Author: admin
ಪ್ರತಿಷ್ಠಿತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟವ್ ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ ಗೌರವ ಮಂಗಳೂರು: ಪ್ರತಿಷ್ಠಿತ ಸಹಕಾರಿ ಸಂಸ್ಥೆ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಗಳಿಸಿ ಅತ್ಯುನ್ನತ ಸಾಧನೆ ಮಾಡಿದ ಸಂಘದ ಸದಸ್ಯರ ಮತ್ತು ಸಿಬ್ಬಂದಿಗಳ ಮಕ್ಕಳಿಗೆ ಸ್ಥಾಪಕಾಧ್ಯಕ್ಷ ಕೆ.ಬಿ.ಜಯಪಾಲ ಶೆಟ್ಟಿ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ಇತ್ತೀಚೆಗೆ ಮ೦ಗಳೂರಿನ ಉರ್ವ ಸೆಂಟನರಿ ಸಭಾಭವನದಲ್ಲಿ ಜರಗಿತು. ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಐ.ಎಸ್.ಆರ್ ಅಂಡ್ ಸಿ.ಆರ್.ಎಲ್ನ ಉಪಾಧ್ಯಕ್ಷ ಹಾಗೂ ಮಾಜಿ ಉಪಕುಲಪತಿ ಪ್ರೊ. ಡಾ|ಸತೀಶ್ ಕುಮಾರ್ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಸಂಘದ ಅಧ್ಯಕ್ಷ ಕೆ.ಜೈರಾಜ್ ಬಿ.ರೈ ಪ್ರಾಸ್ತಾವಿಕ ಮಾತನಾಡಿ, ತಮ್ಮ 78ನೇ ವಯಸ್ಸಿನಲ್ಲಿ ಸಂಘವನ್ನು ಸ್ಥಾಪಿಸಲು ಮುಂದಾಳತ್ವ ವಹಿಸಿ ಆರಂಭಿಕ ೨೦ ವರ್ಷಗಳ ಕಾಲ ಸಂಘದಲ್ಲಿ ಅಧ್ಯಕ್ಷರಾಗಿ ಸಂಘದ ಬೆಳವಣಿಗೆಗೆ ಉತ್ತಮ ಅಡಿಪಾಯ ಹಾಕಿಕೊಟ್ಟ ಸಂಘದ ಸ್ಥಾಪಕಾಧ್ಯಕ್ಷ ದಿ.ಕೆ.ಬಿ.ಜಯಪಾಲ ಶೆಟ್ಟಿಯವರ ಸಾಧನೆಗಳನ್ನು ಯುವಪೀಳಿಗೆಗೆ ಪರಿಚಯಿಸಿಕೊಟ್ಟು…
ಉಪಾಧ್ಯಕ್ಷರಾಗಿ ಸಂಜೀವ ಅಡ್ಯಾರ್ ಆಯ್ಕೆ ಸುಗಮವಾಗಿ ನಡೆದ ಚುನಾವಣಾ ಪ್ರಕ್ರಿಯೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ನೂತನ ಅಧ್ಯಕ್ಷರಾಗಿ ಮಾತೃಭೂಮಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ ದೇವಸ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಫಲ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪಂಪ್ವೆಲ್ನಲ್ಲಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಕಚೇರಿಯಲ್ಲಿ ಬುಧವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್, ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ಘೋಷಿಸಿದರು. ನಿರ್ದೇಶಕರಾಗಿ ವಲ್ಸರಾಜ್ ಎ(ಸ್ವಸ್ತಿಕ್ ಸೌಹಾರ್ದ), ಹರೀಶ ಪುತ್ತೂರಾಯ(ಶಿವಳ್ಳಿ ಸಂಪದ), ದೇವಿಪ್ರಸಾದ್ ಕೆ(ಶ್ರೀ ಸರಸ್ವತಿ ಕ್ರೆಡಿಟ್ ), ಸುಮಲತಾ ನವೀನ್ಚಂದ್ರ ಸುವರ್ಣ(ಶ್ರೀ ಗುರು ಸೌಹಾರ್ದ), ವಿನೋದರ ಪೂಜಾರಿ(ಭಾರತ್ ಸೌಹಾರ್ದ), ಗಣೇಶ್ ಶೆಣೈ(ಶ್ರೀ ಪೂರ್ಣಾನಂದ), ಲ್ಯಾನ್ಸಿ ಎ.ಪಿರೇರ(ಬೆಳ್ತಂಗಡಿ ಪ್ರೇರಣಾ ಸೌಹಾರ್ದ), ಅಮೃತ್ ರೈ.ಯು(ಸಮಷ್ಟಿ ಸೌಹಾರ್ದ), ಎಂ.ಎಸ್.ಗುರುರಾಜ್(ಶ್ರೀಶಾ), ಸುಧಾಕರ್(ಗ್ರಾಮ ಸಮೃದ್ಧಿ ಸೌಹಾರ್ದ), ದಾಮೋದರ ಕುಲಾಲ್(ಶ್ರೀಮಾತಾ ಸೌಹಾರ್ದ), ಉರ್ಬಾನ್ ಪಿಂಟೋ(ಕರ್ನಾಟಕ ರಾಜ್ಯ ವಿದ್ಯುತ್…
ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮಹಾಸಭೆ ಮಂಗಳವಾರ ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ನಡೆಯಿತು. ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಸೊಸೈಟಿಯ ಉಪಾಧ್ಯಕ್ಷ ಅಜಯ್ ಕುಮಾರ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಾಹಕ ಜೀವನ್ ಡಿಸೋಜ ಲೆಕ್ಕ ಪರಿಶೋಧನಾ ವರದಿ ವಾಚಿಸಿದರು. ಸಮಾಜಸೇವಕ ಸ್ಟೀವನ್ ಕೊಲಾಸೊ, ನಿವೃತ್ತ ಪ್ರಾಂಶುಪಾಲ ಡಾ.ನೇರಿ ಕರ್ನೇಲಿಯೋ ಉಪಸ್ಥಿತರಿದ್ದು, ಸಹಕಾರಿಯ ಅಭಿವೃದ್ಧಿ ಮತ್ತು ಸಹಕಾರಿಯ ಮಹತ್ವದ ಕುರಿತು ತಮ್ಮ ಅನಿಸಿಕೆಗಳನ್ನು ತಿಳಿಸಿದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಸಹಕಾರಿಯ ಅಧ್ಯಕ್ಷೆ ಜೆಸಿಂತಾ ಡಿಸೋಜ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಹಕಾರಿಯು ಅಭಿವೃದ್ಧಿ ಹೊಂದುತ್ತಿದ್ದು ತಮ್ಮೆಲ್ಲರ ಸಹಕಾರದಿಂದ ಈ ಮಟ್ಟಕ್ಕೆ ಬೆಳೆದಿದೆ ಎನ್ನಲು ಸಂತೋಷವಾಗುತ್ತದೆ ಎಂದು ತಿಳಿಸಿದರು. ಸೊಸೈಟಿಯ ನಿರ್ದೇಶಕರಾದ ಪ್ರಶಾಂತ್ ಕುಮಾರ್, ಜೂದ್ ನೆಲ್ಸನ್ ಡಿಸೋಜ, ಗುರುಚರಣ್ ನಾಯ್ಕ್, ರೋಹನ್ ಪ್ರಶಾಂತ್ ಕೊಲಾಸೊ, ಪ್ರಶಾಂತಿ ಪ್ರಿಯಾ ಕ್ಯಾಸ್ಟಲಿನೋ, ಸೀಮಾ, ಅಜಿತ್, ಸಿಬ್ಬಂದಿ ವರ್ಗ ಹಾಗೂ ಸಹಕಾರಿಯ ಸದಸ್ಯರು ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಾಹಕ ಜೀವನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.…
ಉಡುಪಿ: ಶ್ರೀ ಮಹಾಲಿಂಗೇಶ್ವರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ ತೆಕ್ಕಟ್ಟೆ ಇದರ ಆರನೇ ವರ್ಷದ ವಾರ್ಷಿಕ ಮಹಾಸಭೆ ಇತ್ತೀಚೆಗೆ ತೆಕ್ಕಟ್ಟೆಯ ಹಯಗ್ರೀವ ಸಭಾಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಅಶೋಕ ಕುಮಾರ್ ಪಿ ಅಧ್ಯಕ್ಷತೆಯಲ್ಲಿ ನಡೆಯಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಸಂಸ್ಥೆಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ, ನಿರ್ದೇಶಕರಾದ ಸುಬ್ಬಣ್ಣ ಉಪಾಧ್ಯಾಯ , ಎನ್.ಕರುಣಾಕರ ಶೆಟ್ಟಿ, ಎಂ.ಬಾಬು ಪೂಜಾರಿ, ಕೆ.ಪುಷ್ಪಲತಾ ಶೆಟ್ಟಿ, ವಿಜಯಲಕ್ಷ್ಮಿ ಅಡಿಗ, ಹಾಗೂ ಶಾಲಿನಿ ವಿ.ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಚಂದ್ರಕಾಂತ ಶೆಟ್ಟಿ ಸ್ವಾಗತಿಸಿ ವಾರ್ಷಿಕ ವರದಿ ಮಂಡಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಧಾರ್ಮಿಕ ದತ್ತಿ ಮುಜರಾಯಿ ಇಲಾಖೆ ಸಹಾಯಕ ಆಯುಕ್ತ ಪ್ರಶಾಂತ ಶೆಟ್ಟಿ ಹಾಗೂ ವೈದಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಕುಸುಮಾಕರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಗಣ್ಯರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕೆದೂರು ಸದಾನಂದ ಶೆಟ್ಟಿ, ಲೆಕ್ಕಪರಿಶೋಧಕ ರಾಜೀವ್ ಶೆಟ್ಟಿ ಮಲ್ಯಾಡಿ , ವಿಜಯ ಬ್ಯಾಂಕ್ ನಿವೃತ್ತ ಸೀನಿಯರ್ ಮ್ಯಾನೇಜರ್ ಮಂಜುನಾಥ ಶೆಟ್ಟಿ…
ಸಹಕಾರಿ ಸಂಘಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಲಹೆ ಮುಂಬೈ: ಸಮಾಜದಲ್ಲಿ ಅಂತರ್ಗತವಾಗಿರುವ ಶಕ್ತಿಯನ್ನು ಬಳಸಿಕೊಳ್ಳುವಲ್ಲಿ ಸಹಕಾರಿ ಸಂಘಗಳು ಪ್ರಮುಖ ಪಾತ್ರ ವಹಿಸುತ್ತವೆ. ಸಹಕಾರಿ ಚಳುವಳಿಯು ನ್ಯಾಯ, ಏಕತೆ ಮತ್ತು ಭ್ರಾತೃತ್ವದ ಪರಿಕಲ್ಪನೆಗಳನ್ನು ಮುನ್ನೆಲೆಗೆ ತಂದು ಕಾರ್ಯ ನಿರ್ವಹಿಸುವುದರ ಜೊತೆಗೆ ವಿವಿಧ ವರ್ಗಗಳ ಜನರನ್ನು ಸೈದ್ಧಾಂತಿಕವಾಗಿ ಒಗ್ಗೂಡಿಸಿ ಸಾಮಾಜಿಕವಾಗಿ ಏಕತೆ ಮೂಡಿಸುವಲ್ಲಿ ಸಹಕರಿಸುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಮಹಾರಾಷ್ಟ್ರದ ಕೊಲ್ಹಾಪುರದ ವಾರನನಗರ ಶ್ರೀ ವಾರನ ಮಹಿಳಾ ಕೋ ಆಪರೇಟಿವ್ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಭಾರತದ ಅರ್ಥ ವ್ಯವಸ್ಥೆಯ ಬೆಳವಣಿಗೆಯಲ್ಲಿ ಸಹಕಾರಿಗಳ ಪಾತ್ರ ಬಹಳ ಪ್ರಮುಖವಾದುದು. ವೃತ್ತಿಪರ ನಿರ್ವಹಣಾ ಅಭ್ಯಾಸಗಳನ್ನು ಸಹಕಾರಿ ಕ್ಷೇತ್ರ ರೂಢಿಸಿಕೊಳ್ಳಬೇಕು. ದೇಶ -ವಿದೇಶಗಳಲ್ಲಿ ಮನೆಮಾತಾಗಿರುವ ಅಮುಲ್, ಲಿಜ್ಜತ್ ಹಪ್ಪಳದಂಥ ಸಹಕಾರಿಗಳ ಯಶಸ್ಸು ಭಾರತದ ಆರ್ಥಿಕ ವ್ಯವಸ್ಥೆಯ ಬೆಳವಣಿಗೆಯಲ್ಲಿ ಸಹಕಾರಿಗಳ ಪಾತ್ರವನ್ನು ವಿಶದೀಕರಿಸಿವೆ. ವಿಶೇಷವಾಗಿ ಹೈನುಗಾರಿಕಾ ವಲಯದಲ್ಲಿ ಸಹಕಾರ ವಲಯದಿಂದ ಮಹತ್ವದ ಸಾಧನೆ ದಾಖಲಾಗಿದೆ. ಭಾರತ ವಿಶ್ವದ ಅತಿದೊಡ್ಡ ಹಾಲು ಉತ್ಪಾದಕ ದೇಶವೆನಿಸಿದ್ದರಲ್ಲಿ ಸಹಕಾರಿಗಳ…
ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕೆ.ಜೈರಾಜ್ ಬಿ.ರೈ ಘೋಷಣೆ ಮಂಗಳೂರು: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 30ನೇ ವಾರ್ಷಿಕ ಮಹಾಸಭೆ, ಸ೦ಘದ ಅಧ್ಯಕ್ಷ ಕೆ.ಜೈರಾಜ್ ಬಿ.ರೈಯವರ ಅಧ್ಯಕ್ಷತೆಯಲ್ಲಿ ಮ೦ಗಳೂರಿನ ಉರ್ವ ಸೆ೦ಟನರಿ ಚರ್ಚ್ ಹಾಲ್ನಲ್ಲಿ ಭಾನುವಾರ ಜರುಗಿತು. ಸ೦ಘವು 31-03-2024ಕ್ಕೆ ಅ೦ತ್ಯವಾದ 2023-24ನೇ ಸಾಲಿನಲ್ಲಿ ರೂ.12.01 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.25 ಡಿವಿಡೆ೦ಡ್ ನೀಡಲು ಮಹಾಸಭೆಯಲ್ಲಿ ನಿರ್ಧರಿಸಿದೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಸಂಘದ ಅಧ್ಯಕ್ಷ ಕೆ.ಜೈರಾಜ್ ಬಿ.ರೈಯವರು 2023-24ನೇ ಸಾಲಿನ ಆಡಳಿತ ಮಂಡಳಿಯ ವರದಿ ಮತ್ತು ಕಾರ್ಯಯೋಜನೆಗಳನ್ನು ಮಂಡಿಸಿ ಮಾತನಾಡಿ, ಠೇವಣಾತಿ ಮತ್ತು ಸಾಲ ಸೇರಿದಂತೆ ಒಟ್ಟು ಸಾರ್ವಕಾಲಿಕ ದಾಖಲೆಯ ರೂ. 151 ಕೋಟಿ ವೃದ್ಧಿಯನ್ನು ದಾಖಲಿಸಿ, 533 ಕೋಟಿ ಠೇವಣಾತಿ, ರೂ.453 ಕೋಟಿ ಸಾಲ, ರೂ.986 ಕೋಟಿ ಮೀರಿದ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ ಹಾಗೂ ರೂ. 3974 ಕೋಟಿ ಒಟ್ಟು ವಹಿವಾಟನ್ನು ಸಾಧಿಸಿದೆ. ಸಂಘದ ಸಾಧನೆಯ ಪ್ರಮುಖ ಮತ್ತೊಂದು ಅಂಶ ಒಟ್ಟು ಅನುತ್ಪಾದಕ ಆಸ್ತಿಯು…
ಮಂಗಳೂರು: ಎಸ್.ಕೆ ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯಲ್ಲಿ ಇತ್ತೀಚೆಗೆ ಪಂಚ ಕಸುಬುಗಳಲ್ಲಿ ಅದ್ವಿತೀಯ ಸಾಧನೆಗೈದ ಐವರು ಶಿಲ್ಪಿಗಳಿಗೆ ಎಸ್.ಕೆ.ಜಿ.ಐ.ಪಾಲ್ಕೆ – ಪ್ರಶಸ್ತಿ ಪ್ರದಾನ ಮಾಡಲಾಯಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಸ್ವರ್ಣಶಿಲ್ಪ ಕ್ಷೇತ್ರ ಸಾಧಕ ಎಚ್.ಗೋಪಾಲ ಆಚಾರ್ಯ ಬೆಳ್ತಂಗಡಿ, ಕಾಷ್ಠಶಿಲ್ಪ ಕ್ಷೇತ್ರದ ಸಾಧಕ ಮಾಧವ ಆಚಾರ್ಯ ಸಂತೆಕಟ್ಟೆ, ಉಡುಪಿ, ಎರಕ ಶಿಲ್ಪದ ಸಾಧಕ ರಾಮಚಂದ್ರ ಆಚಾರ್ಯ ಕುಂಟಾಡಿ, ಕಾರ್ಕಳ, ಅಯಸ್ ಶಿಲ್ಪ ಕ್ಷೇತ್ರದ ಸಾಧಕ ಸೀತಾರಾಮ ಆಚಾರ್ಯ ಗುಂಡಮಜಲು ಮುಡಿಪು ಮತ್ತು ಶಿಲಾ ಶಿಲ್ಪ ಕ್ಷೇತ್ರದ ಸಾಧಕ ಸೂರ್ಯಕಾಂತ ಆಚಾರ್ಯ ಶಿರ್ವ ಇವರಿಗೆ 2023-24ರ ಸಾಲಿನ ಪ್ರಶಸ್ತಿಯನ್ನು ಸಂಸ್ಥೆ ಅಧ್ಯಕ್ಷರಾದ ಶ್ಪಿ.ಉಪೇಂದ್ರ ಆಚಾರ್ಯ, ಉಪಾಧ್ಯಕ್ಷರಾದ ಎ.ಆನಂದ ಆಚಾರ್ಯ, ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ನೀಡಿ ಗೌರವಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಶ್ರೀ ಪೂರ್ಣಾನಂದ ಸಹಕಾರಿ ವಾರ್ಷಿಕ ಸಭೆಯಲ್ಲಿ ಗಣೇಶ್ ಶೆಣೈ ಅಭಿಪ್ರಾಯ ಮಂಗಳೂರು: ನಾವಿಂದು ನೆಮ್ಮದಿಯ, ಸುರಕ್ಷಿತ ಜೀವನ ನಡೆಸಲು ಮೂಲ ಕಾರಣ ನಮ್ಮ ಭಾರತೀಯ ಸೇನಾಪಡೆಯ ಯೋಧರು. ಯೋಧರು ಅಹೋರಾತ್ರಿ ದೇಶದ ದುರ್ಗಮ ಗಡಿಗಳನ್ನು ಕಾಯುತ್ತಿರುವ ಕಾರಣ, ನಮಗೆ ನಿಶ್ಚಿಂತೆಯ ಬದುಕು ಸುಗಮ ಸಾಧ್ಯವಾಗಿದೆ. ಇದೇ ವೇಳೆ, ಬಲಿದಾನಿ ಯೋಧರ ಕುಟುಂಬಗಳ ಬದುಕು ನಿತ್ಯವೂ ಕ್ಷಣಕ್ಷಣವೂ ಆತಂಕದಿಂದ ಕೂಡಿರುವುದು ಕೂಡ ಅಷ್ಟೇ ಸತ್ಯ. ರಾಷ್ಟ್ರರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಬಲಿ ಕೊಡುವ ಯೋಧರ ಮತ್ತು ಅವರ ಕುಟುಂಬಗಳ ಕಲ್ಯಾಣಕ್ಕಾಗಿ, ಅವರ ನೆಮ್ಮದಿಯ ನಾಳೆಗಾಗಿ ಕಿಂಚಿತ್ತು ನೆರವಿನ ಹಸ್ತ ಚಾಚುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಗಣೇಶ್ ಶೆಣೈ ಹೇಳಿದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಮಂಗಳೂರು ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಭಾನುವಾರ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ೨೨ನೇ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆಯ ಲಾಭಾಂಶದಲ್ಲಿ ದೇಶದ ರಕ್ಷಣಾ ಯೋಧರಿಗೆ ಕೊಡುಗೆ…
ಹಳೇಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಎಚ್.ಪದ್ಮ ಗೌಡ ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ಆಯ್ಕೆ
ಬೆಳ್ತಂಗಡಿ: ಹಳೇಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಎಚ್.ಪದ್ಮ ಗೌಡ ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ನಿರ್ದೇಶಕರಾಗಿ ಗೋಪಾಲಕೃಷ್ಣ ಬಿ.ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ.ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್. ಮೊಗ್ರು, ಉಷಾದೇವಿ ಕಿನ್ಯಾಜೆ, ಭವಾನಿ ಕೆ.ಗೌಡ ಮೂಡಾಯೂರು, ಶ್ರೀನಾಥ್ ಕೆ.ಎಂ ನಡ ಆಯ್ಕೆಯಾಗಿದ್ದಾರೆ. ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಮಂಗಳೂರು: ಇಲ್ಲಿನ ಸೈಂಟ್ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಮೊದಲನೇ ವಾರ್ಷಿಕ ಮಹಾಸಭೆ ಸೈಂಟ್ ಅಲ್ಫೋನ್ಸಾ ಚರ್ಚ್ ಹಾಲ್ನಲ್ಲಿ ಭಾನುವಾರ ನಡೆಯಿತು. ಮರ್ಸಿ ಟಿ ಪ್ರಾರ್ಥನೆ ಹಾಡಿದರು. ರೆ.ಫಾದರ್ ಮಾಣಿ ವೆಳುತ್ತೇಡತ್ತು ಪರಂಬಿಲ್, ರೆ.ಫಾದರ್ ಅಗಸ್ಟಿನ್, ಸಂಸ್ಥೆಯ ಅಧ್ಯಕ್ಷ ಜೇಮ್ಸ್ ಮುಂಡಟ್ಟು ವರ್ಕೀ ಹಾಗೂ ಸಂಘದ ಎಲ್ಲ ನಿರ್ದೇಶಕರು ದೀಪ ಬೆಳಗಿಸಿದರು. ಸಹಕಾರಿಯ ಉಪಾಧ್ಯಕ್ಷ ಕೆ.ಜೆ ಆಂಟೋನಿ ಸ್ವಾಗತ ಭಾಷಣ ಮಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಟಿ.ಬಂಗೇರ ವಾರ್ಷಿಕ ಸಭೆಯ ಸೂಚನಾ ಪತ್ರ ಮಂಡಿಸಿದರು. ಸಹಕಾರಿಯ ಸಿಬ್ಬಂದಿ ವೇದಾವತಿ ಹಿಂದಿನ ಸಭೆಯ ನಡಾವಳಿಗಳನ್ನು ಸಭೆಯಲ್ಲಿ ಮಂಡಿಸಿದರು. ನಿರ್ದೇಶಕ ಮನೋಜ್ ಪಿ.ವಿ ೨೦೨೩-೨೪ನೇ ಸಾಲಿನ ಆಡಳಿತ ಮಂಡಳಿಯ ವರದಿ ಮಂಡಿಸಿದರು. ನಿರ್ದೇಶಕ ಗಬ್ರಿಯಲ್ ವಿ.ವಿ ೨೦೨೩-೨೪ ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ ಹಾಗೂ ಪರಿಶೋಧಿತ ಲೆಕ್ಕ ಪತ್ರವನ್ನು ಮಂಡಿಸಿದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಸಹಕಾರಿಯ ಅಧ್ಯಕ್ಷ ಜೇಮ್ಸ್ ಮುಂಡಟ್ಟು ವರ್ಕೀ ಅಧ್ಯಕ್ಷೀಯ ಭಾಷಣದಲ್ಲಿ ಸಹಕಾರಿಯ ಏಳಿಗೆಯು ಸಹಕಾರಿಯ ಸದಸ್ಯರ ಸಹಕಾರದಿಂದ ಆಗುತ್ತದೆ. ಸದಸ್ಯರ…
