Author: admin
ನಾಟೆಕಲ್ ಶಾಖೆಯ ಐದನೇ ವಾರ್ಷಿಕೋತ್ಸವದಲ್ಲಿ ಸೂರ್ಯಕಾಂತ್ ಅಭಿಪ್ರಾಯ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಕೊರೊನಾ ಅಲೆಯ ಸಂದರ್ಭ ಗ್ರಾಹಕರಿಗೆ ಕಡಿಮೆ ಬಡ್ದಿ ದರದಲ್ಲಿ ಚಿನ್ನಾಭರಣ ಸಾಲ ಸೌಲಭ್ಯ ನೀಡಿದ್ದು, ಇದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗಿದೆ. ಅಂತಹ ಮಾದರಿಯಲ್ಲೇ ಸಂಘದ ಸದಸ್ಯರಿಗೆ ಕಡಿಮೆ ಬಡ್ದಿ ದರದಲ್ಲಿ ಗೃಹ ನಿರ್ಮಾಣ ಸಾಲ ಹಾಗೂ ಇತರ ಸಾಲ ಸೌಲಭ್ಯ ಯೋಜನೆಗಳನ್ನು ರೂಪಿಸಿ, ಜನರಿಗೆ ಉತ್ತಮ ಸೇವೆ ನೀಡುವಂತಾಗಲಿ ಎಂದು ಸಂಘದ ಸದಸ್ಯ ಸೂರ್ಯಕಾಂತ್ ಆಶಿಸಿದರು. https://chat.whatsapp.com/Ge11n7QCiMj5QyPvCc0H19 ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಾಟೆಕಲ್ ಶಾಖೆಯ ಐದನೇ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಗ್ರಾಹಕರ ಸಭೆಯಲ್ಲಿ ಅವರು ಅಭಿಪ್ರಾಯ ವ್ಯಕ್ತಡಿಸಿದರು. ಕಾರ್ಯಕ್ರಮವನ್ನು ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರೋಜಿನಿ, ಸಂಘದ ಸದಸ್ಯರಾದ ಪ್ರಕಾಶ್ ಆಚಾರ್ಯ, ಹಸೈನಾರ್ ಹಾಗೂ ಜಯಪ್ರಸಾದ್ ಉದ್ಟಾಟಿಸಿದರು. ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರೋಜಿನಿ ಮಾತನಾಡಿ ಸಂಘವು ನಮ್ಮ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದು, ಇದರಿಂದ ನಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಿಕರಿಗೆ ಪ್ರಯೋಜನಕಾರಿಯಾಗಿದೆ.…
ಬಂಟ್ವಾಳ: ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘದ ಮೂರನೇ ನೂತನ ಶಾಖೆ ವಿಟ್ಲ -ಮಂಗಳೂರು ರಸ್ತೆ ಬಳಿಯ ಮಂಗಳಪದವಿನಲ್ಲಿ ನವಂಬರ್ 2ರಂದು ಉದ್ಘಾಟನೆಯಾಗಲಿದೆ. https://chat.whatsapp.com/Ge11n7QCiMj5QyPvCc0H19 ಬೆಳಗ್ಗೆ 9.30ಕ್ಕೆ ಉದ್ಘಾಟನೆ ನಡೆಯಲಿದ್ದು 10ಕ್ಕೆ ಮಂಗಳಪದವು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷ ಕೆ.ಜಯಂತ ನಾಯಕ್ ಪಾಣೆಮಂಗಳೂರು ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ವಿಟ್ಲ ಶೋಕಮಾತಾ ದೇವಾಲಯದ ಧರ್ಮಗುರು ರೆ|ಫಾ|ಮೈಕೆಲ್ ರೋಡ್ರಿಗಸ್ ಆಡಳಿತ ಮಂಡಳಿ ಕೊಠಡಿ ಉದ್ಘಾಟಿಸುವರು. ಸಹಕಾರ ಸಂಘಗಳ ಸಹಾಯಕ ಉಪನಿಬಂಧಕ ಸುಧೀರ್ ಕುಮಾರ್ ಜೆ ಶಾಖೆಯ ಗಣಕೀಕರಣ ವ್ಯವಸ್ಥೆ ಉದ್ಘಾಟಿಸಲಿದ್ದಾರೆ. ವೀರಕಂಭ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಲಲಿತಾ ನಾಯ್ಕ ನೂತನ ಠೇವಣಿ ಪತ್ರ ಬಿಡುಗಡೆ ಮಾಡುವರು. ಕೆಲಿಂಜ ಉಳ್ಳಾಲ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮಂಗಳಪದವು…
ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ಯೋಜನೆ ಅದ್ಭುತ ಸ್ಪಂದನೆ ಕಾರ್ಕಳ: ವರಮಹಾಲಕ್ಷ್ಮಿ ಹಬ್ಬ ಹಾಗೂ ಗಣೇಶ ಚತುರ್ಥಿ ಅಂಗವಾಗಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ವಿಶೇಷ ಠೇವಣಿ ಯೋಜನೆ ಹಮ್ಮಿಕೊಂಡಿದ್ದ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ಯೋಜನೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸಂಘವು ಒಂದೇ ತಿಂಗಳಲ್ಲಿ 2.76 ಕೋಟಿ ರೂ. ಸಂಗ್ರಹ ಮಾಡಿದೆ. https://chat.whatsapp.com/Ge11n7QCiMj5QyPvCc0H19 ಇಲ್ಲಿನ ಜೋಡುರಸ್ತೆಯಲ್ಲಿ ಕೇಂದ್ರ ಕಚೇರಿ ಹೊಂದಿ, ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘವು 2001 ರಲ್ಲಿ ಆರಂಭವಾಗಿದ್ದು, ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಸಂಘದ ಮೇಲೆ ಗ್ರಾಹಕರು ವಿಶೇಷ ವಿಶ್ವಾಸ ಇರಿಸಿರುವುದರಿಂದ ಪ್ರತಿವರ್ಷವೂ ಠೇವಣಿಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಸಂಘವು 2023-24ನೇ ಆರ್ಥಿಕ ವರ್ಷದಲ್ಲಿ ರೂ. 147 ಕೋಟಿ ವ್ಯವಹಾರ ನಡೆಸಿ ರೂ. 55.46 ಲಕ್ಷ ನಿವ್ವಳ ಲಾಭ ಗಳಿಸಿದೆ. ವಾರ್ಷಿಕ ಸಾಲಿನ ಅಂತ್ಯಕ್ಕೆ ಸಂಘವು ರೂ.30.55 ಲಕ್ಷ ಪಾಲು ಬಂಡವಾಳ ಹೊಂದಿದ್ದು ರೂ.…
ಹಿರೇಕೆರೂರು: ಶ್ರೀ ರಾಮಾಯಣ ಮಹಾಕಾವ್ಯ ಬರೆದ ವಾಲ್ಮೀಕಿ ರತ್ನಾಕರ ಎಂಬ ಹೆಸರಿನಿಂದ ಕಾಡಿನ ದಾರಿಯಲ್ಲಿ ಬರುವವರನ್ನು ಅಡ್ಡಗಟ್ಟಿ ಬೆದರಿಸುತ್ತಿದ್ದ. ಅಂಥ ರತ್ನಾಕರನಿಗೆ ಸಪ್ತ ಋಷಿಗಳ ದರುಶನವಾಗಿ ಮನಸ್ಸು ಪರಿವರ್ತನೆಯಾಗಿ ಮಹಾಮಾನವತಾವಾದಿಯಾಗಲು ಹಂಬಲಿಸಿ ತಪಸ್ಸು ಕೈಗೊಂಡು ತಪಸ್ಸಿನಲ್ಲಿಯೇ ಲೀನವಾದಾಗ ಅವರ ಸುತ್ತಲೂ ಹುತ್ತ ಬೆಳೆದು ಮತ್ತೆ ಸಪ್ತ ಋಷಿಗಳಿಂದಲೇ ತಪಸ್ಸಿನಿಂದ ಜಾಗೃತನಾಗಿ ಇಂದ್ರನಿಂದ ಪ್ರೇರೇಪಿತನಾಗಿ ರಾಮಾಯಣ ಮಹಾಕಾವ್ಯ ಮಹರ್ಷಿ ವಾಲ್ಮೀಕಿಯಾದ. ಮನುಷ್ಯ ಜೀವನದಲ್ಲಿ ತಪ್ಪು ಮಾಡುವುದು ಸಹಜ, ಮುಂದೆ ಅದನ್ನು ತಿದ್ದಿಕೊಂಡು ಪರಿವರ್ತನೆಯಾಗಿ ಮಹಾ ಮಾನವನಾಗುವುದೇ ಮನುಷ್ಯನ ಧ್ಯೇಯವಾಗಬೇಕು ಎಂಬುದನ್ನು ಮಹಾತಪಸ್ವಿ ವಾಲ್ಮೀಕಿ ಜೀವನದಿಂದ ನಾವೆಲ್ಲರೂ ಕಲಿಯಬೇಕು ಎಂದು ಇಲ್ಲಿನ ಸಹಕಾರಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎಸ್.ವೀರಭದ್ರಯ್ಯ ಹೇಳಿದರು. https://chat.whatsapp.com/Ge11n7QCiMj5QyPvCc0H19 ಹಿರೇಕೆರೂರು ಸಹಕಾರಿ ವಿದ್ಯಾಸಂಸ್ಥೆಯ ಬಿ.ಆರ್.ತಂಬಾಕದ ಪ್ರಥಮದರ್ಜೆ ಮಹಾವಿದ್ಯಾಲಯ, ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಎಸ್.ಎಸ್.ಪಾಟೀಲ ಪಿಹೆಚ್.ಡಿ ಸಂಶೋಧನಾ ಕೇಂದ್ರದಲ್ಲಿ ಗುರುವಾರ ಮಹಾತಪಸ್ವಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರೀ ರಾಮಚಂದ್ರ, ಸೀತೆ, ಲಕ್ಷ್ಮಣ, ರಾವಣ, ಕುಂಭಕರ್ಣ, ಶೂರ್ಪನಖಿ ಈ ಮಹಾಕಾವ್ಯದಲ್ಲಿ ಪ್ರತಿಯೊಂದು ಪಾತ್ರಗಳೂ…
ಗುಜರಾತ್ನಲ್ಲಿ ರಾಜ್ಯದಲ್ಲೇ ಪ್ರಥಮ ಮಾರ್ಕೆಟ್ ಕಾರ್ಯಾರಂಭ ಅಹ್ಮದಾಬಾದ್: ಗುಜರಾತ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ -ಗುಜ್ಕೋಮಸೋಲ್ ನೇತೃತ್ವದಲ್ಲಿ ಗುಜರಾತ್ನ ಪ್ರಥಮ ಕೋಆಪರೇಟಿವ್ ಸೂಪರ್ ಮಾರ್ಕೆಟ್ ಗುಜ್ಕೋ ಮಾಲ್ ಅಹ್ಮದಾಬಾದ್ನಲ್ಲಿ ಸೋಮವಾರ ಕಾರ್ಯಾರಂಭ ಮಾಡಿದೆ. ಭಾರತದ ಕೋಆಪರೇಟಿವ್ ವಲಯದ ಪ್ರಮುಖರಲ್ಲೊಬ್ಬರಾದ ಫೆಡರೇಷನ್ನ ಅಧ್ಯಕ್ಷ ದಿಲೀಪ್ ಸಾಂಘನಿ ನೇತೃತ್ವದಲ್ಲಿ ಇದು ಕಾರ್ಯಾಚರಿಸಲಿದೆ. https://chat.whatsapp.com/Ge11n7QCiMj5QyPvCc0H19 ಉದ್ಘಾಟನಾ ಸಮಾರಂಭದಲ್ಲಿ ಗುಜರಾತ್ ರಾಜ್ಯ ಕೋಆಪರೇಟಿವ್ ಬ್ಯಾಂಕ್ನ ಅಧ್ಯಕ್ಷ ಅಜಯ್ ಪಟೇಲ್ ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸಿದ್ದರು. ದೇಶದ ಈಗಿನ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹಮ್ಮಿಕೊಂಡಿದ್ದ ವಿಕಾಸ್ ಸಪ್ತಾಹಕ್ಕೆ 23 ವರ್ಷಗಳು ಸಂದ ಕಾಲದಲ್ಲೇ ಈ ಮಾಲ್ ಉದ್ಘಾಟನೆಯಾಗಿರುವುದು ವಿಶೇಷ. ರಾಜ್ಯದ ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಹಾಗೂ ಸಾವಯವ ಉತ್ಪನ್ನಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳಿಗೆ ಈ ಸೂಪರ್ಮಾರ್ಕೆಟ್ ಸಹಕಾರಿಯಾಗಲಿದೆ. ಗುಜ್ಕೋ ಮಾಲ್ ಸೂಪರ್ ಮಾರ್ಕೆಟ್ ನೇರವಾಗಿ ರೈತರ ಜೊತೆ ವ್ಯವಹಾರ ಮಾಡಲಿದ್ದು ಅವರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶ ಹೊಂದಿದೆ. ಉದ್ಘಾಟನಾ…
ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ನಿಯಮಿತದ 15ನೇ ವಾರ್ಷಿಕೋತ್ಸವ ದಸರಾ ನಾಡಹಬ್ಬ ಆಚರಣೆಯ ಜೊತೆಗೆ ಭಾನುವಾರ ಮಂಗಳೂರು ಸ್ಟೋರ್ ಸಭಾಂಗಣದಲ್ಲಿ ನಡೆಯಿತು. https://chat.whatsapp.com/Ge11n7QCiMj5QyPvCc0H19 ಸಹಕಾರಿಯ ಅಧ್ಯಕ್ಷ, ಮಂಗಳೂರಿನ ಮಾಜಿ ಮೇಯರ್ ಕೆ.ಭಾಸ್ಕರ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಧನ್ವಿ ರಾವ್ ದೇವರ ಸ್ತುತಿ ಮಾಡಿದರು. ಹಿರಿಯ ಸಾಧಕರಾದ ಆನಂದ ಸೋನ್ಸ್ ಅವರನ್ನು ಅಭಿನಂದಿಸಲಾಯಿತು. ಅಂತಾರಾಷ್ಟ್ರೀಯ ಕ್ರೀಡಾಪಟು, ರಾಮಕ್ಷತ್ರಿಯ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶುಭಾ ಪ್ರಶಾಂತ್ ಮತ್ತು ಎನ್ಆರ್ಐ ರವೀಂದ್ರ ಬೇಕಲ್, ಸುಂದರ ಸಾಲ್ಯಾನ್ ಮುಖ್ಯ ಅತಿಥಿಗಳಾಗಿದ್ದರು. ಸಹಕಾರಿಯ ನಿರ್ದೇಶಕರಾದ ವಿಜೇತಾ ಎಸ್.ರಾವ್, ಲತಾ ಎನ್.ಆಳ್ವ, ಸುಪ್ರಿತಾ ಜೆ.ಕೆ, ಕೃಷ್ಣ ಭಟ್, ಪೂರ್ಣಿಮಾ ಬಿ.ರಾವ್, ಸದಸ್ಯರಾದ ಉಮೇಶ ಬಾಬುಗುಡ್ಡ, ಜಾನ್ಸನ್ ಮಾಬೆನ್, ರಾಜಶೇಖರ್, ರತನ್ಕುಮಾರ್ ಮೊದಲಾದವರು ಸಹಕರಿಸಿದರು. ಸಹಕಾರಿಯ ಕಾರ್ಯದರ್ಶಿ ಚಂದ್ರಿಕಾ ಡಿ.ರಾವ್ ಕಾರ್ಯಕ್ರಮ ಸಂಯೋಜಿಸಿದ್ದರು. ನಿರ್ದೇಶಕ ಸದಾಶಿವ ಅಮೀನ್ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಂಗಳೂರಿನ ರಾಮಕೃಷ್ಣ ಆಶ್ರಮದ ಬಾಲಕರ ಹಾಸ್ಟೆಲ್ಗೆ ಊಟದ ಸ್ಟೀಲ್ ತಟ್ಟೆಗಳನ್ನು ಇಡುವ ಸ್ಟೀಲ್ ರ್ಯಾಕ್ ಅನ್ನು ಭಾನುವಾರ ಸಂಜೆ ಆಶ್ರಮದ ಹಾಸ್ಟೆಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಅವರಿಗೆ ಹಸ್ತಾಂತರಿಸಲಾಯಿತು. ರೂ.50000/- ಮೌಲ್ಯದ ರ್ಯಾಕ್ನಲ್ಲಿ 120 ಊಟದ ತಟ್ಟೆಗಳನ್ನು ಇಡಬಹುದು. ಇದನ್ನು ಸ್ವೀಕರಿಸಿ ಮಾತನಾಡಿದ ಮಠದ ಅಧ್ಯಕ್ಷ ಸ್ವಾಮಿ ಜಿತ ಕಾಮಾನಂದಜಿ,”ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನೀಡಿದ ಈ ಸ್ಟೀಲ್ ರ್ಯಾಕ್ ನ ಅಗತ್ಯ ನಮ್ಮ ಹಾಸ್ಟೆಲ್ಗೆ ಇತ್ತು. ವಿದ್ಯಾರ್ಥಿಗಳು ಊಟದ ನಂತರ ತೊಳೆದ ತಟ್ಟೆಗಳನ್ನು ಇಡಲು ಇದು ತುಂಬಾ ಸಹಕಾರಿ. ಕಳೆದ ವರ್ಷವೂ ಶ್ರೀಶಾ ಸೊಸೈಟಿ ಹಾಸ್ಟೆಲ್ ಮಕ್ಕಳ ಬಿಸಿನೀರು ಸ್ನಾನಕ್ಕೆ ಎರಡು ಗುಜರಾತಿ ಬಾಯ್ಲರ್ಗಳನ್ನು ನೀಡಿದ್ದು ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯುತ್ತಿದ್ದಾರೆ. ಸಮಾಜಮುಖಿ ಕಾರ್ಯಗಳನ್ನು ನಿರಂತರ ಮಾಡುತ್ತಿರುವ ಶ್ರೀಶಾ ಸೊಸೈಟಿ ಉತ್ತರೋತ್ತರ ಅಭಿವೃದ್ಧಿ ಹೊಂದಲಿ” ಎಂದು ಹಾರೈಸಿದರು. https://chat.whatsapp.com/Ge11n7QCiMj5QyPvCc0H19 ಕರ್ನಾಟಕ ರಾಜ್ಯ…
ಉಳ್ಳಾಲ: ಬಿ.ಸಿ.ರೋಡ್ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಸಹಕಾರಿ ಸಂಘದ 10ನೇ ಶಾಖೆ ಭಾನುವಾರ ಫಜೀರು ಗ್ರಾಮದ “ಆಶೀರ್ವಾದ್ ಕಾಂಪ್ಲೆಕ್ಸ್”ನ ಮೊದಲನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತು. https://chat.whatsapp.com/Ge11n7QCiMj5QyPvCc0H19 ಮರ್ಸಿ ಶೇರ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಿ.ಎ. ಮ್ಯಾಕ್ಸಿಮ್ ಎಂ..ಫೆರ್ನಾಂಡಿಸ್ ಉದ್ಘಾಟಿಸಿದರು. ಚರ್ಚ್ ಧರ್ಮಗುರು ಫಾ।ಆಲ್ಬನ್ ಡಿಸೋಜ ಆಶೀರ್ವಚನ ನೀಡಿದರು. ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಕೆ.ರವೀಂದ್ರ ರೈ ಭದ್ರತಾ ಕೊಠಡಿ ಉದ್ಘಾಟಿಸಿದರು. ಫಜೀರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಫ್ಲೋರಿನ್ ಡಿಸೋಜ ಗಣಕಯಂತ್ರ ಉದ್ಘಾಟಿಸಿದರು. ಫಜೀರು ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ವಲೇರಿಯನ್ ಡಿಸೋಜ, ಕಟ್ಟಡ ಮಾಲೀಕ ಗ್ಲೆನ್ಸಿಲ್ ಅರುಣ್ ರೋಚ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಜೀವನ್ ಲೋಯ್ಡ್ ಪಿಂಟೊ ಅಧ್ಯಕ್ಷತೆ ವಹಿಸಿದ್ದರು. ನೂತನ ಶಾಖೆಗೆ ರೂ. 1.10 ಕೋಟಿ ಠೇವಣಿ ಸಂಗ್ರಹಗೊಂಡಿದ್ದು, ಅತಿಥಿ ಗಣ್ಯರ ಸಮ್ಮುಖದಲ್ಲಿ ಠೇವಣಿ ಪತ್ರಗಳನ್ನು ಠೇವಣಿದಾರರಿಗೆ ವಿತರಿಸಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲಿನ್ ಗ್ರೇಸಿ ಡಿಸೋಜ ಸಂಸ್ಥೆ ನಡೆದು ಬಂದ ದಾರಿಯ ಸಂಕ್ಷಿಪ್ತ ವರದಿ…
ಮಂಗಳೂರು: ಯಕ್ಷಧ್ರುವ ಖ್ಯಾತಿಯ ಪಟ್ಲ ಸತೀಶ್ ಶೆಟ್ಟಿ ಅಧ್ಯಕ್ಷತೆಯ ಯಕ್ಷಧ್ರುವ ಸೌಹಾರ್ದ ಕೋಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಇತ್ತೀಚೆಗೆ ಕಾವೂರಿನಲ್ಲಿ ನಡೆಯಿತು. https://chat.whatsapp.com/Ge11n7QCiMj5QyPvCc0H19 ಸಂಘವು ವರ್ಷಾಂತ್ಯಕ್ಕೆ ಎ ದರ್ಜೆಯ ಸದಸ್ಯತ್ವ ಪಾಲು ಬಂಡವಾಳ 46.30 ಲಕ್ಷ ರೂ. ಹೊಂದಿದ್ದು, ಠೇವಣಿ ಸಂಗ್ರಹ 4.54 ಕೋಟಿ ರೂ., 4.56 ಕೋಟಿ ರೂ. ವಿವಿಧ ರೀತಿಯ ಸಾಲ ವಿತರಿಸಲಾಗಿದೆ. 1.17 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸಂಘದ ಸದಸ್ಯರ ಠೇವಣಾತಿಗಳಿಗೆ ಅತ್ಯಾಕರ್ಷಕ ಬಡ್ಡಿ ನೀಡುವುದರೊಂದಿಗೆ ಹಿರಿಯ ನಾಗರಿಕರಿಗೆ ವಿಶೇಷ ರೀತಿಯ ಬಡ್ಡಿ ನೀಡಲಾಗುತ್ತಿದೆ. ಚಿನ್ನಾಭರಣ ಈಡಿನ ಸಾಲ, ಗೃಹ ಸಾಲ, ಅಡವು ಸಾಲ, ಜಾಮೀನು ಸಾಲ, ಭದ್ರತಾ ಸಾಲ, ಎಲ್ಲ ತರಹದ ವಾಹನ ಸಾಲ ನೀಡಲಾಗುತ್ತಿದೆ. 2024-25ನೇ ಸಾಲಿಗೆ ಅಂದಾಜು 10 ಕೋಟಿ ರೂ. ಠೇವಣಿ ಸಂಗ್ರಹ ಮತ್ತು ಸಾಲ ವಿತರಣೆ 8.50 ಕೋಟಿ ರೂ. ನಿವ್ವಳ ಲಾಭ 12.74 ಲಕ್ಷ ರೂ. ಎಂದು ಅಂದಾಜಿಸಲಾಗಿದ್ದು, ಮಂಗಳೂರು ನಗರದ ಪಂಪ್ವೆಲ್…
ರಾಜ್ಯ ವಿಧಾನಸಭಾ ಚುನಾವಣೆಯ ಎಫೆಕ್ಟ್, ಡಿಸೆಂಬರ್ ಅಂತ್ಯಕ್ಕೆ ದಿನಾಂಕ ನಿಗದಿ ಮುಂಬೈ: ಮಹಾರಾಷ್ಟ್ರದಲ್ಲಿ ಸಹಕಾರ ಸಂಘಗಳ ಚುನಾವಣಾ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ. ಈ ಹಿಂದೆ ಅಕ್ಟೋಬರ್ 1ರಿಂದ ಚುನಾವಣಾ ಪ್ರಕ್ರಿಯೆ ನಿಗದಿಯಾಗಿದ್ದರೂ ಅದನ್ನು ಮುಂದೂಡಿ ಮುಂದಿನ ದಿನಾಂಕವನ್ನು ಡಿಸೆಂಬರ್ 31ರಿಂದ ಆರಂಭಿಸುವಂತೆ ನಿಗದಿಪಡಿಸಲಾಗಿದೆ. ರಾಜ್ಯ ವಿಧಾನಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ 35,000ಕ್ಕೂ ಅಧಿಕ ಸಹಕಾರ ಸಂಘಗಳ ಆಡಳಿತ ಮಂಡಳಿಗಳ ಚುನಾವಣೆ ಮುಂದೂಡಲಾಗಿದೆ ಎನ್ನಲಾಗಿದೆ. https://chat.whatsapp.com/Ge11n7QCiMj5QyPvCc0H19 ಸಾಕಷ್ಟು ವಿಳಂಬದ ನಂತರ ಮಹಾರಾಷ್ಟ್ರದ 29,443 ಕೋ ಆಪರೇಟಿವ್ ಸೊಸೈಟಿಗಳ ಚುನಾವಣೆಗೆ ಅ.1ರಿಂದ ಚುನಾವಣೆ ಪ್ರಕ್ರಿಯೆ ಆರಂಭಿಸುವಂತೆ ನಿಗದಿಪಡಿಸಲಾಗಿತ್ತು. ಆದರೆ ವಿಧಾನಸಭೆ ಚುನಾವಣೆಯ ಸಿದ್ಧತೆಗಳಿಗೆ ತೊಡಕುಂಟಾಗಬಾರದು ಎಂಬ ಹಿನ್ನೆಲೆಯಲ್ಲಿ ಮತ್ತೊಮ್ಮೆ ದಿನಾಂಕ ಮರುನಿಗದಿ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಅಲ್ಲಿನ ಕೋ ಆಪರೇಟಿವ್ ಸೊಸೈಟಿಗಳು ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅಲ್ಲಿನ ಸಕ್ಕರೆ ಸಹಕಾರ ಸಂಘಗಳು, ನೂಲು ಗಿರಣಿಗಳು, ವಿವಿಧ ಗ್ರಾಮೀಣ ಮತ್ತು ನಗರ ಸಹಕಾರಿ ಸಂಘಗಳು ಆರ್ಥಿಕ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಹಾಸುಹೊಕ್ಕಾಗಿ…
