Author: admin

ಇಂದು ವಿಶ್ವ ತೆಂಗು ದಿನಾಚರಣೆ ಮಂಗಳೂರು: ತೆಂಗಿನಕಾಯಿ… ದೈನಂದಿನ ಜೀವನದಲ್ಲಿ ಹಾಸುಹೊಕ್ಕಾಗಿರುವ ತೆಂಗಿನಕಾಯಿಗೂ ಒಂದು ದಿನವಿದೆ. 2009ರಲ್ಲಿ ವಿಶ್ವ ತೆಂಗಿನ ದಿನವನ್ನು ಪ್ರಾರಂಭಿಸಲಾಯಿತು. ಯುನೈಟೆಡ್ ನೇಷನ್ ಎಕನಾಮಿಕ್ ಆ್ಯಂಡ್ ಸೋಶಿಯಲ್ ಕಮಿಷನ್ ಫಾರ್ ಏಷ್ಯಾ ಆ್ಯಂಡ್ ಪೆಸಿಫಿಕ್ (ಯುಎನ್-ಇಎಸ್‌ಸಿಎಪಿ) ಆಶ್ರಯದಲ್ಲಿ ಕಾರ್ಯನಿರ್ವಹಿಸುವ ಎಪಿಪಿಸಿ ‌ ಏಷ್ಯನ್ ಪೆಸಿಫಿಕ್ ತೆಂಗಿನಕಾಯಿ ಸಮುದಾಯ (ಎಪಿಸಿಸಿ) ರಚನೆಯ ದಿನವನ್ನು ಸ್ಮರಿಸಲು ಪ್ರತಿವರ್ಷ ಸೆಪ್ಟೆಂಬರ್ 2 ಅನ್ನು ವಿಶ್ವ ತೆಂಗಿನ ದಿನವಾಗಿ ಆಚರಿಸಲಾಗುತ್ತದೆ. ಎಪಿಸಿಸಿ 18 ಸದಸ್ಯ ರಾಷ್ಟ್ರಗಳ ಅಂತರ್ ಸರಕಾರಿ ಸಂಸ್ಥೆಯಾಗಿದ್ದು, ಎಪಿಸಿಸಿಯ ಸ್ಥಾಪಕ ಸದಸ್ಯರಲ್ಲಿ ಭಾರತ ಕೂಡ ಒಂದು. ತೆಂಗಿನಕಾಯಿಗಳ ಪ್ರಾಮುಖ್ಯತೆ ಮತ್ತು ಉಪಯೋಗಗಳನ್ನು ಎತ್ತಿ ಹಿಡಿಯಲು ವಿಶ್ವ ತೆಂಗಿನ ದಿನವನ್ನು ಆಚರಿಸಲಾಗುತ್ತಿದೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಉತ್ಪಾದನೆಯಲ್ಲಿ ಭಾರತಕ್ಕೆ 3ನೇ ಸ್ಥಾನ ವಿಶ್ವದ ಪ್ರಮುಖ ತೆಂಗಿನಕಾಯಿ ಬೆಳೆಯುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ವಾರ್ಷಿಕ ತೆಂಗಿನ ಉತ್ಪಾದನೆಯು 20.82 ಲಕ್ಷ ಹೆಕ್ಟೇರ್‌ಗೆ 2395 ಕೋಟಿ ತೆಂಗಿನಕಾಯಿ ಬೆಳೆಯಲಾಗುತ್ತದೆ ಮತ್ತು ಒಂದು ಹೆಕ್ಟೇರ್‌ಗೆ ಉತ್ಪಾದಕತೆ 11,505 ತೆಂಗಿನಕಾಯಿ…

Read More

ಮಂಗಳೂರು; ಇಲ್ಲಿನ ಶ್ರೀ ಭಗವತೀ ಸಹಕಾರ ಬ್ಯಾಂಕಿನ 48ನೇ ಮಹಾಸಭೆ ಭಾನುವಾರ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಕೂಟಕ್ಕಳ ಸಭಾಭವನದಲ್ಲಿ ಜರುಗಿತು. ಭಗವತೀ ಕ್ಷೇತ್ರದ ಕಲೆಕಾರರಾದ ಗೋಪಾಲದಾಸ್ ದೀಪ ಪ್ರಜ್ವಲನೆ ಮಾಡಿದರು. ಬ್ಯಾಂಕಿನ ಅಧ್ಯಕ್ಷ ಮಾಧವ ಬಿ.ಎಂ. ಸ್ವಾಗತಿಸಿದರು. ಪ್ರಧಾನ ವ್ಯವಸ್ಥಾಪಕಿ ಸುಷ್ಮಾ 2023-24ರ ಸಾಲಿನ ವರದಿ ಮಂಡಿಸಿದರು. ಉಪಪ್ರಧಾನ ವ್ಯವಸ್ಥಾಪಕಿ ಸರಿತಾ ಬಿ.ಎಂ ಆಯ-ವ್ಯಯ ಮಂಡಿಸಿದರು. ಬ್ಯಾoಕಿನ ಉಪಾಧ್ಯಕ್ಷ ದೇವದಾಸ್ ಕೊಲ್ಯ ಮಾತನಾಡಿ, ಸದಸ್ಯರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ನಮ್ಮ ಬ್ಯಾoಕನ್ನು ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು. 2023-24ರ ಸಾಲಿನಲ್ಲಿ ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿ ಮಾಡಿದ ಸದಸ್ಯರು ಹಾಗೂ ಉತ್ತಮ ಠೇವಣಿದಾರರನ್ನು ಸನ್ಮಾನಿಸಲಾಯಿತು. ಸದಸ್ಯರ ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. ಅತ್ಯುತ್ತಮ ಶಾಖೆಗಳಾಗಿ ಆಯ್ಕೆಯಾದ ಜಪ್ಪು ಶಾಖೆ ಮತ್ತು ಬಿ.ಸಿ.ರೋಡ್ ಶಾಖೆಗಳ ಸಿಬಂದಿಯನ್ನು ಸನ್ಮಾನಿಸಲಾಯಿತು. ಬ್ಯಾಂಕಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಆನಂದ, ಬ್ಯಾಂಕಿನ ಮಾಜಿ ಅಧ್ಯಕ್ಷ ಕೆ.ನಾರಾಯಣ, ಪ್ರಮುಖರಾದ ಕೆ.ವಿಶ್ವನಾಥ, ರಾಜೇಶ್, ಕಿರಣ್, ರಾಜೇಶ್ ಭಂಡಾರಿ, ಪದ್ಮನಾಭ, ಆಶಾ…

Read More

ವಿಟ್ಲ: ಸಹಕಾರಿ ಚಿಂತನೆಯಲ್ಲಿ ಆದರ್ಶ ರಾಷ್ಟ್ರ ನಿರ್ಮಾಣದ ಪರಿಕಲ್ಪನೆಯಿದೆ. ಸಹಕಾರಿ ತತ್ವ ಎಂಬುದು ಭಗವಂತ ಕರುಣಿಸಿದ ಆಧ್ಯಾತ್ಮಿಕ ವರ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಭಾನುವಾರ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 2023-24ನೇ ಸಾಲಿನ ಸಾಮಾನ್ಯ ಸಭೆಯಲ್ಲಿ ಆಶೀರ್ವಚನ ನೀಡಿದರು. ಪ್ರಾಮಾಣಿಕತೆ ಹಾಗೂ ನಿಸ್ವಾರ್ಥ ಸೇವೆಯಿದ್ದರೆ ಸಂಸ್ಥೆ ಬೆಳವಣಿಗೆಯಾಗುತ್ತದೆ. ಸಂಸ್ಥೆಯ ಅಭಿವೃದ್ಧಿಯಲ್ಲಿ ಒಬ್ಬರಿಗೊಬ್ಬರ ಸಹಕಾರ ಅಗತ್ಯವಿದೆ. ಆಧ್ಯಾತ್ಮಿಕದ ಜತೆಗೆ ಸಮಾಜ ಸೇವೆಯನ್ನು ಮಾಡುವುದಕ್ಕಾಗಿ ಸಹಕಾರವನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು. ವಿಶಾಲ ದೃಷ್ಟಿಕೋನ ಹಾಗೂ ವಿಸ್ತಾರ ಚಿಂತನೆಯಿದ್ದಾಗ ಭವಿಷ್ಯದಲ್ಲಿ ಸದೃಢವಾಗಬಹುದು. ಯಾಂತ್ರಿಕ ಬದುಕಿಗೆ ನಿಯಂತ್ರಣ ಹಾಕದೇ ಹೋದರೆ ಮುಂದಿನ ದಿನಗಳಲ್ಲಿ ಅಪಾಯ ನಿಶ್ಚಿತ. ಸ್ವ ಉದ್ಯೋಗ, ಕೃಷಿ ಸಂಬಂಧಿ ವಿಚಾರದಲ್ಲಿ ಸಹಕಾರಿಗಳು ಹೆಚ್ಚು ತೊಡಗಿಸಿಕೊಳ್ಳಬಹುದಾಗಿದೆ ಎಂದರು. ಸಂಘದ ಅಧ್ಯಕ್ಷ ಸಹಕಾರ ರತ್ನ ಎ.ಸುರೇಶ್ ರೈ ಮಾತನಾಡಿ ಸಹಕಾರಿ 2023-24ನೇ ಸಾಲಿನಲ್ಲಿ 19…

Read More

ಮೈಸೂರು: ಗುಂಡ್ಲುಪೇಟೆಯಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ವಿವೇಕಸಿರಿ ಸೇವಾ ಸೌಹಾರ್ದ ಸಹಕಾರಿ‌ ಸಂಘದ ಅಧ್ಯಕ್ಷರಾಗಿ ಸ್ವಾಮಿ ಎಂ.ಎಸ್ ಆಯ್ಕೆಯಾಗಿದ್ದಾರೆ. ಶುಕ್ರವಾರ ಸಹಕಾರಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಸಂಘದ ಅಧ್ಯಕ್ಷರಾಗಿ ಸ್ವಾಮಿ ಎಂ.ಎಸ್., ಉಪಾಧ್ಯಕ್ಷರಾಗಿ ಬಿ.ಕೆ. ಮಹದೇವಸ್ವಾಮಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಲೆಕ್ಕಪರಿಶೋಧನಾ ಇಲಾಖೆಯ ನಾಗರಾಜು ಕಾರ್ಯ ನಿರ್ವಹಿಸಿದರು. ಸಹಕಾರಿ ಸಂಘದ ನಿರ್ದೇಶಕರಾಗಿ ಕುಮಾರ್ ಸಿ., ರವಿಕುಮಾರ ಬಿ., ಕಾರ್ತಿಕ್, ಬಸವಣ್ಣ ಆರ್.ಎಸ್., ಶಿವಮಲ್ಲಪ್ಪ, ಸಿದ್ದರಾಜು., ಶಾಂತಪ್ಪ ಎಸ್. ಮೀನಾಕ್ಷಿ , ಶಾಲಿನಿ ಇವರುಗಳು ಆಯ್ಕೆಯಾಗಿರುತ್ತಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಪರಮಪೂಜ್ಯ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 21ನೇ ಶಾಖೆ ನಿಂತಿಕಲ್ಲಿನಲ್ಲಿ ಕಾರ್ಯಾರಂಭ ಪುತ್ತೂರು: ಯಾವುದೇ ಕೆಲಸವಾದರೂ ಪ್ರಾಮಾಣಿಕ ಪ್ರಯತ್ನವಿದ್ದರೆ ಸಂಸ್ಥೆಗೆ ಯಶಸ್ಸು ಸಾಧ್ಯ. ಯಾವುದೇ ಸಂಸ್ಥೆಯಾದರೂ ಅದರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಅಗತ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಮುರುಳ್ಯ -ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಧನಾ ಸಹಕಾರ ಸೌಧದಲ್ಲಿ ಶುಕ್ರವಾರ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ 21ನೇ ನೂತನ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ನಿಂತಿಕಲ್ಲಿನಲ್ಲಿ ನಮ್ಮ ಶಾಖೆ ಉದ್ಘಾಟನೆ ಆಗಿರುವುದು ಸಂತಸ ತಂದಿದೆ. ಧರ್ಮಶ್ರದ್ಧೆಯ ಕೆಲಸ ನಮ್ಮದಾಗಬೇಕು. ನಮ್ಮ ಸಂಸ್ಥೆಯ ಉದ್ದೇಶ ವಿವಿಧೋದ್ದೇಶವಾಗಿದೆ. ಲೌಕಿಕ ಬೆಳವಣಿಗೆಗೆ ಸಂಘ ಸಂಸ್ಥೆ, ಸಹಕಾರಿಯ ಅಗತ್ಯ ಬಹಳಷ್ಟಿದೆ ಎಂದು ಹೇಳಿದರು. ಅರ್ಹತೆ ನೋಡಿ ಸಹಕಾರ ನೀಡುವ ಕೆಲಸವಾಗಬೇಕು. ಸಾಮಾನ್ಯ ಜನರಿಗೆ ಸೇವೆ ಸಿಗಬೇಕೆಂದು ಸಂಸ್ಥೆಯ ಉಗಮವಾಗಿದೆ. ಕೊಡು-ಕೊಳ್ಳುವಿಕೆಯ ಗುಣ…

Read More

ಬ್ಯಾಂಕ್‌, ಸಹಕಾರಿ ಸಂಘಗಳಿಗೆ ರಜೆಗಳ ಮೇಲೆ ರಜೆ ಮಂಗಳೂರು: ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಲ್ಲಿ ಹಬ್ಬಗಳ ಸರಣಿಯೇ ಇದ್ದು, ಬ್ಯಾಂಕಿಂಗ್‌ ಕ್ಷೇತ್ರಕ್ಕೆ ರಜೆಗಳ ಮೇಲೆ ರಜೆ ಇರಲಿದೆ. ಈ ಎರಡು ತಿಂಗಳಲ್ಲಿ ಸುಮಾರು 20 ದಿನಗಳಷ್ಟು ಬ್ಯಾಂಕಿಂಗ್‌ ಕ್ಷೇತ್ರಕ್ಕೆ ರಜೆ ಇರಲಿದೆ. ಸೆಪ್ಟೆಂಬರ್‌ನಲ್ಲಿ ಗಣೇಶ ಚತುರ್ಥಿ, ಈದ್‌ ಮಿಲಾದ್‌, ಓಣಂ ಹಬ್ಬಗಳು ಇದ್ದು ಕೆಲವು ಮಹಾಪುರುಷರ ಜಯಂತಿಗಳೂ ಆಚರಣೆಯಾಗಲಿವೆ. ಇದಕ್ಕಾಗಿ ಸೆಪ್ಟೆಂಬರ್‌ ತಿಂಗಳೊಂದರಲ್ಲೇ ಬ್ಯಾಂಕಿಂಗ್‌ ಕ್ಷೇತ್ರಕ್ಕೆ ಹತ್ತರಷ್ಟು ರಜೆ ಸಿಗಲಿದೆ. ಈ ಪೈಕಿ ಕೆಲವು ಜಯಂತಿಗಳು ಕರ್ನಾಟಕಕ್ಕೆ ಮಾತ್ರ ಅನ್ವಯವಾಗಲಿದೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಹಬ್ಬಗಳು, ರಾಷ್ಟ್ರೀಯ ದಿನಾಚರಣೆಗಳ ಜೊತೆಗೆ ಕೆಲವು ಸ್ಥಳೀಯ ಹಬ್ಬಗಳಿಗೂ ಬ್ಯಾಂಕ್‌ಗಳಿಗೆ ರಜೆಗಳಿವೆ. ಎರಡನೇ ಹಾಗೂ ನಾಲ್ಕನೇ ಶನಿವಾರ ಹಾಗೂ ಭಾನುವಾರದ ರಜೆಗಳೂ ಸೇರಿ ಅರ್ಧ ತಿಂಗಳಷ್ಟು ರಜೆ ಸಿಗಲಿವೆ. ಸೆಪ್ಟೆಂಬರ್‌ ತಿಂಗಳ ರಜೆ ಸೆ. 1: ಭಾನುವಾರ   ಸೆ. 7: ಗಣೇಶ ಚತುರ್ಥಿ ಸೆ. 8: ಭಾನುವಾರ ಸೆ. 14: ಎರಡನೇ ಶನಿವಾರ   ಸೆ. 15:…

Read More

ಶ್ರೀಲಾಲ್‌ ಶುಕ್ಲಾ ಯುವ ಸಾಹಿತಿ ಪುರಸ್ಕಾರ ಈ ವರ್ಷದಿಂದ ಆರಂಭ ನವದೆಹಲಿ: ಭಾರತೀಯ ರೈತರ ರಸಗೊಬ್ಬರ ಸಹಕಾರಿ ನಿಯಮಿತ (ಇಫ್ಕೋ) ತಮ್ಮ 2024ರ ಶ್ರೀಲಾಲ್‌ ಶುಕ್ಲಾ ಸ್ಮಾರಕ ಇಫ್ಕೋ ಸಾಹಿತ್ಯ ಪುರಸ್ಕಾರಕ್ಕೆ ಇಬ್ಬರನ್ನು ಆಯ್ಕೆ ಮಾಡಿದೆ. ಹೆಸರಾಂತ ಕಥೆಗಾರ ಚಂದ್ರಕಿಶೋರ್‌ ಜೈಸ್ವಾಲ್‌ ಶ್ರೀಲಾಲ್‌ ಶುಕ್ಲಾ ಸ್ಮಾರಕ ಸಾಹಿತ್ಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಇದೇ ಮೊದಲ ಸಲ ಪರಿಚಯಿಸಲಾಗಿರುವ ಶ್ರೀಲಾಲ್‌ ಶುಕ್ಲಾ ಸ್ಮಾರಕ ಇಫ್ಕೋ ಯುವ ಸಾಹಿತಿ ಪುರಸ್ಕಾರಕ್ಕೆ ರೇಣು ಯಾದವ್‌ ಅವರನ್ನು ಆಯ್ಕೆ ಮಾಡಲಾಗಿದೆ. ಹಿರಿಯ ಬರಹಗಾರ ಅಸ್ಘರ್‌ ವಜಾಹತ್‌ ಅಧ್ಯಕ್ಷತೆಯ, ಪ್ರಮುಖರಾದ ಡಾ.ಅನಾಮಿಕಾ, ಪ್ರಿಯದರ್ಶನ್‌, ಯತೀಂದ್ರ ಮಿಶ್ರಾ, ಉತ್ಕರ್ಷ್‌ ಶುಕ್ಲಾ ಮತ್ತು ಡಾ.ನಳಿನ್‌ ವಿಕಾಸ್‌ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಶ್ರೀಲಾಲ್‌ ಶುಕ್ಲಾ ಸ್ಮಾರಕ ಇಫ್ಕೋ ಪುರಸ್ಕಾರವನ್ನು 2011ರಲ್ಲಿ ಆರಂಭಿಸಲಾಗಿದ್ದು ಈ ವರ್ಷ ಮೊದಲ ಬಾರಿ ಯುವ ಸಾಹಿತಿ ಪುರಸ್ಕಾರವನ್ನು ಸೇರಿಸಲಾಗಿದೆ. ವಿದ್ಯಾಸಾಗರ್‌ ನಾಟಿಯಾಲ್‌, ಶೇಖರ್‌ ಜೋಶಿ, ಸಂಜೀವ ಮಿಥಿಲೇಶ್ವರ್‌ ಮೊದಲಾದ ಪ್ರಮುಖರು ಈ ಪುರಸ್ಕಾರ…

Read More

29ನೇ ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ, 29.37 ಲಕ್ಷ ರೂಪಾಯಿ ಲಾಭ ಮಂಗಳೂರು: ಶ್ರೀ ಮಂಗಳಾಜ್ಯೋತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ, ಬಿಜೈ, ಮಂಗಳೂರು ಇದರ 29ನೇ ವಾರ್ಷಿಕ ಮಹಾಸಭೆ ಹಾಗೂ 2023-24 ನೇ ಸಾಲಿನ ವಾರ್ಷಿಕ ವರದಿ ಮಂಡನೆ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಭಾನುವಾರ ಮಂಗಳೂರು ಪೊಲೀಸ್‌ ಲೈನ್‌ನ “ನಾಸಿಕ್ ಬಿ.ಹೆಚ್. ಬಂಗೇರ ಸಭಾಭವನ”ದಲ್ಲಿ ನಡೆಯಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK 2023 – 24ರ ಸಾಲಿಗೆ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಸಂಘದ ಲೆಕ್ಕಪರಿಶೋಧನೆಯನ್ನು ಸಿಎ ಸುಜಯ ಡಿ. ಆಳ್ವ ಮಾಡಿಕೊಟ್ಟಿದ್ದು, ವರದಿ ವರ್ಷ ಸಂಘವು 98 ಕೋಟಿ ವ್ಯವಹಾರ ಮಾಡಿದ್ದು, 29.37 ಲಕ್ಷ ರೂ. ಲಾಭ ಗಳಿಸಿದೆ. ಬಿಜೈ ಶಾಖೆಯಲ್ಲಿ ಇ-ಸ್ಟಾಂಪಿಂಗ್ ಸೇವೆ ಆರಂಭಿಸಲಾಗಿದೆ. ಲೆಕ್ಕಪರಿಶೋಧನೆಯಲ್ಲಿ ಪ್ರತಿ ವರ್ಷದಂತೆ ” ಎ” ಶ್ರೇಣಿ ಪಡೆದುಕೊಂಡಿದೆ. ಅದೇ ರೀತಿ 2023 -24ರಲ್ಲಿ ಠೇವಣಿ ಸಂಗ್ರಹದಲ್ಲಿ ಶೇ.20 ಮತ್ತು ಸಾಲ ವಿತರಣೆಯಲ್ಲಿ ಶೇ.37.5 ಅಭಿವೃದ್ಧಿ ಸಾಧಿಸಿದ್ದು, ಸದಸ್ಯರ ಬೇಡಿಕೆಗೆ ಸ್ಪಂದಿಸಿ ವ್ಯವಹಾರ…

Read More

ಹಳೆಯಂಗಡಿ: ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯ ಎರಡನೇ ವರ್ಷಾಚರಣೆಯ ಅಂಗವಾಗಿ ಬಡ ಕುಟುಂಬಗಳ ಅಂಗವಿಕಲರಿಗೆ ಉಚಿತವಾಗಿ ವೀಲ್‌ಚೇರ್‌ ಅನ್ನು ಪಡುಬಿದ್ರಿ ಶಾಖೆಯಲ್ಲಿ ಸಾಂಕೇತಿಕವಾಗಿ ಇತ್ತೀಚೆಗೆ ವಿತರಿಸಲಾಯಿತು. ಮುಂದಿನ ದಿನದಲ್ಲಿ ಅಗತ್ಯವಿರುವ ಸಂಘದ ಸದಸ್ಯರ/ ಅವರ ಅವಲಂಬಿತರು ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಶಾಖೆಗಳನ್ನು ಸಂಪರ್ಕಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಎಚ್.ವಸಂತ ಬರ್ನಾರ್ಡ್‌ ತಿಳಿಸಿದ್ದಾರೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ ಕರ್ಣಾಟಕ ಬ್ಯಾಂಕ್ ಪಡುಬಿದ್ರಿ ಶಾಖಾ ಪ್ರಬಂಧಕ ಪ್ರವೀಣ್ ಕುಮಾರ್, ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ನಿಸ್ವಾರ್ಥ ಸೇವೆಯಿಂದ ಜನಮನ ಗೆಲ್ಲುವ ಮೂಲಕ ಉತ್ತಮ ಸಂಸ್ಥೆಯಾಗಿ ಮೂಡಿಬಂದಿದೆ. ಬ್ಯಾಂಕಿನ ಲಾಭಾಂಶದಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುವುದು ಇತರ ಸಂಘ-ಸಂಸ್ಥೆಗಳಿಗೆ ಮಾದರಿ ಎಂದು ಬಣ್ಣಿಸಿದರು. ಮುಖ್ಯ ಅಥಿತಿಯಾಗಿ ಪಡುಬಿದ್ರಿ ರೋಟರಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷೆ ಗೀತಾ ಅರುಣ್, ಮಾತೃಸಂಸ್ಥೆಯ ಕಾರ್ಯನಿರ್ವಾಹಣಾಧಿಕಾರಿ ಸುದರ್ಶನ್, ಶಾಖಾ ಪ್ರಬಂಧಕಿ ಪ್ರಜ್ಞಾಶ್ರೀ, ನಿರ್ದೇಶಕರಾದ ಉಮಾನಾಥ್ ಜೆ. ಶೆಟ್ಟಿಗಾರ್ ಹಾಗೂ ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ…

Read More

ಮಂಗಳೂರು: ಸೈಂಟ್‌ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಮೊದಲನೇ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್‌ 1ರಂದು ಭಾನುವಾರ ಬೆಳಗ್ಗೆ 11 ಗಂಟೆಯಿಂದ ಕಂಕನಾಡಿಯ ಸೈಂಟ್‌ ಅಲ್ಫೋನ್ಸಾ ಚರ್ಚ್‌ ಹಾಲ್‌ನಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಮುಂಡಟ್ಟು ವರ್ಕೀ ಜೇಮ್ಸ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾರ್ಥನೆ, ಸ್ವಾಗತದ ಬಳಿಕ ಸಾಮಾನ್ಯ ಸಭೆಯ ನೋಟಿಸ್‌ ಓದಿ ಅನುಮೋದಿಸಿದ ಬಳಿಕ ಹಿಂದಿನ ಸಭೆಯ ನಡಾವಳಿ ಓದಿ ಅನುಮೋದಿಸವುದು. 2023-24ನೇ ಸಾಲಿನ ಆಡಳಿತ ಮಂಡಳಿಯ ವರದಿ ಮಂಡನೆಯ ಬಳಿಕ ಅನುಮೋದಿಸಿದ ನಂತರ, 2023-24ನೇ ಲೆಕ್ಕ ಪರಿಶೋಧನಾ ವರದಿಯ ಮಂಡನೆ ಹಾಗೂ ಪರಿಶೋಧಿತ ಲೆಕ್ಕಪತ್ರ ಮಂಡನೆ ಮತ್ತು ಅನುಮೋದನೆ, 2024-25ನೇ ಸಾಲಿನ ಲೆಕ್ಕಪರಿಶೋಧಕರ ನೇಮಕಾತಿ, ಕೊನೆಯಲ್ಲಿ ಅಧ್ಯಕ್ಷರ ಭಾಷಣ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಟಿ.ಬಂಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More