Author: admin
ಉಡುಪಿ: ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ ಕೋಡಿ ಕನ್ಯಾಣ ಇದರ ಅಧ್ಯಕ್ಷರಾಗಿ ಶಂಭು ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಹಾಬಲ ಕುಂದರ್ ಕೋಡಿ ಕನ್ಯಾಣ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು ಎಲ್ಲರನ್ನು ಅಭಿನಂದಿಸಲಾಯಿತು.
ಕುಶಾಲನಗರ ಶಾಖೆ ಉದ್ಘಾಟಿಸಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯ ಮಂಗಳೂರು: ಪ್ರಣವ ಸೌಹಾರ್ದ ಸಹಕಾರಿ ಸಂಘದ ಬೆಳವಣಿಗೆ ಶ್ಲಾಘನೀಯವಾದುದು. ಉತ್ತಮ, ಪ್ರಾಮಾಣಿಕ ಆಡಳಿತದಿಂದ ಸಂಸ್ಥೆ ಉನ್ನತಿ ಹೊಂದುತ್ತಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಪ್ರಣವ ಸೌಹಾರ್ದ ಸಹಕಾರಿ ಸಂಘದ ಎಂಟನೇ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಹಕಾರ ತತ್ವದಡಿ ಕೆಲಸ ಮಾಡುವಾಗ ಸಾಮಾಜಿಕ ಬದ್ಧತೆಯನ್ನೂ ಗಣನೆಗೆ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/Ge11n7QCiMj5QyPvCc0H19 ಪ್ರಣವ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ.ಆರ್.ಪ್ರಸಾದ್ ಸ್ವಾಗತಿಸಿ, ಪ್ರಣವ ಸೌಹಾರ್ದದ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಕಾರ್ಯಕರ್ತ ಭಾರತೀಶ್ ದೇಶದ ಈಗಿನ ವ್ಯವಸ್ಥೆ ಹಾಗೂ ನಮ್ಮ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು. ಧ್ವನಿ ಫೌಂಡೇಶನ್ ಅಧ್ಯಕ್ಷೆ ಶ್ವೇತಾ ಮಡಪ್ಪಾಡಿ ಮಾತನಾಡಿ, ಆರ್ಥಿಕ ಸಂಸ್ಥೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಸಹಾಯಕ್ಕೆ ನಿಲ್ಲಬೇಕು ಎಂದು ಆಶಯ ವ್ಯಕ್ತಪಡಿಸಿದರು. ಮೈಸೂರು, ಮಂಡ್ಯ, ಕೊಡಗು ಜಿಲ್ಲೆಯ ಸೌಹಾರ್ದ…
ಮಂಗಳೂರು: ಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಇದರ ಅಧ್ಯಕ್ಷರಾಗಿ ಜಿತಿನ್ ಜೀಜೋ ಹಾಗೂ ಉಪಾಧ್ಯಕ್ಷರಾಗಿ ಡಿ.ಎಂ.ದೀಕ್ಷಾ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ದಿನಾಂಕ 12-7-2024ರಂದು ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಈ ಚುನಾವಣಾ ಪ್ರಕ್ರಿಯೆಯು ನಡೆಯಿತು. ರಿಟರ್ನಿಂಗ್ ಅಧಿಕಾರಿಯಾಗಿ ಲೆಕ್ಕ ಪರಿಶೋಧನಾ ಇಲಾಖೆಯ ಶ್ರೀಯುತ ನವೀನ್ ಎಂ.ಎಸ್. ಇವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದರ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯಲ್ಲಿ ನಿರ್ದೇಶಕರಾಗಿ ಚೇತನ್ ಕೊಟ್ಟಾರಿ ಎಚ್, ಪೃಥ್ವೀಶ್ ಗೌಡ, ಶೆಲ್ಡನ್ ಹರ್ಮನ್ ತಾವ್ರೊ, ಜಿತಿನ್ ಜೀಜೋ, ಮೇಘೇಶ್ ಯು.ಶೆಟ್ಟಿ, ಅನ್ಮೋಲ ಅ.ಬಾಳೇರಿ, ಗುರು ಆದಿತ್ಯ, ನಿಖಿತ್ ಕುಮಾರ್, ನಿಶ್ಮಾ ವಿ.ಕೆ, ನರಸಿಂಹ ಎಸ್.ಭಂಡಾರಿ, ಪೆನಜಾ ರೆಡ್ಡಿ, ಭರತ್ ನಿಡ್ಪಳ್ಳಿ ಮತ್ತು ಡಿ.ಎಂ.ದೀಕ್ಷಾ ಇವರುಗಳು ಅವಿರೋಧವಾಗಿ ಚುನಾಯಿತರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ: ಇಮೇಲ್: sahakaraspandana@gmail.com ಮಾಹಿತಿಗೆ:…
ಸುರತ್ಕಲ್ ಕೃಷ್ಣಾಪುರದ ಆರನೇ ಬ್ಲಾಕ್ನಲ್ಲಿ ಸೋಮವಾರದಿಂದ ಕಾರ್ಯಾರಂಭ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 33ನೇ ನೂತನ ಶಾಖೆಯು ಸುರತ್ಕಲ್ ಕೃಷ್ಣಾಪುರದ 6ನೇ ಬ್ಲಾಕ್ನಲ್ಲಿರುವ “HNGC ಐಕನ್ ಪ್ಲಾನೆಟ್”ನಲ್ಲಿ ಜುಲೈ 15ರಂದು ಸೋಮವಾರ ಬೆಳಗ್ಗೆ 10.3೦ಕ್ಕೆ ಉದ್ಘಾಟನೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಪ್ರಜ್ವಲನೆ ಮಾಡುವರು. ಶಾಸಕ ಡಾ.ವೈ.ಭರತ್ ಶೆಟ್ಟಿ ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಗಣಕೀಕೃತ ಬ್ಯಾಂಕಿಂಗ್ಗೆ ಚಾಲನೆ ನೀಡುವರು. ಮಾಜಿ ಶಾಸಕ ಮೊಯ್ದೀನ್ ಬಾವ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮೈಸೂರು ಪ್ರಾಂತ್ಯದ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ. ದಕ್ಷಿಣ ಕನ್ನಡ…
ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ, ಭಾರತೀಯ ಅಂಚೆ ಇಲಾಖೆ, ಮಂಗಳೂರು ವಿಭಾಗ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಇವುಗಳ ಸಹಯೋಗದೊಂದಿಗೆ ಗ್ರಾಹಕರಿಗಾಗಿ “ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮೆ ಅಭಿಯಾನ”ಕ್ಕೆ ಗುರುವಾರ ಶ್ರೀಶಾ ಸೊಸೈಟಿಯ ಹಂಪನಕಟ್ಟೆ ಶಾಖೆಯಲ್ಲಿ ಚಾಲನೆ ನೀಡಲಾಯಿತು. ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಶ್ರೀಶಾ ಸೊಸೈಟಿ ಗ್ರಾಹಕರಿಗೆ ನೀಡುತ್ತಿರುವ ಈ ಅಪಘಾತ ವಿಮಾ ಯೋಜನೆ ಅತ್ಯಂತ ಅವಶ್ಯಕವಾಗಿದ್ದು, ಅತ ಕಡಿಮೆ ಪ್ರೀಮಿಯಂ ಜೊತೆಗೆ ಅನೇಕ ಸವಲತ್ತುಗಳನ್ನು ಒಳಗೊಂಡಿದೆ. ಶ್ರೀಶಾ ಸೊಸೈಟಿ ಈ ರೀತಿಯ ಅನೇಕ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಾದರಿಯಾಗಿದೆ. ಈ ವಿಮಾ ಯೋಜನೆಯನ್ನು ರಾಜ್ಯದ ಸೌಹಾರ್ದ ಸಹಕಾರಿಗಳಿಗೆ ಪರಿಚಯಿಸುವುದಾಗಿ ಹೇಳಿದರು. ಮುಖ್ಯ ಅತಿಥಿ ಮಂಗಳೂರು ವಿಭಾಗದ ಹಿರಿಯ ಸೂಪರಿಂಟೆಂಡೆಂಟ್ ಆಫ್ ಪೋಸ್ಟ್ ಆಫೀಸಸ್ ಎಂ.ಸುಧಾಕರ್ ಮಲ್ಯ ಮಾತನಾಡಿ, ಶ್ರೀಶಾ ಸೊಸೈಟಿಯ ಈ ಸಹಕಾರಕ್ಕೆ ಮತ್ತು ವಿನೂತನ ಕಾರ್ಯಗಳಿಗೆ ಸಂತಸ ವ್ಯಕ್ತಪಡಿಸಿ,…
ಸಂಪರ್ಕ ಸಭೆ, ತರಬೇತಿ ಕಾರ್ಯಕ್ರಮದಲ್ಲಿ ಜಿ.ನಂಜನ ಗೌಡ ಅಭಿಪ್ರಾಯ ಮಂಗಳೂರು: ಅತ್ಯಂತ ಬಡವರೂ ಏಳಿಗೆ ಹೊಂದಬೇಕು ಎಂಬುದು ಸೌಹಾರ್ದ ಸಹಕಾರಿಯ ಉದ್ದೇಶ. ಈ ಕ್ಷೇತ್ರದಲ್ಲಿ ಅಧಿಕಾರಿಗಳ ಹಸ್ತಕ್ಷೇಪ ಕಡಿಮೆ. ಆದರೆ ಸೌಹಾರ್ದದ ನಿಯಮಾವಳಿಯ ದುರುಪಯೋಗ ಯಾವತ್ತೂ ಆಗಬಾರದು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಅಭಿಪ್ರಾಯಪಟ್ಟರು. ಮಂಗಳೂರಿನಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಹಮ್ಮಿಕೊಂಡ ಸಂಪರ್ಕ ಸಭೆ ಹಾಗೂ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸೌಹಾರ್ದ ಸಹಕಾರಿ ಸಂಸ್ಥೆಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಯಾರಿಗಾದರೂ ಸಾಲ ಕೊಡುವಾಗ ಸಂಸ್ಥೆಯ ಅಧ್ಯಕ್ಷರು, ನಿರ್ದೇಶಕರು ಅತ್ಯಂತ ಜಾಗರೂಕರಾಗಿರಬೇಕು. ಪ್ರತಿಯೊಬ್ಬ ನಿರ್ದೇಶಕರೂ ಸಂಸ್ಥೆಯ ಎಲ್ಲ ಆಸ್ತಿಗಳ ಬಗ್ಗೆ ಪೂರ್ಣ ಮಾಹಿತಿ ಹೊಂದಿರಬೇಕು. ಸಂಸ್ಥೆಯ ಬೆಳವಣಿಗೆ, ನಿರ್ವಹಣೆಯ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿರಬೇಕು ಮತ್ತು ಸಂಸ್ಥೆಯ ಅಭಿವೃದ್ಧಿ ಕಾರ್ಯದಲ್ಲಿ ಭಾಗಿಯಾಗಬೇಕು. ಸಂಸ್ಥೆಯ ವಿಶ್ವಾಸಕ್ಕೆ ಒಮ್ಮೆ ಧಕ್ಕೆಯಾದರೆ ಇಡೀ ವ್ಯವಸ್ಥೆಯೇ ಹಾಳಾಗುತ್ತದೆ…
ಪುರುಷರ ಏಕಸ್ವಾಮ್ಯಕ್ಕೆ ೩೩ ಶೇಕಡಾ ಮೀಸಲಾತಿಯ ತಡೆ ಮಂಗಳೂರು: ಇಂದು ಮಹಿಳೆಯರು ಪ್ರವೇಶಿಸದ ಕ್ಷೇತ್ರವೇ ಇಲ್ಲ. ಅಡುಗೆ ಮನೆಯಿಂದ ಹಿಡಿದು ಆರ್ಥಿಕ ಕ್ಷೇತ್ರದವರೆಗೂ ಮಹಿಳೆಯರು ತಮ್ಮ ಕಾರ್ಯಬಾಹುಳ್ಯವನ್ನು ವಿಸ್ತರಿಸಿಕೊಂಡಿದ್ದಾರೆ. ಇದೀಗ ಸಹಕಾರ ಕ್ಷೇತ್ರದಲ್ಲೂ ಮಹಿಳೆಯರ ಸಾಮರ್ಥ್ಯ ಪ್ರದರ್ಶನಕ್ಕೆ ವೇದಿಕೆ ರೆಡಿಯಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇಕಡಾ 33ರ ಸ್ಥಾನಮಾನ ನೀಡಬೇಕೆಂಬ ಕೂಗು ಬಹಳ ಹಳೆಯದು. ಈಗ ಸಹಕಾರ ಕ್ಷೇತ್ರಕ್ಕೂ ಶೇಕಡಾ 33ರ ಬೇಡಿಕೆ ಕಾಲಿಟ್ಟಿದೆ. ಇದು ಸಹಕಾರಿ ಕ್ಷೇತ್ರದಲ್ಲಿ ಪುರುಷರ ಏಕಸ್ವಾಮ್ಯಕ್ಕೆ ಅಂತ್ಯ ಹಾಡಲಿದೆ. ಇಂಥದೊಂದು ಬೋಲ್ಡ್ ಆದೇಶ ಹೊರಡಿಸಿದ್ದು ಉತ್ತರಾಖಂಡ ಸರ್ಕಾರ. ಹೌದು, ಉತ್ತರಾಖಂಡದ ಸಹಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಆದೇಶವನ್ನು ಅಲ್ಲಿನ ಸರ್ಕಾರ ಕಳೆದ ವಾರ ಹೊರಡಿಸಿದೆ. ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಅದನ್ನು ಆದೇಶ ಮಾಡಿ ಸರ್ಕಾರ ನಿಯಮ ಜಾರಿಗೆ ತಂದಿದ್ದು ಶನಿವಾರ ಅಂತಾರಾಷ್ಟ್ರೀಯ ಸಹಕಾರ ದಿನಾಚರಣೆಯ ಕಾರ್ಯಕ್ರಮದಲ್ಲಿ…
ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಕರೆ ಗಾಂಧಿನಗರ: ದೇಶದಲ್ಲಿರುವ ಲಕ್ಷಾಂತರ ಬಡಜನರಿಗೆ ಮೂಲಸೌಲಭ್ಯವೊದಗಿಸಲು, ಸಮೃದ್ಧತೆ ತರಲು ಮತ್ತು ಅವರಲ್ಲಿ ಆತ್ಮವಿಶ್ವಾಸ ವೃದ್ಧಿಸುವಂತೆ ಮಾಡಲು ಸಹಕಾರ ಕ್ಷೇತ್ರವನ್ನು ಕೊಂಡಿಯಾಗಿ ಬಳಸಬೇಕು ಎಂದು ಕೇಂದ್ರ ಗೃಹಸಚಿವ ಅಮಿತ್ ಷಾ ಕರೆ ನೀಡಿದರು. ಗುಜರಾತ್ನ ಗಾಂಧಿನಗರದಲ್ಲಿ ಇತ್ತೀಚೆಗೆ 102ನೇ ಅಂತಾರಾಷ್ಟ್ರೀಯ ಸಹಕಾರ ದಿನ ಆಚರಣೆ ಕಾರ್ಯಕ್ರಮದಲ್ಲಿ ಈ ವಿಷಯದ ಬಗ್ಗೆ ಮಾತನಾಡಿದರು. 2029ರಲ್ಲಿ ಅಂತಾರಾಷ್ಟ್ರೀಯ ಸಹಕಾರ ದಿನ ಆಚರಿಸುವ ವೇಳೆ ದೇಶದ ಎಲ್ಲ ಪಂಚಾಯಿತಿಗಳಲ್ಲೂ ಕೋ ಆಪರೇಟಿವ್ ಸೊಸೈಟಿಗಳು ಸ್ಥಾಪನೆಯಾಗಲಿವೆ. ಅದರಲ್ಲೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರಚನೆಯಾಗಲಿವೆ ಎಂಬ ವಿಶ್ವಾಸವಿದೆ ಎಂದು ಅಮಿತ್ ಷಾ ಹೇಳಿದರು. ಕೇಂದ್ರ ಸರ್ಕಾರವು ಸಹಕಾರಿ ವಲಯದಲ್ಲಿ ಎರಡು ಹೊಸ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಅಮಿತ್ ಷಾ ತಿಳಿಸಿದರು. ಮೆಕ್ಕೆಜೋಳ ಬೆಳೆಯುವ ರೈತರನ್ನು ಹುರಿದುಂಬಿಸಲು ಎಥೆನಾಲ್ ಮೂಲಕ ಇಂಧನ ತಯಾರಿಸುವುದನ್ನು ಪ್ರೋತ್ಸಾಹಿಸಲಾಗುವುದು. ಆನ್ಲೈನ್ ಖರೀದಿ ಮೂಲಕ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಗೆ ಎರಡು ಪ್ರಮುಖ…
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಪ್ರಯುಕ್ತ ಆಗಸ್ಟ್ ೪ರಂದು ಆಯೋಜನೆಮಂಗಳೂರು: ಒಡಿಯೂರು ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ, ಗ್ರಾಮೋತ್ಸವ, ಸೇವಾ ಸಂಭ್ರಮ ಪ್ರಯುಕ್ತ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್ 4ರಂದು ಭಾನುವಾರ ಬೆಳಗ್ಗೆ 9.30ರಿಂದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಒಡಿಯೂರು ಶ್ರೀ ಬ್ಲಡ್ ಡೋನರ್ಸ್ ಗ್ರೂಪ್ ರಚನೆ ಹಾಗೂ ದುಶ್ಚಟಮುಕ್ತ ಸಮಾಜ ನಿರ್ಮಾಣ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ. ಭಾರತೀಯ ರೆಡ್ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಮತ್ತು ವಿವಿಧ ಘಟಕಗಳು, ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿ, ಬಂಟರ ಸಂಘ ಜಪ್ಪು, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಶ್ರೀ ಗುರುದೇವ ಸೇವಾ ಬಳಗ ಮಂಗಳೂರು, ಜಪ್ಪಿನಮೊಗರು ಬಂಟರ ಸಂಘ, ಕ್ರೀಡಾ ಭಾರತಿ ಮಂಗಳೂರು, ಶ್ರೀ ಸಂಸ್ಥಾನ ಒಡಿಯೂರು ತುಳು…
ಇದುವರೆಗೆ 77 ಸಾಮಾನ್ಯ, 15 ಮಧ್ಯಂತರ ಆಯವ್ಯಯಗಳ ಮಂಡನೆ ಮೋಹನ್ದಾಸ್ ಮರಕಡ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಗೆ ತಯಾರಾಗಿದ್ದಾರೆ. ಬಹುತೇಕ ಜುಲೈ 24ರಂದು ಬಜೆಟ್ ಮಂಡನೆಯಾಗಲಿದೆ ಎಂದು ಹೇಳಲಾಗುತ್ತಿದೆ. ಸಂಸತ್ನಲ್ಲಿ ಬಜೆಟ್ ಮಂಡಿಸುವ ಸಂಪ್ರದಾಯ ಪ್ರಾರಂಭವಾದಾಗಿನಿಂದ ಈ ತನಕ 92 ಬಜೆಟ್ಗಳು ಮಂಡನೆಯಾಗಿವೆ. ಈ ಬಾರಿ ಸಂಸತ್ತಿನಲ್ಲಿ ಮಂಡನೆಯಾಗಲಿರುವುದು 93ನೇ ಬಜೆಟ್. ಇದುವರೆಗೆ 77 ಸಾಮಾನ್ಯ ಬಜೆಟ್ ಮತ್ತು 15 ಮಧ್ಯಂತರ ಬಜೆಟ್ಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಭಾರತದಲ್ಲಿ ೧860ರಲ್ಲಿ ಬಜೆಟ್ ಅನ್ನು ಅರ್ಥಶಾಸ್ತ್ರಜ್ಞ ಜೇಮ್ಸ್ ವಿಲ್ಸನ್ ಪರಿಚಯಿಸಿದರು. ಭಾರತ ಬ್ರಿಟಿಷ್ ಸಂಕೋಲೆಯಿಂದ ಹೊರಬಂದು ಸ್ವತಂತ್ರ ದೇಶವಾಗಿ ಮೂಡಿಬಂದ ಬಳಿಕ 1947ರ ನವೆಂಬರ್ 26ರಂದು ಹಣಕಾಸು ಸಚಿವ ಆರ್.ಕೆ. ಷಣ್ಮುಖಂ ಚೆಟ್ಟಿ ಮಂಡಿಸಿದರು. ಅವರು ಮಂಡಿಸಿದ ಈ ಬಜೆಟ್ನ ಗಾತ್ರ 197.39 ಕೋಟಿ ರೂ. ಆಗಿತ್ತು. ಇದರಲ್ಲಿ ರಕ್ಷಣಾ ಇಲಾಖೆಯೊಂದಕ್ಕೇ 92.74 ಕೋಟಿ ರೂ. ಮೀಸಲಿಡಲಾಗಿತ್ತು. 1948ರ…
