Author: admin

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಪಂಪ್‌ವೆಲ್‌ನಲ್ಲಿರುವ ಸಭಾಂಗಣದಲ್ಲಿ ಶುಕ್ರವಾರ ಸಂಪನ್ನಗೊಂಡಿತು. https://chat.whatsapp.com/Ge11n7QCiMj5QyPvCc0H19 ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ ದೇವಸ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್‌ ಕೊಟ್ಟಾರಿ ಎಚ್‌. ವಾರ್ಷಿಕ ವರದಿ ಮಂಡಿಸಿದರು. ಸಭೆಯಲ್ಲಿ ಸದಸ್ಯರ ಅಹವಾಲುಗಳನ್ನು ಸ್ವೀಕರಿಸಲಾಯಿತು. ಒಕ್ಕೂಟದ ವತಿಯಿಂದ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಮಾಡುವುದು ಹಾಗೂ ಸಹಕಾರಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಒಂದು ಕೇಂದ್ರಬಿಂದುವಾಗಿ ಸಂಘಟಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು. ಜಿಲ್ಲೆಯ ಎಲ್ಲ ಸೌಹಾರ್ದ ಸಹಕಾರಿ ಸಂಘಗಳ ಸದಸ್ಯತ್ವ ಮಾಡುವುದೆಂದು ತೀರ್ಮಾನಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ನಿಕಟಪೂರ್ವ ಅಧ್ಯಕ್ಷ ಎ.ಸುರೇಶ್‌ ರೈ ಮಾರ್ಗದರ್ಶನ ನೀಡಿದರು. ಸಂಯುಕ್ತ ಸಹಕಾರಿಯ ನಿರ್ದೇಶಕಿ, ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟದ ಸೌಹಾರ್ದ ಸಹಕಾರಿಯ ವೃತ್ತಿಪರ ನಿರ್ದೇಶಕಿ ಭಾರತಿ ಜಿ.ಭಟ್‌ ಸಲಹೆಗಳನ್ನು ನೀಡಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ…

Read More

ಶೇ. 22 ಡಿವಿಡೆಂಡ್ ಘೋಷಣೆ ಮಂಗಳೂರು: ದಿ ಕರಾವಳಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಅತ್ತಾವರ ಮಂಗಳೂರು ಇದರ 33ನೇ ವಾರ್ಷಿಕ ಮಹಾಸಭೆ ಸೊಸೈಟಿ ಅಧ್ಯಕ್ಷ ಎ.ಎಸ್ ವೆಂಕಟೇಶ್ ಅಧ್ಯಕ್ಷತೆಯಲ್ಲಿ ಜಪ್ಪು ಜೆರೋಸಾ ಹೈಸ್ಕೂಲ್‌ನಲ್ಲಿ ನಡೆಯಿತು. https://chat.whatsapp.com/Ge11n7QCiMj5QyPvCc0H19 ಪ್ರಧಾನ ವ್ಯವಸ್ಥಾಪಕ ಅನಿಲ್ ಕುಮಾರ್ ಎಂ. ಗತವರ್ಷದ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ರಮೇಶ್ ಮೆಂಡನ್ ಟಿ., ನಿರ್ದೇಶಕರಾದ ಪ್ರಕಾಶ್ ಬಿ., ತಾರಾನಾಥ ಸುವರ್ಣ, ಭರತ್ ಕುಮಾರ್ ಎ., ಶೋಭಾ ಎ, ಪದ್ಮನಾಭ, ಉಷಾ, ರಾಜನ್ ಕುಮಾರ್ ಎಚ್.ಎಸ್. ಉಪಸ್ಥಿತರಿದ್ದರು. ನಿರ್ದೇಶಕರಾದ ವಿಶ್ವಾಸ್ ಕುಮಾರ್ ದಾಸ್, ರವೀಂದ್ರ ಟಿ. ಸೊಸೈಟಿಯ ಬೆಳವಣಿಗೆಯ ಬಗ್ಗೆ ತಿಳಿಸಿದರು. ಸೊಸೈಟಿ 2023-24ನೇ ಸಾಲಿನಲ್ಲಿ 5.51 ಕೋಟಿ ರೂ. ಲಾಭ ಗಳಿಸಿದೆ. ಶೇ.22ರಷ್ಟು ಡಿವಿಡೆಂಡ್ ಘೋಷಣೆ ಮಾಡಿದೆ. ಜಾಮೀನು ಸಾಲ, ಆಭರಣ ಸಾಲ, ಆಸ್ತಿ, ಆಧಾರ ಸಾಲ, ಗೃಹ ಸಾಲ, ವಾಹನ ಸಾಲ, ಜೀವ ವಿಮಾ ಪಾಲಿಸಿ, ರಾಷ್ಟ್ರೀಯ ಉಳಿತಾಯ ಪತ್ರ ಆಧಾರ ಸಾಲ ನೀಡುವ ಯೋಜನೆಗಳೊಂದಿಗೆ ಕಾರ್ಯವೆಸಗುತ್ತಿದೆ.…

Read More

ವಾರ್ಷಿಕ ಮಹಾಸಭೆಯಲ್ಲಿ 65% ಬೋನಸ್‌ ನೀಡಲು ಪ್ರಸ್ತಾಪ ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ 2023 _24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಸಾಣೂರು ನರಸಿಂಹ ಕಾಮತ್ ಅಧ್ಯಕ್ಷತೆಯಲ್ಲಿ ಸೋಮವಾರ ಜರುಗಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾಣೂರು ನರಸಿಂಹ ಕಾಮತ್‌, ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಹಾಲಿಗೆ ವೈಜ್ಞಾನಿಕ ದರ ನಿಗದಿ ಮಾಡಿದರೆ ಮಾತ್ರ ಮುಂದಿನ ವರ್ಷಗಳಲ್ಲಿ ಹೈನುಗಾರಿಕೆಯ ಉಳಿವು ಮತ್ತು ಬೆಳವಣಿಗೆ ಸಾಧ್ಯ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪಶು ಆಹಾರದ ಬಳಕೆಯಾಗುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಹಸಿರು ಮೇವು ಹಾಗೂ ರಸಮೇವಿನ ಉತ್ಪಾದನೆ ಮತ್ತು ಬಳಕೆಯಿಂದ ಹಿಂಡಿಯ ಖರ್ಚು ಕಡಿಮೆಯಾಗಿ, ಹೈನುಗಾರಿಕೆಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾಣಲು ಸಾಧ್ಯ. ಒಕ್ಕೂಟದ ಪ್ರೋತ್ಸಾಹಕ ಯೋಜನೆಗಳಾದ ಮಿಶ್ರ ತಳಿ ಕರು ಯೋಜನೆ, ಸಾಮೂಹಿಕ ರಾಸು ವಿಮಾ ಯೋಜನೆ,…

Read More

1,000 ಕೋಟಿ ರೂ. ದಾಟಿದ ವ್ಯವಹಾರ, ಆರು ವರ್ಷಗಳಿಂದ ಶೇ.25ರಷ್ಟು ಡಿವಿಡೆಂಡ್‌: ಕೆ. ಜೈರಾಜ್ ಬಿ. ರೈ ಮಂಗಳೂರು: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸುರತ್ಕಲ್ ಶಾಖೆಯ ನವೀಕೃತ ಶಾಖಾ ಕಛೇರಿಯನ್ನು ಹರುಷ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಸಂಘದ ಅಧ್ಯಕ್ಷ ಕೆ. ಜೈರಾಜ್ ಬಿ. ರೈ ಇತ್ತೀಚೆಗೆ ಉದ್ಘಾಟಿಸಿದರು. https://chat.whatsapp.com/Ge11n7QCiMj5QyPvCc0H19 ಉದ್ಘಾಟನೆ ಬಳಿಕ ಮಾತನಾಡಿದ ಅವರು, ಸಂಘದ ಅಭಿವೃದ್ಧಿಗೆ ಸಹಕರಿಸಿದ ಎಲ್ಲಾ ಸದಸ್ಯ ಗ್ರಾಹಕರಿಗೆ ಹೆಚ್ಚಿನ ಅನುಕೂಲಗಳನ್ನು, ಸೌಲಭ್ಯಗಳನ್ನು ಒದಗಿಸುವುದು ಸಂಘದ ಕರ್ತವ್ಯ. ಈ ನಿಟ್ಟಿನಲ್ಲಿ ಸುರತ್ಕಲ್ ಶಾಖಾ ಕಛೇರಿಯನ್ನು ಆಧುನೀಕರಿಸಿ, ಹವಾನಿಯಂತ್ರಿತ ಸೌಲಭ್ಯಗಳೊಂದಿಗೆ ನವೀಕರಿಸಿ ಗ್ರಾಹಕರ ಸೇವೆಗೆ ಅರ್ಪಿಸಲಾಗಿದೆ. ಸಂಘವು ಸದಸ್ಯರ ಸಹಕಾರದಿಂದ ರೂ.1,000 ಕೋಟಿ ವ್ಯವಹಾರವನ್ನು ದಾಟಿದ್ದು, ಕಳೆದ ಆರು ವರ್ಷಗಳಿಂದ ಶೇ.25ರಷ್ಟು ಡಿವಿಡೆಂಡ್‌ ನೀಡುತ್ತಿದ್ದೇವೆ. ಸಂಘವು ಸಣ್ಣ ಮೊಬಲಗಿನ ರಿಟೇಲ್ ಸಾಲ ನೀಡುವಿಕೆಗೆ ಒತ್ತು ನೀಡುತ್ತಿದ್ದು, 40 ಸಾವಿರಕ್ಕಿಂತ ಹೆಚ್ಚು ಸಾಲಗಾರ ಗ್ರಾಹಕರಿದ್ದಾರೆ. ಸಾಲ…

Read More

ಮುಂದಿನ ದಶಕದೊಳಗೆ 25 ಶಾಖೆಗಳನ್ನು ತೆರೆಯುವ ಕನಸು, ಸಂಸ್ಥೆಯ ಅಧ್ಯಕ್ಷ ಜಿ.ಆರ್‌.ಪ್ರಸಾದ್‌ ಅಭಿಪ್ರಾಯ ಮಂಗಳೂರು: ಸಂಸ್ಥೆಯ ಗೌರವಾನ್ವಿತ ಗ್ರಾಹಕರು, ಸದಸ್ಯರು, ಠೇವಣಿದಾರರ ನಿರಂತರ ಗುಣಮಟ್ಟದ ವ್ಯವಹಾರ ಮತ್ತು ಪ್ರೋತ್ಸಾಹದ ಕಾರಣದಿಂದ ಪ್ರಣವ ಸಂಸ್ಥೆ ರಾಜ್ಯಮಟ್ಟದಲ್ಲಿ ಶಾಖೆಗಳನ್ನು ತೆರೆದು ಜನಮನ್ನಣೆಗೆ ಪಾತ್ರವಾಗಿದೆ. ಮುಂದಿನ ದಶಕದೊಳಗೆ 25 ಶಾಖೆಗಳನ್ನು ತೆರೆಯುವ ಗುರಿ ಹೊಂದಿದ್ದು ಬ್ಯಾಂಕ್‌ ಮಾದರಿಯ ವ್ಯವಹಾರಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಮುಂದಡಿಯಿಡಲಾಗುತ್ತಿದೆ. ಸಂಸ್ಥೆಗೆ ಸ್ವಂತ ಕಟ್ಟಡದ ಪ್ರಧಾನ ಕಚೇರಿ ನಿರ್ಮಿಸುವ ನಿಟ್ಟಿನಲ್ಲಿ ಮಂಗಳೂರಿನ ಕುಲಶೇಖರದಲ್ಲಿ ಜಾಗ ಖರೀದಿಸಲಾಗಿದ್ದು, ಎಲ್ಲ ನಿರ್ದೇಶಕರ, ಸದಸ್ಯರ ಸಹಕಾರದಿಂದ ಶೀಘ್ರ ಕಟ್ಟಡ ನಿರ್ಮಾಣದ ಕೆಲಸ ಕೈಗೆತ್ತಿಕೊಳ್ಳುವ ಚಿಂತನೆ ಇದೆ ಎಂದು ಪ್ರಣವ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ.ಆರ್.ಪ್ರಸಾದ್‌ ಹೇಳಿದರು. ಪದವಿನಂಗಡಿಯಲ್ಲಿ ಭಾನುವಾರ ಪ್ರಣವ ಸೌಹಾರ್ದ ಸಹಕಾರಿಯ ಒಂಬತ್ತನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 ಯೆಯ್ಯಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನ ಕಚೇರಿ ಸೇರಿದಂತೆ ವಾಮಂಜೂರು, ಬೆಂಗ್ರೆ, ಎಡಪದವು, ಪುತ್ತೂರು, ಸುಳ್ಯ, ಮೈಸೂರು ಮತ್ತು ಕುಶಾಲನಗರ ಸೇರಿ ಒಟ್ಟು ಎಂಟು…

Read More

84.05 ಲಕ್ಷ ರೂ. ಲಾಭ, ಸತತ ಎರಡನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಸಾಧನಾ ಪುರಸ್ಕಾರ ಉಡುಪಿ: ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 27ನೇ ವಾರ್ಷಿಕ ಮಹಾಸಭೆ ಸೋಮವಾರ ಉಡುಪಿ ಶೋಕಮಾತಾ ಚರ್ಚ್‌ನಲ್ಲಿ ಸಂಘದ ಅಧ್ಯಕ್ಷ ಲೂವಿಸ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಜರಗಿತು. https://chat.whatsapp.com/Ge11n7QCiMj5QyPvCc0H19 ಸಂಘದ ಮುಖ್ಯ ಕಾರ್ಯನಿರ್ವಾಹಕ ಸಂದೀಪ್ ಎ.ಫೆರ್ನಾಂಡಿಸ್ ವಾರ್ಷಿಕ ವರದಿ ಮಂಡಿಸಿದರು. ಸಂಘವು 2023-24ನೇ ಸಾಲಿನಲ್ಲಿ ರೂ. 84.05 ಲಕ್ಷ ಲಾಭ ಗಳಿಸಿದ್ದು, ಸದಸ್ಯರಿಗೆ 17% ಡಿವಿಡೆಂಡ್ ಘೋಷಿಸಲಾಯಿತು. ಲಯನ್ಸ್ ಕ್ಲಬ್ ಉಡುಪಿ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಅಧ್ಯಕ್ಷರೂ ಆದ ಲೂವಿಸ್ ಲೋಬೊ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚಿನ ಅಂಕವನ್ನು ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ಹಾಗೂ ಅಶಕ್ತರೂ/ಅನಾರೋಗ್ಯ ಪೀಡಿತ 7 ಮಂದಿಗೆ ಮತ್ತು ಮಾನಸ ಪುನರ್ವಸತಿ ಮತ್ತು ನಿರ್ಮಿತಿ ಕೇಂದ್ರ,ಪಾಂಬೂರು ಇವರಿಗೆ ಆರ್ಥಿಕ ಸಹಾಯ ನೀಡಲಾಯಿತು. ಸಂಘವು ಸತತ 2ನೇ ಬಾರಿ ಪ್ರತಿಷ್ಠಿತ ದ.ಕ ಜಿಲ್ಲಾ ಕೇಂದ್ರ…

Read More

ಮೂಡುಬಿದಿರೆ: ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 11ನೇ ವಾರ್ಷಿಕ ಮಹಾಸಭೆ ಮೂಡುಬಿದಿರೆ ಸಮಾಜ ಮಂದಿರ ದಲ್ಲಿ ಭಾನುವಾರ ನಡೆಯಿತು. ಸಹಕಾರಿಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಉಪಾಧ್ಯಕ್ಷ ಶಿವರಾಮ್ ಜೆ.ಶೆಟ್ಟಿ ಹಾಗೂ ನಿರ್ದೇಶಕ ವಿಶ್ವನಾಥ್, ಬಾಬು ಎಂ, ನಾಗರಾಜ್ ಶೆಟ್ಟಿ, ದಯಾನಂದ, ನಾರಾಯಣ ಶೆಟ್ಟಿ, ಶಾಂತಾ, ಗೀತಾಂಜಲಿ, ರೆನಿಟಾ ಗ್ರೇಸಿ ಡಿಸೋಜ ಸಭೆಯನ್ನು ಉದ್ಘಾಟಿಸಿದರು. https://chat.whatsapp.com/Ge11n7QCiMj5QyPvCc0H19 ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ,ಕಳೆದ 11 ವರ್ಷಗಳಲ್ಲಿ ಸಹಕಾರಿಯು ಪ್ರತಿ ವರ್ಷವೂ ಲಾಭದಲ್ಲಿದ್ದು ಈ ವರ್ಷ ರೂ. 36,48,266.80 ಲಾಭ ಗಳಿಸಿ ಸದಸ್ಯರಿಗೆ ಶೇ.12 ಡಿವಿಡೆಂಡ್‌ ನೀಡಲಾಗುತ್ತಿದೆ. ಅಲ್ಲದೆ ಸಾಲ ಪಡೆದ ಸ್ವ ಸಹಾಯ ಗುಂಪಿನ ಸದಸ್ಯರಿಗೆ ಸಂಸ್ಥೆಯ ವತಿಯಿಂದ ಆರೋಗ್ಯ ವಿಮೆ ಕಾರ್ಡ್ ಮಾಡಲಾಗುವುದು. ಇದರಿಂದ ಸಾಲ ಪಡೆದ ಸದಸ್ಯರು ಅಪಘಾತದಲ್ಲಿ ಗಾಯಗೊಂಡರೆ, ಅಥವಾ ಅನಾರೋಗ್ಯ ಸಂಭವಿಸಿದರೆ ವಿವಿಧ ಚಿಕಿತ್ಸೆಗೆ ಖರ್ಚಿನ ಮೊತ್ತದಲ್ಲಿ ಸಹಕಾರಿಯು ರೂಪಾಯಿ 10,000/- ವರೆಗೆ ಭರಿಸುವುದಾಗಿ, ಹಾಗೂ ಸಾಲ ಪಡೆದ ಸದಸ್ಯರು…

Read More

ಮಂಗಳೂರು: ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಮಂಗಳೂರು ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ವಿ.ಟಿ ರಸ್ತೆಯ ಕೃಷ್ಣ ಮಂದಿರದಲ್ಲಿ ನಡೆಯಿತು. https://chat.whatsapp.com/Ge11n7QCiMj5QyPvCc0H19   ಸಹಕಾರಿಯ ಅಧ್ಯಕ್ಷೆ ಪ್ರಫುಲ್ಲಾ ಕಾಮತ್‌ ಎಂ. 2023-24ನೇ ಸಾಲಿನ ಆಡಳಿತ ಮಂಡಳಿಯ ವರದಿ ಮಂಡಿಸಿ ಲಾಭಾಂಶ ಘೋಷಣೆ ಮಾಡಿದರು. ಉಪಾಧ್ಯಕ್ಷ ಗುರುರಾಜ್‌, ನಿರ್ದೇಶಕರಾದ ಎಂ.ಆರ್‌.ಕಾಮತ್‌, ಡಾ.ಜಯವಂತ ನಾಯಕ್‌, ಮೋಹನ್‌ ನಾಯಕ್‌, ಅನಿಲ್‌ ಕುಮಾರ್‌, ಮಹೇಶ್‌ ಸುವರ್ಣ, ವೃತ್ತಿಪರ ನಿರ್ದೇಶಕರಾದ ಭಾರತಿ ಜಿ.ಭಟ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಯು. ಮತ್ತು ಸಂಸ್ಥೆಯ ಸಿಬ್ಬಂದಿಗಳು, ಸದಸ್ಯರು ಹಾಜರಿದ್ದರು. ಎಂ.ಆರ್‌.ಕಾಮತ್‌ ಕಾರ್ಯಕ್ರಮ ನಿರ್ವಹಿಸಿದರು, ಭಾರತಿ ಜಿ.ಭಟ್‌ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಸದಸ್ಯರಿಗೆ ಶೇ.9 ಡಿವಿಡೆಂಡ್‌ ಘೋಷಣೆ, 10 ಮಂದಿ ನಾಟಿ ವೈದ್ಯರಿಗೆ ಗೌರವ, 30 ಮಕ್ಕಳಿಗೆ ವಿದ್ಯಾರ್ಥಿವೇತನ ಮೂಡುಬಿದಿರೆ: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ ಇದರ ಆರನೇ ವಾರ್ಷಿಕ ಮಹಾಸಭೆ ಭಾನುವಾರ ಸಂಸ್ಥೆಯ ಅಧ್ಯಕ್ಷ ಸುಧಾಕರ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಷ್ಟ್ರವನ್ನು ಕಾಯುವ ಯೋಧರ ಹಿತರಕ್ಷಣೆಗೆ ಹೆಚ್ಚು ಪ್ರಾಮುಖ್ಯತೆ ನೀಡುವ, ನಾವೆಲ್ಲರೂ ನೆಮ್ಮದಿಯಿಂದ ಇರಲು ಕಾರಣರಾಗಿರುವ ಭಾರತೀಯ ಸೇನೆಯ ಯೋಧರಿಗೆ ಗೌರವ ಸಲ್ಲಿಸುವ ಅಪೂರ್ವ ಕಾರ್ಯಕ್ರಮ ಮಹಾಸಭೆಯಲ್ಲಿ ನಡೆಯಿತು. https://chat.whatsapp.com/Ge11n7QCiMj5QyPvCc0H19 ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಸಭೆ ಉದ್ಘಾಟಿಸಿ ಆಶೀರ್ವಚನ ನೀಡಿದರು. ಪ್ರಾಮಾಣಿಕತೆ ಮತ್ತು ನಿಸ್ವಾರ್ಥ ಭಾವನೆಯಿಂದ ಸಂಸ್ಥೆಯ ಜೊತೆ ಕೈಜೋಡಿಸಿ ಸಂಸ್ಥೆಯ ಏಳಿಗೆಗೆ ಸದಸ್ಯರು ಸಹಕರಿಸಬೇಕು. ಮುಂದಿನ ದಿನಗಳಲ್ಲಿ ಕುವೆಟ್ಟು, ಮೂಡುಬಿದಿರೆ ಹಾಗೂ ಮಂಗಳೂರಿನಲ್ಲಿ ಹೊಸ ಶಾಖೆ ತೆರೆಯುವ ಇಂಗಿತವನ್ನೂ ಸ್ವಾಮೀಜಿ ವ್ಯಕ್ತಪಡಿಸಿದರು. ಅಧ್ಯಕ್ಷ ಸುಧಾಕರ್‌ ಮಾತನಾಡಿ, ಮುಂದಿನ ದಿನಗಳಲ್ಲಿ ಹೊಸ ಶಾಖೆ ತೆರೆಯುವ ವಿಷಯ ಪ್ರಸ್ತಾಪಿಸಿದರು. ಮುಂದಿನ ದಿನಗಳಲ್ಲಿ ಸ್ವಸಹಾಯ ಸಂಘಗಳ ಸಮಾವೇಶ ನಡೆಸುವ ಇರಾದೆಯನ್ನೂ ವ್ಯಕ್ತಪಡಿಸಿದರು.…

Read More

ಹಿರೇಕೆರೂರು: ಕೆಸಿಸಿ ಬ್ಯಾಂಕ್‌ನೊಂದಿಗೆ ಉತ್ತಮ ವ್ಯಾವಹಾರಿಕ ಸಂಬಂಧ ಇಟ್ಟುಕೊಂಡು 2022 -23ನೇ ಸಾಲಿಗೆ ಅತ್ಯುತ್ತಮ ಸಹಕಾರಿ ಸಂಘವಾಗಿ ಕಾರ್ಯನಿರ್ವಹಿಸಿದ ಪ್ರಯುಕ್ತ ಕೆಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಟಿಎಪಿಸಿಎಂಎಸ್‌ (ಹಿರೇಕೆರೂರು ತಾಲೂಕು ವ್ಯವಸಾಯ ಉತ್ಪನ್ನ ಸಹಕಾರಿ ಮಾರಾಟ ಸಂಘ) ಅಧ್ಯಕ್ಷ ಎಸ್.ಎಸ್ ಪಾಟೀಲ ಹಾಗೂ ಪ್ರಧಾನ ವ್ಯವಸ್ಥಾಪಕ ಬಿ.ಜಿ.ಬಣಕಾರ್ ಅವರನ್ನು ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More