Author: admin
ಹಂಪನಕಟ್ಟೆ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಆಯೋಜನೆ ಮಂಗಳೂರು: ಒಡಿಯೂರು ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ, ಗ್ರಾಮೋತ್ಸವ, ಸೇವಾ ಸಂಭ್ರಮ ಪ್ರಯುಕ್ತ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್ 4ರಂದು ಭಾನುವಾರ ಬೆಳಗ್ಗೆ 9.30ರಿಂದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಲಿದೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಭಾರತೀಯ ರೆಡ್ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಮತ್ತು ವಿವಿಧ ಘಟಕಗಳು, ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿ, ಬಂಟರ ಸಂಘ ಜಪ್ಪು, ಯುವ ರೆಡ್ಕ್ರಾಸ್ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ಹಂಪನಕಟ್ಟೆ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಶ್ರೀ ಗುರುದೇವ ಸೇವಾ ಬಳಗ ಮಂಗಳೂರು, ಜಪ್ಪಿನಮೊಗರು ಬಂಟರ ಸಂಘ, ಕ್ರೀಡಾ ಭಾರತಿ ಮಂಗಳೂರು, ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂದ್ರ…
ಐದನೇ ವಾರ್ಷಿಕ ಮಹಾಸಭೆ ಸಂಪನ್ನ ಪರಿಸರ ಪ್ರೇಮಿ ಮಾಧವ ಉಳ್ಳಾಲ್ಗೆ ಸನ್ಮಾನ ಮಂಗಳೂರು: ಸಫಲ ಸೌಹಾರ್ದ ಸಹಕಾರಿಯ ಐದನೇ ವಾರ್ಷಿಕ ಮಹಾಸಭೆ ಕೈಕಂಬದ ಮಾತೃಭೂಮಿ ಗ್ರ್ಯಾಂಡ್ ಗ್ಯಾಲಕ್ಸಿ ಹಾಲ್ನಲ್ಲಿ ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿದ್ದು ಶೇ.12ರಷ್ಟು ಡಿವಿಡೆಂಡ್ ಘೋಷಿಸಲಾಗಿದೆ. ಸಲಹಾ ಸಮಿತಿ ಸದಸ್ಯ ರವೀಂದ್ರ ಮಂಜೇಶ್ವರ ಕಾರ್ಯಕ್ರಮ ಉದ್ಘಾಟಿಸಿದರು. ನಿರ್ದೇಶಕ ಭಾಸ್ಕರ ಸಫಲಿಗೆ ಎಡಪದವು ಸ್ವಾಗತಿಸಿದರು. ಸಂಘದ ಸದಸ್ಯ, ಉಳ್ಳಾಲ ಶಾಖೆಯ ಸಲಹಾ ಸಮಿತಿ ಸದಸ್ಯರಾದ ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಅವರನ್ನುಸನ್ಮಾನಿಸಲಾಯಿತು. ದೀಪಕ್ ಅಡ್ಯಾರ್ ಸಮ್ಮಾನ ಪತ್ರ ವಾಚಿಸಿದರು. ಸಂಘದ ಪ್ರಧಾನ ವ್ಯವಸ್ಥಾಪಕ ಪ್ರಮೋದ್ ಕುಮಾರ್ ಕಳೆದ ಸಾಲಿನ ವಾರ್ಷಿಕ ಮಹಾಸಭೆಯ ನಡವಳಿಕೆ, ವಾರ್ಷಿಕ ವರದಿ, ಕಳೆದ ಸಾಲಿನ ಲೆಕ್ಕಪತ್ರ 2024-25ರ ಸಾಲಿನ ಬಜೆಟ್, 2024-25 ಸಾಲಿನ ಉದ್ದೇಶಿತ ಕಾರ್ಯ ಚಟುವಟಿಕೆಗಳು, ಹೊಸ ಶಾಖೆಗಳು, ಹೊಸ ಸಿಬಂದಿ ನೇಮಕಾತಿ ವಿಚಾರಗಳ ಮಂಡನೆ ಮಾಡಿ ಅದಕ್ಕೆ ಅನುಮತಿ ಪಡೆದುಕೊಂಡರು. https://chat.whatsapp.com/Ge11n7QCiMj5QyPvCc0H19 ಸದಸ್ಯರಾದ ಸುಂದರ ಶೆಟ್ಟಿ ಕಣ್ಣೂರು ನಾರಾಯಣ…
ರಾಜ್ಯಸಭೆಯಲ್ಲಿ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಮಾಹಿತಿ ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ 2014ರಿಂದ ವಿವಿಧ ಕಾರಣಗಳಿಗಾಗಿ 78 ಪಟ್ಟಣ ಸಹಕಾರಿ ಬ್ಯಾಂಕ್ಗಳ ಪರವಾನಗಿ ರದ್ದು ಮಾಡಿದೆ ಎಂದು ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು, ಅಸಮರ್ಪಕ ಬಂಡವಾಳ, ಕಳಪೆ ಲಾಭ ಗಳಿಕೆ, ಹದಗೆಡುತ್ತಿರುವ ಹಣಕಾಸಿನ ಸ್ಥಿತಿಗತಿಗಳು, ಸಾರ್ವಜನಿಕ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಹೂಡಿಕೆದಾರರಿಂದ ಠೇವಣಾತಿ ಈ ಎಲ್ಲ ಕಾರಣಗಳಿಂದ ಬ್ಯಾಂಕ್ಗಳ ಪರವಾನಗಿ ಹಿಂಪಡೆಯಲಾಗಿದೆ. 2024ರ ಜನವರಿಯಿಂದ ಜುಲೈ ತನಕ 10, 2023ರಲ್ಲಿ 18 ಪಟ್ಟಣ ಸಹಕಾರ ಬ್ಯಾಂಕ್ಗಳ ಲೈಸೆನ್ಸ್ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಹಕಾರಿ ಬ್ಯಾಂಕ್ಗಳ ಪರಿಣಾಮಕಾರಿ ಕಾರ್ಯನಿರ್ವಹಣೆ ಮತ್ತು ಹಣಕಾಸಿನ ಸ್ಥಿತಿಗತಿ ಮೇಲೆ ನಿಗಾ ಇಡಲು ಆರ್ಬಿಐ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು. https://chat.whatsapp.com/Ge11n7QCiMj5QyPvCc0H19 ನಬಾರ್ಡ್ ಮಾಹಿತಿಯ ಪ್ರಕಾರ 2014ರಿಂದ ಯಾವುದೇ ಗ್ರಾಮೀಣ ಸಹಕಾರಿ ಬ್ಯಾಂಕ್ಗಳು, ರಾಜ್ಯಮಟ್ಟದ ಸಹಕಾರಿ ಬ್ಯಾಂಕ್ಗಳು ಹಾಗೂ ಜಿಲ್ಲಾ ಕೇಂದ್ರ…
ಮಂಗಳೂರು: ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ಭಾನುವಾರ ಮಂಗಳೂರು ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರನ್ನು ಸನ್ಮಾನಿಸಲಾಯಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಶ್ರೀ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ.ಹರಿಪ್ರಸಾದ್ ಅವರನ್ನೂ ಗೌರವಿಸಲಾಯಿತು. ಶಾಸಕ ವೇದವ್ಯಾಸ ಕಾಮತ್, ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ನಮ್ಮ ಕುಡ್ಲ ಸಂಸ್ಥೆ ಮುಖ್ಯಸ್ಥ ಲೀಲಾಕ್ಷ ಕರ್ಕೇರ, ಡೀನೆಟ್ ಮ್ಯಾನೇಜಿಂಗ್ ಡೈರೆಕ್ಟರ್ ಸಂದೇಶ್ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ.ಟಿ.ಸುವರ್ಣ, ಶಿಕ್ಷಣ ತಜ್ಞೆ ಶಶಿಲೇಖಾ, ಪೊಲೀಸ್ ಅಧಿಕಾರಿ ಹರೀಶ್ ಪದವಿನಂಗಡಿ, ಹೋಮಿಯೋಪಥಿ ವೈದ್ಯ ಡಾ.ಶಿವಪ್ರಸಾದ್, ಶಿರ್ಡಿಬಾಬ ರಿಯಲ್ ಎಸ್ಟೇಟ್ ಮಾಲೀಕ ರತೀಂದ್ರನಾಥ್,…
ಮಹಾರಾಷ್ಟ್ರದ ಹರಿಬಾವು ಬಾಡಗೆಗೆ ಒಲಿದ ಗವರ್ನರ್ ಪಟ್ಟ ದೆಹಲಿ: ಹಿರಿಯ ಸಹಕಾರಿ, ಮಹಾರಾಷ್ಟ್ರದ ಹರಿಬಾವು ಬಾಡಗೆ ರಾಜಸ್ಥಾನದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಸಹಕಾರಿ ಕ್ಷೇತ್ರದಿಂದ ರಾಜಕಾರಣಕ್ಕೆ ಕಾಲಿಟ್ಟಿದ್ದ ಬಾಡಗೆ ಮೊದಲಿಗೆ ಸಹಕಾರ ಕ್ಷೇತ್ರದಲ್ಲಿ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಔರಂಗಾಬಾದ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಆಡಳಿತ ಮಂಡಳಿ ಸದಸ್ಯರಾಗಿದ್ದ ಇವರು ಸಹಕಾರ ಭಾರತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಸಂಭಾಜಿನಗರ(ಔರಂಗಾಬಾದ್) ಮೂಲದವರಾದ ಇವರು, ಮರಾಠವಾಡದಲ್ಲಿ ಅತ್ಯುತ್ತಮ ಸಹಕಾರ ಬ್ಯಾಂಕ್ಗಳಲ್ಲೊಂದಾದ ದೇವಗಿರಿ ನಗರಿ ಸಹಕಾರಿ ಬ್ಯಾಂಕ್ನ ಸ್ಥಾಪಕರಲ್ಲೊಬ್ಬರಾಗಿದ್ದರು. ಛತ್ರಪತಿ ಸಂಭಾಜಿ ರಾಜೆ ಸಹಕಾರ್ ಉದ್ಯೋಗ್ನ ಮುಖ್ಯಸ್ಥರಾಗಿದ್ದರಲ್ಲದೆ, ಪುಣೆಯ ಜನತಾ ಸಹಕಾರಿ ಬ್ಯಾಂಕ್ನ ಷೇರುದಾರರಾಗಿದ್ದರು. 1945ರ ಆಗಸ್ಟ್ 17ರಂದು ಜನಿಸಿದ್ದ ಇವರು, 2004ರಲ್ಲಿ ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಕೂಡ ಆಗಿದ್ದರು. 5 ಅವಧಿಗೆ ಫುಲಂಬ್ರಿ ಕ್ಷೇತ್ರದ ಶಾಸಕರಾಗಿದ್ದರು. ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ವಿಳಾಸಕ್ಕೆ ಮೇಲ್ ಮಾಡಿ: Email: editor@sahakaraspandana.in, sahakaraspandana@gmail.com ಮಾಹಿತಿಗೆ: 9901319694.
ಮಂಗಳೂರು: ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ವಿಶ್ವ ಬೆಳಕು ಸೌಹಾರ್ದ ಸಹಕಾರ ನಿಯಮಿತದಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾನುವಾರ ಕದ್ರಿ ಶ್ರೀ ಗೋರಕ್ಷನಾಥ ಮಿನಿ ಹಾಲ್ ನಲ್ಲಿ ಜರಗಿತು. ಖ್ಯಾತ ನಿರೂಪಕ ನವೀನ್ ಶೆಟ್ಟಿೆ ಎಡ್ಮೆಮಾರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದಿನ ದಿನಗಳಲ್ಲಿ ಆಟಿಯ ದಿನಗಳು ಕಷ್ಟಕರವಾಗಿದ್ದವು. ಬಿರುಸಿನ ಮಳೆಯ ದಿನಗಳಲ್ಲಿ ಕೃಷಿ ಚಟುವಟಿಕೆಗಳು ಇಲ್ಲದೆ ಕಷ್ಟದಲ್ಲಿ ದಿನಗಳೆಯಬೇಕಾಗಿತ್ತು. ಅಂದಿನ ದಿನಗಳನ್ನು ನೆನಪಿಸುವ ಸಲುವಾಗಿ ಈ ಆಟಿಡೊಂಜಿ ಕಾರ್ಯಕ್ರಮಗಳನ್ನು ಅಲ್ಲಲ್ಲಿಆಚರಿಸಲಾಗುತ್ತಿದೆ ಎಂದು ಹೇಳಿದರು. ಪ್ರತಿಭಾನ್ವಿತರಿಗೆ ಸನ್ಮಾನ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆದವು. ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಮೂಲತ್ವ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಲಕ್ಷ್ಮೀಶ ಕೋಟ್ಯಾನ್, ಕಲ್ಪನಾ ಕೋಟ್ಯಾನ್, ಮಹೇಶ್ ಅಮೀನ್, ಪ್ರಶಾಂತ್ ರೈ ಶೈನಿ, ಜಯಶ್ರೀ ಕುಡುಪು ಹಾಗೂ ರಾಮ್ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು. ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ: ಇಮೇಲ್: sahakaraspandana@gmail.com ಮಾಹಿತಿಗೆ: 9901319694
ಕೇಂದ್ರ ಸರ್ಕಾರದ ಮುಂದಿದೆ ಪ್ರಸ್ತಾವನೆ ನವದೆಹಲಿ; ಸಹಕಾರಿ ಕ್ಷೇತ್ರದಲ್ಲಿ ಶೀಘ್ರ ರಾಷ್ಟ್ರೀಯ ಮಟ್ಟದ ಕೋ ಆಪರೇಟಿವ್ ಯುನಿವರ್ಸಿಟಿ ಆರಂಭವಾಗಲಿದೆ. ಸಂಸತ್ನಲ್ಲಿ ಗುರುವಾರ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಸಹಕಾರ ಸಚಿವ ಅಮಿತ್ ಶಾ, ರಾಷ್ಟ್ರೀಯ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆಯ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಇದಕ್ಕೆ ರೂಪುರೇಷೆ ತಯಾರಿಸಿ, ಹಣಕಾಸು ಹೊಂದಿಸಲಾಗುತ್ತಿದೆ ಎಂದು ತಿಳಿಸಿದರು. https://chat.whatsapp.com/Ge11n7QCiMj5QyPvCc0H19 ಸಹಕಾರ ಸಚಿವಾಲಯವು ರಾಷ್ಟ್ರೀಯ ಮಟ್ಟದ ಸಹಕಾರ ವಿಶ್ವವಿದ್ಯಾಲಯ ಆರಂಭಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಸಹಕಾರ ವಲಯದಲ್ಲಿ ತಂತ್ರಜ್ಞಾನ ಆಧಾರಿತ, ಆಡಳಿತ ನಿರ್ವಹಣೆಯ ಶಿಕ್ಷಣ ಮತ್ತು ತರಬೇತಿ ನೀಡುವ ನಿಟ್ಟಿನಲ್ಲಿ ಇದು ಸಹಕಾರಿಯಾಗಲಿದೆ. ಜೊತೆಗೆ ಸಹಕಾರಿ ವಲಯದಲ್ಲಿ ಸಂಶೋಧನೆಗಳು, ಅಭಿವೃದ್ಧಿ ಮತ್ತು ಸಹಕಾರ ಕ್ಷೇತ್ರವನ್ನು ಮ್ತಷ್ಟು ಬಲಪಡಿಸುವ ಇರಾದೆ ಇದರಲ್ಲಿದೆ ಎಂದು ತಿಳಿಸಿದರು. ಪ್ರಸ್ತಾವಿತ ವಿಶ್ವವಿದ್ಯಾಲಯದ ಕುರಿತಂತೆ ವಿವಿಧ ಸಚಿವಾಲಯಗಳು/ಇಲಾಖೆಗಳು, ರಾಜ್ಯ ಸರ್ಕಾರಗಳು, ರಾಷ್ಟ್ರೀಯ ಸಹಕಾರ/ಸಂಘಗಳು, ಸಹಕಾರಿ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳು, ಸಂಸ್ಥೆಗಳ ಜೊತೆ ವ್ಯಾಪಕ ಸಮಾಲೋಚನೆ ನಡೆಸಿ ಉದ್ದೇಶಿತ ವಿಶ್ವವಿದ್ಯಾನಿಲಯದ…
ಡೈರಿ ವಲಯದಲ್ಲಿ ಅತಿ ಹೆಚ್ಚು ಕೋ ಆಪರೇಟಿವ್ ಸೊಸೈಟಿಗಳು ಮಹಾರಾಷ್ಟ್ರ, ಗುಜರಾತ್ನಲ್ಲಿಗರಿಷ್ಠ ಸಹಕಾರಿ ಸಂಸ್ಥೆಗಳು ರಾಜ್ಯಸಭೆಯಲ್ಲಿ ಸಹಕಾರಿ ಸಚಿವ ಅಮಿತ್ ಶಾ ಮಾಹಿತಿ ನವದೆಹಲಿ: ಕೇಂದ್ರದ ಸಹಕಾರ ಸಚಿವಾಲಯ, ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಸಮಗ್ರ ರಾಷ್ಟ್ರೀಯ ಸಹಕಾರಿ ಡೇಟಾಬೇಸ್ (NCD) ಅನ್ನು ಅಭಿವೃದ್ಧಿಪಡಿಸಿದ್ದು, ಇದರಲ್ಲಿ ಡೈರಿ, ಮಹಿಳಾ ಕಲ್ಯಾಣ ಮತ್ತು ಬುಡಕಟ್ಟು ಎಸ್ಸಿ/ಎಸ್ಟಿ ಸಹಕಾರಿ ಸೇರಿದಂತೆ ವಿವಿಧ ವಲಯಗಳ ಡೇಟಾಗಳ ಮಾಹಿತಿಗಳಿವೆ. ಎನ್ಸಿಡಿ ಪೋರ್ಟಲ್ ಪ್ರಕಾರ, ದೇಶದಲ್ಲಿ ಒಟ್ಟು 8,09,303 ಸಹಕಾರ ಸಂಘಗಳಿವೆ. ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡುವ ವೇಳೆ ಮಾತನಾಡಿದ ಸಹಕಾರ ಸಚಿವ ಅಮಿತ್ ಶಾ, ರಾಜ್ಯವಾರು ಮತ್ತು ವಲಯವಾರು ಸಹಕಾರಿಗಳ ವಿವರಗಳು ರಾಷ್ಟ್ರವ್ಯಾಪಿ ಸಹಕಾರಿ ಮೂಲಸೌಕರ್ಯವನ್ನು ಬಲಪಡಿಸಲು ಕಾರಣವಾಗುತ್ತದೆ ಎಂದು ಹೇಳಿದರು. ಮಹಾರಾಷ್ಟ್ರದಲ್ಲಿ 2,22,324, ಗುಜರಾತ್ನಲ್ಲಿ 82,143, ತೆಲಂಗಾಣದಲ್ಲಿ 60,619, ಮಧ್ಯಪ್ರದೇಶ 53,134, ಕರ್ನಾಟಕ 45,461, ಉತ್ತರಪ್ರದೇಶ 44,579, ಹರ್ಯಾಣ 32,860, ಬಿಹಾರ 26,655, ಪಂಜಾಬ್ 19,074, ಆಂಧ್ರಪ್ರದೇಶ 17,675, ಅಸ್ಸಾಮ್ 11,204 ಸೊಸೈಟಿಗಳನ್ನು ಹೊಂದಿವೆ. ಡೈರಿ ವಲಯದಲ್ಲಿ…
ವಿಜಯಪುರ: ವಿಜಯಪುರ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವ ಹಾಗೂ ಮರಗಳ ಸಂರಕ್ಷಣೆಗೆ ಸಿದ್ಧಸಿರಿ ಸೌಹಾರ್ದ ಸಹಕಾರಿಯ ವತಿಯಿಂದ 10 ಲಕ್ಷ ರೂ. ದೇಣಿಗೆಯನ್ನು ಜಿಲ್ಲಾಧಿಕಾರಿ ಡಿ.ಭೂಬಾಲನ್ ಅವರಿಗೆ ಹಸ್ತಾಂತರಿಸಲಾಯಿತು. ಗಿಡ ಮರಗಳ ರಕ್ಷಣೆಗೆ ಸಂಬಂಧಿಸಿ ಸಿದ್ಧಸಿರಿ ಸೌಹಾರ್ದ ಸಹಕಾರಿಯ ಶಾಸಕ ಹಾಗೂ ಸಂಘದ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಆಡಳಿತ ಮಂಡಳಿ ತೆಗೆದುಕೊಂಡ ನಿರ್ಣಯದಂತೆ ದೇಣಿಗೆ ಹಸ್ತಾಂತರ ಮಾಡಲಾಯಿತು. ಸಂಸ್ಥೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ ಅಣ್ಣಿಗೇರಿ ಮಾತನಾಡಿ, ಸಿದ್ಧಸಿರಿ ಸೌಹಾರ್ದ ಸಹಕಾರಿಯು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದಲ್ಲಿ ನಿರಂತರವಾಗಿ ಒಂದಿಲ್ಲೊಂದು ಸಾಮಾಜಿಕ ಕಾರ್ಯಗಳನ್ನು ಮಾಡುತ್ತ ಬಂದಿದೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಲಸಿಕಾ ಕಾರ್ಯದಲ್ಲಿ ತೊಡಗಿಸಿಕೊಂಡು ಮನೆಮನೆಗೆ ಭೇಟಿ ನೀಡಿ ಕೋವಿಡ್ ಲಸಿಕೆ ತೆಗೆದುಕೊಳ್ಳುವಂತೆ ಜಾಗೃತಿ ಮೂಡಿಸಿತ್ತು ಎಂದು ಹೇಳಿದರು. ಈ ಹಿಂದೆ ವೃಕ್ಷೋತ್ಥಾನ ಅಭಿಯಾನಕ್ಕೆ 10 ಲಕ್ಷ ರೂ. ನೀಡಲಾಗಿತ್ತು. ಈ ಬಾರಿ ನಗರದಲ್ಲಿ ಗಿಡಗಳನ್ನು ನೆಟ್ಟು ಬೆಳೆಸಲು 10…
ಡಾ.ಎಸ್ ಆರ್ ಹರೀಶ್ ಆಚಾರ್ಯ ಅಭಿಪ್ರಾಯ ಮಂಗಳೂರು: ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನೂತನ ರಾಷ್ಟ್ರೀಯ ಸಹಕಾರಿ ನೀತಿಯನ್ನು ಒಂಬತ್ತು ಆದ್ಯತೆಗಳಲ್ಲಿ ಮೊದಲ ಆದ್ಯತೆಯಾಗಿ ಪ್ರಸ್ತಾಪ ಮಾಡಿರುವುದನ್ನು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್ ಆರ್ ಹರೀಶ್ ಆಚಾರ್ಯ ಸ್ವಾಗತಿಸಿದ್ದಾರೆ. ದೇಶದ ಸಹಕಾರ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ವ್ಯವಸ್ಥಿತ, ಕ್ರಮಬದ್ಧ ಮತ್ತು ಸಮಗ್ರ ವಿಷಯಗಳನ್ನೊಳಗೊಂಡ ರಾಷ್ಟ್ರೀಯ ಸಹಕಾರಿ ನೀತಿಯನ್ನು ಹಣಕಾಸು ಸಚಿವರು ಬಜೆಟ್ನಲ್ಲಿ ಪ್ರಸ್ತಾಪಿಸಿದ್ದಾರೆ. ಮತ್ತು ಸರ್ಕಾರ ನಿಗದಿಪಡಿಸಿರುವ ಒಂಬತ್ತು ಆದ್ಯತಾ ವಲಯಗಳ ಪೈಕಿ ಇದನ್ನು ಮೊದಲ ಆದ್ಯತಾ ವಲಯದಲ್ಲಿ ಪರಿಗಣಿಸಿರುವುದು ಉತ್ತಮ ಅಂಶ. ಈ ನೀತಿಯು ಗ್ರಾಮೀಣ ಆರ್ಥಿಕತೆಯ ಬೆಳವಣಿಗೆಯ ವೇಗವನ್ನು ಗುರುತಿಸಲು ಮತ್ತು ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಪೂರಕವಾಗಲಿದೆ ಎಂದು ಡಾ.ಹರೀಶ್ ಆಚಾರ್ಯ ಅಭಿಪ್ರಾಯಪಟ್ಟಿದ್ದಾರೆ. ಮುದ್ರಾ ಸಾಲದ ಮಿತಿ ಹೆಚ್ಚಳ ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ. ಇಟ್ಟಿರುವುದರಿಂದ ಆ ವಲಯದ ಸಮಗ್ರ ಅಭಿವೃದ್ಧಿಗೆ ಕಾರಣವಾಗಲಿದೆ. ಮುದ್ರಾ ಸಾಲ ಯೋಜನೆಯಡಿ ಸಾಲದ…
