Author: admin
ಬ್ರಹ್ಮಾವರ: ಇಲ್ಲಿನ ಬಾಂಧವ್ಯ ಸೌಹಾರ್ದ ಸಹಕಾರಿ ಸಂಘದ 2023 -2024ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಭಾನುವಾರ ಚಪ್ಟೇಗಾರ್ ಸಮುದಾಯ ಭವನ ಮಟಪಾಡಿ ರಸ್ತೆ ಬ್ರಹ್ಮಾವರದಲ್ಲಿ ಜರಗಿತು. https://chat.whatsapp.com/Ge11n7QCiMj5QyPvCc0H19 ಸಹಕಾರಿಯ ಅಧ್ಯಕ್ಷ ರಘುರಾಮ್ ನಾಯ್ಕ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸುಭಾಶ್ಚoದ್ರ ಸ್ವಾಗತಿಸಿದರು, ನಿರ್ದೇಶಕ ಉಲ್ಲಾಸ್ ನಾಯಕ್ ವಂದಿಸಿದರು. ಸಹಕಾರಿಯ ವ್ಯವಹಾರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಕ್ರಿಯಾಶೀಲ ಸದಸ್ಯರುಗಳನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ಪುನೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಉಚಿತ ದಂತ ತಪಾಸಣೆ, ಚಿಕಿತ್ಸಾ ಶಿಬಿರ ಉದ್ಘಾಟಿಸಿ ಹರೀಶ್ ಪಿ.ಡಿ ಅಭಿಪ್ರಾಯ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ೧೩ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಪ್ರಯುಕ್ತ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಪಡೀಲ್ ಬೈರಾಡಿಕೆರೆ ಹತ್ತಿರದ “ಆತ್ಮಶಕ್ತಿ ಸೌಧ”ದಲ್ಲಿ ಜರುಗಿತು. ಸಂಘದ ಸದಸ್ಯ ಹರೀಶ್ ಪಿ.ಡಿ ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಜಾಗೃತಿ ಮೂಡಿಸುವಲ್ಲಿ ಸಫಲತೆ ಕಂಡಿದೆ ಎಂದು ಅಭಿಪ್ರಾಯಪಟ್ಟರು. ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸಾಯನ್ಸ್ನ ದಂತವೈದ್ಯರಾದ ಡಾ.ಶಿಫಾಲಿ ಸಾಲಿಯಾನ್ ಮಾತನಾಡಿ, ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು ಮುಂತಾದ ಸೇವೆಗಳು ಲಭ್ಯವಿದ್ದು, ಸಂಘದ ಸದಸ್ಯರು ಇದರ ಸದುಪಯೋಗ ಪಡೆಯುವಂತೆ ವಿನಂತಿಸಿದರು. ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್…
ಸಾಧಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಸ್ತಾಂತರ, ಸದಸ್ಯರಿಗೆ ಶೇ.6 ಡಿವಿಡೆಂಡ್ ಮಂಗಳೂರು: ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿಯಮಿತ ಕಾವೂರು ಇದರ 4ನೇ ವಾರ್ಷಿಕ ಮಹಾಸಭೆ ಕಾವೂರು ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಭಾನುವಾರ ನಡೆಯಿತು. ಸಹಕಾರಿಯ ಸದಸ್ಯರಾದ ಪದ್ಮನಾಭ ಕಾರ್ನಾಡು, ಸುಧಾಕರ ಕರ್ಕೇರ, ಕೃಷ್ಣ ಎನ್.ಪೂಜಾರಿ, ಪ್ರಮೀಳಾ ಈಶ್ವರ್ , ಶಿಲ್ಪಾಕುಮಾರಿ ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ್ ಕುಮಾರ್ ಮಾತನಾಡಿ, ನಾಲ್ಕು ವರ್ಷಗಳಲ್ಲಿ ಕಾವೂರು ಹಾಗೂ ಕೋಡಿಕಲ್ನಲ್ಲಿ ಎರಡು ಶಾಖೆಗಳನ್ನು ತೆರೆಯಲಾಗಿದೆ, ಸಹಕಾರಿಯು ಪ್ರತಿ ವರ್ಷದಲ್ಲಿ ಲಾಭದಲ್ಲಿದ್ದು ಈ ವರ್ಷ ರೂ. 3,65,714.70 ಲಾಭ ಗಳಿಸಿ ಸದಸ್ಯರಿಗೆ ಶೇ.6 ಡಿವಿಡೆಂಡ್ ಘೋಷಿಸಲಾಗಿದೆ ಎಂದು ತಿಳಿಸಿದರು. ಸಹಕಾರಿಯ ಶಾಖೆಗಳಲ್ಲಿ ಈ ಸ್ಟ್ಯಾಂಪಿಂಗ್, ಆರ್ಟಿಜಿಎಸ್, ನೆಫ್ಟ್, ಆರ್.ಟಿ.ಸಿ ,ಮಿನಿ ಎಟಿಎಂ ಸೌಲಭ್ಯ ಹಾಗೂ ಕಡಿಮೆ ಬಡ್ಡಿಯಲ್ಲಿ ಚಿನ್ನಾಭರಣ ಸಾಲ ನೀಡಲಾಗುತ್ತಿದ್ದು ಸದಸ್ಯರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಹೇಳಿದರು. https://chat.whatsapp.com/Ge11n7QCiMj5QyPvCc0H19 ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ…
ಬಳ್ಳಾರಿ: ಇಲ್ಲಿನ ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಎಂಟನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 21ರಂದು ಬೆಳಗ್ಗೆ 11ಕ್ಕೆ ಬಳ್ಳಾರಿಯ ಸಂಗನಕಲ್ಲು ರಸ್ತೆಯ ಕೆಪಿಟಿಸಿಎಲ್ ಆವರಣದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘ ಸಮುದಾಯ ಭವನದಲ್ಲಿ ನಡೆಯಲಿದೆ. ಅದೇ ದಿನ ಬೆಳಗ್ಗೆ 9ರಿಂದ 10.30ರ ತನಕ ಕಚೇರಿಯ ಸ್ವಂತ ಕಟ್ಟಡದಲ್ಲಿ ಪೂಜೆ ಹಮ್ಮಿಕೊಳ್ಳಲಾಗಿದೆ. 2017ರಲ್ಲಿ ಆರಂಭವಾದ ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘವು ಕೇವಲ 8 ವರ್ಷಗಳ ಅವದಿಯಲ್ಲಿ ಸಹಕಾರ ಕ್ಷೇತ್ರದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿದೆ. ಪ್ರಾರಂಭದ ದಿನಗಳಲ್ಲಿ ರೂ.42 ಲಕ್ಷ ಷೇರು ಹಣದೊಂದಿಗೆ ಪ್ರಾರಂಭವಾದ ಈ ಸಹಕಾರಿ ಸಂಘವು ಸದಸ್ಯರ ಷೇರು ಬಂಡವಾಳ, ಠೇವಣಿ, ನಿರಂತರ ಪಿಗ್ಮಿ ಯೋಜನೆ, ಸಿ.ಆರ್.ಡಿ ಯೋಜನೆ, ಚಾಲ್ತಿ ಖಾತೆಗಳ ಮೂಲಕ ಬಂಡವಾಳ ದೃಢೀಕರಿಸಿ ದುಡಿಯುವ ಬಂಡವಾಳದ ಆರ್ಥಿಕ ಬಲವನ್ನು ಹೆಚ್ಚಿಸಿಕೊಂಡು ಪತ್ತಿನ ವ್ಯಾಪಾರ ವಹಿವಾಟಿನ ಮೂಲಕ ವೃತ್ತಿಪರತೆಯಿಂದ ಮುನ್ನೆಡೆಸುತ್ತ ಬಂದಿದೆ. ತನ್ನ ಕಾರ್ಯಕ್ಷೇತ್ರದ ವ್ಯಾಪ್ತಿಯ…
ಮಂಗಳೂರು: ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ನಿಯಮಿತ ಇದರ 5ನೇ ಸರ್ವ ಸದಸ್ಯರ ಮಹಾಸಭೆ ಮಂಗಳೂರು ನಗರದ ಮಣ್ಣಗುಡ್ಡೆಯಲ್ಲಿರುವ ರೋಟರಿ ಬಾಲಭವನದಲ್ಲಿ ಭಾನುವಾರ ಜರಗಿತು.https://chat.whatsapp.com/Ge11n7QCiMj5QyPvCc0H19 ಸಭೆಯಲ್ಲಿ ಅಧ್ಯಕ್ಷ ರವೀಂದ್ರನಾಥ್ ಶೆಟ್ಟಿ ಮತ್ತು ನಿರ್ದೇಶಕರಾದ ಕೆ.ಟಿ ರೈ, ಟಿ.ವಿ ರೈ, ನರೇಂದ್ರನಾಥ್ ಕಾಮತ್, ಶಾಲಿನಿ ಶೆಟ್ಟಿ, ಶಾಮಸುಂದರ ರಾವ್, ಪ್ರೇಮನಾಥ್, ಜೆ.ವಿ ಶೆಟ್ಟಿ ಸದಾಶಿವ ವಿ.ಎಸ್, ಯೋಗೀಶ್ ಭಟ್ ಉಪಸ್ಥಿತರಿದ್ದರು. ಸಭೆಯಲ್ಲಿ ಸದಸ್ಯರಿಗೆ 2023 -2024ನೇ ಸಾಲಿನ ಶೇಕಡಾ 10 ಲಾಭಾಂಶ ಘೋಷಣೆ ಮಾಡಲಾಯಿತು.
ಭಾರತ ಸಹಕಾರಿ ಒಕ್ಕೂಟದಿಂದ 2023-24ರ ಅತ್ಯುತ್ತಮ ಸಹಕಾರಿ ಸಂಘವೆಂದು ಖ್ಯಾತಿ ಸಂಘದ ಅಧ್ಯಕ್ಷ ಜಾಕೀರ್ ಮೋಹಿಯುದ್ದೀನ್ ಮಾಹಿತಿ ರಾಯಚೂರು: ಮಾನ್ವಿ ಪಟ್ಟಣದ ಶಿವಪ್ರಿಯ ಪತ್ತಿನ ಸೌಹಾರ್ದ ಸಹಕಾರಿ ಸಂಘವು ವರದಿ ವರ್ಷದಲ್ಲಿ 70.60 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಾಕೀರ್ ಮೋಹಿಯುದ್ದೀನ್ ಹೇಳಿದರು. ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ 10ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, 2023-24ನೇ ಸಾಲಿನಲ್ಲಿ ಶಿವಪ್ರಿಯ ಪತ್ತಿನ ಸೌಹಾರ್ದ ಸಹಕಾರಿ ಸಂಘವು ಉತ್ತಮ ಸಹಕಾರಿ ಸೇವೆಗಾಗಿ ಭಾರತ ಸಹಕಾರಿ ಒಕ್ಕೂಟದಿಂದ ಅತ್ಯುತ್ತಮ ಸಹಕಾರಿ ಸಂಘವೆಂದು ಖ್ಯಾತಿ ಪಡೆದಿದೆ ಎಂದು ತಿಳಿಸಿದರು. 2014ರಲ್ಲಿ ಆರಂಭಗೊಂಡ ಶಿವಪ್ರಿಯ ಪತ್ತಿನ ಸೌಹಾರ್ದ ಸಹಕಾರಿ ಸಂಘವು 2015-16ನೇ ಸಾಲಿನಲ್ಲಿ ಸಂಪೂರ್ಣ ರಾಯಚೂರು ಜಿಲ್ಲೆಯಲ್ಲಿ ಕಾರ್ಯ ಆರಂಭಿಸಿ, 2018-19ರ ವೇಳೆಗೆ ರಾಯಚೂರು, ಬಳ್ಳಾರಿ, ಕೊಪ್ಪಳ, ಯಾದಗಿರಿ, ಕಲಬುರಗಿ ಜಿಲ್ಲೆಯನ್ನೊಳಗೊಂಡ ಕಾರ್ಯವ್ಯಾಪ್ತಿಯಲ್ಲಿ ಕೆಲಸ ವಿಸ್ತರಿಸಿಕೊಂಡಿದೆ. ಉತ್ತಮ ಸಹಕಾರಿ ಸೇವೆಗಾಗಿ ಭಾರತ ಸಹಕಾರಿ ಒಕ್ಕೂಟದಿಂದ ಉತ್ತಮ ಸಹಕಾರಿ…
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ನಿರ್ದೇಶಕ ಮಂಜುನಾಥ್ ಎಸ್.ಕೆ. ಅಭಿಪ್ರಾಯ ಬಡ ಕುಟುಂಬದ ಭವಾನಿ ಜಿ.ನಾಯಕ್ ಕುಟುಂಬಕ್ಕೆ ನಿರ್ಮಿಸಿದ ಮನೆ ಹಸ್ತಾಂತರ ಉಡುಪಿ: ಉಡುಪಿ ಜಿಲ್ಲೆಗೆ ಕೋಡಿ ಕನ್ಯಾಣದ ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ಸಿಂಧೂರವಿದ್ದಂತೆ. ಸಹಕಾರಿ ಕ್ಷೇತ್ರದಲ್ಲಿ ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ನಿರ್ದೇಶಕ ಮಂಜುನಾಥ್ ಎಸ್.ಕೆ. ಹೇಳಿದರು. ಕೋಡಿ ಕನ್ಯಾನದ ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ತಥಾಸ್ತು ಎಂಬ ಯೋಜನೆಯಡಿ ಬಡ ಕುಟುಂಬದ ಭವಾನಿ ಜಿ.ನಾಯಕ್ ಅವರಿಗೆ ನಿರ್ಮಿಸಿಕೊಟ್ಟ ಹೊಸ ಮನೆಯನ್ನು ಶನಿವಾರ ಲೋಕಾರ್ಪಣೆಗೊಳಿಸಿ ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 ಗ್ರಾಮೀಣ ಭಾಗದಲ್ಲಿ ಸಹಕಾರಿ ರಂಗವನ್ನು ಸ್ಥಾಪಿಸಿ ಬಡವರ ಕಣ್ಣೀರೊರೆಸುವ ಕಾಯಕ ಅತ್ಯಂತ ಶ್ರೇಷ್ಠವಾದ ಕಾರ್ಯ. ಸಹಕಾರಿ ರಂಗ ವ್ಯವಹಾರಕ್ಕೆ ಸೀಮಿತಗೊಳ್ಳದೆ ಅಶಕ್ತರಿಗೆ ಮಿಡಿಯುತ್ತಿದೆ ಎಂದರೆ ಈ ಕ್ಷೇತ್ರ ಬದಲಾವಣೆಯ ಪರ್ವವನ್ನು…
ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಶ್ಲಾಘನೆ ಕೋಟೆಕಾರು ಬೀರಿಯಲ್ಲಿ ಕೆ.ಸುಬ್ಬಣ್ಣಯ್ಯ ಸ್ಮಾರಕ ಸಹಕಾರ ಸೌಧ ಲೋಕಾರ್ಪಣೆ ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು ಪ್ರಸಕ್ತ ಏಳು ಶಾಖೆಗಳನ್ನು ಹೊಂದಿದ್ದು 173 ಕೋಟಿ ರೂ. ಸಾಲ ನೀಡಿ 2.45 ಕೋಟಿ ರೂಪಾಯಿಗಳ ಪಾಲು ಬಂಡವಾಳ ಹೊಂದಿ ಷೇರುದಾರರಿಗೆ ಶೇ.25 ಡಿವಿಡೆಂಡ್ ನೀಡುತ್ತಿದೆ. ಈ ಮೂಲಕ ಸಂಘವು ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಕೋಟೆಕಾರು ಗ್ರಾಮದ ಬೀರಿಯಲ್ಲಿ ಕೆ.ಸುಬ್ಬಣ್ಣಯ್ಯ ಸ್ಮಾರಕ ಸಹಕಾರ ಸೌಧವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು ವಿದ್ಯಾರ್ಥಿಗಳು, ಕೃಷಿಕರಿಗೆ ಪ್ರೋತ್ಸಾಹ ನೀಡಿ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹಳಷ್ಟು ದೊಡ್ಡ ಹೆಸರು ಮಾಡಿರುವ ಜಿಲ್ಲೆ. ದೇಶದಲ್ಲೇ…
ಐದನೇ ವಾರ್ಷಿಕ ಮಹಾಸಭೆಯಲ್ಲಿ 25% ಡಿವಿಡೆಂಡ್ ಘೋಷಣೆ ಮಂಗಳೂರು: ಶ್ರೀಶಾ ಕೋ ಆಪರೇಟಿವ್ ಸೊಸೈಟಿಯ ಐದನೇ ವಾರ್ಷಿಕ ಮಹಾಸಭೆ ಭಾನುವಾರ ಶ್ರೀನಿವಾಸ ಹೋಟೆಲ್ನ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಶಾ ಸೊಸೈಟಿಯ ಅಧ್ಯಕ್ಷ ಶ್ರೀ ಎಂ.ಎಸ್.ಗುರುರಾಜ್, ಶ್ರೀಶಾ ಸೊಸೈಟಿ ಆರಂಭವಾಗಿ ಕೇವಲ ಐದು ವರ್ಷಗಳಲ್ಲೇ ಐದು ಸುಸಜ್ಜಿತ ಶಾಖೆಗಳನ್ನು ತೆರೆದಿದೆ. 2023-24ನೇ ಸಾಲಿನಲ್ಲಿ ಅಭೂತಪೂರ್ವ ವ್ಯವಹಾರ ನಡೆಸಿ 123 ಲಕ್ಷ ರೂ. ನಿವ್ವಳ ಲಾಭ ಗಳಿಸಿ ಇಂದು ಸದಸ್ಯರಿಗೆ ನೀಡುತ್ತಿರುವುದು 25% ಡಿವಿಡೆಂಡ್ ತಮಗೆ ಅತೀವ ಸಂತಸ ತಂದಿದೆ. ಲಾಭ ಗಳಿಕೆಯೊಂದೇ ಧ್ಯೇಯವಾಗಿರದೆ ಗಳಿಸಿದ ಲಾಭಾಂಶದಲ್ಲಿ ದೊಡ್ಡ ಪಾಲನ್ನು ಮರಳಿ ಸಮಾಜ ಸೇವಾ ಕಾರ್ಯಗಳಿಗೆ ವಿನಿಯೋಗಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಶ್ರೀಶಾ ಸೊಸೈಟಿಯು ಐದು ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ 10 ದೊಡ್ಡ ಮಟ್ಟದ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಅವುಗಳಲ್ಲಿ ಹೆಚ್ಚಿನವುಗಳನ್ನು ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ಮತ್ತು ಅಲ್ಲಿನ ವಿದ್ಯಾರ್ಥಿಗಳಿಗೆ…
ಮಂಗಳೂರು: ಸಹಕಾರಿ ಬ್ಯಾಂಕಿಂಗ್ ರಂಗದಲ್ಲಿ 110 ವರ್ಷಗಳ ಸಾರ್ಥಕ ಸೇವೆ ಪೂರೈಸಿ ಜನಸಾಮಾನ್ಯರ ಶಕ್ತಿಯಾಗಿ ಬೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್ ಸಿಡಿಸಿಸಿ ಬ್ಯಾಂಕ್)ಗೆ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ (ಎಪಿವೈ ಪ್ರಶಸ್ತಿ) ಹಾಗೂ ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಶುಕ್ರವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ ಹಾಗೂ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿಪ್ರಕಾಶ್ ಅವರಿಂದ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ|ಎಂ.ಎನ್ ರಾಜೇಂದ್ರಕುಮಾರ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್ ಸ್ವೀಕರಿಸಿದರು. ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕೋರಿಕೆಯಂತೆ ಎಸ್ಸಿಡಿಸಿಸಿ ಬ್ಯಾಂಕ್ 2019ರ ಜನವರಿ -11ರಂದು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದು , ಬ್ಯಾಂಕಿನ ಪ್ರತಿ ಶಾಖೆಗಳಲ್ಲಿ ಅಟಲ್ ಪಿಂಚಣಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತಂದು ಚಂದಾದಾರರನ್ನು ನೊಂದಾಯಿಸುವ…
