Author: admin

ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಕಾರ್ಯಕ್ಕೆ ಡಾ| ಆತ್ಮರಂಜನ್ ರೈ ಶ್ಲಾಘನೆ ಬಂಟ್ವಾಳ: ವಿಶ್ವಕರ್ಮ ಸಹಕಾರ ಬ್ಯಾಂಕ್ ಆರ್ಥಿಕ ಚಟುವಟಿಕೆಗಳೊಂದಿಗೆ ಸಮಾಜಮುಖಿಯಾಗಿ ಸ್ವಚ್ಛತೆಯಂತಹ ಅವಶ್ಯ ಪರಿಸರ ಜಾಗೃತಿಯ ಕಾರ್ಯವನ್ನು ಯಾವುದೇ ತಾರತಮ್ಯವಿಲ್ಲದೆ ಎಲ್ಲರನ್ನೂ ಸೇರಿಸಿಕೊಂಡು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಡಾ| ಆತ್ಮರಂಜನ್ ರೈ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಮೆಲ್ಕಾರ್ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ಭಾನುವಾರ ನಡೆದ 36ನೇ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಡಾ| ಆತ್ಮರಂಜನ್ ರೈ, ವ್ಯವಸ್ಥಾಪಕ ಸಮಿತಿ ಸದಸ್ಯರಾದ ಆಡಳಿತ ಸದಸ್ಯರಾದ ಪ್ರತಿಭಾ ಎ. ರೈ ಹಾಗೂ ಯುವಸಂಗಮ ಮೆಲ್ಕಾರ್ ಇದರ ಗೌರವಾಧ್ಯಕ್ಷ ಎಂ.ಎನ್. ಕುಮಾರ್ ಹಸಿರು ನಿಶಾನೆ ತೋರಿಸುವ ಮೂಲಕ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ನರಹರಿ ಪರ್ವತ ಸದಾಶಿವ…

Read More

ವಿಜಯಪುರ: ಬೆಳಗಾವಿ ವಿಭಾಗದಲ್ಲಿ ಸೌಹಾರ್ದ ಸಹಕಾರಿಗಳ ಗಟ್ಟಿ ಧ್ವನಿಯಾಗಿರುವ ಸಂಜಯ ಪಾಟೀಲ ಕನಮಡಿ ಅವರನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಯುಕ್ತ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕ ಶರಣಗೌಡ ಪಾಟೀಲ ತಿಳಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ವಿಜಯಪುರ ಜಿಲ್ಲೆಯಲ್ಲಿ ನೂತನ ಸೌಹಾರ್ದ ಸಹಕಾರಿಗಳ ಒಕ್ಕೂಟ ರಚನೆ ಮಾಡಲಾಗಿದ್ದು, ಸಂಜಯ ಪಾಟೀಲ ಕನಮಡಿ ಅವರು ಅಧ್ಯಕ್ಷರಾಗಿದ್ದಾರೆ. ಇದೀಗ ಅವರನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಇದರ ನಿರ್ದೇಶಕರನ್ನಾಗಿ ಆಯ್ಕೆ ಮಾಡಿರುವುದು ಜಿಲ್ಲೆಗೆ ಇನ್ನಷ್ಟು ಬಲ ಬಂದಂತಾಗಿದೆ. ಬೆಳಗಾವಿ ವಿಭಾಗದಲ್ಲಿ ವಿಶೇಷವಾಗಿ ವಿಜಯಪುರ ಜಿಲ್ಲೆಯ ಗಟ್ಟಿ ಧ್ವನಿಯಾಗಿ ಸೌಹಾರ್ದ ಸಹಕಾರಿಗಳ ಸೇವೆಗೆ ಹಾಗೂ ಸರ್ವ ಸೌಹಾರ್ದ ಸಹಕಾರಿ ಸಂಘಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಸಂಜಯ ಪಾಟೀಲರು ತಿಳಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಮಾಡಲು ಅವಕಾಶ ಸಿಕ್ಕಿದ್ದಕ್ಕಾಗಿ ನಾನು ಚಿರಋಣಿಯಾಗಿದೇನೆ, ನೇಮಕ ಮಾಡಿದ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಎಲ್ಲಾ ಸದಸ್ಯರು, ಸಹಕಾರ…

Read More

ಸಹಕಾರಿ ವಲಯದಲ್ಲಿ ವಂಚನೆ ತಡೆಯಲು ವ್ಯಾಪಕ ಸುಧಾರಣೆಗಳ ಬಗ್ಗೆ ಸಹಕಾರ ಸಚಿವ ಅಮಿತ್‌ ಷಾ ರಾಜ್ಯಸಭೆಯಲ್ಲಿ ಮಾಹಿತಿ ನವದೆಹಲಿ: ಬಹು-ರಾಜ್ಯ ಸಹಕಾರಿ ಸಂಘಗಳಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಆಡಳಿತವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಸಮಗ್ರ ಸುಧಾರಣೆಗಳ ಬಗ್ಗೆ ಬುಧವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿರುವ ಕೇಂದ್ರ ಸಹಕಾರ ಸಚಿವ ಅಮಿತ್ ಷಾ, ಸಹಕಾರಿ ಸಂಘಗಳ ನಿರ್ದೇಶಕರಿಗೆ ಕಠಿಣ ಮಾನದಂಡಗಳು, ಹಿತಾಸಕ್ತಿ ಸಂಘರ್ಷ ನಿರ್ಬಂಧಗಳು, ಕಡ್ಡಾಯ ಲೆಕ್ಕಪರಿಶೋಧನೆ ಮತ್ತು ನೀತಿ ಸಮಿತಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವ್ಯಾಖ್ಯಾನಿಸಲಾದ ಅರ್ಹತಾ ಮಾನದಂಡಗಳು ಮತ್ತು ಆಡಳಿತ ಸುಧಾರಣೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಆಗಸ್ಟ್ 2023ರಲ್ಲಿ ಅಧಿಸೂಚನೆ ಹೊರಡಿಸಲಾದ ಬಹು-ರಾಜ್ಯ ಸಹಕಾರಿ ಸಂಘಗಳು (ತಿದ್ದುಪಡಿ) ಕಾಯ್ದೆ ಮತ್ತು ನಿಯಮಗಳು 2023, ಹಣಕಾಸಿನ ಅಕ್ರಮಗಳನ್ನು ನಿಗ್ರಹಿಸಲು ಮತ್ತು ಸಹಕಾರಿ ಬ್ಯಾಂಕುಗಳು ಸೇರಿದಂತೆ ಸಹಕಾರಿ ಸಂಸ್ಥೆಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಪ್ರಮುಖ ರಚನಾತ್ಮಕ ಕ್ರಮಗಳನ್ನು ಪರಿಚಯಿಸುತ್ತದೆ ಎಂದು ಅಮಿತ್‌ ಷಾ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಸಹಕಾರಿ…

Read More

ಮಂಗಳೂರು: ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ನೂತನ ಶಾಖೆ ಮಾರ್ಚ್ 25ರಂದು ನಡೆಯಲಿದ್ದು ಇದರಲ್ಲಿ ಉದ್ಘಾಟನೆಯ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಬಿಡುಗಡೆಗೊಳಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಆತ್ಮಶಕ್ತಿ ಸಹಕಾರ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ 33 ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ನೂತನ 34ನೇ ಬೋಳಾರ ಶಾಖೆಯನ್ನು ಮಂಗಳೂರಿನ ಬೋಳಾರದ ಜೆಪ್ಪು ಮಾರ್ಕೆಟ್ ನ ಭಗಿನಿ ಸಮಾಜದ ಬಳಿಯಿರುವ “ಯುನಿಕ್ ಸ್ಟಿಕ್” ಕಾಂಪ್ಲೆಕ್ಸ್ ನಲ್ಲಿ ಮಾರ್ಚ್ 25ರಂದು ಬುಧವಾರ ಪೂರ್ವಾಹ್ನ 11 ಗಂಟೆಗೆ ಸಾರ್ವಜನಿಕ ಸೇವೆಗಾಗಿ ಲೋಕಾರ್ಪಣೆಗೊಳಿಸಲಿದೆ. ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಜರುಗಿತು. ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರಾದ ಎಂ. ಅರುಣ್ ಐತಾಳ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ದಿವಾಕರ್ ಬಿ.ಪಿ, ಉಮಾವತಿ, ಮುಖ್ಯ…

Read More

ಸಹಕಾರ ಸಚಿವಾಲಯದ ಅನುದಾನಗಳ ಬೇಡಿಕೆಗಳ ವರದಿ ಲೋಕಸಭೆಯಲ್ಲಿ ಮಂಡನೆ ನವದೆಹಲಿ: ಸಹಕಾರಿ ವಲಯದಲ್ಲಿ ಆಡಳಿತ, ಪಾರದರ್ಶಕತೆ ಮತ್ತು ತಳಮಟ್ಟದ ಬೆಳವಣಿಗೆಗಳನ್ನು ಹೆಚ್ಚಿಸಲು ಹಲವಾರು ಸುಧಾರಣೆಗಳುಳ್ಳ ವರದಿಯನ್ನು ಚರಣ್‌ಜಿತ್ ಸಿಂಗ್ ಚನ್ನಿ ನೇತೃತ್ವದ ಸಂಸದೀಯ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದ್ದು, ಸಹಕಾರ ಸಚಿವಾಲಯದ ಅನುದಾನಗಳ ಬೇಡಿಕೆಗಳ (2026–27) ವರದಿಯನ್ನೂ ಸೋಮವಾರ ಲೋಕಸಭೆಯಲ್ಲಿ ಮಂಡಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 2026–27ನೇ ಸಾಲಿನಲ್ಲಿ ಸಹಕಾರಿ ಸಚಿವಾಲಯಕ್ಕೆ 1,744.74 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಇದು 2025–26ರ ಬಜೆಟ್ ಅಂದಾಜಿನ 1,186.29 ಕೋಟಿ ರೂ.ಗಳಿಗಿಂತ ಹೆಚ್ಚು. ದೇಶಾದ್ಯಂತ ಸಹಕಾರಿ ಉಪಕ್ರಮಗಳನ್ನು ಬಲಪಡಿಸಲು ಹಣಕಾಸು ಹಂಚಿಕೆಯ ಅತ್ಯುತ್ತಮ ಬಳಕೆಯನ್ನು ಖಚಿತಪಡಿಸಿಕೊಳ್ಳುವಂತೆ ಚರಣ್‌ಜಿತ್ ಸಿಂಗ್ ಚನ್ನಿ ನೇತೃತ್ವದ ಸಂಸದೀಯ ಸ್ಥಾಯಿ ಸಮಿತಿಯು ಸಹಕಾರಿ ಸಚಿವಾಲಯವನ್ನು ಒತ್ತಾಯಿಸಿದೆ. ಸಮಿತಿಯು ಮಂಡಿಸಿರುವ ಪ್ರಮುಖ ಶಿಫಾರಸುಗಳಲ್ಲಿ ಸಹಕಾರಿ ಚುನಾವಣೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದ್ದು, ಈ ನಿಟ್ಟಿನಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಮುಂದಿಟ್ಟಿದೆ. ಸಹಕಾರಿ ಸಂಘಗಳ ಚುನಾವಣೆಗಳಲ್ಲಿ ವಿಳಂಬ ಮತ್ತು ಕೆಲವು ಸಂದರ್ಭಗಳಲ್ಲಿ ಚುನಾಯಿತ ಮಂಡಳಿಗಳನ್ನು ರದ್ದುಗೊಳಿಸುವುದರಿಂದ ಸಹಕಾರಿ ಚಳವಳಿಯ…

Read More

ವಿಶ್ವಕರ್ಮ ಬ್ಯಾಂಕ್‌ ಉಡುಪಿ ಶಾಖೆ ವತಿಯಿಂದ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ ಆಶಯ ಉಡುಪಿ: ಸ್ವಚ್ಛ ಹಾಗೂ ಸ್ವಸ್ಥ ಪರಿಸರವನ್ನು ನಿರ್ಮಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲೂ ಸ್ವಚ್ಛತೆಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವಕರ್ಮ ಬ್ಯಾಂಕ್ ನಿರಂತರವಾಗಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಸುತ್ಯರ್ಹವಾದುದು. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಈ ಕಾರ್ಯದಲ್ಲಿ ಕೈ ಜೋಡಿಸುವ ಮೂಲಕ ಸ್ವಚ್ಛ ಉಡುಪಿ ನಿರ್ಮಾಣ ಕಾರ್ಯದಲ್ಲಿ ಭಾಗಿದಾರರಾಗಬೇಕೆಂದು ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ವಿಶ್ವಕರ್ಮ ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ ಸ್ವಚ್ಛತಾ ಹೀ ಸೇವಾ ಎಂಬ ಧ್ಯೇಯದೊಂದಿಗೆ ಉಡುಪಿಯಲ್ಲಿ ನಡೆದ 35ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾರ್ಷಲ್ ಫ್ರೆಂಡ್ಸ್ ಇದರ ಅಧ್ಯಕ ದಿನೇಶ್ ಹಾಗೂ ಅಶ್ವಥಕಟ್ಟೆ ಫ್ರೆಂಡ್ಸ್ ಇದರ ಗೌರವ ಸಲಹೆಗಾರರಾದ ಕಿಶೋರ್ ಹಸಿರು ನಿಶಾನೆ ತೋರಿಸಿ…

Read More

ಮಂಗಳೂರು: ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘ ಮತ್ತು ಪ್ರೇರಣಾ ಸ್ವಸಹಾಯ ಸಂಘಗಳ ಒಕ್ಕೂಟ ಇದರ ಜಂಟಿ ಆಶ್ರಯದಲ್ಲಿ ಮಂಗಳವಾರ ಕಂಕನಾಡಿಯ ಪ್ರಜ್ಞಾ ಸಲಹಾ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಮಹಿಳಾ ದಿನಾಚರಣೆ ಅಂಗವಾಗಿ ಡಾ.ಜ್ಯೋಷ್ನಾ ಪ್ರೇಮಾ ಡಿಸೋಜ ಮಂಗಳೂರು ಇವರಿಂದ ಮಹಿಳೆಯರ ಆರೋಗ್ಯ ವಿಶೇಷವಾಗಿ ಗರ್ಭಕಂಠದ ಸೋಂಕು ಮತ್ತು ಅದರ ತಡೆ ಕುರಿತು ಜಾಗೃತಿ ಹಾಗೂ ಮಹಿಳೆಯರ ಆರೋಗ್ಯದ ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಪ್ರೇರಣಾ ಮಹಿಳಾ ಸೌಹಾರ್ದದ ಅಧ್ಯಕ್ಷರಾದ ಪ್ಲೇವಿ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರುಗಳು ಹಾಗೂ 60 ಸದಸ್ಯರು ಭಾಗವಹಿಸಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಬಂಟ್ವಾಳ: ಬಿ.ಸಿ.ರೋಡ್‌ನ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮ ಮಾರ್ಚ್ 6ರಂದು ಬಿ.ಸಿ.ರೋಡಿನ ವಿವೇಕನಗರದ ಶಕ್ತಿ ಕಾಂಪೌಂಡ್‌ನಲ್ಲಿ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಬಾಲಕೃಷ್ಣ ಪ್ರಭು ಮತ್ತು ಜಯಲಕ್ಷ್ಮಿ ಪ್ರಭು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಬಳಿಕ ಶ್ರೀ ದೇವಿ ನೃತ್ಯಾರಾಧನಾ ಕಲಾಕೇಂದ್ರ ಪುತ್ತೂರು ಇಲ್ಲಿನ ವಿದ್ಯಾರ್ಥಿಗಳಿಂದ ಭರತನಾಟ್ಯ ಮತ್ತು ಸಂಗೀತ ಕಾರ್ಯಕ್ರಮ ನಡೆಯಿತು. ಸಂಜೆ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ರೋಹಿಣಿ ಉದಯ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ಬಂಟ್ವಾಳ ಇದರ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಮತ್ತು ಅಪೂರ್ವ ಜ್ಯುವೆಲ್ಲರ್ಸ್ ಬಿ.ಸಿ.ರೋಡ್ ಇದರ ಮಾಲೀಕರಾದ ಸುನೀಲ್ ಬಿ. ಭಾಗವಹಿಸಿದ್ದರು. ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ವೆಂಕಟೇಶ್ ಭಟ್ ಪ್ರಾಸ್ತಾವಿಕ ಮಾತನಾಡಿ, ಒಂದು ವರ್ಷದಲ್ಲಿ ಸಹಕಾರಿಯ ಅಭಿವೃದ್ಧಿಯ ಬಗ್ಗೆ ವಿವರಿಸಿದರು. ಒಂದು ವರ್ಷದಲ್ಲಿ ಸಹಕಾರಿ ಸಂಘದ ಅಭಿವೃದ್ಧಿಯಲ್ಲಿ ಸಹಕರಿಸಿದವರನ್ನು ಗೌರವಿಸಲಾಯಿತು. ಸಹಕಾರಿಯ ನಿರ್ದೇಶಕರಾದ ಜಯಾನಂದ…

Read More

ನವದೆಹಲಿ: ಭಾರತದಲ್ಲಿ ಪ್ರಸ್ತುತ 8.48 ಲಕ್ಷ ಸಹಕಾರ ಸಂಘಗಳು ಇದ್ದು, ಇವುಗಳ ಪೈಕಿ 3.49 ಲಕ್ಷ ಸಂಘಗಳು ಲಾಭದಾಯಕ ಸ್ಥಿತಿಯಲ್ಲಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಮಂಗಳವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಮಿತ್‌ ಷಾ ಅವರು, ರಾಷ್ಟ್ರೀಯ ಸಹಕಾರಿ ದತ್ತಸಂಚಯದ (ಎನ್‌ಸಿಡಿ) ಮಾಹಿತಿಯ ಪ್ರಕಾರ, 8.48 ಲಕ್ಷ ಸಹಕಾರ ಸಂಘ ಪೈಕಿ 6.59 ಲಕ್ಷ ಸಹಕಾರಿ ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ, 1.41 ಲಕ್ಷ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿಲ್ಲ, ಅದರಲ್ಲೂ ದೇಶಾದ್ಯಂತ 47,688 ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ. ಕ್ರಿಯಾತ್ಮಕ ಸಂಘಗಳಲ್ಲಿ, 3.49 ಲಕ್ಷ ಸಹಕಾರಿ ಸಂಘಗಳು ಲಾಭದಲ್ಲಿ ನಡೆಯುತ್ತಿದ್ದರೆ, 2.11 ಲಕ್ಷ ಸಂಘಗಳು ನಷ್ಟದಲ್ಲಿವೆ. 99,325 ಸಂಘಗಳ ಲಾಭ ಅಥವಾ ನಷ್ಟದ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ. ದೇಶದಲ್ಲಿ ಮಹಾರಾಷ್ಟ್ರವು 2.25 ಲಕ್ಷ ಸಂಘಗಳೊಂದಿಗೆ ಅತಿ ಹೆಚ್ಚು ಸಹಕಾರಿ ಸಂಘಗಳನ್ನು ಹೊಂದಿದೆ. ನಂತರದ ಸ್ಥಾನಗಳಲ್ಲಿ 86,519 ಸಂಘಗಳೊಂದಿಗೆ ಗುಜರಾತ್ ಮತ್ತು…

Read More

ಬಂಟ್ವಾಳ: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುವುದರೊಂದಿಗೆ ಇತರ ಕ್ಷೇತ್ರಗಳಲ್ಲೂ ಸಹಕಾರ ಕ್ಷೇತ್ರವನ್ನು ಪಸರಿಸಿಕೊಂಡು ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಹಾಗೂ ವೈಯಕ್ತಿಕವಾಗಿಯೂ ಆರೋಗ್ಯ, ಶಿಕ್ಷಣ, ಬೇರೆ ಬೇರೆ ರೀತಿಯಲ್ಲಿ ಸಲ್ಲಿಸಿದ ಸಮಾಜಸೇವೆಯನ್ನು ಪರಿಗಣಿಸಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರಿಗೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಸ್ವಸ್ತಿಕ್ ಸಂಭ್ರಮ ಪುರಸ್ಕಾರ 2026ನ್ನು ನೀಡಿ ಗೌರವಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ವತಿಯಿಂದ ಇತ್ತೀಚೆಗೆ ನಡೆದ ಸಾಮೂಹಿಕ ವಿವಾಹ ಸಂದರ್ಭದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ರವಿಶಂಕರ್ ಶೆಟ್ಟಿ ಬಡಾಜೆಗುತ್ತು, ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಸ ಎಂ.ತುಂಗಪ್ಪ ಬಂಗೇರ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಸಂದೇಶ ಶೆಟ್ಟಿ, ಪ್ರಮುಖರಾದ ಹರಿಯೇಂದ್ರ ಪೈ, ವಾಲ್ಟರ್ ನಂದಳಿಕೆ, ಕಿರಣ್ ಚಂದ್ರ ಪುಷ್ಪಗಿರಿ, ಜಗನ್ನಾಥ…

Read More