Author: admin

ಶಿಕಾರಿಪುರ: ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿ., ಶ್ರೀ ಶಾಂತೇಶ್ವರಿ ಮಹಿಳಾ ಪತ್ತಿನ ಸಹಕಾರ ಸಂಘ ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಸಾಗರ ಉಪವಿಭಾಗದ ಪತ್ತಿನ ಮತ್ತು ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನವಂಬರ್‌ 6ರಂದು ಶಿಕಾರಿಪುರ ಶಾಂತಿನಗರದ ಶ್ರೀ ಕಂತೇಸಿದ್ಧೇಶ್ವರ ಸಭಾಂಗಣದಲ್ಲಿ ಬೆಳಗ್ಗೆ ಒಂದು ದಿನದ ತರಬೇತಿ ಶಿಬಿರ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ಅಧ್ಯಕ್ಷ ವಿ.ರಾಜು ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನಿರ್ದೇಶಕ ಡಿ.ಎಲ್‌.ಬಸವರಾಜ್‌, ಶಿವಮೊಗ್ಗ ಸಹಕಾರ ಸಂಘಗಳ ಉಪನಿಬಂಧಕ ನಾಗಭೂಷಣ್‌ ಕಲ್ಮನೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಶ್ರೀ ಶಾಂತೇಶ್ವರಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ನೇತ್ರಾ ದೇವರಾಜ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ, ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳದ…

Read More

ಮಂಗಳೂರು: 112 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಈ ವರ್ಷದ ದೀಪಾವಳಿ ಹಬ್ಬದ ಪ್ರಯುಕ್ತ ಕರಾವಳಿ ಭಾಗದ ಕುಂದಾಪುರ, ಬ್ರಹ್ಮಾವರ, ಉಡುಪಿ ಶಾಖೆಗಳ ವತಿಯಿಂದ ಸಾರ್ವಜನಿಕರಿಗೆ ದೀಪಗಳ ಜೊತೆ ಸಮೂಹ ಭಾವಚಿತ್ರ ಸ್ಪರ್ಧೆಯನ್ನು ಏರ್ಪಡಿಸಿದೆ. https://chat.whatsapp.com/Ge11n7QCiMj5QyPvCc0H19 ಎಂ.ಸಿ.ಸಿ. ಬ್ಯಾಂಕ್‌ ತನ್ನ ವ್ಯಾಪ್ತಿಯನ್ನು ಕರ್ನಾಟಕ ರಾಜ್ಯಾದ್ಯಂತ ವ್ಯಾಪಿಸಿದ್ದು, ಇದೇ ವರ್ಷದ ಮಾರ್ಚ್ ತಿಂಗಳಲ್ಲಿ 17ನೇ ಹೊಸ ಶಾಖೆಯನ್ನು ಬ್ರಹ್ಮಾವರದಲ್ಲಿ ಪ್ರಾರಂಭಿಸಿದೆ. ಈ ಸ್ಪರ್ಧೆಯ ಪೋಸ್ಟರ್ ಅನಾವರಣ ಕಾರ್ಯಕ್ರಮ ಗುರುವಾರ ಎಂ.ಸಿ.ಸಿ. ಬ್ಯಾಂಕಿನ ಬ್ರಹ್ಮಾವರ ಶಾಖೆಯಲ್ಲಿ ಜರಗಿತು. ಬ್ರಹ್ಮಾವರ ಪರಿಸರದ ಖ್ಯಾತ ಉದ್ಯಮಿ ಅರುಣ್ ವಾರಂಬಳ್ಳಿ ಸ್ಪರ್ಧೆಗಳ ಪೋಸ್ಟರ್ ಅನಾವರಣಗೊಳಿಸಿದರು. ಸ್ಥಳೀಯ ಉದ್ಯಮಿಗಳಾದ ರೋಶನ್, ರವಿ, ಯೋಗೀಶ್, ಗಣೇಶ್ ಮತ್ತು ಗ್ರಾಹಕರಾದ ಆನಂದ್, ಪ್ರತಿಮಾ, ಪ್ರವೀಣ್ ಹಾಗೂ ಬ್ರಹ್ಮಾವರ ಶಾಖೆಯ ಸಿಬ್ಬಂದಿಗಳು ಹಾಜರಿದ್ದರು. ಎಂ.ಸಿ.ಸಿ. ಬ್ಯಾಂಕಿನ ನಿರ್ದೇಶಕ ಎಲ್ರಾಯ್ ಕಿರಣ್ ಕ್ರಾಸ್ಟೊ ಪ್ರಾಸ್ತಾವಿಕ ಮಾತನಾಡಿದರು. ಬ್ರಹ್ಮಾವರ ಶಾಖೆಯ ಪ್ರಬಂಧಕ ಒವಿನ್ ರೆಬೆಲ್ಲೊ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ದೀಪಗಳ ಜೊತೆಯಿರುವ ಭಾವಚಿತ್ರ ಹಾಗೂ 15 ಸೆಕೆಂಡುಗಳ…

Read More

ನವದೆಹಲಿ: ಭಾರತದ ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್‌ ಖನ್ನಾ ಅವರನ್ನು ನೇಮಿಸಲಾಗಿದೆ. ಇವರು ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ತಮ್ಮ ಉತ್ತರಾಧಿಕಾರಿಯಾಗಿ ಸಂಜೀವ್ ಖನ್ನಾ ಹೆಸರು ಸೂಚಿಸಿದ್ದು ಇದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ವಿಚಾರವನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ತಮ್ಮ ಎಕ್ಸ್ ಖಾತೆಯ ಮೂಲಕ ತಿಳಿಸಿದ್ದಾರೆ. https://chat.whatsapp.com/Ge11n7QCiMj5QyPvCc0H19 ಹಾಲಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನವೆಂಬರ್ 8 ರಂದು ನಿವೃತ್ತಿ ಹೊಂದಲಿದ್ದಾರೆ. ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡುವಂತೆ ಕಾನೂನು ಸಚಿವಾಲಯ ಕೋರಿದ ಹಿನ್ನೆಲೆಯಲ್ಲಿ ಚಂದ್ರಚೂಡ್, ಸಂಜೀವ್ ಖನ್ನಾ ಅವರ ಹೆಸರು ಶಿಫಾರಸು ಮಾಡಿದ್ದರು. ನವಂಬರ್‌ 11ರಂದು ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕರಿಸಲಿದ್ದು, 2025ರ ಮೇ 13ರಂದು ನಿವೃತ್ತಿಯಾಗಲಿದ್ದಾರೆ. ಅಂದರೆ ಆರು ತಿಂಗಳುಗಳ ಕಾಲ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ. ಸಂಜೀವ ಖನ್ನಾ ಅವರು, 1983ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ಗೆ ವಕೀಲರಾಗಿ ದಾಖಲಾಗಿದ್ದರು.…

Read More

ಶಿಕಾರಿಪುರ: ಇಲ್ಲಿನ ಶಾಂತಿನಗರದ ಬನಸಿರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿಯಮಿತ, ಬನಸಿರಿ ಮಹಿಳಾ ಪತ್ತಿನ ಸಹಕಾರ ಸಂಘ ನಿಯಮಿತ ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರ ತಾಲೂಕಿನ ಆಯ್ದ ಶ್ರೀ ಸಪ್ತಗಿರಿ ಸ್ವ ಸಹಾಯ ಸಂಘ ಮತ್ತು ಧರ್ಮಸ್ಥಳ ಸ್ವ ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಮತ್ತು ಮಹಿಳಾ ಸಹಕಾರ ಸಂಘಗಳ ನಿರ್ದೇಶಕರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. https://chat.whatsapp.com/Ge11n7QCiMj5QyPvCc0H19 ಬನಸಿರಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಶಶಿಕಲಾ ಮಂಜಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಂತಲಾ ಭೂಕಾಂತ್ ಕಾರ್ಯಕ್ರಮ ಉದ್ಘಾಟಿಸಿದರು. ಪಶು ವೈದ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಕೆ.ಎಂ ಮತ್ತು ಸುನಿತಾ ಮೂಡೇರ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ನಿರ್ಮಲ ಅನುಜಾಜ್ ಪ್ರಾರ್ಥಿಸಿದರು, ಗೀತಾ ಸತೀಶ್ ಸ್ವಾಗತಿಸಿದರು, ಆಶಾ ಕಾರ್ಯಕ್ರಮ ನಿರೂಪಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪರ್ಕಳ ಇದರ ನಿರ್ದೇಶಕ ಮಂಡಳಿ ಸದಸ್ಯರು ಬುಧವಾರ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಧಾನ ಕಛೇರಿಗೆ ಅಧ್ಯಯನ ಪ್ರವಾಸ ಕೈಗೊಂಡರು. https://chat.whatsapp.com/Ge11n7QCiMj5QyPvCc0H19 ಈ ಸಂದರ್ಭ ಸಂಘದ ಅಧ್ಯಕ್ಷ ಅಶೋಕ್ ಕಾಮತ್ ಕೊಡಂಗೆ ಹಾಗೂ ನಿರ್ದೇಶಕ ಮಂಡಳಿ ಸದಸ್ಯರನ್ನು ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ರವೀಂದ್ರ ಪ್ರಭು ಆಡಳಿತ ಮಂಡಳಿ ಪರವಾಗಿ ಗೌರವಿಸಿದರು. ಸೊಸೈಟಿ ಉಪಾಧ್ಯಕ್ಷ ನೀರೆ ರವೀಂದ್ರ ನಾಯಕ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ನಾಯಕ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಇಂಗ್ಲಿಷ್‌, ಫ್ರೆಂಚ್‌, ಸ್ಪಾನಿಷ್‌, ಅರೆಬಿಕ್‌, ಚೈನೀಸ್‌ ಮತ್ತು ರಷ್ಯನ್‌ ಭಾಷೆಗಳಲ್ಲಿ ಬಿಡುಗಡೆ ನವದೆಹಲಿ: ವಿಶ್ವಸಂಸ್ಥೆಯು 2025ರ ವರ್ಷವನ್ನು ಅಂತಾರಾಷ್ಟ್ರೀಯ ಸಹಕಾರ ವರ್ಷವೆಂದು ಘೋಷಿಸಿದ್ದು ಅದರ ಲೋಗೋವನ್ನು ಸೋಮವಾರ ಬಿಡುಗಡೆ ಮಾಡಿದೆ ಎಂದು ಅಂತಾರಾಷ್ಟ್ರೀಯ ಸಹಕಾರ ಒಕ್ಕೂಟ ತಿಳಿಸಿದೆ. ಲೋಗೋ ಇಂಗ್ಲಿಷ್‌, ಫ್ರೆಂಚ್‌, ಸ್ಪಾನಿಷ್‌, ಅರೆಬಿಕ್‌, ಚೈನೀಸ್‌ ಮತ್ತು ರಷ್ಯನ್‌ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಇದನ್ನು ಬಳಸುವ ಸಂಸ್ಥೆಗಳು ನಿಗದಿಪಡಿಸಿರುವ ಸೂಚನೆಗಳ್ನು ಪಾಲಿಸಬೇಕು ಎಂದು ಒಕ್ಕೂಟವು ತಿಳಿಸಿದೆ. https://chat.whatsapp.com/Ge11n7QCiMj5QyPvCc0H19 ಬಿಡುಗಡೆಯಾಗಿರುವ ಲೋಗೋವು ಸಹಕಾರ ಕ್ಷೇತ್ರದಲ್ಲಿ ಜನಕೇಂದ್ರಿತ ಸಾಮೂಹಿಕ ಸಹಭಾಗಿತ್ವ ಮತ್ತು ಅದರಲ್ಲಿರುವ ಬಣ್ಣಗಳು 2030ರ ವೇಳೆಗೆ ಸಹಕಾರಿಗಳು ಹೇಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಸಹಕಾರಿ ಆಯಾಮಕ್ಕೆ ಒಡುಗೆ ನೀಡಬಹುದು ಎಂಬುದನ್ನು ಪ್ರತಿಬಿಂಬಿಸುತ್ತವೆ ಎಂದು ಸಹಕಾರ ಒಕ್ಕೂಟದ ಮಹಾನಿರ್ದೇಶಕ ಜೆರೋನ್‌ ಡಗ್ಲಾಸ್‌ ತಿಳಿಸಿದ್ದಾರೆ. ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿ ಸಂಸ್ಥೆಗಳು ಮತ್ತು ಸಹಕಾರಿಗಳು ಏನು ಮಾಡಬಹುದು ಎಂಬುದನ್ನು ಅಂತಾರಾಷ್ಟ್ರೀಯ ಸಹಕಾರ ವರ್ಷ 2025ರ ವೇಳೆ ಚರ್ಚೆಗೆ ತೆಗೆದುಕೊಳ್ಳಬಹುದು ಎಂದು ಡಗ್ಲಾಸ್‌ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ…

Read More

ನೋಂದಣಿ ಮತ್ತು ಮುದ್ರಾಂಕ ಆಯುಕ್ತ ದಯಾನಂದ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ನೋಂದಣಿ ಮತ್ತು ಮುದ್ರಾಂಕಗಳ ಆಯುಕ್ತ ಕೆ.ಎ. ದಯಾನಂದ್ ಸ್ಪಷ್ಟನೆ ನೀಡಿದ್ದಾರೆ. ನೋಂದಣಿ ಕಾಯ್ದೆ 1908ರ ನಿಯಮ 22B ತಿದ್ದುಪಡಿ ವಿರೋಧಿಸಿ ಸೋಮವಾರ ರಾಜ್ಯದ ಐದಾರು ಉಪ ನೋಂದಣಾಧಿಕಾರಿಗಳು ಕೆಲಕಾಲ ನೋಂದಣಿಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದರು. ಅವರೊಂದಿಗೆ ಉನ್ನತ ಮಟ್ಟದ ಇಲಾಖೆಯ ಅಧಿಕಾರಿಗಳು ಮಾತುಕತೆ ನಡೆಸಿದ್ದು, ಸಮಸ್ಯೆಯ ಬಗ್ಗೆ ಚರ್ಚಿಸಿದ್ದಾರೆ. ಪ್ರತಿಭಟನೆಗೆ ಮುಂದಾದವರ ಮನವೊಲಿಸಲಾಗಿದ್ದು, ನೋಂದಣಿ ಕಾರ್ಯ ಎಂದಿನಂತೆ ಮುಂದುವರಿಸಲು ಕ್ರಮ ವಹಿಸಲಾಗಿದೆ ಎಂದು ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ. ಈಗ ನೋಂದಣಿ ಮಾಡಿಸಿಕೊಳ್ಳಲು ಯಾವುದೇ ಸಮಸ್ಯೆ ಇಲ್ಲ. ಯಾರು ಬೇಕಾದರೂ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ. https://chat.whatsapp.com/Ge11n7QCiMj5QyPvCc0H19 ರಾಜ್ಯದ ಉಪನೋಂದಣಿ ಕಚೇರಿಗಳಲ್ಲಿ ಸ್ಥಿರಾಸ್ತಿ ನೋಂದಣಿಗೆ ಡಿಜಿಟಲ್ ಖಾತಾ ಕಡ್ಡಾಯಗೊಳಿಸಿದ್ದರಿಂದ ಜನರಿಗೆ ಸಮಸ್ಯೆ ಎದುರಾಗಿತ್ತು. ಅಧಿನಿಯಮ ಜಾರಿಗೆ ತಂದ ಬಳಿಕ ರಿಜಿಸ್ಟ್ರೇಷನ್‌ ಪಡೆಯಬೇಕಾದ ದಾಖಲೆಗಳ ಅಸ್ಪಷ್ಟತೆಯಿಂದ ಸಬ್‌ರಿಜಿಸ್ಟ್ರಾರ್ ದಸ್ತಾವೇಜು ನೋಂದಣಿ…

Read More

ಮಂಗಳೂರು: ಸಹಕಾರಿ ಕ್ಷೇತ್ರದ ರಾಷ್ಟ್ರಮಟ್ಟದ ಸಹಕಾರಿ ಸಂಘಟನೆ ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಪ್ರಣವ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜಿ.ಆರ್ ಪ್ರಸಾದ್ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ಪ್ರಧಾನ ಕಾರ್ಯದರ್ಶಿಯಾಗಿ ಬಿಲ್ಡಿಂಗ್ ಸೊಸೈಟಿ ನಿರ್ದೇಶಕ ಚರಣರಾಜ್ ಅವರನ್ನು ಆರಿಸಲಾಗಿದೆ. ಸಂಘಟನಾ ಕಾರ್ಯದರ್ಶಿಯಾಗಿ ಸ್ವಸ್ತಿಕ್ ಸೌಹಾರ್ದದ ಅಧ್ಯಕ್ಷ ವಲ್ಸರಾಜ್, ಉಪಾಧ್ಯಕ್ಷರಾಗಿ ಕರಾವಳಿ ಸೊಸೈಟಿಯ ಅಧ್ಯಕ್ಷ ವೆಂಕಟೇಶ್, ಶ್ರೀಶಾ ಸೌಹಾರ್ದದ ಅಧ್ಯಕ್ಷ ಎಂ.ಎಸ್‌.ಗುರುರಾಜ, ಚೀರುಂಬ ಸೊಸೈಟಿಯ ಉಪಾಧ್ಯಕ್ಷೆ ಶಾಂತಾ ಆರ್, ದ.ಕ. ಜಿಲ್ಲಾ ಕೋಳಿ ಸಾಕಾಣಿಕದಾರರ ಸಂಘದ ನಿರ್ದೇಶಕಿ ಸುಜಯ ಹೇಮಚಂದ್ರ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಸಫಲ ಸೌಹಾರ್ದ ಅಧ್ಯಕ್ಷ ಸಂಜೀವ ಅಡ್ಯಾರ್, ಮಹಿಳಾ ಪ್ರಮುಖರಾಗಿ ಜನತಾ ಬಜಾರ್ ನಿರ್ದೇಶಕಿ ಮದಲಾಕ್ಷಿ ರೈ, ಸಹ ಪ್ರಮುಖರಾಗಿ ಬಿಲ್ಡಿಂಗ್ ಸೊಸೈಟಿಯ ಉಪಾಧ್ಯಕ್ಷೆ ಪ್ರಭಾಮಾಲಿನಿ ನಿಯುಕ್ತಿಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಪ್ರಣವ ಸೌಹಾರ್ದದ ನಿರ್ದೇಶಕ ಸೋಮಪ್ಪ ನಾಯ್ಕ್ ಆಯ್ಕೆಯಾಗಿದ್ದಾರೆ. ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೋಹನದಾಸ ನಾಯಕ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ, ನಿಕಟಪೂರ್ವ ಅಧ್ಯಕ್ಷ ಗಣೇಶ್…

Read More

ಶಿಕಾರಿಪುರ: ಇಲ್ಲಿನ ಶ್ರೀಕಂತ್ತೆ ಸಿದ್ದೇಶ್ವರ ನಿಲಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಸಪ್ತಗಿರಿ ಮಹಿಳಾ ಗೃಹ ಕೈಗಾರಿಕಾ ಪತ್ತಿನ ಸಹಕಾರ ಸಂಘ, ಶಿಕಾರಿಪುರ ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರ ತಾಲೂಕಿನ ಆಯ್ದ ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಮತ್ತು ಮಹಿಳಾ ಸಹಕಾರ ಸಂಘಗಳ ಮಹಿಳಾ ನಿರ್ದೇಶಕರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು. https://chat.whatsapp.com/Ge11n7QCiMj5QyPvCc0H19 ಸಪ್ತಗಿರಿ ಮಹಿಳಾ ಗೃಹ ಕೈಗಾರಿಕಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಗಾಯತ್ರಿ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಶಿಕಾರಿಪುರ ಪುರಸಭಾ ಅಧ್ಯಕ್ಷೆ ಶೈಲಾ ಯೋಗೀಶ್ ಮಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯ ವೀರೇಶ್ ಎನ್‌.ವಿಶೇಷ ಆಹ್ವಾನಿತರಾಗಿದ್ದರು. ಪುರಸಭಾ ಉಪಾಧ್ಯಕ್ಷೆ ರೂಪಾ ಮಂಜುನಾಥ್ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ಉಪಾಧ್ಯಕ್ಷೆ ಶಾಂತಲಾ ಭೂಕಾಂತ್ ಹಾಗೂ ಸಹಕಾರ ರತ್ನ ಪುರಸ್ಕೃತ ಡಾಕ್ಟರ್…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್‌ ಬೋಳಾರ್‌ ಮಾಹಿತಿ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರತಿ ಶಾಖೆಯಲ್ಲೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಇರುವಂತೆ ಭದ್ರತೆಯ ನಿಟ್ಟಿನಲ್ಲಿ ಅಲಾರಮ್ ವ್ಯವಸ್ಥೆ ಇದ್ದು, ಎಸ್‌ಎಂಎಸ್‌ ಹಾಗೂ ದೂರವಾಣಿ ಕರೆಯ ಮೂಲಕ ಎಚ್ಚರಿಕೆ ನೀಡುವ ನೂತನ ವ್ಯವಸ್ಥೆ ಇದೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್‌ ಬೋಳಾರ್‌ ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಡಿಪು ಶಾಖೆಯ ಎಂಟನೇ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಗ್ರಾಹಕರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಶಿವರಾಮ್ ಬಿ, ಎಂ.ಶಂಕರ್ ಭಟ್, ಸುಂದರ್ ಪೂಜಾರಿ, ಗುರುವಪ್ಪ ಪೂಜಾರಿ, ಶಶಿಕಲಾ ಎಂ ಮತ್ತು ಅಮೀನಾ ದೀಪ ಪ್ರಜ್ವಲನೆ ಮಾಡಿ ಉದ್ಟಾಟಿಸಿದರು. https://chat.whatsapp.com/Ge11n7QCiMj5QyPvCc0H19 ಸಂಘದ ಸದಸ್ಯ ಶಿವರಾಮ್ ಬಿ ಮಾತನಾಡಿ ಸಂಘದ ಬೆಳವಣಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ದಕ್ಷಿಣ ಕನ್ನಡದಲ್ಲಿ ಮಾತ್ರವಲ್ಲದೆ ಸಂಘದ ಶಾಖೆಗಳು ಕರ್ನಾಟಕದಾದ್ಯಂತ ಪ್ರಾರಂಭವಾಗಲಿ ಎಂದು ಶುಭ ಹಾರೈಸಿದರು. ಸಂಘದ ಸದಸ್ಯ ಮುರಳಿಧರ್…

Read More