Author: admin

ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾರ್‌ ರೈ ಬಾಲ್ಯೊಟ್ಟು ಸಲಹೆ ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ. ಜಿಲ್ಲಾ ಸಹಕಾರ ಯೂನಿಯನ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಉಪವಿಭಾಗದ ವಿವಿಧ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಚುನಾವಣಾ ಪೂರ್ವ ತಯಾರಿ ತರಬೇತಿ ಶಿಬಿರ ಪುತ್ತೂರು ಟೌನ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆಯಿತು. ತರಬೇತಿ ಶಿಬಿರವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿ, ಕಾಲಕಾಲಕ್ಕೆ ಸಹಕಾರಿ ಕಾನೂನಿನಲ್ಲಿ ತಿದ್ದುಪಡಿಯ ಆದಾರದ ಮೇಲೆ ಸಹಕಾರ ಸಂಘಗಳು ನಿಯಮಾನುಸಾರ ಚುನಾವಣೆಯನ್ನು ಕ್ರಮಬದ್ಧವಾಗಿ ನಡೆಸಲು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಕಾರ್ಯನಿರ್ವಹಿಸಬೇಕು. ಸದ್ಯ ಸಹಕಾರ ಸಂಘಗಳ ನಿಯಮ 13ಡಿ ಅನ್ವಯ 195 ದಿನಗಳ ಮುಂಚೆ ಅನರ್ಹ ಸದಸ್ಯರಿಗೆ ನೋಟಿಸ್ ನೀಡಿ ಚುನಾವಣೆ ಪ್ರಕ್ರಿಯೆ ನಡೆಸಬೇಕು ಎಂದು ಸಲಹೆ ನೀಡಿದರು. ದ.ಕ. ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ರಾಜಶೇಖರ ಜೈನ್ ಮಾತನಾಡಿ, ಇಂದು…

Read More

ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ 39 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸನ್ನದು ಲೆಕ್ಕಪರಿಶೋಧಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ಸಹಾಯಕರು ಇತ್ಯಾದಿ ಹಲವು ಹುದ್ದೆಗಳನ್ನು ಭರ್ತಿ ಮಾಡಬೇಕಿದೆ.ಹುದ್ದೆಗಳ ವಿವರಸನ್ನದು ಲೆಕ್ಕಪರಿಶೋಧಕರು (Charted Accountant) : ಸಿಎ/ ಸಿಎಸ್ /ICWA. ಗರಿಷ್ಠ ವಯಸ್ಸು 35 ವರ್ಷ.ಕಾನೂನು ಅಧಿಕಾರಿ (ಅಧಿಕಾರಿ ಶ್ರೇಣಿ) : ಕಾನೂನು ಪದವಿ ಜತೆಗೆ ಕಂಪ್ಯೂಟರ್ ಪರಿಣಿತಿ ಕಡ್ಡಾಯ. ಬ್ಯಾಂಕಿಂಗ್ ಅಥವಾ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಭವ ಹೊಂದಿದವರಿಗೆ ಆದ್ಯತೆ. ಗರಿಷ್ಠ 35 ವರ್ಷ.ಮಾನವ ಸಂಪನ್ಮೂಲ ಅಧಿಕಾರಿ (ಎಂಬಿಎ, ಎಚ್‌.ಆರ್ ) (ಅಧಿಕಾರಿ ಶ್ರೇಣಿ) : ಎಂಬಿಎ, ಎಚ್‌.ಆರ್ ಪದವಿ. ಗರಿಷ್ಠ 35 ವರ್ಷ.ತರಬೇತಿ ಅಧಿಕಾರಿ (ಅಧಿಕಾರಿ ಶ್ರೇಣಿ) : ಎಂಎ ಕನ್ನಡ ಅಥವಾ MSW ಪದವಿ. 3 ವರ್ಷ ಕನಿಷ್ಠ ಕಾರ್ಯಾನುಭವ. ಗರಿಷ್ಠ 35 ವರ್ಷ.ಸೌಹಾರ್ದ ಅಭಿವೃದ್ಧಿ ಅಧಿಕಾರಿ (ಕಿರಿಯ ಅಧಿಕಾರಿ ಶ್ರೇಣಿ) : ಯಾವುದೇ ಪದವಿ. ಗರಿಷ್ಠ 30…

Read More

ಬೆಳಗಾವಿ: ಹಿರಿಯ ಸಹಕಾರಿ ಧುರೀಣ, ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ರಾವ್‌ ಸಾಹೇಬ ಪಾಟೀಲ್‌ (ದಾದಾ) ಮಂಗಳವಾರ ನಿಧನ ಹೊಂದಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. 1944ರ ಏಪ್ರಿಲ್‌ 11ರಂದು ರೈತ ಕುಟುಂಬದಲ್ಲಿ ಜನಿಸಿದ್ದ ರಾವ್ ಸಾಹೇಬ ಪಾಟೀಲ್‌ ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಿದ್ದರು. ಬೆಳಗಾವಿ ಜಿಲ್ಲೆಯ ಬೋರೆಗಾಂವ್‌ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೆ ಸಾಕಷ್ಟು ಪ್ರಯತ್ನ ಮಾಡಿ ಅನೇಕ ಪ್ರಗತಿ ಚಟುವಟಕೆಗಳನ್ನು ಕೈಗೊಂಡಿದ್ದರು. ಹಲವಾರು ಸಹಕಾರ ಮತ್ತು ಸಾಮಾಜಿಕ ಕಾರ್ಯಗಳೊಂದಿಗೆ ಧಾರ್ಮಿಕ ಕಾರ್ಯಗಳನ್ನೂ ಸಂಯೋಜಿಸಿದರು. ಬೋರೆಗಾಂವ್‌ನಲ್ಲಿ ಅರಿಹಂತ್ ಉದ್ಯೋಗ್ ಗ್ರೂಪ್ ಎಂಬ ಸಂಸ್ಥೆ ಸ್ಥಾಪಿಸಿ ರೈತರ ಏಳಿಗೆಗೆ ಶ್ರಮಿಸಿದ್ದರು. ವಿವಿಧ ವೇತನ ಯೋಜನೆಗಳು, ಆವಾಸ್‌ ಯೋಜನೆಗಳು, ಅಂಗವಿಕಲರಿಗೆ ಸೈಕಲ್ ವಿತರಣೆ ಮತ್ತು ನಿರ್ಗತಿಕರಿಗೆ ಶೈಕ್ಷಣಿಕ ಸಾಮಗ್ರಿಗಳ ಮೂಲಕ ಸಮಾಜಸೇವೆಯ ಕೈಂಕಯದಲ್ಲಿ ತೊಡಗಿಸಿಕೊಂಡರು. ರಾಜಕೀಯ ಸೇವೆ ಮಾಡುತ್ತಲೇ ಜನಸಾಮಾನ್ಯರ ಅಭಿವೃದ್ಧಿಗೆ ಶ್ರಮಿಸಿದ ಪಾಟೀಲರು, ಬೋರೆಗಾಂವ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಲವು ಸಂಘ ಸಂಸ್ಥೆಗಳನ್ನು ಸ್ಥಾಪಿಸಿದರು.ಬೋರೆಗಾಂವ್‌ ಜೊತೆಗೆ ನಿಪ್ಪಾಣಿ ಕ್ಷೇತ್ರದ ಸವಾಂಗೀಣ ಅಭಿವೃದ್ಧಿಗೂ…

Read More

ಬೆಂಗಳೂರಿನ ಬಸವಶ್ರೀ ಫೌಂಡೇಷನ್‌ನಿಂದ ಗೌರವ ವಿಶೇಷ ಸೇವೆ ಸಲ್ಲಿಸಿದ ಗಣ್ಯರ ಗುರುತು ಬೆಂಗಳೂರು: ದಕ್ಷಿಣ ಕನ್ನಡದ ಪ್ರತಿಷ್ಠಿತ ಸಹಕಾರ ಸಂಸ್ಥೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶೇಷ ಸೇವೆಯನ್ನು ಗುರುತಿಸಿ ಶುಕ್ರವಾರ ಬೆಂಗಳೂರಿನಲ್ಲಿ ಸಿದ್ಧಗಂಗಾ ರಾಷ್ಟ್ರೀಯ ರತ್ನ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ಕನ್ನಡ ಭವನದಲ್ಲಿ ಬಸವಶ್ರೀ ಫೌಂಡೇಷನ್ ಬೆಂಗಳೂರು ವತಿಯಿಂದ ಭಗವಾನ್ ಬುದ್ಧ, ಬಸವೇಶ್ವರ, ಡಾ||ಬಿ.ಆರ್ ಅಂಬೇಡ್ಕರ್ ಮತ್ತು ಡಾ||ಶಿವಕುಮಾರ ಸ್ವಾಮೀಜಿಯವರ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಮಹಾಸಂಗಮ ಸಮಾವೇಶ, ಶಾಸಕರ ಜನಸ್ಪಂದನ ಪತ್ರಿಕೆಯ 15ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ಪುರಸ್ಕಾರಗಳನ್ನು ನೀಡಲಾಯಿತು. ಬೆಳಗಾವಿಯ ನ್ಯಾಯವಾದಿ ಕೆ.ಎಲ್.ಕುಂದರಗಿ ಅಧ್ಯಕ್ಷತೆ ವಹಿಸಿದ್ದರು. ತುಮಕೂರಿನ ಅರೇಶಂಕರ ಮಠದ ಶ್ರೀ ಸಿದ್ದರಾಮ ಚೈತನ್ಯ ಮಹಾಸ್ವಾಮೀಜಿ, ಶ್ರೀ ಬಸವೇಶ್ವರ ಪ್ರಾಚಿ ಯೋಗ ಮಠದ ಶ್ರೀ ತೋಟಾಪುರಿ ಸೋಮಶೇಖರ್ ಗುರೂಜಿಯವರ ಗೌರವ ಉಪಸ್ಥಿತಿಯಲ್ಲಿ, ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪಿ.ಕೃಷ್ಣ ಭಟ್, ಚಿತ್ತರಂಜನ್ ಬೋಳಾರ್…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಅಂಗವಾಗಿ ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಯುವವಾಹಿನಿ ಪಡುಬಿದ್ರಿ ಘಟಕಗಳ ಜಂಟಿ ಸಹಯೋಗದಲ್ಲಿ ಜೂನ್ 23ರಂದು ಭಾನುವಾರ ಬೆಳಿಗ್ಗೆ 9.3೦ರಿಂದ ಮಧ್ಯಾಹ್ನ 12.3೦ರವರೆಗೆ ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಶಾಲೆ (ಬೋರ್ಡ್ ಶಾಲೆ)ಯಲ್ಲಿ ನಡೆಯಲಿದೆ. ವೈದ್ಯಕೀಯ ಶಿಬಿರದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೇನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಯೇನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದಿಂದ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು, ಬಿ.ಪಿ. ಮತ್ತು ಮಧುಮೇಹ ತಪಾಸಣೆ, ಸಾಮಾನ್ಯ ರೋಗ ತಪಾಸಣೆ, ಉಚಿತ ಔಷಧಿ ವಿತರಣೆ, ರಕ್ತ ಗುಂಪಿನ ವರ್ಗೀಕರಣ, ಇತರ ವೈದ್ಯಕೀಯ ಸೇವೆಗಳು ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡಲಾಗುವುದು. ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಸಂಘದ ವತಿಯಿಂದ ಕನ್ನಡಕ ಉಚಿತವಾಗಿ…

Read More

ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ “ಉನ್ನತಿ’ ಇದರ ಉದ್ಘಾಟನಾ ಸಮಾರಂಭ ಜೂನ್ ೨೧ರಂದು(ನಾಳೆ) ಬೆಳಗ್ಗೆ ೧೦.೩೦ಕ್ಕೆ ಕಲ್ಲೇರಿಯ ಸಂಘದ ವಠಾರದಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ. ರೈತ ಸಭಾಭವನವನ್ನು ರಾಜ್ಯ ಸಹಕಾರ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ. ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಪುತ್ತೂರು ಸಹಕಾರ ಸಂಘಗಳ ಸಹಾಯಕ ಉಪನಿಬಂಧಕಿ ತ್ರಿವೇಣಿ ರಾವ್, ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ವಿ.ಪ್ರತಿಮಾ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ,…

Read More

ಆರ್.ಕೆ ಷಣ್ಮುಖಂ ಚೆಟ್ಟಿಯಿಂದ ನಿರ್ಮಲಾ ಸೀತಾರಾಮನ್ ತನಕ ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಮೂರನೇ ಅವಧಿಗೆ ಆಡಳಿತಕ್ಕೇರಿದೆ. ಮಳೆಗಾಲದ ಅಧಿವೇಶನದಲ್ಲಿ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೊಮ್ಮೆ ಬಜೆಟ್ ಮಂಡನೆಗೆ ರೆಡಿಯಾಗಿದ್ದಾರೆ. ಕೇಂದ್ರದಲ್ಲಿ ಹೊಸ ಸಹಕಾರ ಸಚಿವಾಲಯ ಆರಂಭವಾದ ಬಳಿಕ ಸಹಕಾರಿ ವಲಯಕ್ಕೂ ಒಂದಷ್ಟು ಕೊಡುಗೆಗಳು ದೊರೆಯುವ ನಿರೀಕ್ಷೆಗಳು ಗರಿಗೆದರಿವೆ. ಈ ಮಧ್ಯೆ ಕೇಂದ್ರ ಬಜೆಟ್ ಆರಂಭವಾದಂದಿನಿಂದ ಈ ತನಕದ ಬಜೆಟ್‌ಗಳ ವಿಶೇಷಗಳ ಬಗ್ಗೆ ಒಂದು ಮೆಲುಕು ಇಲ್ಲಿದೆ. ಭಾರತದಲ್ಲಿ ಬಜೆಟ್ ಅನ್ನು ರಾಷ್ಟ್ರಪತಿಗಳು ನಿಗದಿಪಡಿಸಿದ ದಿನದಂದು ಲೋಕಸಭೆಯಲ್ಲಿ ಹಣಕಾಸು ಸಚಿವರು ಮಂಡಿಸುತ್ತಾರೆ. ಸಾಮಾನ್ಯವಾಗಿ ಕೇಂದ್ರದ ಹಣಕಾಸು ಸಚಿವರು ಫೆಬ್ರವರಿಯ ಕೊನೆಯ ಕೆಲಸದ ದಿನದಂದು ಸಂಸತ್ತಿನಲ್ಲಿ ಮಂಡಿಸುವುದು ನಡೆದುಕೊಂಡು ಬಮದ ಕ್ರಮವಾಗಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಇದನ್ನು ಬದಲಿಸಿ ಫೆಬ್ರವರಿ ಒಂದರದೇ ಬಜೆಟ್ ಮಂಡಿಸುವ ಸಂಪ್ರದಾಯ ತಂದಿದೆ. ಹಣಕಾಸು ಸಚಿವಾಲಯ, ಯೋಜನಾ ಆಯೋಗ, ಆಡಳಿತಾತ್ಮಕ ಸಚಿವಾಲಯಗಳು ಮತ್ತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್…

Read More

ವಿನಯ ಕುಮಾರ್ ಸೂರಿಂಜೆ ಸಲಹೆ ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ. ಕ. ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲೆಯ ಮಂಗಳೂರು ಉಪವಿಭಾಗದ ವಿವಿಧ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಚುನಾವಣಾ ಪೂರ್ವ ತಯಾರಿ ತರಬೇತಿ ಶಿಬಿರ ಇತ್ತೀಚೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಭಾಂಗದಲ್ಲಿ ನಡೆಯಿತು. ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ ಕಾರ್ಯಕ್ರಮ ಉದ್ಘಾಟಿಸಿ, ಸಹಕಾರ ಸಂಘಗಳಲ್ಲಿ ಚುನಾವಣೆ ಕ್ರಮಬದ್ಧವಾಗಿ ನಡೆಸಲು ಕಾಯ್ದೆ ಮತ್ತು ನಿಯಮಗಳ ಅನುಸಾರ ಮುಖ್ಯ ಕಾರ್ಯನಿರ್ವಾಹಕರು ಕಾರ್ಯನಿರ್ವಹಿಸಲು ತರಬೇತಿ ಏರ್ಪಡಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಮಾತನಾಡಿ, ಹೊಸ ಆಡಳಿತ ಮಂಡಳಿ ರಚಿಸಬೇಕಾಗಿದ್ದು ಈ ನಿಟ್ಟಿನಲ್ಲಿ ಕಾಯ್ದೆ ಮತ್ತು ನಿಯಮಾನುಸಾರವಾಗಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ಮುಖ್ಯ ಕಾರ್ಯನಿರ್ವಾಹಕರ ಪಾತ್ರ ಮುಖ್ಯವಾಗಿದೆ ಎಂದರು.ಸಹಕಾರ…

Read More

ಆರೋಗ್ಯ ಶಿಬಿರ ಉದ್ಘಾಟಿಸಿ ಬ್ರಹ್ಮಕುಮಾರಿ ಜಯಶ್ರೀ ಶ್ಲಾಘನೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತ ಒಳ್ಳಯೆ ಕೆಲಸಗಳನ್ನು ಮಾಡುತ್ತ ಬರುತ್ತಿದೆ. ಆರೋಗ್ಯ ಸಮಸ್ಯೆಗಳು ಕಾಡುತ್ತಿರುವ ಸಂದರ್ಭದಲ್ಲಿ ಇಂಥ ಶಿಬಿರಗಳನ್ನು ಆಯೋಜಿಸುವ ಮೂಲಕ ಸ್ವಸ್ಥ, ಆರೋಗ್ಯಪೂರ್ಣ ಸಮಾಜಕ್ಕೆ ಮಹತ್ತರ ಕೊಡುಗೆ ನೀಡುತ್ತಿದೆ ಎಂದು ಬ್ರಹ್ಮಕುಮಾರಿ ಜಯಶ್ರೀ ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಹಿಳಾ ಘಟಕ, ಪ್ರಗತಿ ಮಹಿಳಾ ಮಂಡಲ ಉರ್ವಸ್ಟೋರ್ ಹಾಗೂ ಬ್ರಹ್ಮಕುಮಾರೀಸ್ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ಉರ್ವಸ್ಟೋರ್‌ನ ಪ್ರಗತಿ ಮಹಿಳಾ ಮಂಡಲದಲ್ಲಿ ಭಾನುವಾರ ಉಚಿತ ನೇತ್ರ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ಉದ್ಘಾಟಿಸಿ ಮಾತನಾಡಿದರು.ನಿಧಿಲ್ಯಾಂಡ್ ಇನ್‌ಫ್ರಾಸ್ಟçಕ್ಚರ್ ಡೆವಲಪರ್ಸ್ ಇಂಡಿಯಾ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಪ್ರಶಾಂತ್ ಕುಮಾರ್ ಸನಿಲ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಆಯೋಜಿಸುತ್ತಿರುವ ಇಂಥ ಸಮಾಜಮುಖಿ ಕಾರ್ಯಕ್ರಮಗಳು…

Read More

ಮಂಗಳೂರು: ಸಹಕಾರ ಸಂಘಗಳು ಉತ್ತಮ ಸೇವೆ ನೀಡುವಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸರಿಸಮನಾಗಿ ಕೆಲಸ ಮಾಡುತ್ತವೆ. ಸಹಕಾರಿ ಸಂಘಗಳು ರೈತರ ಹಣವನ್ನು ರೈತರಿಗೆ ನೀಡುವ ಕಾರ್ಯ ಮಾಡುತ್ತವೆ. ಹೊಸಮಠ ಕೃಷಿ ಪತ್ತಿನ ಸಹಕಾರಿ ಸಂಘ ರೈತರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸಮೃದ್ಧಿ ಸಹಕಾರ ಸೌಧ”ವನ್ನು ಭಾನುವಾರ ಲೋಕಾರ್ಪಣೆ ಮಾಡಿ ಮಾತನಾಡಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳು ವಿಲೀನ ಆಗುವ ದಿನಗಳಲ್ಲಿ ಜನ ಸಹಕಾರಿ ಸಂಘಗಳ ಕಡೆ ಮುಖ ಮಾಡುತ್ತಿದ್ದಾರೆ. ಕೃಷಿ ಪತ್ತಿನ ಸಹಕಾರಿ ಸಂಘಗಳು ಸರಕಾರದ ಸಾಲ ಸೌಲಭ್ಯಗಳನ್ನು ಸಮರ್ಪಕವಾಗಿ ಕೃಷಿಕರಿಗೆ ವಿತರಿಸುತ್ತಿವೆ. ಸಾಲಮನ್ನಾ, ಬೆಳೆ ವಿಮೆಯಂಥ ಸೌಲಭ್ಯಗಳು ರೈತರಿಗೆ ನೇರವಾಗಿ ಸಿಗುತ್ತವೆ ಎಂದು ಬಣ್ಣಿಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಗೋದಾಮು ಉದ್ಘಾಟಿಸಿ ಮಾತನಾಡಿ ಸಹಕಾರಿ ಸಂಘಗಳು ಇಂದು…

Read More