Author: admin
ಐದನೇ ವಾರ್ಷಿಕ ಮಹಾಸಭೆಯಲ್ಲಿ 25% ಡಿವಿಡೆಂಡ್ ಘೋಷಣೆ ಮಂಗಳೂರು: ಶ್ರೀಶಾ ಕೋ ಆಪರೇಟಿವ್ ಸೊಸೈಟಿಯ ಐದನೇ ವಾರ್ಷಿಕ ಮಹಾಸಭೆ ಭಾನುವಾರ ಶ್ರೀನಿವಾಸ ಹೋಟೆಲ್ನ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಶಾ ಸೊಸೈಟಿಯ ಅಧ್ಯಕ್ಷ ಶ್ರೀ ಎಂ.ಎಸ್.ಗುರುರಾಜ್, ಶ್ರೀಶಾ ಸೊಸೈಟಿ ಆರಂಭವಾಗಿ ಕೇವಲ ಐದು ವರ್ಷಗಳಲ್ಲೇ ಐದು ಸುಸಜ್ಜಿತ ಶಾಖೆಗಳನ್ನು ತೆರೆದಿದೆ. 2023-24ನೇ ಸಾಲಿನಲ್ಲಿ ಅಭೂತಪೂರ್ವ ವ್ಯವಹಾರ ನಡೆಸಿ 123 ಲಕ್ಷ ರೂ. ನಿವ್ವಳ ಲಾಭ ಗಳಿಸಿ ಇಂದು ಸದಸ್ಯರಿಗೆ ನೀಡುತ್ತಿರುವುದು 25% ಡಿವಿಡೆಂಡ್ ತಮಗೆ ಅತೀವ ಸಂತಸ ತಂದಿದೆ. ಲಾಭ ಗಳಿಕೆಯೊಂದೇ ಧ್ಯೇಯವಾಗಿರದೆ ಗಳಿಸಿದ ಲಾಭಾಂಶದಲ್ಲಿ ದೊಡ್ಡ ಪಾಲನ್ನು ಮರಳಿ ಸಮಾಜ ಸೇವಾ ಕಾರ್ಯಗಳಿಗೆ ವಿನಿಯೋಗಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಶ್ರೀಶಾ ಸೊಸೈಟಿಯು ಐದು ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ 10 ದೊಡ್ಡ ಮಟ್ಟದ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಅವುಗಳಲ್ಲಿ ಹೆಚ್ಚಿನವುಗಳನ್ನು ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ಮತ್ತು ಅಲ್ಲಿನ ವಿದ್ಯಾರ್ಥಿಗಳಿಗೆ…
ಮಂಗಳೂರು: ಸಹಕಾರಿ ಬ್ಯಾಂಕಿಂಗ್ ರಂಗದಲ್ಲಿ 110 ವರ್ಷಗಳ ಸಾರ್ಥಕ ಸೇವೆ ಪೂರೈಸಿ ಜನಸಾಮಾನ್ಯರ ಶಕ್ತಿಯಾಗಿ ಬೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್ ಸಿಡಿಸಿಸಿ ಬ್ಯಾಂಕ್)ಗೆ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ (ಎಪಿವೈ ಪ್ರಶಸ್ತಿ) ಹಾಗೂ ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಶುಕ್ರವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ ಹಾಗೂ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿಪ್ರಕಾಶ್ ಅವರಿಂದ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ|ಎಂ.ಎನ್ ರಾಜೇಂದ್ರಕುಮಾರ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್ ಸ್ವೀಕರಿಸಿದರು. ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕೋರಿಕೆಯಂತೆ ಎಸ್ಸಿಡಿಸಿಸಿ ಬ್ಯಾಂಕ್ 2019ರ ಜನವರಿ -11ರಂದು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದು , ಬ್ಯಾಂಕಿನ ಪ್ರತಿ ಶಾಖೆಗಳಲ್ಲಿ ಅಟಲ್ ಪಿಂಚಣಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತಂದು ಚಂದಾದಾರರನ್ನು ನೊಂದಾಯಿಸುವ…
ಭಾರತ ಸಂವಿಧಾನ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ.ಎಸ್.ಆರ್.ಹರೀಶ್ ಆಚಾರ್ಯ ಅಭಿಮತ ಮಂಗಳೂರು: ಸಹಕಾರ ಕ್ಷೇತ್ರ ಎಂದರೆ ಸಂವಿಧಾನದ ತೊಟ್ಟಿಲು. ಇಲ್ಲಿ ರಚನಾತ್ಮಕ ದೃಷ್ಟಿಕೋನದ ಸಾಮೂಹಿಕ ಜವಾಬ್ದಾರಿಯ ಮೂಲಕ ಸೊಸೈಟಿಯ ಚಟುವಟಿಕೆಗಳು ನಡೆಯುತ್ತಿದ್ದು ಎಲ್ಲರನ್ನೂ ಒಳಗೊಂಡು ಸಹಕಾರ ಸಂಘಗಳ ಸಂವಿಧಾನ ರಚನೆಯಾಗಿರುತ್ತದೆ ಎಂದು ಸ್ಪಂದನ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್.ಆರ್.ಹರೀಶ್ ಆಚಾರ್ಯ ಹೇಳಿದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಶನಿವಾರ ಭಾರತ ಸಂವಿಧಾನದ 75ನೇ ವರುಷದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಭಾರತ ಸಂವಿಧಾನ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಹಕಾರ ಕ್ಷೇತ್ರ ಶೇ.1, 2ರಷ್ಟಾದರೂ ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುತ್ತದೆ. ಸಹಕಾರ ಸಂಘಗಳ ಬೈಲಾಗಳು ಸಂವಿಧಾನದ ಆಶಯಗಳಿಗೆ ಪೂರಕವಾಗಿಯೇ ರಚನೆಯಾಗಿರುತ್ತದೆ ಎಂದು ಬಣ್ಣಿಸಿದರು. ಸಂವಿಧಾನದ ಬಗ್ಗೆ ಉಪನ್ಯಾಸ ನೀಡಲಿರುವ ಡಾ.ಪಿ.ಅನಂತಕೃಷ್ಣ ಭಟ್ ಅವರು ಭಾರತದ ಸಂವಿಧಾನದ ಚಲಿಸುವ ಸಾಧನ ಎಂದು ಬಣ್ಣಸಿದ ಡಾ.ಎಸ್.ಆರ್.ಹರೀಶ್ ಆಚಾರ್ಯ ಅವರು, 75ರ ಹರೆಯದಲ್ಲೂ ಹಲವಾರು ಕಡೆ ಸಂವಿಧಾನದ ಬಗ್ಗೆ ಉಪನ್ಯಾಸ…
ಹಳೆಯಂಗಡಿ: ಇಲ್ಲಿನ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ಮಹಾಸಭೆ ಹಳೆಯಂಗಡಿಯ ಹರಿ ಓಂ ಸಭಾಭವನದಲ್ಲಿ ಇತ್ತೀಚೆಗೆ ಸೊಸೈಟಿಯ ಅಧ್ಯಕ್ಷ ಎಚ್.ವಸಂತ್ ಬೆರ್ನಾರ್ಡ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ವರದಿ ವರ್ಷದಲ್ಲಿ ಸೊಸೈಟಿಯು ರೂ. 19.14 ಲಕ್ಷ ಲಾಭಾಂಶ ಗಳಿಸಿ, ಸದಸ್ಯರಿಗೆ 6% ಪಾಲು ಮುನಾಫೆಯನ್ನು ಘೋಷಿಸಲಾಯಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಶಾಖೆಯನ್ನು ಹೊಂದಿರುವ ಹಳೆಯಂಗಡಿ ಕೋ ಆಪರೇಟಿವ್ ಸೊಸೈಟಿಯು ತನ್ನ ಮೂರು ವರ್ಷದ ಅವಧಿಯಲ್ಲಿ ಉತ್ತಮ ಸಾಧನೆಯನ್ನು ಮಾಡಿದೆ. ಮಾರ್ಚ್ ಅಂತ್ಯಕ್ಕೆ ರೂ. 21.22 ಕೋಟಿ ಠೇವಣಿ, ರೂ. 85.76 ಲಕ್ಷ ಪಾಲು ಬಂಡವಾಳ, ರೂ. 18.21 ಕೋಟಿ ಸಾಲ ನೀಡಿದ್ದು, ಆಡಿಟ್ ವರ್ಗಿಕರಣದಲ್ಲಿ ‘ಎ’ ಎಂದು ಘೋಷಿಸಲಾಗಿದೆ. ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡಿದ “ವಿಶಿಷ್ಟ ಸಾಧನಾ ಪ್ರಶಸ್ತಿ”ಯನ್ನು ಪಡೆದುಕೊಂಡಿದೆ. ಸೊಸೈಟಿಯು 15 ಸಿಬ್ಬಂದಿಗಳನ್ನು ಹೊಂದಿದ್ದು, 1903 ಸದಸ್ಯರನ್ನು ಹೊಂದಿದೆ ಎಂದು ಅಧ್ಯಕ್ಷ ವಸಂತ್ ಬೆರ್ನಾರ್ಡ್ ತಿಳಿಸಿದರು. ಇದೇ…
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿ ವಿತರಣೆ
ಶಿರ್ವ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ ಮಾನಸ ಶಾಲೆಯ ಅಧ್ಯಕ್ಷರಿಗೆ ದಿನಸಿ ವಸ್ತುಗಳನ್ನು ಹಸ್ತಾಂತರಿಸಿ ಮಾತನಾಡಿ, ಇಂತಹ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ಮೂಲ ಪ್ರೇರಣೆ ಮತ್ತು ಮುಖ್ಯ ಉದ್ದೇಶ ದಿ.ಫಾ.ವಲೇರಿಯನ್ ಮೆಂಡೋನ್ಸಾ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಮಾಜಮುಖಿ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಇವರ ಆಗಲುವಿಕೆ ನನಗೆ ತುಂಬಲಾಗದ ನಷ್ಟ ಮಾಡಿದೆ. ಅದರ ಸಲುವಾಗಿ ಈ ಕಾರ್ಯಕ್ರಮದ ಎಲ್ಲ ಶ್ರೇಯಸ್ಸು ದಿ.ಫಾ.ವಲೇರಿಯನ್ ಮೆಂಡೋನ್ಸಾ ಇವರಿಗೆ ಅರ್ಪಿಸುತ್ತೇನೆ. ಅವರಿಗೆ ಗೌರವ ಸಮರ್ಪಣೆಯಿಂದ ನಾವು ಇಂದು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸ್ಥಳೀಯ ಹೋಲಿಕ್ರಾಸ್ ದೇವಾಲಯ ಪಾಂಬೂರು ಇಲ್ಲಿಯ ಪ್ರಧಾನ ಧರ್ಮಗುರುಗಳಾದ ಫಾ.ಹೆನ್ರಿ ಮಸ್ಕರೇನ್ಹಸ್…
ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಿಂದ ತಥಾಸ್ತು ಯೋಜನೆ ಸೆ.14ರಂದು ಹಸ್ತಾಂತರ ಮಾನವೀಯ ಕೈಂಕರ್ಯವಾಗಿ ಸಂಸ್ಥೆಯ ಬಡ ಗ್ರಾಹಕಿಗೆ ಬದುಕಿಗೊಂದು ಸೂರು ಯೋಜನೆ ಉಡುಪಿ: ಠೇವಣಿ ಸಂಗ್ರಹ, ಸಾಲ ವಿತರಣೆ ಇವೇ ಮೊದಲಾದ ಆರ್ಥಿಕ ವಹಿವಾಟುಗಳಲ್ಲೇ ವ್ಯಸ್ತವಾಗುತ್ತಿರುವ ಕೋಆಪರೇಟಿವ್ ಸೊಸೈಟಿಗಳು ವಿಭಿನ್ನ ಯೋಜನೆ, ಯೋಚನೆಗಳ ಮೂಲಕ ಮಾನವೀಯ ಕಾರ್ಯವನ್ನೂ ಮಾಡಬಲ್ಲವು ಎಂಬುದಕ್ಕೆ ಉಡುಪಿ ಜಿಲ್ಲೆಯ ಕೋಡಿ ಕನ್ಯಾಣದ ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಉತ್ತಮ ನಿದರ್ಶನ ನೀಡಿದೆ. ತಮ್ಮ ಸಂಸ್ಥೆಯ ಬಡ ಗ್ರಾಹಕಿಯೊಬ್ಬರಿಗೆ ವಿವಿಧ ಸಂಘ-ಸಂಸ್ಥೆಗಳು ಹಾಗೂ ದಾನಿಗಳನ್ನು ಸೇರಿಸಿಕೊಂಡು ಸುಂದರವಾದ ಮನೆಯೊಂದನ್ನು ನಿರ್ಮಿಸಿಕೊಟ್ಟಿದೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ತನ್ನ ಕ್ರಿಯಾಶೀಲ ವ್ಯವಸ್ಥಾಪನೆ, ದಕ್ಷ ಆಡಳಿತ ನಿರ್ವಹಣೆಯಿಂದ ಹೆಸರುವಾಸಿಯಾಗಿದೆ. ಜನಪರ ಕಾರ್ಯಚಟುವಟಿಕೆ, ಸಮಾಜಮುಖಿ ಕೈಂಕರ್ಯದಲ್ಲಿ ಗ್ರಾಹಕರ ಸಂಕಷ್ಟಗಳಿಗೆ ಧ್ವನಿಯಾಗಿ ಸ್ಪಂದಿಸಿದೆ. ಇದೇ ಕಾರ್ಯದಲ್ಲಿ ಮುಂದುವರಿದು ಸಂಸ್ಥೆಯ ಗ್ರಾಹಕಿ ಇಳಿ ವಯಸ್ಸಿನ ಭವಾನಿ ಜಿ.ನಾಯ್ಕ್ ಅವರ ಮನೆ ಸೋರುತ್ತಿರುವುದನ್ನು ಮನಗಂಡು ಅವರ ಮನೆಗೆ…
ಎಸ್.ಕೆ ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋಆಪರೇಟಿವ್ ಸೊಸೈಟಿಯಿಂದ ಸ್ನೇಹ ಭಾರತಿ ವಿದ್ಯಾಸಂಸ್ಥೆಯ “ನಮ್ಮ ಹಿರಿಯರ ಮನೆಗೆ” ದಿನಬಳಕೆ ವಸ್ತುಗಳ ಹಸ್ತಾಂತರ
ಮಂಗಳೂರು: ಎಸ್.ಕೆ.ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋಆಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ವಜ್ರಮಹೋತ್ಸವ ಸಂಭ್ರಮಾಚರಣೆ 2024ರ ಪ್ರಯುಕ್ತ ಮಂಗಳವಾರ ಬಂಟ್ವಾಳ ತಾಲೂಕಿನ ಗುಡ್ಡೆ ಅಂಗಡಿ, ಅರಳದ ಸ್ನೇಹ ಭಾರತಿ ವಿದ್ಯಾಸಂಸ್ಥೆಯ “ನಮ್ಮ ಹಿರಿಯರ ಮನೆ”, ವೃದ್ಧಾಶ್ರಮಕ್ಕೆ ಭೇಟಿ ನೀಡಿ 60 ವರ್ಷ ದಾಟಿದ ವೃದ್ದರಿಗೆ ನಮ್ಮ ಸಂಸ್ಥೆಯ ವತಿಯಿಂದ 50 ಬೆಡ್ಶೀಟ್ ನೀಡಲಾಯಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಸಂಸ್ಥೆಯ ನಿರ್ದೇಶಕರಾದ ವೈ.ವಿ.ವಿಶ್ವಜ್ಞಮೂರ್ತಿ, ರೋಹಿಣಿ ಎಂ.ಪಿ, ಯು.ರಮೇಶ್ ರಾವ್ ಮತ್ತು ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಹಾಗೂ ಸಿಬ್ಬಂದಿ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು. ಸ್ನೇಹಭಾರತಿಯ “ನಮ್ಮ ಹಿರಿಯರ ಮನೆ” ಆಶ್ರಮದ ನಿರ್ವಾಹಕರಾದ ರಾಮೇಗೌಡ ವಿಜಾಪುರ ಸಂಸ್ಥೆಗೆ ಶುಭ ಹಾರೈಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 1.59 ಕೋಟಿ ರೂ. ಲಾಭ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಹೇಳಿಕೆ ಉಳ್ಳಾಲ: ಕೋಟೆಕಾರು ಗ್ರಾಮದ ಬೀರಿಯಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷ ಕೆ.ಸುಬ್ಬಣ್ಣಯ್ಯ ಹೆಸರಲ್ಲಿ ನಿರ್ಮಿಸಲಾಗಿರುವ ಕೆ.ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧ ಸೆ.15ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೋಟೆಕಾರು ವ್ಯವಸಾಯ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಸಭಾಂಗಣ, ಸಂಸದ ಕ್ಯಾ.ಬ್ರಿಜೇಶ್ ಚೌಟ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಬಿ.ಎಂ.ಫಾರೂಕ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ,…
2023-24ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಶೇ.16 ಡಿವಿಡೆಂಡ್ ಘೋಷಣೆ ಬಂಟ್ವಾಳ: ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಬಿ.ಸಿ.ರೋಡ್ನ “ಸ್ಪರ್ಶಾ ಕಲಾಮಂದಿರ”ದಲ್ಲಿ ಇತ್ತೀಚೆಗೆ ಸಂಘದ ಅಧ್ಯಕ್ಷ ಜೀವನ್ ಲೊಯ್ಡ್ ಪಿಂಟೊ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 2023-24ನೇ ಸಾಲಿನ ಆರ್ಥಿಕ ವರ್ಷ ರೂ. 2.10 ಕೋಟಿ ಲಾಭ ಗಳಿಸಿದ್ದು, ಸದಸ್ಯರಿಗೆ ಶೇಕಡಾ 16 ಡಿವಿಡೆಂಡ್ ಘೋಷಣೆ ಮಾಡಲಾಯಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK 27ನೇ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರನ್ನು ಸ್ವಾಗತಿಸಿ ಮಾತನಾಡಿದ ಅಧ್ಯಕ್ಷ ಜೀವನ್ ಲೋಯ್ಡ್ ಪಿಂಟೊ, ಸಂಘದ ಪ್ರಗತಿಯ ಅಂಕಿ ಅಂಶಗಳನ್ನು, ಮುಂದಿನ ಯೋಜನೆಗಳನ್ನು ಹಾಗೂ ಸದ್ರಿ ಆಡಳಿತ ಮಂಡಳಿಯ ಕೊನೆಯ ವಾರ್ಷಿಕ ಸಭೆಯ ಬಗ್ಗೆ ಪ್ರಸ್ತಾಪಿಸಿ, ಕಳೆದ ಐದು ವರ್ಷಗಳ ಆಡಳಿತ ಅವಧಿಯಲ್ಲಿ ಠೇವಣಿ ಮತ್ತು ಸಾಲಗಳ ವಿಭಾಗದಲ್ಲಿ ಸಂಘವು ಸಾಧಿಸಿದ ಪ್ರಗತಿಯನ್ನು ಸಭೆಯ ಮುಂದಿಟ್ಟು, ಸಂಘವನ್ನು ಬೆಳೆಸಲು ಸಹಕರಿಸಿದ ಸದಸ್ಯರಿಗೆ ಕೃತಜ್ಞತೆ ಅರ್ಪಿಸಿದರು. ಸಂಘದ ದೊಡ್ಡ ಕನಸಾಗಿರುವ ಪ್ರಧಾನ ಕಛೇರಿ ಹಾಗೂ ಬಿ.ಸಿ.ರೋಡ್ ಶಾಖೆಯ…
ಬಂಟ್ವಾಳ: ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಇದರ ಪ್ರಧಾನ ಕಛೇರಿ ಹಾಗೂ ಬಿ.ಸಿ ರೋಡ್ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ಕೈಕಂಬ ಬಿ.ಸಿರೋಡ್ ಬಳಿ ಇರುವ ಸಂಘದ ನೂತನ ನಿವೇಶನದಲ್ಲಿ ಶನಿವಾರ ನಡೆಯಿತು. ಮೊಡಂಕಾಪು ವಲಯದ ಧರ್ಮಗುರು ವಂ|ಫಾ। ವಲೇರಿಯನ್ ಡಿಸೋಜ ಆಶೀರ್ವಚನ ನೆರವೇರಿಸುವ ಮೂಲಕ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಜೀವನ್ ಲೋಯ್ಡ್ ಪಿಂಟೊ ಹಾಗೂ ಉಪಾಧ್ಯಕ್ಷ ವಲೇರಿಯನ್ ಬರೆಟ್ರೊ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLKಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಶಾಸಕ ರಾಜೇಶ್ ನಾಯ್ಕ್ ಯು, ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಪುರಸಭೆ ಸದಸ್ಯ ಮಹಮ್ಮದ್ ನಂದರಬೆಟ್ಟು ಭಾಗವಹಿಸಿದ್ದರು. ಸಂಘದ ಪರವಾಗಿ ಐವನ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು. ಸಂಘದ ನಿರ್ದೇಶಕರಾದ ವಿನ್ಸೆಂಟ್ ಕ್ಲಾಡಿ ಕಾರ್ಲೊ ವಂದಿಸಿದರು. ಸಿಬ್ಬಂದಿ ವಿವಿಯನ್ ಮೊರಾಸ್ ಕಾರ್ಯಕ್ರಮ ನಿರೂಪಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
