Author: admin
ಕೇಂದ್ರ ಬಜೆಟ್ನಲ್ಲಿ ಮಕ್ಕಳಿಗಾಗಿಯೇ ಉಳಿತಾಯ ಯೋಜನೆ ಪ್ರಕಟಿಸಿದ ಹಣಕಾಸು ಸಚಿವೆ ಮಂಗಳೂರು: ಎನ್ಡಿಎ ಸರಕಾರದಲ್ಲಿ ಸತತ ಏಳನೇ ಬಾರಿ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಪ್ರಕಟಿಸಿದ್ದಾರೆ. ಎನ್ಪಿಎಸ್ ವಾತ್ಸಲ್ಯ ಯೋಜನೆ ಎಂಬ ಹೆಸರಿನಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್) ಅಡಿಯಲ್ಲಿ ಅಪ್ರಾಪ್ತರಿಗಾಗಿ ಮಕ್ಕಳ ಪಾಲಕರು ಮತ್ತು ಷೋಷಕರು ಈ ಯೋಜನೆ ಆರಂಭಿಸಬಹುದು. ಮಕ್ಕಳು ವಯಸ್ಸಿಗೆ ಬಂದ ನಂತರ ಇದನ್ನು ಪೂರ್ಣ ಪ್ರಮಾಣದ ಎನ್ಪಿಎಸ್ ಸ್ಕೀಂ ಆಗಿ ಬದಲಾಯಿಸಲು ಈ ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ತಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೆತ್ತವರು ಅಥವಾ ಪೋಷಕರು ಎನ್ಪಿಎಸ್ ವಾತ್ಸಲ್ಯ ಮೂಲಕ ದೀರ್ಘಾವಧಿಯ ಉಳಿತಾಯ ಯೋಜನೆ ಆರಂಭಿಸಬಹುದು. ಈ ಯೋಜನೆ ಮೂಲಕ ಮಕ್ಕಳ ಹೆಸರಿನಲ್ಲಿ ಪಾಲಿಸಿಗಳನ್ನು ತೆಗೆದುಕೊಂಡು, ಹೆತ್ತವರು ಅಥವಾ ಪೋಷಕರು ಹಣ ಹೂಡಬಹುದು. ಮಕ್ಕಳು ವಯಸ್ಸಿಗೆ ಬಂದ ಮೇಲೆ ಈ ಯೋಜನೆಯನ್ನು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಾಗಿ (ಎನ್ಪಿಎಸ್) ಪರಿವರ್ತಿಸಲು ಅವಕಾಶವಿದೆ. ಮಕ್ಕಳಿಗಾಗಿಯೇ ಆರಂಭಿಸಿರುವ ಹೊಸ ಸ್ಕೀಮ್…
ನವದೆಹಲಿ: ಕೇಂದ್ರ ಬಜೆಟ್ನಲ್ಲಿ ಹೊಸ ತೆರಿಗೆ ಪದ್ಧತಿ ಘೋಷಿಸಲಾಗಿದ್ದು ಇದರಿಂದ ವೇತನ ಪಡೆಯುವವರಿಗೆ ನೆರವಾಗಲಿದೆ. ಮುಂದಿನ 6 ತಿಂಗಳ ಅವಧಿಯಲ್ಲಿ ಕಸ್ಟಮ್ಸ್ ಸುಂಕ ರಚನೆಯ ಸಮಗ್ರ ಪರಿಶೀಲನೆ ನಡೆಸುವ ಭರವಸೆಯನ್ನು ವಿತ್ತ ಸಚಿವರು ನೀಡಿದ್ದಾರೆ. ಇ-ಕಾಮರ್ಸ್ನಲ್ಲಿ ಟಿಡಿಎಸ್ ದರವನ್ನು 0.1% ಕ್ಕೆ ಇಳಿಸಲಾಗುವುದು. ದತ್ತಿಗಳಿಗೆ ಎರಡು ತೆರಿಗೆ ವಿನಾಯಿತಿ ಆಡಳಿತಗಳನ್ನು ಒಂದಾಗಿ ವಿಲೀನ, ಚಿನ್ನ ಮತ್ತು ಬೆಳ್ಳಿ ಮೇಲಿನ ಸುಂಕ ತಗ್ಗಿಸಿ, ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು 6% ಮತ್ತು ಪ್ಲಾಟಿನಂ ಮೇಲೆ 6.5% ಕ್ಕೆ ಇಳಿಸಲು ಪ್ರಸ್ತಾಪ ನೀಡಲಾಗಿದೆ. ಹೊಸ ತೆರಿಗೆ ಪದ್ಧತಿಯಲ್ಲಿರುವವರಿಗೆ 50,000 ರೂ.ನಿಂದ 75,000 ರೂ.ಗೆ ಹೆಚ್ಚಳ ಮಾಡಲಾಗಿದೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಹೊಸ ತೆರಿಗೆ ಸ್ಲ್ಯಾಬ್ಗಳು: 3 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇಲ್ಲ 3 ಲಕ್ಷದಿಂದ 7 ಲಕ್ಷದವರೆಗಿನ ಆದಾಯಕ್ಕೆ ಶೇ.5 ತೆರಿಗೆ 7 ಲಕ್ಷದಿಂದ 10 ಲಕ್ಷದವರೆಗಿನ ಆದಾಯಕ್ಕೆ ಶೇ.10 ತೆರಿಗೆ 10 ಲಕ್ಷದಿಂದ 12 ಲಕ್ಷದವರೆಗಿನ ಆದಾಯಕ್ಕೆ ಶೇ.15 ತೆರಿಗೆ 12 ಲಕ್ಷದಿಂದ…
ಕೃಷಿ ಕ್ಷೇತ್ರ, ಯುವಕರಿಗೆ ಕೊಡುಗೆಗಳ ಮಹಾಪೂರ ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿರುವ ಬಜೆಟ್ನಲ್ಲಿ ರಾಷ್ಟ್ರೀಯ ಸಹಕಾರಿ ನೀತಿಯ ವಿಷಯ ಪ್ರಸ್ತಾಪಿಸಿದ್ದಾರೆ. ಆದರೆ ಇದರ ರೂಪುರೇಷೆ ಬಗ್ಗೆ ಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಈ ಮಧ್ಯೆ ಆಂಧ್ರಪ್ರದೇಶ ಮತ್ತು ಬಿಹಾರದ ಸರ್ವತೋಮುಖ ಬೆಳವಣಿಗೆಗೆ ಬಜೆಟ್ನಲ್ಲಿ ಅನುದಾನ ಮೀಸಲಿಡಲಾಗಿದೆ. ಅಲ್ಲದೆ ಕೃಷಿ ಕ್ಷೇತ್ರ ಮತ್ತು ಯುವಜನಾಂಗದ ಮೇಲೆ ವಿಶೇಷ ಕೊಡುಗೆ ಪ್ರಕಟಿಸಲಾಗಿದ್ದು ಗ್ರಾಮೀಣಾಭಿವೃದ್ಧಿಗೂ ೨.೬೬ ಲಕ್ಷ ಕೋಟಿ ರೂ. ಘೋಷಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಸಿಗಡಿ ಸಾಕಾಣೆ ಮ್ತು ಅದರ ಮಾರುಕಟ್ಟೆಗೆ ಸಂಬಂಧಿಸಿ ಹಣಕಾಸು ಒದಗಿಸುವ ಯೋಜನೆ ಪ್ರಕಟಿಸಿದೆ. ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಸರ್ಕಾರದ 9 ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ. ಇದರ ಅಡಿಯಲ್ಲಿ, ಮೊದಲ ಬಾರಿಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ನೆರವು ದೊರೆಯಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು. ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು…
ಆಶ್ರಮದಲ್ಲಿ 180 ಮಂದಿಗೆ ವ್ಯವಸ್ಥೆ ಮಂಗಳೂರು: ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ವಜ್ರಮಹೋತ್ಸವ ಸಂಭ್ರಮಾಚರಣೆ ಪ್ರಯುಕ್ತ ಹೊಸಬೆಳಕು ಸೇವಾ ಟ್ರಸ್ಟ್ ಬೈಲೂರು ಇದರ ಆಶ್ರಮವಾಸಿಗಳಿಗೆ ನೆರವು ನೀಡುವ ಕಾರ್ಯಕ್ರಮ ಶನಿವಾರ ಹೊಸಬೆಳಕು ಸೇವಾ ಟ್ರಸ್ಟ್ನ ಸಭಾಂಗಣದಲ್ಲಿ ನೆರವೇರಿತು. ಸಮಾರಂಭದ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅವರು ಆಶ್ರಮಕ್ಕೆ 1300 ವ್ಯಾಟ್ಸ್ ಪ್ರಿಸ್ಟೇಜ್ ಮಿಕ್ಸಿ, 25 ನೀಲ್ ಕಮಲ್ ಚೇರ್, 25 ತಲೆದಿಂಬು, 50 ಕೆಜಿ ಅಕ್ಕಿ ಮತ್ತು ಅಡುಗೆ ಸಾಮಗ್ರಿ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಶ್ರಮ ವಾಸಿಗಳಿಗೆ ನೆರವು ನೀಡಿರುವುದು ಸಂಸ್ಥೆಯ ಸ್ಥಾಪಕಾಧ್ಯಕ್ಷ ದಿ.ಪಾಲ್ಕೆ ಬಾಬುರಾಯ ಆಚಾರ್ ಅವರ ಆತ್ಮಕ್ಕೆ ಖುಷಿ ತಂದಿರಬಹದು ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಮುಖ್ಯೋಪಾಧ್ಯಾಯ ಹರಿನಾರಾಯಣ ಭಂಡಿ ಪೆರ್ಡೂರು ಮಾತನಾಡಿ, ಸೇವಾಶ್ರಮದ ಕಾರ್ಯವೈಖರಿಯನ್ನು ಶ್ಲಾಘಿಸಿ ಎಲ್ಲರೂ ಆರೋಗ್ಯವಂತರಾಗಿ ಎಂದು ಶುಭಹಾರೈಸಿದರು. ಸಂಸ್ಥೆಯ ಸಂಸ್ಥಾಪಕಿ ತನುಜಾ ತರುಣ್ ಮಾತನಾಡಿ, ಸುಮಾರು ಹತ್ತು ವರ್ಷಗಳಿಂದ ಆಶ್ರಮದ ನಿರ್ವಹಣೆಯ ಬಗ್ಗೆ ವಿವರಿಸಿ ಸಾಧನೆಯನ್ನು…
ಬಲ್ನಾಡು ಸಿಎ ಬ್ಯಾಂಕ್ ಕೇಂದ್ರ ಕಚೇರಿಯ ನೂತನ ಕಟ್ಟಡ ಉದ್ಘಾಟಿಸಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಬ್ಯಾಂಕ್ ಗಳು ಯಶಸ್ವಿಯಾಗಿ ತಮ್ಮ ಸೇವೆ ವಿಸ್ತರಿಸಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವು ಬಲಿಷ್ಠವಾಗಿದ್ದು, 28 ವರ್ಷಗಳಿಂದ ಕೃಷಿ ಸಾಲಗಳು ಶೇ.100ರಷ್ಟು ಮರುಪಾವತಿಯಾಗುತ್ತಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. ಬಿಳಿಯೂರು ಕಟ್ಟೆಯಲ್ಲಿರುವ ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೇಂದ್ರ ಕಚೇರಿಯ ನೂತನ ಸುಸಜ್ಜಿತ ಕಟ್ಟಡ ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು. ಆಡಳಿತ ಕಚೇರಿ ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಗೌಡ ನೇತೃತ್ವದಲ್ಲಿ ಉತ್ತಮ ಕಟ್ಟಡ ನಿರ್ಮಿಸಿ ಸಮಾಜಕ್ಕೆ ಅರ್ಪಣೆ ಮಾಡುವ ಮೂಲಕ ಇತಿಹಾಸ ಸೃಷ್ಟಿ ಮಾಡಿದೆ ಎಂದರು. ನೂತನ ಗೋದಾಮು ಕಟ್ಟಡ ಉದ್ಘಾಟಿಸಿದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ…
ಮಂಗಳೂರು: ಪ್ರತಿಭಾನ್ವಿತ ವಿದ್ಯಾರ್ಥಿಗಳ ಕಲಿಕೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರಂತರವಾಗಿ ಪ್ರೋತ್ಸಾಹ ನೀಡುತ್ತಲೇ ಬಂದಿದೆ. ಅವರ ಸಾಧನೆ ಗುರುತಿಸಿ ಪ್ರೋತ್ಸಾಹ ನೀಡುವುದರಿಂದ ವಿದ್ಯಾರ್ಥಿಗಳ ಕಲಿಕೆಗೆ ಪ್ರಯೋಜನವಾಗುತ್ತದೆ. ಇದನ್ನು ಮನಗಂಡು ಎಸ್ಸಿಡಿಸಿಸಿ ಬ್ಯಾಂಕ್ 16 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಆಯೋಜಿಸುತ್ತಿದೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. ಎಸ್ಸಿಡಿಸಿಸಿ ಬ್ಯಾಂಕ್ ವತಿಯಿಂದ ದಿ.ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಶನಿವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್ಸಿಡಿಸಿಸಿ ಬ್ಯಾಂಕ್ ಅವಿಭಜಿತ ದ.ಕ. ಜಿಲ್ಲೆಯ ಅಬಿವೃದ್ದಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಸೂಕ್ತ ಕಾರಣಕ್ಕೆ ಸಾಲ ಒದಗಿಸಲಾಗುತ್ತಿದ್ದು, ಸಮಯಕ್ಕೆ ಸರಿಯಾಗಿ ಮರು ಪಾವತಿಯಾಗುತ್ತಿದೆ ಎಂದು ತಿಳಿಸಿದರು. ಮುಖ್ಯ ಅತಿಥಿ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಡಾ.ಯು.ಕೆ.ಮೋನು ಮಾತನಾಡಿ, ಭಾರತದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ ಕಾರಣ ದೇಶ ಇಂದು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಈಗಿನ ವಿದ್ಯಾರ್ಥಿಗಳಿಗೆ…
ಬಂಟ್ವಾಳ: ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ಬಂಟ್ವಾಳ ಇದರ ವಿಂಶತಿ ಸಂಭ್ರಮ ಮತ್ತು ಸದಸ್ಯರ ಆಟೋಟ ಸ್ಪರ್ಧೆಗಳ ಸಮಾಗಮದ ಉದ್ಘಾಟನಾ ಕಾರ್ಯಕ್ರಮ ಜುಲೈ 21ರಂದು ಭಾನುವಾರ ಬೆಳಗ್ಗೆ 8.30ರಿಂದ ಬಿ.ಸಿ.ರೋಡ್ನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಸಂಸ್ಥೆಯು 21ನೇ ಆರ್ಥಿಕ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, 2023-24ನೇ ವರ್ಷದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸದಸ್ಯರಿಗೆ ಪ್ರೊತ್ಸಾಹ ನೀಡುವ ನಿಟ್ಟಿನಲ್ಲಿ ಶಾಖಾವಾರು ಕಾರ್ಯಕ್ರಮ ನಡೆಸುತ್ತಿದೆ. ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷ ಮಂಜನಾಥ ರೈ ದೀಪ ಪ್ರಜ್ವಲನೆ ಮಾಡುವರು. ಸಂಸ್ಥೆಯ ಹಿರಿಯ ಸದಸ್ಯ, ಉದ್ಯಮಿ ಗಣೇಶ್ ಶೆಣೈ, ಹಿರಿಯ ಸ್ಥಾಪಕ ಸದಸ್ಯರಾದ ಬಾಬು ಭಂಡಾರಿ ಅಜೆಕಲ, ವೆಂಕಪ್ಪ ಪೂಜಾರಿ ಬೈಪಾಸ್ ಬಂಟ್ವಾಳ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ. ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ವಿಳಾಸಕ್ಕೆ ಮೇಲ್ ಮಾಡಿ: Email: sahakaraspandana@gmail.com ಮಾಹಿತಿಗೆ: 9901319694
ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಹೇಳಿಕೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 33ನೇ ಶಾಖೆ ಉದ್ಘಾಟನೆ ಮಂಗಳೂರು: ಸಹಕಾರ ಕ್ಷೇತ್ರ ಕ್ಷಿಪ್ರವಾಗಿ ವಿಸ್ತರಣೆಗೊಳ್ಳುತ್ತಾ ಸಾಗುತ್ತಿದ್ದು, ಗ್ರಾಹಕರಿಗೆ ತಳಮಟ್ಟದಿಂದ ಉತ್ತಮ ಸೇವೆ ನೀಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಸುರತ್ಕಲ್ ಕೃಷ್ಣಾಪುರದ ಆರನೇ ಬ್ಲಾಕ್ನಲ್ಲಿರುವ ಎಚ್ಎನ್ಜಿಸಿ ಐಕನ್ ಪ್ಲಾನೆಟ್ ಕಟ್ಟಡದಲ್ಲಿ ಸೋಮವಾರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 33ನೇ ಶಾಖೆ ಉದ್ಘಾಟಿಸಿ ಮಾತನಾಡಿದರು. ಆತ್ಮಶಕ್ತಿ ಸಹಕಾರ ಸಂಘವು ಕ್ಷಿಪ್ರಗತಿಯಲ್ಲಿ 33 ಶಾಖೆಯವರೆಗೆ ವಿಸ್ತರಿಸಿರುವುದು ಅದರ ಗುಣಮಟ್ಟದ ಸೇವೆ ಹಾಗೂ ಗ್ರಾಹಕರ ವಿಶ್ವಾಸ ಗಳಿಸಿರುವುದಕ್ಕೆ ಸಾಕ್ಷಿ ಎಂದರು. ಸಂಸದ ಬ್ರಿಜೇಶ್ ಚೌಟ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸಂಸ್ಥೆಯು ಶೇ.95ರಷ್ಟು ಮಹಿಳಾ ಸಿಬ್ಬಂದಿಗೆ ಅವಕಾಶ ನೀಡಿರುವುದು ಶ್ಲಾಘನೀಯ ಎಂದರು. ಮಾಜಿ ಶಾಸಕ ಮೊಯಿದಿನ್ ಬಾವಾ, ಮನಪಾ ಮಾಜಿ ಸದಸ್ಯರಾದ ತಿಲಕ್ರಾಜ್ ಕೃಷ್ಣಾಪುರ…
ಕಿಸಾನ್ ಸಮ್ಮಾನ್ ನೆರವು 12,000ಕ್ಕೆ ಏರಿಕೆ? ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿ ಬಹುಮತ ಕಳೆದುಕೊಂಡು ಮಿತ್ರಪಕ್ಷಗಳ ನೆರವಿನಿಂದ ಸರ್ಕಾರ ನಡೆಸುತ್ತಿರುವ ಬಿಜೆಪಿ ಮುಂಬರುವ ಚುನಾವಣೆಗಳ ಬಗ್ಗೆ ಅಲರ್ಟ್ ಆಗಿದ್ದು, ರೈತರು ಹಾಗೂ ಮಹಿಳೆಯರ ಮನಸ್ಸು ಗೆಲ್ಲಲು ಮುಂದಾಗಿದ್ದು ಬಜೆಟ್ನಲ್ಲಿ ರೈತರಿಗೆ ಮತ್ತು ಮಹಿಳೆಯರಿಗೆ ಬಂಪರ್ ಘೋಷಣೆಗೆ ಮುಂದಾಗಿದೆ. ಸದ್ಯ ಕೇಂದ್ರದಿಂದ ಕಿಸಾನ್ ಸಮ್ಮಾನ್ ಸಹಾಯಧನದಡಿಯಲ್ಲಿ ರೈತರಿಗೆ ನೀಡುತ್ತಿರುವ ೬,೦೦೦ ರೂ. ನೆರವನ್ನು ೧೨,೦೦೦ಕ್ಕೇರಿಸುವ ಮಹತ್ವದ ಘೋಷಣೆಯನ್ನು ಬಜೆಟ್ನಲ್ಲಿ ಘೋಷಿಸಲಾಗುವುದು ಎಂದು ಹೇಳಲಾಗಿದೆ. ತಕ್ಷಣಕ್ಕೆ ಮಹಾರಾಷ್ಟ್ರ, ಹರ್ಯಾಣ, ಜಾರ್ಖಂಡ್ ವಿಧಾನಸಭಾ ಚುನಾವಣೆಗಳು ಬಿಜೆಪಿ ಪಾಲಿಗೆ ನಿರ್ಣಾಯಕವಾಗಿದ್ದು ಇದನ್ನು ಗಮನದಲ್ಲಿಟ್ಟುಕೊಂಡು ಬಜೆಟ್ನಲ್ಲಿ ರೈತರು ಮತ್ತು ಮಹಿಳೆಯರ ಮನ ಗೆಲ್ಲಲು ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ವಾರ್ಷಿಕ ನೆರವನ್ನು 12,000 ರೂ.ಗೆ ಹೆಚ್ಚಿಸಬಹುದು ಹಾಗೂ ಬಿಪಿಎಲ್ ಕುಟುಂಬದ ಮಹಿಳೆಯರಿಗೆ 1 ಲಕ್ಷ ರೂ. ನೆರವು ನೀಡುವ ಹೊಸ ಯೋಜನೆಯನ್ನೂ ಪ್ರಕಟಿಸುವ…
ವಿಧಾನ ಪರಿಷತ್ನಲ್ಲಿ ಸಚಿವ ಕೆ.ಎನ್. ರಾಜಣ್ಣ ಮಾಹಿತಿ ಬೆಂಗಳೂರು: 2018ನೇ ಸಾಲಿನ ಒಂದು ಲಕ್ಷ ರೂ. ಸಾಲ ಮನ್ನಾ ಯೋಜನೆಯಡಿ 6,048 ರೈತರಿಗೆ 14.45 ಕೋಟಿ ರೂ.ಗಳ ಸಾಲ ಮನ್ನಾ ಮೊತ್ತದ ಬಿಡುಗಡೆ ಬಾಕಿ ಇದ್ದು ಈ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ರಾಜ್ಯದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಮಂಗಳವಾರ ವಿಧಾನ ಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಎಸ್. ರವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ಸಿ.ಸಿ. ಬ್ಯಾಂಕುಗಳ ಮೂಲಕ ಸಾಲ ನೀಡುವ ಸಹಕಾರ ಸಂಘಗಳಲ್ಲಿ 86,305 ರೈತ ಸದಸ್ಯರಿಗೆ 359.52 ಕೋಟಿ ರೂ.ಗಳ ಸಾಲ ಮನ್ನಾ ಅರ್ಹತೆಯನ್ನು ಗುರುತಿಸಿ ಹಸಿರು ಪಟ್ಟಿ ತಯಾರಿಸಲಾಗಿದೆ. ಈ ಪೈಕಿ 2018-19, 2019-20, 2020-21ರಲ್ಲಿ 80,257 ರೈತರ 345.08 ಕೋಟಿ ರೂ.ಗಳ ಸಾಲ ಮನ್ನಾ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. 2024-25ನೇ ಸಾಲಿಗೆ 35.10 ಲಕ್ಷ ರೈತರಿಗೆ ರೂ 25,000 ಕೋಟಿ ರೂ.ಗಳ ಅಲ್ಪಾವಧಿ…
