿ ಸದಸ್ಯತ್ವ ಹೊಂದಿದೆ. ಮೇ 17ರಂದು ನಿರ್ದೇಶಕರ ಮಂಡಳಿಗೆ ಚುನಾವಣೆ ನಡೆದಿದ್ದು, ಮೇ 25ರಂದು ಪದಾಧಿಕಾರಿಗಳಿಗೆ ಚುನಾವಣೆ ನಡೆಯಿತು. 2026-2031ರ ಸಾಲಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ -ಉಪಾಧ್ಯಕ್ಷರು ಹಾಗೂ ನಿರ್ದೇಶಕರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರು: ಮೋಹನ್ ಕುಮಾರ್ ಕುಂಬ್ಳೇಕರ್, ಉಪಾಧ್ಯಕ್ಷರು: ಗಣೇಶ್ ಕುಮಾರ್ ಪರಕಟ್ಟ, ನಿರ್ದೇಶಕರು: ಗಣೇಶ್ ಶೆಣೈ, ನರಸಿಂಹ ಕಾಮತ್, ಭಾರತಿ ಜಿ.ಭಟ್, ಸೋಮಪ್ಪ ನಾಯ್ಕ್ ಎ, ಕೈಲಾಸಮಣಿ ಯು, ಸತ್ಯನ್ ಪಿ, ನಾರಾಯಣನ್ ಪಿ.ವಿ, ಸ್ವಾತಿ ಎ ಪ್ರಭು, ಸುಭಾಷ್ ಎಸ್ ಹಳರಂಕರ್, ಸುರೇಶ್ ಬಿ ಬೋರ್ಕರ್, ಸಾಗರ್ ಎಂ ಭಟ್, ಸುರೇಶ್ ಡಿ ಡಿಚೋಲ್ಕರ್, ಜಾನು ಜಿ ಗೌಡೆ. ಸಂಸ್ಥೆಯ…
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ ಹಳೆಯಂಗಡಿ: ಪಂಜದಗುತ್ತು ಶಾಂತಾರಾಮ ಶೆಟ್ಟಿಯವರು ಶಿಕ್ಷಣ ಪ್ರೇಮಿಯಾಗಿದ್ದು, ಇದರ ಕಾರಣದಿಂದಲೇ ಗ್ರಾಮೀಣ ಪ್ರದೇಶದ ಪಂಜ ಎಂಬಲ್ಲಿ ಪ್ರೌಢಶಾಲೆ ಪ್ರಾರಂಭಗೊಳ್ಳಲು ಕಾರಣವಾಯಿತು. ತನ್ನ ಜೀವಿತದುದ್ದಕ್ಕೂ ಶಿಕ್ಷಣ ವಂಚಿತರ ಬಗ್ಗೆ ಚಿಂತನೆ ಮಾಡಿದ ಅಪರೂಪದ ವ್ಯಕ್ತಿತ್ವದ ಪಂಜದಗುತ್ತು ಶಾಂತಾರಾಮ ಶೆಟ್ಟಿ ಅವರನ್ನು ಸ್ಮರಣೆ ಮಾಡುವುದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಆದ್ಯ ಕರ್ತವ್ಯವೆಂದು ಎನಿಸುತ್ತಾ ಸೊಸೈಟಿಯ ಪ್ರೇರಣಾಶಕ್ತಿಯಾಗಿದ್ದ ಇವರ ಹೆಸರಿನಲ್ಲಿ ಪಂಜದಗುತ್ತು ಶಾಂತಾರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆ ಇದರ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲು ಸಂತೋಷವಾಗುತ್ತದೆ ಎಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾರ್ಡ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಹಳೆಯಂಗಡಿ ಇದರ ವತಿಯಿಂದ ಪಂಜದಗುತ್ತು ಶಾಂತಾರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ದಿ. ಶಾಂತಾರಾಮ ಶೆಟ್ಟಿಯವರ ಮಗಳು ಸರಿತಾ ಶೆಟ್ಟಿ…
ಎಂ.ಸಿ.ಸಿ ಬ್ಯಾಂಕ್ “ಇಂಪ್ರಿಂಟ್ಸ್ ಆಂಡ್ ಇಂಪ್ರೆಶನ್ಸ್” ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ| ಲೆಸ್ಲಿ ಕ್ಲಿಫರ್ಡ್ ಡಿಸೋಜ ಸಲಹೆ ಉಡುಪಿ: ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನಗಳ ಬಳಕೆ ಇಂದು ಮಹಳ ಮಹತ್ವಪೂರ್ಣವಾದುದಾಗಿದ್ದು, ಅವುಗಳು ಮಾನವ ಕಲ್ಯಾಣಕ್ಕಾಗಿ ಬಳಸಲ್ಪಡಬೇಕು. “ಸ್ವಾರ್ಥವಲ್ಲ ಸೇವೆ”, “ವಹಿವಾಟಲ್ಲ ವಿಶ್ವಾಸ”, “ಲಾಭವಲ್ಲ ವ್ಯಕ್ತಿ” ಎಂಬ ಮೌಲ್ಯಗಳನ್ನು ಸಂಸ್ಥೆಗಳು ಅಳವಡಿಸಿಕೊಳ್ಳಬೇಕು. ಈ ತತ್ವಗಳನ್ನು ನಿಷ್ಠೆಯಿಂದ ಅನುಸರಿಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ| ಲೆಸ್ಲಿ ಕ್ಲಿಫರ್ಡ್ ಡಿಸೋಜ ಅಭಿಪ್ರಾಯಪಟ್ಟರು. https://chat.whatsapp.com/FCEnlTkAKCC0MGPhXtX4i4 ಎಂ.ಸಿ.ಸಿ. ಬ್ಯಾಂಕ್ ವತಿಯಿಂದ ಎರ್ಮಾಳಿನ ಪೆನಿನ್ಸುಲಾ ಡೆಲ್ಮಾರ್ನಲ್ಲಿ ಹಮ್ಮಿಕೊಂಡ “ಇಂಪ್ರಿಂಟ್ಸ್ ಆಂಡ್ ಇಂಪ್ರೆಶನ್ಸ್” ಎಂಬ ಕಾರ್ಯಕ್ರಮದಲ್ಲಿ ಅವರು ಉಡುಪಿ ಧರ್ಮಪ್ರಾಂತ್ಯ ಮತ್ತು ಸಮಾಜದ ಕುರಿತ ತಮ್ಮ ಕನಸುಗಳು ಹಾಗೂ ಆಶಯಗಳನ್ನು ಹಂಚಿಕೊಂಡರು. ಉಡುಪಿಯಲ್ಲಿ ಬಿಷಪ್ ಕಾರ್ಯಾಲಯದ ಸ್ಥಾಪನೆ, ಭವಿಷ್ಯದ ಆಧ್ಯಾತ್ಮಿಕ ನಾಯಕರನ್ನು ರೂಪಿಸುವುದು, ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಹಾಗೂ ಬಡವರು ಮತ್ತು ಹಿಂದುಳಿದವರಿಗೆ ಸೇವೆ ಸಲ್ಲಿಸುವ ಆಸ್ಪತ್ರೆ ನಿರ್ಮಾಣದ ಕನಸು ಇರುವುದಾಗಿ ತಿಳಿಸಿದ…
ಕಾರ್ಕಳ: ಬೆಳ್ಳಿಹಬ್ಬದ ಸಂಭ್ರಮಾಚರಣೆಯಲ್ಲಿರುವ ಕಾರ್ಕಳದ ಪ್ರತಿಷ್ಠಿತ ಶ್ರೀ ದುರ್ಗಾಪಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ ರೂ. 52.10ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸಂತೋಷ್ ರಾವ್ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸಂಘವು 2025-26ನೇ ಆರ್ಥಿಕ ಸಾಲಿನಲ್ಲಿ 218.26 ಕೋಟಿ ವ್ಯವಹಾರ ನಡೆಸಿ, ವಾರ್ಷಿಕ ಅಂತ್ಯಕ್ಕೆ 36.69 ಲಕ್ಷ ಪಾಲು ಬಂಡವಾಳ ಹೊಂದಿದೆ. 48.10 ಕೋಟಿ ಠೇವಣಿ ಸಂಗ್ರಹವಾಗಿದ್ದು, 38.48 ಕೋಟಿ ಸಾಲ ವಿತರಿಸಿದ್ದು, 54.09 ಕೋಟಿ ದುಡಿಮೆ ಬಂಡವಾಳ ಹೊಂದಿದೆ. ಬೆಳೆಯುತ್ತಿರುವ ಜೋಡುರಸ್ತೆಯ ಕೇಂದ್ರಭಾಗದಲ್ಲಿ ಸ್ವಂತ ಕಟ್ಟಡದಲ್ಲಿ ಕೇಂದ್ರ ಕಚೇರಿ ಹಾಗೂ ಕೆಳ ಅಂತಸ್ತಿನಲ್ಲಿ ಮುಖ್ಯ ಶಾಖೆಯನ್ನು ಹೊಂದಿರುವ ಶ್ರೀ ದುರ್ಗಾಪರಮೇಶ್ವರಿ ಸಹಕಾರಿ ಸಂಘವು ಹೆಬ್ರಿ, ಮುನಿಯಾಲು, ಬಜಗೋಳಿ, ಬೆಳ್ಮಣ್, ಬೈಲೂರು, ಸಾಣೂರು, ಇನ್ನಾಗಳಲ್ಲಿ ಶಾಖೆಗಳನ್ನು ಹೊಂದಿದ್ದು ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರ ಮೂಲಕ ಸಹಕಾರಿಗಳ ವಿಶ್ವಾಸಕ್ಕೆ ಪಾತ್ರವಾಗಿ ಲಾಭಾಂಶ ಹಾಗೂ ಠೇವಣಿ ವೃದ್ಧಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆರ್ಥಿಕ ಪ್ರಗತಿ: 2024-2025ನೇ ಸಾಲಿನಲ್ಲಿ 175.33 ಕೋಟಿ ರೂ. ವಾರ್ಷಿಕ…
ಸರಕಾರಿ/ಅನುದಾನಿತ ಕನ್ನಡ ಮಾಧ್ಯಮದ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಂಗಳೂರು: ನಗರದ ಪ್ರತಿಷ್ಠಿತ ಸೌಹಾರ್ದ ಸಹಕಾರಿ ಸಂಘ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು, ಮಂಗಳೂರು ತಾಲೂಕು ವ್ಯಾಪ್ತಿಯ ಸರಕಾರಿ/ಅನುದಾನಿತ ಕನ್ನಡ ಮಾಧ್ಯಮದ ಶಾಲೆಗಳಲ್ಲಿ 2026ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90 ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಿಸುವ ಮೂಲಕ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದೆ. https://chat.whatsapp.com/FCEnlTkAKCC0MGPhXtX4i4 ಜೂನ್ 7ರಂದು ಭಾನುವಾರ ಭಾನುವಾರ ಬೆಳಗ್ಗೆ 10.30 ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ ಕಾಮತ್, ಶ್ರೀ ಕ್ಷೇತ್ರ ಶರವು ಮಹಾಗಣಪತಿ ದೇವಸ್ಥಾನದ ಶಿಲೆಶಿಲೆ ಮೊಕ್ತೇಸರರಾದ ರಾಘವೇಂದ್ರ ಶಾಸ್ತ್ರಿಗಳು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ಮಂಗಳೂರು ಉತ್ತರ…
ಬಡ ಕುಟುಂಬಕ್ಕೆ ಮನೆ ಕೊಡುಗೆ ಅದ್ಭುತ ಮಾದರಿ ಕಾರ್ಯ; ಶಶಿಕುಮಾರ್ ರೈ ಬಾಲ್ಯೊಟ್ಟು ಶ್ಲಾಘನೆ ಕಾಣಿಯೂರು: ಸಮಾಜಮುಖ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮುಖಾಂತರ ವಿವಿಧ ಯೋಜನೆಗಳನ್ನು ಹಾಕಿಕೊಂಡು ಎಲ್ಲಾ ರೈತಾಪಿ ವರ್ಗದವರ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಿರುವಂತಹ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಒಂದು ಮಾದರಿ ಸಂಘವಾಗಿ ಹೊರಹೊಮ್ಮಿದೆ. ಯಾವುದೇ ರೀತಿಯಿಂದಲೂ ಸರಕಾರಿ ಯೋಜನೆಯಡಿಯಲ್ಲಿ ಸವಲತ್ತುಗಳನ್ನು ನೀಡುವುದಕ್ಕೆ ಸಾಧ್ಯವಾಗದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟಿರುವ ಸಂಘದ ಕೆಲಸ ಕಾರ್ಯ ಅದ್ಭುತವಾಗಿದೆ ಎಂದು ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. https://chat.whatsapp.com/FCEnlTkAKCC0MGPhXtX4i4 ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಶತಮಾನೋತ್ಸವದ ಸವಿನೆನಪಿಗೆ ಬಡ ಕುಟುಂಬಕ್ಕೆ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ ಮತ್ತು ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ (ನಿರ್ವಹಣೆ ಪ್ರಸಾದ್ ನೇತ್ರಾಲಯ), ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ವತಿಯಿಂದ ಉಚಿತ…
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಭಿಪ್ರಾಯ ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳ ಪೈಕಿ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸರಕಾರದಿಂದ ಅತಿ ಹೆಚ್ಚು ಅನುದಾನ ತಂದು ಅಭಿವೃದ್ಧಿಪಡಿಸಿದ ಕೀರ್ತಿ ಸಂಘದ ಅಧ್ಯಕ್ಷ ರಮೇಶ್ ಭಟ್ ಉಪ್ಪಂಗಳ ಅವರಿಗೆ ಸಲ್ಲುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. https://chat.whatsapp.com/FCEnlTkAKCC0MGPhXtX4i4 ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹಳೆನೇರೆಂಕಿ ಶಾಖಾ ಕಛೇರಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅಭಿವೃದ್ಧಿಯಲ್ಲಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಮಾದರಿಯಾಗಿದೆ. ಹಲವಾರು ವರ್ಷಗಳಿಂದ ನಿರಂತರವಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ಪಡೆಯುತ್ತ ಬಂದಿದೆ. ಪುತ್ತೂರು ತಾಲೂಕಿನಲ್ಲಿ ಪ್ರಥಮವಾಗಿ ರಾಜ್ಯ ಅಪೆಕ್ಸ್ ಬ್ಯಾಂಕಿನ ಪ್ರಶಸ್ತಿ ಪಡೆದ ಸಂಘ ಆಲಂಕಾರು ಕೃಷಿ ಪತ್ತಿನ ಸಹಕಾರಿ ಸಂಘ. ಈ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನೀರುಮಾರ್ಗ ಶಾಖೆಯಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಸಂಘದ ಗ್ರಾಹಕರಾದ ಪುಟ್ಟಸ್ವಾಮಿ ಎಚ್., ಶ್ರೀಧರ, ರಾಜೇಶ್, ಶಶಿಪ್ರಭಾ ಹಾಗೂ ನಾರಾಯಣ ಪೂಜಾರಿ ದೀಪ ಪ್ರಜ್ವಲನೆ ಮಾಡಿದರು. ಪುಟ್ಟಸ್ವಾಮಿ ಎಚ್. ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನೀರುಮಾರ್ಗ ಪರಿಸರದಲ್ಲಿರುವ ಉತ್ತಮ ಸೊಸೈಟಿಯಾಗಿದ್ದು, ಇಲ್ಲಿನ ಜನರ ಅಚ್ಚುಮೆಚ್ಚಿನ ಸೊಸೈಟಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಶಶಿಪ್ರಭಾ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸೇವಾ ಮನೋಭಾವದ ಸಿಬ್ಬಂದಿಯಿಂದ ಉನ್ನತ ಸ್ಥಾನಕ್ಕೆ ಏರುವುದರಲ್ಲಿ ಎರಡು ಮಾತಿಲ್ಲ ಎಂದು ಶ್ಲಾಘಿಸಿದರು. ಸದಸ್ಯರಾದ ಪ್ರಮೀಳಾ ಸದಾಶಿವ ಶೆಟ್ಟಿ ಮಾತನಾಡಿ ಸಂಘದ ಶಾಖೆಗಳಲ್ಲಿ ಸಿಬ್ಬಂದಿಗಳ ಸಹಕಾರವು ಅತ್ಯುತ್ತಮವಾಗಿದ್ದು ದೈನಂದಿನ ವ್ಯವಹಾರಕ್ಕೆ ತುಂಬಾ ಉಪಯುಕ್ತ ಸಂಘವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಗ್ರಾಹಕರ…
ಮಂಗಳೂರು: ಎಂಸಿಸಿ ಬ್ಯಾಂಕ್ನ ಸಂತೆಕಟ್ಟೆ ಶಾಖೆ ಪ್ರಾರಂಭವಾದ ಕೇವಲ ಏಳು ತಿಂಗಳ ಅವಧಿಯಲ್ಲೇ ರೂ. 10 ಕೋಟಿ ವ್ಯವಹಾರ ವಹಿವಾಟು ಸಾಧಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಈ ಮಹತ್ವದ ಸಾಧನೆಯನ್ನು ಸ್ಮರಿಸಲು, ಶಾಖೆಯ ವತಿಯಿಂದ ಸಂತೆಕಟ್ಟೆ ಶಾಖಾ ಆವರಣದಲ್ಲಿ ಸಂಭ್ರಮಾಚರಣೆ ಹಾಗೂ ಶಾಲೆಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ತೊಟ್ಟಂನ ಸಂತ ಅನ್ನಾ ಚರ್ಚ್ ಧರ್ಮಗುರು ವಂದನೀಯ ಫಾ. ಹೆನ್ರಿ ಮಸ್ಕರೇನ್ಹಸ್ ಭಾಗವಹಿಸಿದ್ದರು. ಗೌರವ ಅತಿಥಿಗಳಾಗಿ ಸಮಾಜಸೇವಕ ರೇಮಂಡ್ ವಾಲ್ಟರ್ ಕ್ರಾಸ್ತಾ ಹಾಗೂ ಕಿನ್ನಿಮೂಲ್ಕಿಯ ಕಿದಿಯೂರು ಸಹಕಾರಿ ಸಂಘದ ನಿರ್ದೇಶಕ ನಿತಿನ್ ಪೂಜಾರಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಶಾಖಾ ಸಹಾಯಕ ನಿರ್ದೇಶಕ ಡಾ| ಜೆರಾಲ್ಡ್ ಪಿಂಟೊ, ಮಹಾಪ್ರಬಂಧಕರಾದ ಸುನಿಲ್ ಮಿನೇಜಸ್, ಸಂತೆಕಟ್ಟೆ ಶಾಖೆಯ ಸ್ಥಾಪಕ ವ್ಯವಸ್ಥಾಪಕ ಅಜಿತ್ ಡಿಸೋಜ ಹಾಗೂ ಶಾಖಾ ವ್ಯವಸ್ಥಾಪಕರಾದ ಜ್ಯೋತಿ ಬ್ಯಾರೆಟ್ಟೊ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಸಂತೆಕಟ್ಟೆ ಶಾಖೆಯ ಹತ್ತು ಸ್ಥಾಪಕ ಗ್ರಾಹಕರಿಂದ ವಿಶೇಷ…
ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷ ಎನ್. ಕಿಶೋರ್ ಕೊಳತ್ತಾಯ ಅಭಿಪ್ರಾಯ ಪುತ್ತೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಂತ್ರಜ್ಞಾನವು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದೆ. ಗ್ರಾಹಕರಿಗೆ ಅತ್ಯುತ್ತಮ ಹಾಗೂ ಅತ್ಯಂತ ಕ್ಷಿಪ್ರವಾದ ಸೇವೆ ಒದಗಿಸುವ ನಿಟ್ಟಿನಲ್ಲಿ ಬ್ಯಾಂಕಿಂಗ್ ತಂತ್ರಜ್ಞಾನದಲ್ಲಿ ಅನೇಕ ಬದಲಾವಣೆಗಳನ್ನು ತರಲಾಗಿದೆ. ಬ್ಯಾಂಕಿನ ಸಿಬ್ಬಂದಿಗಳು ಇಂತಹ ಕಾರ್ಯಾಗಾರಗಳಲ್ಲಿ ಪಡೆಯುವ ಮಾಹಿತಿಯನ್ನು ಸದುಪಯೋಗ ಪಡಿಸಿಕೊಂಡು ಗ್ರಾಹಕರಿಗೆ ನಿರಂತರ ಮತ್ತು ಗುಣಮಟ್ಟದ ಸೇವೆ ನೀಡಬೇಕು ಎಂದು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕಿನ ಅಧ್ಯಕ್ಷರಾದ ಎನ್. ಕಿಶೋರ ಕೊಳತ್ತಾಯ ಅಭಿಪ್ರಾಯಪಟ್ಟರು. https://chat.whatsapp.com/FCEnlTkAKCC0MGPhXtX4i4 ಅವರು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಬ್ಯಾಂಕಿನ ಸಿಬ್ಬಂದಿಗಳಿಗಾಗಿ ಆಯೋಜಿಸಲಾಗಿದ್ದ ಮೂರು ದಿನಗಳ ನೂತನ ತಂತ್ರಜ್ಞಾನ ಮಾಹಿತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ. ನಮ್ಮ ಬ್ಯಾಂಕಿನ ವತಿಯಿಂದ ಸಿಬ್ಬಂದಿಗಳಿಗೆ ಅಗತ್ಯವಿರುವ ತರಬೇತಿ ಹಾಗೂ ತಾಂತ್ರಿಕ ವ್ಯವಸ್ಥೆಗಳನ್ನು ಕಾಲಕಾಲಕ್ಕೆ ಮಾಡಿಕೊಡಲು ಬ್ಯಾಂಕ್ ಸದಾ ಸಿದ್ಧವಿದೆ. ತಂತ್ರಜ್ಞಾನ ಬದಲಾದಂತೆ ಸಿಬ್ಬಂದಿಗಳು ಕೂಡ…
