Author: admin
ನವದೆಹಲಿ: ಸಹಕಾರ ಸಚಿವಾಲಯದ ಸಹಕಾರ ಸಂಘಗಳ ಕೇಂದ್ರ ರಿಜಿಸ್ಟ್ರಾರ್ (ಸಿಆರ್ಸಿಎಸ್) ಆಗಿ ಕೇರಳ ಕೇಡರ್ನ 1997ರ ಬ್ಯಾಚ್ನ ಐಎಎಸ್ ಅಧಿಕಾರಿ ರವೀಂದ್ರ ಕುಮಾರ್ ಅಗರ್ವಾಲ್ ನೇಮಕಗೊಂಡಿದ್ದಾರೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಅಗರ್ವಾಲ್ ಸಿಆರ್ಸಿಎಸ್ನ ನೂತನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದು ಇವರು, ಆನಂದ್ ಕುಮಾರ್ ಝಾ(ಅರಣ್ಯಾಧಿಕಾರಿ) ಅವರ ಸ್ಥಾನ ತುಂಬಲಿದ್ದಾರೆ. ಆಗರ್ವಾಲ್ ಆಗಸ್ಟ್ ಮೊದಲ ವಾರದಲ್ಲಿ ಸಹಕಾರ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇರ್ಪಡೆಯಾಗಿದ್ದರು. ಇದಾದ ಕೆಲವೇ ದಿನಗಳಲ್ಲಿ ಕೇಂದ್ರ ರಿಜಿಸ್ಟ್ರಾರ್ ಆಗಿ ನೇಮಕಗೊಂಡಿದ್ದು ಸಹಕಾರ ಸಂಘಗಳ ಕಾರ್ಯಚಟುವಟಿಕೆಗಳ ವಿಸ್ತರಣೆಯ ಮಹತ್ವದ ಜವಾಬ್ದಾರಿ ಹೊರಲಿದ್ದಾರೆ. 1999ರಲ್ಲಿ ಸಬ್ ಡಿವಿಜನಲ್ ಮ್ಯಾಜಿಸ್ಟ್ರೇಟ್ ಆಗಿ ಕೆಲಸ ಆರಂಭಿಸಿದ್ದ ಇವರು, 2001ರಲ್ಲಿ ಕೇರಳ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಇದೇ ಅವಧಿಯಲ್ಲಿ ಅವರು ಬೇಕಲ್ ರೆಸಾರ್ಟ್ಸ್ ಡೆವಲಪ್ಮೆಂಟ್ ಕಾರ್ಪೊರೇಶನ್ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿಯೂ ಕೆಲಸ ಮಾಡಿದ್ದರು. ನಗರಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಣಕಾಸು ಮತ್ತು ನೀರಾವರಿ ಇಲಾಖೆಗಳಲ್ಲೂ ಕೆಲಸ ಮಾಡಿದ್ದರು. ಕೇರಳ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕಮಿಷನರ್,…
ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಂಘ ನಿಯಮಿತದ 21ನೇ ನೂತನ ಶಾಖೆ ಆಗಸ್ಟ್ 30ರಂದು ನಿಂತಿಕಲ್ಲಿನಲ್ಲಿ ಉದ್ಘಾಟನೆಯಾಗಲಿದೆ. ಬೆಳಗ್ಗೆ 10.30ಕ್ಕೆ ಮುರುಳ್ಯ -ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಧನಾ ಸಹಕಾರ ಸೌಧದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡುವರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಂಘದ ಗೌರವ ಮಾರ್ಗದರ್ಶಕಿ ಸಾಧ್ವಿ ಶ್ರೀ ಮಾತಾನಂದಮಯಿ ಅನುಗ್ರಹ ಸಂದೇಶ ನೀಡುವರು. ಸಂಘದ ಅಧ್ಯಕ್ಷ ಸಹಕಾರ ರತ್ನ ಲಯನ್ ಎ.ಸುರೇಶ್ ರೈ ಅಧ್ಯಕ್ಷತೆ ವಹಿಸುವರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಶಾಸಕಿ ಭಾಗೀರಥಿ ಮುರುಳ್ಯ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲ್, ಮುರುಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ ಸುವರ್ಣ ಬಾಮೂಲೆ, ಮುರುಳ್ಯ -ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಕುಸುಮಾವತಿ ರೈ ಕೆ.ಜಿ ಎಣ್ಮೂರುಗುತ್ತು, ಎಣ್ಮೂರು…
ಒಡಿಯೂರು ಸೊಸೈಟಿಯ ಕಿನ್ನಿಗೋಳಿ ಶಾಖೆ ಉದ್ಘಾಟಿಸಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯ ಕಿನ್ನಿಗೋಳಿ: ಸಂಘ ಸಂಸ್ಥೆಗಳು ಸಮಾಜಮುಖಿಯಾದರೆ ಉನ್ನತಿ ಆಗುತ್ತದೆ. ಪುರುಷಾರ್ಥಗಳ ಪೈಕಿ ಅರ್ಥ ಅಂದರೆ ಆರ್ಥಿಕ ವ್ಯವಸ್ಥೆಯ ಜೊತೆಗೆ ಧರ್ಮ ಬೇಕು. ಧರ್ಮಯುಕ್ತವಾದ ಅರ್ಥಕ್ಕೆ ಅಪಾಯವಿಲ್ಲ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಕಿನ್ನಿಗೋಳಿಯಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 20ನೇ ನೂತನ ಶಾಖೆಯನ್ನು ಬುಧವಾರ ಉದ್ಘಾಟಿಸಿ ಆಶೀರ್ವಚನ ನೀಡಿದರು. ಅರ್ಥದ ಸರಿಯಾದ ಬಳಕೆಯಿಂದ ಜೀವನದಲ್ಲಿ ಶಾಂತಿ, ನೆಮ್ಮದಿ ಸಿಗುತ್ತದೆ. ಧರ್ಮಶ್ರದ್ಧೆಯ ಕೊರತೆಯಿಂದ ಈಗ ಜಗತ್ತಿನಲ್ಲಿ ಕೆಲವೊಂದು ಅಧ್ವಾನಗಳು ನಡೆಯುತ್ತಿದೆ. ರಾಮಾಯಣ, ಭಾಗವತ, ಭಗವದ್ಗೀತೆಗಳ ಅಧ್ಯಯನದಿಂದ ಇದನ್ನು ತಡೆಯಬಹುದು. ಸಹಕಾರಿಗೆ ಜೀವಾಳವೇ ಗ್ರಾಹಕರು. ಠೇವಣಿ ಎಂದರೆ ನಗು ಇದ್ದಂತೆ. ಸಾಲ ಎಂದರೆ ಕೋಪ ಇದ್ದಂತೆ. ಸಾಲ ಮರುಪಾವತಿ ಸರಿಯಾಗಿ ಆಗುತ್ತಿದ್ದರೆ ಮಾತ್ರ ಸಹಕಾರಿಯ ಚಟುವಟಿಕೆಗಳು ಮುಂದುವರಿಯುತ್ತದೆ. ಶ್ರದ್ಧೆಯ ಕೆಲಸವೇ ಯಶಸ್ಸಿನ ಗುಟ್ಟು. ವ್ಯವಸ್ಥಿತ ಸೇವೆ ಆದರೆ ಬೆಳವಣಿಗೆ ಸಾಧ್ಯ. ಇದಕ್ಕಾಗಿ…
ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 20ನೇ ಶಾಖೆ ಕಿನ್ನಿಗೋಳಿಯಲ್ಲಿ ಆಗಸ್ಟ್ 28ರಂದು ಕಿನ್ನಿಗೋಳಿ ಬಸ್ಸ್ಟ್ಯಾಂಡ್ ಬಳಿಯ ದುರ್ಗಾದಯಾ ಬಿಲ್ಡಿಂಗ್ನಲ್ಲಿ ಬೆಳಗ್ಗೆ 10.30ಕ್ಕೆ ಉದ್ಘಾಟನೆಯಾಗಲಿದೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಗೌರವ ಮಾರ್ಗದರ್ಶಕಿ, ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಉಪಸ್ಥಿತಿ ವಹಿಸುವರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಸಹಕಾರ ರತ್ನ ಲಯನ್ ಎ.ಸುರೇಶ್ ರೈ ಅಧ್ಯಕ್ಷತೆ ವಹಿಸುವರು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಕೆ.ಲಕ್ಷ್ಮೀನಾರಾಯಣ ಆಸ್ರಣ್ಣ, ಶಾಸಕ ಉಮಾನಾಥ ಕೋಟ್ಯಾನ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ದುರ್ಗಾದಯ ಕಾಂಪ್ಲೆಕ್ಸ್ನ ಮಾಲಕ ಕೆ.ಸೀತಾರಾಮ್ ಶೆಟ್ಟಿ, ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಗುತ್ತಿಗೆದಾರ, ಕಿನ್ನಿಗೋಳಿ ಬಂಟರ ಸಂಘದ ಮಾಜಿ ಅಧ್ಯಕ್ಷ ಸಂತೋಷ್ ಹೆಗ್ಡೆ, ಕಟೀಲು ಶ್ರೀ…
ನವದೆಹಲಿ: ಮೊಬೈಲ್ ನಂಬರ್ ಗಳಿಗೆ ಬ್ಯಾಂಕ್ ಹಾಗೂ ಇತರ ಕಡೆಗಳಿಂದ ಬರುವ ಒನ್ ಟೈಮ್ ಪಾಸ್ ವರ್ಡ್(ಒಟಿಪಿ) ಶೀಘ್ರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಸೆಪ್ಟೆಂಬರ್ ಒಂದರಿಂದಲೇ ಅಂದರೆ ಮುಂದಿನ ಭಾನುವಾರದಿಂದಲೇ ಇದು ಜಾರಿಯಾಗುವ ಸಾಧ್ಯತೆ ಇದೆ. ಒಂದು ವೇಳೆ ಇದು ಜಾರಿಯಾದಲ್ಲಿ ಮುಂದೆ ಲಾಗ್ಇನ್, ಆರ್ಥಿಕ ವಹಿವಾಟುಗಳಿಗೆ ಸಂಬಂಧಿಸಿ ಕೊಂಚಮಟ್ಟಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಸ್ಪಾಮ್ ಮೆಸೇಜ್ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಟ್ರಾಯ್ (ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ) ಹೊರಡಿಸಿದ್ದ ಆದೇಶ ಸೆ.1ರಿಂದ ಜಾರಿಯಾಗಲಿದೆ. ಮೊಬೈಲ್ ಕಂಪೆನಿಗಳ ಜತೆ ನೋಂದಣಿ ಮಾಡಿಕೊಂಡಿಲ್ಲದಿದ್ದರೆ, ಅಂತಹ ಕಂಪೆನಿಗಳ ಮೆಸೇಜನ್ನು ನಿರ್ಬಂಧಿಸುವಂತೆ ಟ್ರಾಯ್ ಸೂಚಿಸಿತ್ತು. ಆದರೆ ಕಂಪನಿಗಳು ಇನ್ನೂ ಸಹ ತಮ್ಮ ಮೆಸೇಜ್ನ ಶೈಲಿಯನ್ನು ಮೊಬೈಲ್ ನೆಟ್ವರ್ಕ್ ಕಂಪೆನಿಗಳಿಗೆ ನೀಡಿ ನೋಂದಣಿ ಮಾಡಿಕೊಂಡಿಲ್ಲ. ಹೀಗಾಗಿ ಇಂತಹ ಮೆಸೇಜ್ಗಳಿಗೆ ನಿರ್ಬಂಧ ಹೇರುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಎಚ್.ಗಣೇಶ್ ರಾವ್ ಅಭಿಪ್ರಾಯ ಮಂಗಳೂರು: ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಜಂಟಿ ಸಹಯೋಗದೊಂದಿಗೆ ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಇಲ್ಲಿನ ವೈದ್ಯರ ತಂಡದಿಂದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡದ ಎರಡನೇ ಮಹಡಿಯಲ್ಲಿ ಭಾನುವಾರ ಜರುಗಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಎಚ್.ಗಣೇಶ್ ರಾವ್ ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಶ್ಲಾಘನೀಯ ಕೆಲಸ ಎಂದರು. ದ ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ…
ಎಸ್.ಕೆ.ಜಿ.ಐ.ಕೋ-ಆಪ್ ಸೊಸೈಟಿಗೆ 4.95 ಕೋಟಿ ರೂ. ಲಾಭ ಎಸ್.ಕೆ.ಜಿ.ಐ.-ಪಾಲ್ಕೆ ಪ್ರಶಸ್ತಿ ಪ್ರದಾನ, ಸಾಧನೆಗೈದ ಸಾಧಕರಿಗೆ ಗೌರವ ಸನ್ಮಾನ ಮಂಗಳೂರು: ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆಯಲ್ಲಿ ಉರ್ವ ಚರ್ಚ್ ಸೆಂಟೆನರಿ ಹಾಲ್ನಲ್ಲಿ ಜರಗಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ, ವಾರ್ಷಿಕ ವರದಿ, ಲೆಕ್ಕಪರಿಶೋಧಿತ ಆರ್ಥಿಕ ತ:ಖ್ತೆಗಳು, ಅನುಪಾಲನಾ ವರದಿ, ಲಾಭಾಂಶದ ವಿಂಗಡಣೆ, 2024-2025ನೇ ಸಾಲಿನ ಆಯ-ವ್ಯಯ ಪಟ್ಟಿ ಹಾಗೂ 2024-2025ರ ಸಾಲಿನ ಕಾರ್ಯಚಟುವಟಿಕೆಗಳನ್ನು ಸಭೆಯಲ್ಲಿ ಮಂಡಿಸಿದರು. ವಜ್ರಮಹೋತ್ಸವ ವರ್ಷದ ಪ್ರಯುಕ್ತ 2023-2024ರ ಸಾಲಿಗೆ ಸದಸ್ಯರಿಗೆ ಶೇ.20ರಷ್ಟು ಡಿವಿಡೆಂಡ್ ಪಾವತಿಗೆ ಮಂಜೂರಾತಿ ಪಡೆಯಲಾಯಿತು. ಪಂಚ ಕಸುಬುಗಳಲ್ಲಿ ಸಾಧನೆಗೈದ ಐದು ಮಂದಿ ಶಿಲ್ಪಿಗಳಾದ ಸ್ವರ್ಣಶಿಲ್ಪ- ಎಚ್. -ಗೋಪಾಲ ಆಚಾರ್ಯ-ಬೆಳ್ತಂಗಡಿ, ಕಾಷ್ಠಶಿಲ್ಪ- ಮಾಧವ ಆಚಾರ್ಯ- ಸಂತೆಕಟ್ಟೆ ಉಡುಪಿ, ಎರಕ ಶಿಲ್ಪ- ರಾಮಚಂದ್ರ ಆಚಾರ್ಯ ಕುಂಟಾಡಿ ಕಾರ್ಕಳ, ಅಯಸ್ ಶಿಲ್ಪ- ಸೀತಾರಾಮ ಆಚಾರ್ಯ- ಗುಂಡಮಜಲು ಮುಡಿಪು, ಶಿಲಾ ಶಿಲ್ಪ-…
ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಸಂಸ್ಥಾಪಕ ಅಧ್ಯಕ್ಷರಾಗಿ ಬಿ.ಟಿ.ಗುರುರಾಜ ಶೆಟ್ಟಿ, ಉಪಾಧ್ಯಕ್ಷರಾಗಿ ಎಸ್. ಸಿದ್ದಲಿಂಗಯ್ಯ ಆಯ್ಕೆ
ಮಂಡ್ಯ: ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ನಿ., ಮಂಡ್ಯ ಇದರ ಸಂಸ್ಥಾಪಕ ಅಧ್ಯಕ್ಷರಾಗಿ ಶ್ರೀ ವೀರ ಮಡಿವಾಳ ಮಾಚಿದೇವ ಸೌಹಾರ್ದ ಸಹಕಾರಿ ಸಂಘ ನಿ., ದ ಅಧ್ಯಕ್ಷ ಬಿ.ಟಿ.ಗುರುರಾಜ ಶೆಟ್ಟಿ ಮತ್ತು ಸಮೃದ್ಧಿ ಭಾರತಿ ಸೌಹಾರ್ದ ಸಹಕಾರಿ ಸಂಘ ನಿ., ಭಾರತೀನಗರ ಇದರ ಅಧ್ಯಕ್ಷ ಎಸ್. ಸಿದ್ದಲಿಂಗಯ್ಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಚಂದ್ರಶೇಖರ್ ಉಚ್ಚಿಲ್ ಅಭಿಪ್ರಾಯ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ ಉಳ್ಳಾಲ: ಕಾರ್ಮಿಕರ ಕೊರತೆ, ಮಳೆ ಹಾನಿ ಇತ್ಯಾದಿ ಕಾರಣಗಳಿಂದ ಎಲ್ಲ ಕಡೆ ಭತ್ತದ ಕೃಷಿ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಭತ್ತದ ಕೃಷಿಕರನ್ನು ಪ್ರೋತ್ಸಾಹಿಸುವ ಕಾರ್ಯ ಮಾಡಿರುವುದು ಶ್ಲಾಘನೀಯ ಕಾರ್ಯ. ಇದರ ಜೊತೆಗೆ ಶೈಕ್ಷಣಿಕ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರನ್ನು ಪ್ರೋತ್ಸಾಹಿಸತ್ತಿರುವುದು ಕೂಡ ಶ್ಲಾಘನೀಯ ಎಂದು ಗೆಜ್ಜೆಗಿರಿಯ ದೇಯಿ ಬೈದೆದಿ ಕೋಟಿ ಚೆನ್ನಯ್ಯರ ಮೂಲಕ್ಷೇತ್ರದ ಮೊಕ್ತೇಸರ ಚಂದ್ರಶೇಖರ್ ಉಚ್ಚಿಲ್ ಹೇಳಿದರು. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಬೀರಿಯ ಪ್ರಧಾನ ಕಚೇರಿಯಲ್ಲಿ ಭಾನುವಾರ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳು ಸ್ಥಾಪನೆಯಾಗುವ ಮೊದಲೇ ಕೃಷಿ ಮತ್ತು ವ್ಯವಹಾರಗಳಿಗೆ ನೆರವಾಗುವ ಉದ್ದೇಶದಿಂದ ಸಹಕಾರಿ…
ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿ ನಿರ್ದೇಶಕರ ಅವಿರೋಧ ಆಯ್ಕೆ ನಡೆಸಲಾಗಿದೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಸಾಮಾನ್ಯ ಕ್ಷೇತ್ರದಿಂದ ಹೆಚ್. ಪದ್ಮ ಗೌಡ ಬೆಳಾಲು, ಕುಶಾಲಪ್ಪ ಗೌಡ ಪೂವಾಜೆ, ಗೋಪಾಲಕೃಷ್ಣ ಬಿ.ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ.ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್. ಮೊಗ್ರು, ಮಹಿಳಾ ಕ್ಷೇತ್ರದಿಂದ ಉಷಾದೇವಿ ಕಿನ್ಯಾಜೆ, ಭವಾನಿ ಕೆ.ಗೌಡ ಮೂಡಾಯೂರು, ಹಿಂದುಳಿದ ವರ್ಗ ಬಿಯಿಂದ ಶ್ರೀನಾಥ್ ಕೆ.ಎಂ ನಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
