Author: admin

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಇದರ ಗಂಜಿಮಠ ಶಾಖೆ ಹಾಗೂ ಮರಾಠಿ ಸಮಾಜ ಸೇವಾ ಸಂಘ ಗಂಜಿಮಠ, ಅಳಕೆ ಫ್ರೆಂಡ್ಸ್ ಗಂಜಿಮಠ, ಫ್ರೆಂಡ್ಸ್ ಕ್ಲಬ್ ಮಟ್ಟಿ, ಬಡಗುಳಿಪಾಡಿ, ಕಲಾವರ್ಧಕ ಯುವಕ ಮಂಡಲ ನಾರ್ಲಮೊಗರು, ಮತ್ತು ಲಯನ್ಸ್ ಕ್ಲಬ್ ಗುರುಪುರ-ಕೈಕಂಬ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿ೦ದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವನ್ನು ಅಕ್ಟೋಬರ್‌  6ರ ಭಾನುವಾರ ಪೂರ್ವಾಹ್ನ 9.30ರಿಂದ ಅಪರಾಹ್ನ 12.30ರವರೆಗೆ ಗಂಜಿಮಠದ ಮರಾಠಿ ಸಮಾಜ ಸೇವಾ ಸಂಘದಲ್ಲಿ ಆಯೋಜಿಸಲಾಗಿದೆ. https://chat.whatsapp.com/Ge11n7QCiMj5QyPvCc0H19 ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ, ಮಧುಮೇಹ ತಪಾಸಣೆ, ಬಿ.ಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು…

Read More

ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಸಾರ್ವಜನಿಕ ಉಪಕಾರ ನಿಧಿಯಿಂದ ನೀಡಲಾಗುವ ವಿವಿಧ ಕೊಡುಗೆಗಳ ವಿತರಣಾ ಕಾರ್ಯಕ್ರಮ ಶುಕ್ರವಾರ ಸಂಘದ ಪ್ರಧಾನ ಕಚೇರಿಯಲ್ಲಿ ಜರಗಿತು. https://chat.whatsapp.com/Ge11n7QCiMj5QyPvCc0H19 ಸಂಘದ ಅಧ್ಯಕ್ಷ ಜಿ.ವೆಂಕಟೇಶ ಶೆಣೈ, ಉಪಾಧ್ಯಕ್ಷ ಜಿ.ವಿಶ್ವನಾಥ್ ಆಚಾರ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ್ ನಾಯಕ್ ಹಾಗೂ ನಿರ್ದೇಶಕರು ಹಾಜರಿದ್ದರು. ಸರಸ್ವತಿ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಅಕ್ಷರ ದಾಸೋಹಕ್ಕೆ ರೂ 1.20 ಲಕ್ಷ, ಗಂಗೊಳ್ಳಿ ಸಾರ್ವಜನಿಕ ಶ್ರೀ ಶಾರದೋತ್ಸವ ಸುವರ್ಣ ಮಹೋತ್ಸವಕ್ಕೆ ರೂ. 55,555, ಯಳಜಿತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ, ರೂ. 50,000, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1 ಲ್ಯಾಪ್ ಟಾಪ್ ಮತ್ತು 1 ಪ್ರಿಂಟರ್, ರಾಷ್ಟೀಯ ಸೇವಾ ಯೋಜನೆಗೆ 10,000 ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಒಟ್ಟು ರೂ 2.80 ಲಕ್ಷದ ಕೊಡುಗೆಗಳನ್ನು ವಿತರಿಸಲಾಯಿತು.

Read More

ಐಸಿಎ ಏಷ್ಯಾ-ಪೆಸಿಫಿಕ್‌ ಸಂಶೋಧನಾ ಸಮ್ಮೇಳನದ ಧ್ಯೇಯವಾಕ್ಯ ತಿರುವನಂತಪುರಂ: ಸಹಕಾರ ಕ್ಷೇತ್ರವೇ ಮುಂದಿನ ಕೈಗಾರಿಕಾ ಕ್ರಾಂತಿ…… ಈ ಧ್ಯೇಯವಾಕ್ಯವನ್ನಿಟ್ಟುಕೊಂಡು 18ನೇ ಐಸಿಎ ಏಷ್ಯಾ-ಫೆಸಿಪಿಕ್‌ ಸಂಶೋಧನಾ ಸಮ್ಮೇಳನವು ಕೇರಳದ ಅತಿ ಹಳೆಯ ಕೋ ಆಪರೇಟಿವ್‌ ಸೊಸೈಟಿಯಾದ ಉರಾಲುಂಗಲ್‌ ಕಾರ್ಮಿಕ ಗುತ್ತಿಗೆ ಸಹಕಾರ ಸಂಘ(ಯುಎಲ್‌ಸಿಸಿಎಸ್‌) ಮತ್ತು ಕೋಯಿಕ್ಕೋಡ್‌ನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ ಸಹಯೋಗದಲ್ಲಿ ಅಕ್ಟೋಬರ್‌ 15ರಿಂದ 18ರ ತನಕ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 “ಮುಂದಿನ ಕೈಗಾರಿಕಾ ಕ್ರಾಂತಿಯಲ್ಲಿ ಸಹಕಾರಿ ಸಂಸ್ಥೆಗಳು” ಎಂಬ ವಿಷಯದಲ್ಲಿ ಆಳವಾದ ಚರ್ಚೆಗಳು ಈ ಸಮಾವೇಶದಲ್ಲಿ ನಡೆಯಲಿದ್ದು, ತಾಂತ್ರಿಕ ಬೆಳವಣಿಗೆಗಳನ್ನು ಅಳವಡಿಸಿಕೊಂಡು ಭವಿಷ್ಯದಲ್ಲಿ ಹೇಗೆ ಔದ್ಯೋಗಿಕ ನೆಲೆಗಟ್ಟನ್ನು ಕಂಡುಕೊಳ್ಳಬಹುದು ಎಂಬ ವಿಷಯ ಇಲ್ಲಿ ಪ್ರಮುಖವಾಗಿ ಚರ್ಚೆಯಾಗಲಿದೆ. ದೇಶ -ವಿದೇಶಗಳ ವಿಷಯ ತಜ್ಞರು, ವಿದ್ವಾಂಸರು ಮತ್ತು ಸಹಕಾರಿ ವಲಯದ ಪ್ರಮುಖ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾಜವು ಯಾಂತ್ರೀಕೃತಗೊಂಡು, ಡಿಜಿಟಲೀಕರಣ ಮತ್ತು ಜಾಗತೀಕರಣದ ಜಾಢಿನಲ್ಲಿ ಮುಂದುವರಿಯುತ್ತಿರುವಾಗ ಈ ಸಮಾವೇಶ ನಡೆಯುತ್ತಿರುವುದು ಮಹತ್ವ ಪಡೆದಿದೆ. ಯಾಂತ್ರೀಕೃತ ವ್ಯವಸ್ಥೆ, ಡಿಜಿಟಲೀಕರಣ, ಜಾಗತೀಕರಣದಂಥ ಶಕ್ತಿಗಳು ಕೈಗಾರಿಕೆಗಳು ಮತ್ತು ಕಾರ್ಮಿಕ…

Read More

ಹಿರೇಕೆರೂರ ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘದ ಗೌರವ ಕಾರ್ಯದರ್ಶಿ ಎಸ್‌.ಎಸ್‌.ಪಾಟೀಲ ಅಭಿಮತ ಹಿರೇಕೆರೂರು: ಮಹಾತ್ಮ ಗಾಂಧಿ ಈ ದೇಶ ಕಂಡ ಮಹಾನ್ ದೇಶಭಕ್ತ. ಅತ್ಯಂತ ಆತ್ಮಾಭಿಮಾನದ ಶ್ರೇಷ್ಠ ವ್ಯಕ್ತಿತ್ವ ರೂಢಿಸಿಕೊಂಡು ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾಪುರುಷರು ಎಂದು ಹಿರೇಕೆರೂರ ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘದ ಗೌರವ ಕಾರ್ಯದರ್ಶಿ ಎಸ್‌.ಎಸ್‌.ಪಾಟೀಲ ಹೇಳಿದರು. ಹಿರೇಕೆರೂರ ತಾಲೂಕಾ ವಿದ್ಯಾವರ್ಧಕ ಸೌಹಾರ್ದ ಸಹಕಾರಿ ಸಂಘ ನಿಯಮಿತ ಆಶ್ರಯದಲ್ಲಿ ನಡೆಯುತ್ತಿರುವ ಎಲ್ಲಾ ಶಾಲಾ-ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 ಮಹಾತ್ಮ ಗಾಂಧಿಯವರು ಮುಖ್ಯವಾಗಿ ಈ ದೇಶದ ಸಾಮಾಜಿಕ ಅನಿಷ್ಟಗಳನ್ನು ತೊಡೆದುಹಾಕಿ ತುಳಿತಕ್ಕೊಳಗಾದ ದೀನ-ದಲಿತರನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ತರಬೇಕೆಂಬ ಕನಸು ಕಂಡಿದ್ದರು. ಮಹಾತ್ಮ ಗಾಂಧಿ ಕಂಡ ಗ್ರಾಮ ಸ್ವರಾಜ್ಯ ಕಲ್ಪನೆ ಅದ್ಭುತವಾದದ್ದು ಮತ್ತು ವಿಶ್ವಕ್ಕೆ ಮಾದರಿಯಾದದು. ಲಾಲ್ ಬಹದ್ದೂರ್ ಶಾಸ್ತ್ರಿಯವರು ಭಾರತ ಕಂಡ ಅಪ್ರತಿಮ ಪ್ರಧಾನಿಯಾಗಿ ಈ ದೇಶವನ್ನು ಸದೃಡ,…

Read More

ಡಿಸೆಂಬರ್‌ 31ರ ತನಕ ಮುಂದುವರಿಕೆ ನವದೆಹಲಿ: ಅಕ್ಟೋಬರ್‌ 1ರಿಂದ ಆರಂಭವಾದ ಮೂರನೇ ತ್ರೈಮಾಸಿಕದಲ್ಲಿ ಪಿಪಿಎಫ್‌, ಎನ್‌ಎಸ್‌ಸಿ ಸೇರಿದಂತೆ ಹಲವು ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಇರಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಇದರಿಂದ ಎರಡನೇ ತ್ರೈಮಾಸಿಕದಲ್ಲಿ ನಿಗದಿಪಡಿಸಿರುವ ಬಡ್ಡಿ ದರ ಅಕ್ಟೋಬರ್‌ 1ರಿಂದ ಡಿಸೆಂಬರ್‌ 31ರ ತನಕ ಮುಂದುವರಿಯಲಿದೆ. https://chat.whatsapp.com/Ge11n7QCiMj5QyPvCc0H19 ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ನಿಗದಿಪಡಿಸಿರುವ ಬಡ್ಡಿ ದರ ಅಕ್ಟೋಬರ್‌ 1ರಿಂದ ಡಿಸೆಂಬರ್‌ 31ರ ತನಕ ಮುಂದುವರಿಯಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸ್ತುತ ಸುಕನ್ಯಾ ಸಮೃದ್ಧಿಗೆ ಶೇ.8.2, ಪಿಪಿಎಫ್‌ಗೆ ಶೇ.7.1, ಅಂಚೆ ಕಚೇರಿಯ ಉಳಿತಾಯ ಠೇವಣಿಗೆ ಶೇ.4, ಕಿಸಾನ್‌ ವಿಕಾಸ್‌ ಪತ್ರಕ್ಕೆ ಶೇ.7.5, ಎನ್‌ಎಸ್‌ಸಿಗೆ ಶೇ.7.7 ಹಾಗೂ ಮಾಸಿಕ ಉಳಿತಾಯ ಯೋಜನೆಗೆ ಶೇ.7.4 ಬಡ್ಡಿ ದರವನ್ನು ನಿಗದಿಪಡಿಸಲಾಗಿದೆ. ಹೊಸ ತಲೆಮಾರಿಗೆ ಎಸ್‌ಬಿಐ ಹೊಸ ಯೋಜನೆ ಹೊಸ ತಲೆಮಾರಿನ ಜನರಲ್ಲೂ ಠೇವಣಿ ಯೋಜನೆಗಳನ್ನು ಜನಪ್ರಿಯಗೊಳಿಸಲು ಭಾರತೀಯ ಸ್ಟೇಟ್‌ಬ್ಯಾಂಕ್‌ (ಎಸ್‌ಬಿಐ) ತೀರ್ಮಾನಿಸಿದೆ. ಠೇವಣಿ ಸಂಗ್ರಹ…

Read More

ಮಂಗಳೂರು: ಅಕ್ಟೋಬರ್‌ ತಿಂಗಳಲ್ಲಿ ಹಬ್ಬಗಳ ಸರಣಿಯೇ ಇದ್ದು, ಬ್ಯಾಂಕಿಂಗ್‌ ಕ್ಷೇತ್ರಕ್ಕೆ ರಜೆಗಳ ಮೇಲೆ ರಜೆ ಇರಲಿದೆ. ಈ ತಿಂಗಳಲ್ಲಿ ಭಾನುವಾರವೂ ಸೇರಿದಂತೆ ಬ್ಯಾಂಕಿಂಗ್‌ ಕ್ಷೇತ್ರಕ್ಕೆ 10 ದಿನಗಳಷ್ಟು ರಜೆ ಇರಲಿದೆ. https://chat.whatsapp.com/Ge11n7QCiMj5QyPvCc0H19 ಕಳೆದ ತಿಂಗಳು ಗಣೇಶ ಚತುರ್ಥಿ, ಈದ್‌ ಮಿಲಾದ್‌, ಓಣಂ ಹಬ್ಬಗಳು ಇದ್ದು ಭಾನುವಾರ ತಿಂಗಳೊಂದರಲ್ಲೇ ಬ್ಯಾಂಕಿಂಗ್‌ ಕ್ಷೇತ್ರಕ್ಕೆ ಹತ್ತರಷ್ಟು ರಜೆ ಸಿಕ್ಕಿತ್ತು. ಈ ತಿಂಗಳಲ್ಲೂ ಹಬ್ಬಗಳು, ರಾಷ್ಟ್ರೀಯ ದಿನಾಚರಣೆಗಳ ಜೊತೆಗೆ ಕೆಲವು ಸ್ಥಳೀಯ ಹಬ್ಬಗಳಿಗೂ ಬ್ಯಾಂಕ್‌ಗಳಿಗೆ ರಜೆಗಳಿವೆ. ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಪ್ರಕಾರ ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರಗಳು ರಜೆ ಇರಲಿದೆ. ದೀಪಾವಳಿ, ದಸರಾ ಹಬ್ಬಗಳ ರಜೆಯೂ ಇರಲಿದೆ. ಆದ್ದರಿಂದ ಹಣಕಾಸಿನ ವಹಿವಾಟುಗಳನ್ನು ಮುಂಚಿತವಾಗಿ ಪ್ಲಾನ್ ಮಾಡಿಕೊಳ್ಳಲು ಈ ಮಾಹಿತಿ ನೀಡಲಾಗಿದೆ. ಅಕ್ಟೋಬರ್‌ ತಿಂಗಳ ರಜೆ ಅ. 2: ಗಾಂಧಿ ಜಯಂತಿ ಅ. 6: ಭಾನುವಾರ ಅ. 11: ಮಹಾನವಮಿ ಅ. 12: ವಿಜಯದಶಮಿ ಅ. 13: ಭಾನುವಾರ ಅ. 17: ವಾಲ್ಮೀಕಿ ಜಯಂತಿ ಅ. 26:…

Read More

ಬ್ಯಾಂಕ್‌ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ 113 ಶಾಖೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿ ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡುತ್ತಿದೆ. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಬ್ಯಾಂಕ್ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಶಾಖಾ ಮಟ್ಟದಲ್ಲಿ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಸ್ಪಂದಿಸಿರುವುದರಿಂದ ಬ್ಯಾಂಕಿಗೆ ಸತತ ಮೂರು ವರ್ಷಗಳಿಂದ ( 2021-22 , 2022-23, 2023-24 ) ‘ ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ಹಾಗೂ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಈ ಬಾರಿ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ ಲಭಿಸಿದೆ. ಈ ಪ್ರತಿಷ್ಠಿತ ಅವಳಿ ಪ್ರಶಸ್ತಿಗಳು ಬ್ಯಾಂಕಿನ ಘನತೆಯನ್ನು ಮತ್ತಷ್ಟು ಹೆಚ್ಚಿಸಿದ್ದು ಮಾತ್ರವಲ್ಲ ರಾಷ್ಟ್ರೀಕೃತ ಬ್ಯಾಂಕ್ ಗಳಿಗಿಂತ ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವಂತೆ ಮಾಡಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. ಶನಿವಾರ ಬ್ಯಾಂಕಿನ ಸಿಬ್ಬಂದಿಗಳಿಗೆ ಗಿಫ್ಟ್ ಕೂಪನ್ ವಿತರಣೆ ಹಾಗೂ ಶಾಖಾ…

Read More

ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋಆಪರೇಟಿವ್‌ ಸೊಸೈಟಿಯಿಂದ ಆಯೋಜನೆ ಪುತ್ತೂರು: ವಜ್ರಮಹೋತ್ಸವ ವರ್ಷ ಆಚರಿಸುತ್ತಿರುವ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋಆಪರೇಟಿವ್ ಸೊಸೈಟಿ ಮಂಗಳೂರು, ವಿಶ್ವಬ್ರಾಹ್ಮಣ ಸೇವಾ ಸಂಘ ಬೊಳುವಾರು, ವಿಶ್ವಕರ್ಮ ಯುವ ಸಮಾಜ ಬೊಳುವಾರು, ವಿಶ್ವಕರ್ಮ ಮಹಿಳಾ ಮಂಡಳಿ ಬೊಳುವಾರು ಜಂಟಿ ಪ್ರಾಯೋಜಕತ್ವದಲ್ಲಿ ರೋಟರಿ ಕ್ಯಾಂಪ್ಕೋ-ಬ್ಲಡ್ ಬ್ಯಾಂಕ್ ಪುತ್ತೂರು, ರೋಟರಿ ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ, ಕೆಎಂಸಿ ಆಸ್ಪತ್ರೆ ಮಂಗಳೂರು ಹಾಗೂ ರೋಟರಾಕ್ಟ್ ಕ್ಲಬ್ ಸಹಕಾರದೊಂದಿಗೆ ಇತ್ತೀಚೆಗೆ ಪುತ್ತೂರಿನ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ರಕ್ತದಾನ, ನೇತ್ರ ತಪಾಸಣೆ, ಹೃದಯ ತಪಾಸಣಾ ಉಚಿತ ಶಿಬಿರ ನಡೆಯಿತು. https://chat.whatsapp.com/Ge11n7QCiMj5QyPvCc0H19 ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋಆಪರೇಟಿವ್‌ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನರ ಆರೋಗ್ಯದ ಕಾಳಜಿಯ ಉದ್ದೇಶದಿಂದ ಸಂಘ ಸಂಸ್ಥೆಗಳು ಜತೆಗೂಡಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಬೇಕು. ಸೊಸೈಟಿಯು ವಜ್ರಮಹೋತ್ಸವ ಸಂಭ್ರಮದಲ್ಲಿದ್ದು, ಹಲವು ಜನೋಪಯೋಗಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ವಿಶ್ವಕರ್ಮ ಯುವ ಸಮಾಜ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ರಕ್ತದಾನ ಶ್ರೇಷ್ಠವಾದ…

Read More

ಮಂಗಳೂರು: ಮಂಗಳೂರು ಹದಿನಾರು ಪಟ್ಣ ಮೀನುಗಾರಿಕಾ ಸೌಹಾರ್ದ ವಿವಿಧೋದ್ದೇಶ ಸಹಕಾರಿ ಸಂಘದ ಸಾಮಾನ್ಯ ಸಭೆ ಇತ್ತೀಚೆಗೆ ಮಂಗಳೂರು ಯಾಂತ್ರಿಕ ಮೀನುಗಾರರ ಸಹಕಾರಿ ಸಂಘದ ಮತ್ಸ್ಯಗಂಧ ಕಟ್ಟಡದ ಸಭಾಂಗಣದಲ್ಲಿ ಅಧ್ಯಕ್ಷ ಕುಲಶೇಖರ ಪುತ್ರನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. https://chat.whatsapp.com/Ge11n7QCiMj5QyPvCc0H19 ಅಧ್ಯಕ್ಷ ಕುಲಶೇಖರ ಪುತ್ರನ್‌ ಸ್ವಾಗತಿಸಿದರು. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಹಕಾರಿಯ ಉಪಾಧ್ಯಕ್ಷ ಅಮಿತ್ರ ಸುವರ್ಣ, ಆಡಳಿತ ಮಂಡಳಿಯ ಸದಸ್ಯರಾದ ಹೇಮಚಂದ್ರ ಸಾಲ್ಯಾನ್, ಮಾಧವ ಪುತ್ರನ್ ಕುದ್ರೋಳಿ, ನವೀನ್ ಕರ್ಕೇರ, ಶ್ಯಾಮಸುಂದರ್ ಕಾಂಚನ್, ಧನಪಾಲ ಕೋಟ್ಯಾನ್, ಹರಿಶ್ಚಂದ್ರ ಮೆಂಡನ್, ಯಶವಂತ ಪಿ. ಅಮೀನ್ ಉಳ್ಳಾಲ, ಓಂದಾಸ್ ಬೆಂಗ್ರೆ, ಚಂದ್ರರಾಮ ಸುವರ್ಣ, ಮೀರಾ ಕೆ. ಕರ್ಕೇರ ಉಪಸ್ಥಿತರಿದ್ದರು. ಸಹಕಾರಿಯು ಗತ ವರ್ಷದಲ್ಲಿ 8,77,06,065.00 ರೂ. ವ್ಯವಹಾರ ನಡೆಸಿದ್ದು 10,65,650.71 ರೂ. ನಿವ್ವಳ ಲಾಭ ಗಳಿಸಿತ್ತು. ವರದಿ ವರ್ಷದಲ್ಲಿ 11,46,80,540.00 ರೂ. ವ್ಯವಹಾರ ನಡೆಸಿದ್ದು 17,74,648.00 ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.20 ಡಿವಿಡೆಂಡ್ ಘೋಷಿಸಲಾಯಿತು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು…

Read More

ಎರಡನೇ ವರ್ಷಕ್ಕೆ ಪದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಸಮಾಜಮುಖಿ ಕಾರ್ಯಕ್ರಮ ದಿ.ಫಾ.ವಲೇರಿಯನ್ ಮೆಂಡೋನ್ಸ ಅವರ ಸಾಮಾಜಿಕ ಚಿಂತನೆಯ ಫಲ: ಸೊಸೈಟಿಯ ಸಂಸ್ಥಾಪಕ ಜೀವನ್ ಡಿಸೋಜ ಬ್ರಹ್ಮಾವರ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಬ್ರಹ್ಮಾವರದ ಸ್ನೇಹಾಲಯ ಸಂಸ್ಥೆಗೆ ದಿನಸಿ ಸಾಮಗ್ರಿಗಳನ್ನು ಶುಕ್ರವಾರ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಜೀವನ್ ಡಿಸೋಜ ಮಾತನಾಡಿ, ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ.ಫಾ.ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಈ ಕಾರ್ಯಕ್ರಮದ ಶ್ರೇಯಸ್ಸು ವಲೇರಿಯನ್ ಮೆಂಡೋನ್ಸ ಇವರಿಗೆ ಅರ್ಪಿಸಲಾಗುವುದು. ಮೊದಲು ಪಾಂಬೂರಿನ ಮಾನಸ ಪುನರ್ವಸತಿ ಕೇಂದ್ರದ ವಿಶೇಷ ಚೇತನ ಮಕ್ಕಳೊಂದಿಗೆ ಸಂಭ್ರಮ ಆಚರಿಸಿದ್ದು, ಎರಡನೆಯದಾಗಿ ಉದ್ಯಾವರದ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟ್‌ನಲ್ಲಿ ಆಚರಿಸಿಕೊಂಡು ಶುಕ್ರವಾರ ಇಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. https://chat.whatsapp.com/Ge11n7QCiMj5QyPvCc0H19 ಮುಖ್ಯ ಅತಿಥಿ…

Read More