Author: admin

ನಬಾರ್ಡ್‌ ವಾರ್ಷಿಕ ವರದಿಯಲ್ಲಿ ಉಲ್ಲೇಖ ನವದೆಹಲಿ: ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿ ಸಂಘಗಳಿದ್ದರೂ 18,497 ಗ್ರಾಮ ಪಂಚಾಯಿತಿಗಳಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಮುಟ್ಟಿಲ್ಲ. ನಬಾರ್ಡ್‌ನ 2023-24ರ ವಾರ್ಷಿಕ ವರದಿ ಈ ಮಾಹಿತಿ ತೆರೆದಿಟ್ಟಿದೆ. ದೇಶದ ಐದು ರಾಜ್ಯಗಳಲ್ಲೇ ಒಟ್ಟಾರೆ ಸಹಕಾರಿಗಳ 57 ಶೇಕಡಾ ಸಂಖ್ಯೆಯಿದೆ. ಮಹಾರಾಷ್ಟ್ರ, ಗುಜರಾತ್‌, ಮಧ್ಯಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳಲ್ಲೇ ಈ 57 ಶೇಕಡಾ ಸಹಕಾರಿಗಳ ಸಂಖ್ಯೆಯಿದೆ. ದೇಶದಲ್ಲಿ ಸಹಕಾರಿ ಕ್ಷೇತ್ರದ ಚಟುವಟಿಕೆಗಳು ವಿಶಾಲವಾಗಿ ಹರಡಿದ್ದರೂ ಎಲ್ಲಾ ರಾಜ್ಯಗಳಲ್ಲಿ ಇದು ಒಂದೇ ಸಮನಾಗಿಲ್ಲ. ಮಹಾರಾಷ್ಟ್ರ ಒಂದರಲ್ಲೇ ದೇಶದ ಸಹಕಾರಿಗಳ ಪೈಕಿ ನಾಲ್ಕನೇ ಒಂದರಷ್ಟು ಸಂಖ್ಯೆಯಿದೆ ಎಂದು ವರದಿ ಹೇಳಿದೆ. 18,497 ಗ್ರಾಮ ಪಂಚಾಯಿತಿಗಳಲ್ಲಿ ಪ್ಯಾಕ್ಸ್‌ನ ಚಟುವಟಿಕೆಗಳು ಇನ್ನೂ ಶುರುವಾಗಿಲ್ಲ. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. https://chat.whatsapp.com/Ge11n7QCiMj5QyPvCc0H19 ಏಷ್ಯಾ ವಲಯದಲ್ಲಿ ಭಾರತವು ಅತಿ ಹೆಚ್ಚು ಸಹಕಾರಿಗಳನ್ನು ಹೊಂದಿರುವ ಎರಡನೇ ದೇಶವೆನಿಸಿದೆ.(ಜಪಾನ್‌ ನಂತರದ ಸ್ಥಾನ) ಜಾಗತಿಕವಾಗಿ ಆರನೇ…

Read More

ಮಂಗಳೂರು: ಆಟಿ ತಿಂಗಳಲ್ಲಿ ತುಳುನಾಡಿನ ಜನ ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಪೊಲಬು” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ಪ್ರಧಾನ ಕಛೇರಿ ಪಡೀಲ್‌ನ “ಆತ್ಮಶಕ್ತಿ ಸೌಧ”ದಲ್ಲಿ ಭಾನುವಾರ ಆಚರಿಸಲಾಯಿತು. ಹಿರಿಯ ನಾಟಿ ವೈದ್ಯ ಕಲಾಯಿ ಈಶ್ವರ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಟಿ ತಿಂಗಳ ಮಹತ್ವವನ್ನು ತಿಳಿಸಿ, ನಾಟಿ ಔಷಧಿ ಪದ್ದತಿಗಳ ಬಗ್ಗೆ ಮಾಹಿತಿ ನೀಡಿದರು. ಕಂಕನಾಡಿ ನಗರ ಪೊಲೀಸ್ ಠಾಣೆಯ ಕ್ರೈಂ ಬ್ರಾಂಚ್‌ನ ಪರಶುರಾಮ್ ಮಾತನಾಡಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಧಿಕವಾಗುತ್ತಿರುವ ಸೈಬರ್ ಅಪರಾಧದ ಬಗ್ಗೆ ಜಾಗೃತಿ ವಹಿಸುವಂತೆ ಹಾಗೂ ಮುನ್ನೆಚರಿಕೆ ವಹಿಸಬೇಕಾದ ಜಾಗೃತಿಯ ವಿಷಯದಲ್ಲಿ ಮಾಹಿತಿ ನೀಡಿದರು. ಮೂಲ್ಕಿ ಪೋಲಿಸ್ ಠಾಣೆಯ ಮಹಿಳಾ ಸಬ್‌ ಇನ್ಸ್ಪೆಕ್ಟರ್ ಅನಿತಾ ಕೆ. ಮಾತನಾಡಿ, ಮಹಿಳೆಯರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶ ಕಲ್ಪಿಸಿಕೊಟ್ಟು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಹಲವಾರು ಜಿಲ್ಲಾ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಪಡೆದಿರುವುದು ಶ್ಲಾಘನೀಯ. ಮಹಿಳೆಯರು ಅಪರಾಧಗಳ ಬಗ್ಗೆಯೂ ಜಾಗೃತಿ ವಹಿಸಬೇಕು.…

Read More

ರಾಷ್ಟ್ರೀಯ ಸಹಕಾರಿ ನೀತಿ ಸಮಿತಿ ಅಧ್ಯಕ್ಷ ಸುರೇಶ್ ಪ್ರಭು ಅಭಿಪ್ರಾಯ ಉಡುಪಿ: ದೇಶದಲ್ಲಿ ಜಾರಿಗೆ ತರಲುದ್ದೇಶಿಸಿರುವ ರಾಷ್ಟ್ರೀಯ ಸಹಕಾರಿ ನೀತಿಯಲ್ಲಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಏಕರೂಪಿ ತಂತ್ರಜ್ಞಾನದ ಅಳವಡಿಕೆಗೆ ಆದ್ಯತೆ ನೀಡಲಾಗಿದೆ ಎಂದು ರಾಷ್ತ್ರೀಯ ಸಹಕಾರಿ ನೀತಿ ಸಮಿತಿಯ ಅಧ್ಯಕ್ಷ, ಕೇಂದ್ರದ ಮಾಜಿ ಸಚಿವ ಸುರೇಶ್ ಪಿ.ಪ್ರಭು ಹೇಳಿದರು. ಉಡುಪಿಯಲ್ಲಿ ಭಾನುವಾರ ಸಹಕಾರ ಭಾರತಿ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಲಾದ ಸತ್ಕಾರ ಕೂಟದಲ್ಲಿ ಮಾತನಾಡಿದರು. ಭವಿಷ್ಯದ ಭಾರತದಲ್ಲಿ ಸಹಕಾರಿ ಕ್ಷೇತ್ರವು ಆರ್ಥಿಕ, ವಾಣಿಜ್ಯಿಕ, ಔದ್ಯಮಿಕ ಮತ್ತು ಸಾಮಾಜಿಕ ರಂಗಗಳಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಸಹಕಾರಿ ಕ್ಷೇತ್ರದಲ್ಲಿ ದೇಶವ್ಯಾಪಿ ಏಕರೂಪಿ ತಂತ್ರಜ್ಞಾನ ಜಾರಿಗೊಳಿಸಿ ಭವಿಷ್ಯದ ಆರ್ಥಿಕತೆಯ ನಾಯಕತ್ವ ವಹಿಸಲು ಸಹಕಾರಿ ಕ್ಷೇತ್ರವನ್ನು ಸಜ್ಜುಗೊಳಿಸಲಾಗುವುದು ಎಂದು ತಿಳಿಸಿದರು. ಸಹಕಾರ ಭಾರತಿಯು ರಾಷ್ಟ್ರೀಯ ಮಟ್ಟದಲ್ಲಿ ಸಹಕಾರಿ ಕ್ಷೇತ್ರದ ಶುದ್ಧೀಕರಣ, ವೃದ್ಧೀಕರಣ ಮತ್ತು ಆಧುನೀಕರಣಕ್ಕೆ ಶ್ರಮಿಸುತ್ತಿರುವ ಏಕೈಕ ಸರಕಾರೇತರ ಸಂಘಟನೆ ಎಂದು ಸುರೇಶ್ ಪ್ರಭು ಶ್ಲಾಘಿಸಿದರು. ಉಡುಪಿ ಜಿಲ್ಲೆಯಲ್ಲಿ ಕೂಡಾ ಬ್ಯಾಂಕಿಂಗ್, ಶಿಕ್ಷಣ ಮತ್ತು ಆರೋಗ್ಯ…

Read More

ವಿಲೇವಾರಿ ತ್ವರಿತಗೊಳಿಸಲು ಆರ್‌ಬಿಐ ಕ್ರಮ ನವದೆಹಲಿ: ಹಣಕಾಸಿಗೆ ಸಂಬಂಧಿಸಿ ಮಹತ್ವದ ಕ್ರಮವೊಂದನ್ನು ಘೋಷಿಸಿರುವ ಆರ್‌ಬಿಐ ಇನ್ಮುಂದೆ ಕೆಲವೇ ಗಂಟೆಗಳಲ್ಲಿ ಚೆಕ್‌ ಕ್ಲಿಯರೆನ್ಸ್‌ಗೆ ಅವಕಾಶ ನೀಡಿದೆ. ಮುಂದೆ ಚೆಕ್‌ ಕ್ಲಿಯರೆನ್ಸ್‌ಗೆ ಎರಡು –ಮೂರು ದಿನ ಕಾಯಬೇಕಿಲ್ಲ. ಕೆಲವೇ ಗಂಟೆಗಳಲ್ಲಿ ಹಾಕಿದ ಚೆಕ್‌ ಕ್ಲಿಯರ್‌ ಆಗಿ ಚೆಕ್‌ನ ಮೊತ್ತ ಬ್ಯಾಂಕ್‌ಗೆ ಜಮಾ ಆಗಲಿದೆ. ಈ ಹೊಸ ವ್ಯವಸ್ಥೆಯನ್ನು ಆರ್‌ಬಿಐ ಗುರುವಾರ ಘೋಷಣೆ ಮಾಡಿದೆ. ಪ್ರಸ್ತುತ ಬ್ಯಾಚ್‌ ಪ್ರೊಸೆಸಿಂಗ್‌ ಮಾದರಿಯಲ್ಲಿ ಚೆಕ್‌ ಪ್ರಾಸೆಸಿಂಗ್‌ ಮಾದರಿಯಲ್ಲಿ ಚೆಕ್‌ ಟ್ರಂಕೇಶನ್‌ ಸಿಸ್ಟಮ್‌ ಮೂಲಕ ಚೆಕ್‌ ನಗದು ಆಗುವ ಪ್ರಕ್ರಿಯೆ ನಡೆಯುತ್ತಿತ್ತು. ಇದಕ್ಕೆ ಕನಿಷ್ಠ ಎರಡು ದಿನಗಳ ಪ್ರಕ್ರಿಯೆ ಬೇಕಿತ್ತು. ಇದರ ಬದಲಿಗೆ ಚೆಕ್‌ ಹಾಕಿದ ಕೂಡಲೇ ಮಾದನ್ನು ನಗದಾಗಿ ಪರಿವರ್ತಿಸುವ ವ್ಯವಸ್ಥೆ ಜಾರಿಗೆ ತರಲಾಗುವುದು. ಈ ವ್ಯವಸ್ಥೆ ಜಾರಿಯಾದರೆ ಚೆಕ್‌ ಹಾಕಿದ ಕೆಲವೇ ಗಂಟೆಗಳಲ್ಲಿ ಅದರ ವಿಲೇವಾರಿ ಆಗಲಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಮಾಹಿತಿ ನೀಡಿದ್ದಾರೆ. https://chat.whatsapp.com/Ge11n7QCiMj5QyPvCc0H19 ರೆಪೋ ದರ ಯಥಾಸ್ಥಿತಿ ಸತತ ಒಂಬತ್ತನೇ ಬಾರಿ…

Read More

ಮಹತ್ವದ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋರ್ಟ್ ಬೆಂಗಳೂರು: ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಸೆಕ್ಷನ್​ 128A ಸಂವಿಧಾನಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಗುರುವಾರ ಮಹತ್ವದ ತೀರ್ಪು ನೀಡಿದೆ. ಇದರಿಂದ ಸಹಕಾರ ಸಂಘಗಳ ಸ್ವಾಯತ್ತೆಗೆ ಧಕ್ಕೆ ಎಂದು ಸಹಕಾರ ಸಂಘಗಳ ಪರ ಹಿರಿಯ ವಕೀಲ ಎ.ಕೇಶವ ಭಟ್ ವಾದಿಸಿದ್ದರು.  ಇದು ಸಂವಿಧಾನಬಾಹಿರ. ತಿದ್ದುಪಡಿ ಸಂವಿಧಾನದ ಆರ್ಟಿಕಲ್ 19(1)ಸಿ ಯ ಉಲ್ಲಂಘನೆ ಎಂದು ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಅವರಿದ್ದ ಹೈಕೋರ್ಟ್ ಪೀಠ ತೀರ್ಪು ಪ್ರಕಟಿಸಿದೆ. https://chat.whatsapp.com/Ge11n7QCiMj5QyPvCc0H19 ರಾಜ್ಸಯ ಸರ್ಕಾರವು 2023ರಲ್ಲಿ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎಗೆ ಮಾಡಿದ್ದ ತಿದ್ದುಪಡಿಯನ್ನು ನ್ಯಾಯಾಲಯ ಸಂವಿಧಾನಬಾಹಿರವೆಂದು ಆದೇಶಿಸಿದೆ. ಈ ವಿಚಾರದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರ ಏಕಸದಸ್ಯ ಪೀಠ ಗುರುವಾರ ಪ್ರಕಟಿಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಕೇಶವ್ ಭಟ್, ಮೊದಲಿನಿಂದಲೂ ಸಹಕಾರ ಸಂಘಗಳ ಬಳಿ ಇದ್ದ ಸಿಬ್ಬಂದಿಯ ನೇಮಕ, ವರ್ಗಾವಣೆ…

Read More

ವಿಷನ್‌ ಸಹಕಾರ್‌ ಸೇ ಸಮೃದ್ಧಿ ಕಾರ್ಯಕ್ರಮಕ್ಕೆ ಪೂರಕವಾಗಿ ಕ್ರಮ ಲೋಕಸಭೆಯಲ್ಲಿ ಸಹಕಾರ ಸಚಿವ ಅಮಿತ್‌ ಶಾ ಮಾಹಿತಿ ನವದೆಹಲಿ: ಸಹಕಾರ ಸಂಘಗಳಿಗೆ ತೆರಿಗೆ ವಿನಾಯಿತಿ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೇಂದ್ರದ ಸಹಕಾರದಿಂದ ಸಮೃದ್ಧಿ ವಿಷನ್‌ಗೆ ಪೂರಕವಾಗಿ ಈ ಕ್ರಮಗಳು ಜಾರಿಯಾಗಲಿವೆ. ಸಹಕಾರ ಸಂಘಗಳ ಹಲವಾರು ಕಾರ್ಯಚಟುವಟಿಕೆಗಳಿಗೆ ತೆರಿಗೆ ವಿನಾಯಿತಿ, ನಗದು ವಹಿವಾಟಿನಲ್ಲಿ ಟಿಡಿಎಸ್ ವಿಧಿಸುವಲ್ಲಿನ ಮಿತಿಯಲ್ಲಿ ಹೆಚ್ಚಳ ಇತ್ಯಾದಿ ಉಪಕ್ರಮಗಳನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಸಹಕಾರ ಸಚಿವ ಅಮಿತ್‌ ಶಾ ಹೇಳಿದರು. ಲೋಕಸಭೆಯಲ್ಲಿ ಮಾಹಿತಿ ನೀಡಿದ ಸಚಿವ ಅಮಿತ್‌ ಶಾ, ಸಹಕಾರ ಸಂಘಗಳ ಆದಾಯದ ಮೇಲಿನ ಸರ್ಚಾರ್ಜ್‌ನಲ್ಲಿ ಕಡಿತ ಮಾಡುವುದರ ಸುಳಿವು ನೀಡಿದರು. ಸರ್ಚಾರ್ಜ್‌ ರೂ. 1 ಕೋಟಿ ಮತ್ತು ರೂ. 10 ಕೋಟಿ ನಡುವಿನ ಆದಾಯಕ್ಕೆ 12% ರಿಂದ 7% ಕ್ಕೆ ಇಳಿಕೆಯಾಗಿದೆ. ಈ ಕಡಿತವು ಸಹಕಾರಿ ಸಂಘಗಳು ಮತ್ತು ಅದರ ಸದಸ್ಯರ, ವಿಶೇಷವಾಗಿ ಗ್ರಾಮೀಣ ಮತ್ತು ಕೃಷಿ ಸಮುದಾಯಗಳ ಆದಾಯವನ್ನು ಹೆಚ್ಚಿಸುವ…

Read More

ಎಸ್‌ಸಿಡಿಸಿಸಿ ಬ್ಯಾಂಕ್‌ ಕೋಡಿಕಲ್‌ ಶಾಖೆ ಸ್ಥಳಾಂತರಿತ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್‌ ಅಭಿಪ್ರಾಯ ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ಬಹಳ ದೊಡ್ಡ ಸಾಧನೆ ಮಾಡಿದೆ. ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ದಕ್ಷ ನಾಯಕತ್ವದಲ್ಲಿ ಬ್ಯಾಂಕಿಂಗ್‌ ಸೇವೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ಮುಂಚೂಣಿಯಲ್ಲಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ಹೇಳಿದರು. ಎಸ್‌ಸಿಡಿಸಿಸಿ ಬ್ಯಾಂಕ್‌ನ ಕೋಡಿಕಲ್‌ ಶಾಖೆಯನ್ನು ಉರ್ವ ಮಾರಿಗುಡಿ ಕಟ್ಟಡದ ನೆಲ ಅಂತಸ್ತಿನಲ್ಲಿ ಉದ್ಘಾಟಿಸುವ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂಎನ್‌.ರಾಜೇಂದ್ರ ಕುಮಾರ್‌ ಉದ್ಘಾಟಿಸಿ ಮಾತನಾಡಿ, ಗ್ರಾಹಕರಿಗೆ ಸಮರ್ಪಕ ಸೇವೆ ಒದಗಿಸುವಾಗ ಬ್ಯಾಂಕ್‌ಗಳಿಗೆ ಪೈಪೋಟಿ ನೀಡುತ್ತಿದೆ. 110 ವರ್ಷಗಳ ಇತಿಹಾಸದಲ್ಲಿ 113 ಶಾಖೆಗಳ ಮೂಲಕ ಎಸ್‌ಸಿಡಿಸಿಸಿ ಬ್ಯಾಂಕ್‌ ಜನರಿಗೆ ಸಮರ್ಥ ಸೇವೆ ನೀಡುತ್ತಿದೆ. 28 ವರ್ಷಗಳಿಂದ ಶೇ.100ರಷ್ಟು ಸಾಲ ಮರುಪಾವತಿ ಆಗುತ್ತಿದೆ. ಗ್ರಾಮಾಂತರ ಪ್ರದೇಶದ ಮಹಿಳೆಯರ ಸ್ಥಾವಲಂಬಿ ಜೀವನಕ್ಕಾಗಿ ನವೋದಯ ಸ್ವಸಹಾಯ ಸಂಘಗಳ ಮೂಲಕ ಸಾಲದ ವ್ಯವಸ್ಥೆ ಮಾಡಿದ್ದು, ಶೇ.99. 2೦ರಷ್ಟು ಮರುಪಾವತಿ ಆಗುತ್ತಿದೆ. ಜಿಲ್ಲೆಯಲ್ಲಿ ಸಾಲ ದೊರೆಯದ ಕಾರಣಕ್ಕೆ…

Read More

ಬೃಹತ್‌ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ  ಬೃಹತ್‌ ರಕ್ತದಾನ ಶಿಬಿರ ಮಂಗಳೂರು: ದುಶ್ಚಟಮುಕ್ತ ಸಮಾಜ ನಮಗಿಂದು ಬೇಕಾಗಿದೆ. ಇದನ್ನು ನಿರ್ಮಾಣ ಮಾಡುವುದು ಹೇಗೆ? ಆ ಬಗ್ಗೆ ಒಂದಷ್ಟು ಸ್ವಚ್ಛ ಮನಸ್ಸುಗಳು ಆಲೋಚನೆ ಮಾಡಬೇಕು. ಜೊತೆಗೆ ದುಶ್ಚಟಮುಕ್ತ, ಕೌಶಲ್ಯಭರಿತ ಹಾಗೂ ಸ್ವಚ್ಛ ಭಾರತ ನಿರ್ಮಾಣವಾಗಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶಯ ವ್ಯಕ್ತಪಡಿಸಿದರು. ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಭಾನುವಾರ ಒಡಿಯೂರು ಪೂಜ್ಯ ಗುರುದೇವಾನಂದ ಶ್ರೀಗಳವರ ಜನ್ಮದಿನೋತ್ಸವ, ಗ್ರಾಮೋತ್ಸವ, ಸೇವಾ ಸಂಭ್ರಮ ಪ್ರಯುಕ್ತ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಬೃಹತ್‌ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ದುಶ್ಚಟಮುಕ್ತ ಸಮಾಜ ನಿರ್ಮಾಣ ಮಾಡುವುದು ನಮ್ಮ ಆದ್ಯತೆ ಆಗಬೇಕು.…

Read More

ಲೆಕ್ಕಪರಿಶೋಧನೆಯಲ್ಲಿ ಎ ಶ್ರೇಣಿ ಸುರತ್ಕಲ್: ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘ 2023-24ನೇ ಸಾಲಿನಲ್ಲಿ ವಾರ್ಷಿಕ 217 ಕೋಟಿ ರೂ. ಒಟ್ಟು ವ್ಯವಹಾರ ನಡೆಸಿದ್ದು, 41,26,686.43 ರೂ. ನಿವ್ವಳ ಲಾಭ ಗಳಿಸಿದೆ. ಪ್ರಸ್ತುತ ಸಾಲಿನಲ್ಲಿ ಸಂಘವು ಗ್ರಾಹಕರಿಗೆ ಶೇ.18 ಡಿವಿಡೆಂಡ್‌ ನೀಡಲು ನಿರ್ಧರಿಸಿದೆ. ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸುರತ್ಕಲ್ ಸಿಟಿ ಸ್ಕ್ವೇರ್ ನಲ್ಲಿ ನಡೆದಿದ್ದು ಈ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಂಘವು 16 ವರ್ಷಗಳಿಂದ ನಿರಂತರ ಲಾಭ ಗಳಿಸುತ್ತಿದ್ದು, ಲೆಕ್ಕಪರಿಶೋಧನೆಯಲ್ಲಿ ಎ ಶ್ರೇಣಿಯಲ್ಲಿ ವರ್ಗೀಕರಣಗೊಂಡಿದೆ. ಸಂಘವು ಕ್ಲೌಡ್ ತಂತ್ರಾಂಶವನ್ನು ಹಾಗೂ ಆರ್‌ಟಿಜಿಎಸ್/ನೆಫ್ಟ್ ಸೇವೆ, ವಾಹನ ವಿಮಾ ಸೌಲಭ್ಯ ಹಾಗೂ ಇ-ಸ್ಟಾಂಪಿಂಗ್ ಸೇವೆ ಹೊಂದಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್ ತಿಳಿಸಿದರು. ಸಂಘವು ತನ್ನ ಕ್ಷಿಪ್ರ ಹಾಗೂ ಪಾರದರ್ಶಕ ಬೆಳವಣಿಗೆಯ ಮೂಲಕ ಎಸ್‌ಸಿಡಿಸಿಸಿ ಬ್ಯಾಂಕ್‌ 2022-23ನೇ ಸಾಲಿನ ಸಾಧನಾ ಪ್ರಶಸ್ತಿ…

Read More

ಮಂಗಳೂರು: ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ವಜ್ರಮಹೋತ್ಸವ ಸಂಭ್ರಮಾಚರಣೆ ಪ್ರಯುಕ್ತ ಬೆಳ್ಳಂಪಳ್ಳಿಯ ಜೈಹಿಂದ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಅಗತ್ಯ ವಸ್ತುಗಳ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯರು ಶಾಲೆಗೆ, ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಸ್ಟೀಲ್ ಬಟ್ಟಲು ಮತ್ತು ಲೋಟಗಳನ್ನು ಹಸ್ತಾಂತರಿಸಿ, ಹಿಂದೆ ಬೆಳ್ಳಂಪಳ್ಳಿ ಶಾಖೆಯ ಉದ್ಘಾಟನಾ ಸಂದರ್ಭ ಕಾರ್ಯಕ್ರಮ ನೆರವೇರಿಸಲು ಸ್ಥಳಾವಕಾಶ ನೀಡಿದ ಈ ಶಾಲೆಗೆ ಇಂದು ಅಗತ್ಯ ವಸ್ತುಗಳನ್ನು ನೀಡುವ ಅವಕಾಶ ದೊರೆತಿರುವುದು ಹೆಮ್ಮೆಯ ವಿಷಯ ಎಂದರು. ಹಾವಂಜೆ -ಬೆಳ್ಳಂಪಳ್ಳಿ -ಕುಕ್ಕೆಹಳ್ಳಿ ವಿಶ್ವಕರ್ಮ ಸಮಾಜೋದ್ದಾರಕ ಸಂಘದ ಅಧ್ಯಕ್ಷ ಗೋಪಾಲ ಆಚಾರ್ಯ ಕೀಳಿಂಜೆ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬೆಳ್ಳಂಪಳ್ಳಿ- ಕುಕ್ಕಿಕಟ್ಟೆಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋವಿಂದರಾಜ್ ಹೆಗ್ಡೆ, ಪೆರ್ಡೂರು ಶಾಖೆಯ ನಿವೃತ್ತ ಹಿರಿಯ ಶಾಖಾ ವ್ಯವಸ್ಥಾಪಕ ನಾಗರಾಜ ಪ್ರಭು ಬಿ, ಜೈಹಿಂದ್ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಂಪಳ್ಳಿ ಶಾಲಾ ಸಂಚಾಲಕ ಬಿ.ಹರೀಶ್…

Read More