Author: admin

ಮಂಗಳೂರು, ನ.17: 2023ನೇ ಸಾಲಿನ ‘ಸಹಕಾರಿ ರತ್ನ’ ರಾಜ್ಯ ಮಟ್ಟದ ಪ್ರಶಸ್ತಿಗೆ ಎಂಸಿಸಿ ಬ್ಯಾಂಕ್ ಲಿಮಿಟೆಡ್‌ ನ ಅಧ್ಯಕ್ಷರಾದ ಅನಿಲ್ ಲೋಬೊ ಆಯ್ಕೆಯಾಗಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರು, ದಕ್ಷಿಣ ಕನ್ನಡದಲ್ಲಿ ಸಹಕಾರ ಚಳವಳಿಗೆ ನಿಷ್ಠಾವಂತ ನಾಯಕತ್ವ ಮತ್ತು ಸಹಕಾರಿ ತತ್ವದ ಮೂಲಕ ಜನರನ್ನು ತಲುಪಿರುವ ಅನಿಲ್ ಲೋಬೋ ಅವರನ್ನು ಪ್ರಶಸ್ತಿಗೆ ಅರ್ಹರನ್ನಾಗಿ ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ಸಹಕಾರ ಚಳವಳಿ ಸಪ್ತಾಹದ 70ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಅನಿಲ್ ಲೋಬೋ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿರುತ್ತಾರೆ. ಎಂಸಿಸಿ ಬ್ಯಾಂಕ್ ಲಿಮಿಟೆಡ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಅನಿಲ್ ಲೋಬೋ ಅವರು ಸಹಕಾರ ಚಳವಳಿಯಲ್ಲಿ ನಾಯಕತ್ವ ಮತ್ತು ಸಮಸ್ಯೆ ನಿವಾರಣೆಯ ಗುಣಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ, MCC ಬ್ಯಾಂಕ್ ತನ್ನ ಲಾಭ ಮತ್ತು ವಿಸ್ತರಣೆಯಲ್ಲಿ ಭಾರಿ ಬೆಳವಣಿಗೆಯನ್ನು ಕಂಡಿತು. ಅವರು ವಿವಿಧ ಗ್ರಾಹಕ-ಸ್ನೇಹಿ ಕಾರ್ಯಕ್ರಮಗಳು ಮತ್ತು ನೀತಿಗಳನ್ನು…

Read More

ಆತ್ಮೀಯರೆ,ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಹಕಾರಿ ಕ್ಷೇತ್ರದ ಕುರಿತಾದ ಮಾಹಿತಿಗಳು ಮತ್ತು ಲೇಖನಗಳನ್ನು ಪ್ರಕಟಿಸುತ್ತಿದ್ದ ಸಹಕಾರ ಸ್ಪಂದನ ವೆಬ್‌ ಪೋರ್ಟಲ್‌ ಇನ್ನು ಮುಂದೆ ನಿಮ್ಮ ಸಹಕಾರಿ ಸಂಸ್ಥೆಯ ಕುರಿತಾದ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತರ್-ರಾಷ್ಟ್ರೀಯ ಸುದ್ದಿಗಳನ್ನು ಉಚಿತವಾಗಿ ಪ್ರಕಟಿಸಲಿದೆ. ನಿಮ್ಮ ಸಂಸ್ಥೆಗೆ ಸಂಬಂಧಿಸಿದ ಯಾವುದೇ ಸುದ್ದಿಯನ್ನು ಉಚಿತವಾಗಿ ಪ್ರಕಟಿಸಲು ನಮ್ಮ ಇ-ಮೇಲ್ ವಿಳಾಸ editor@sahakaraspandana.in ಅಥವಾ WhatsApp ಸಂಖ್ಯೆ 8296645109 ಗೆ ಕಳುಹಿಸಿ ಕೊಡಬಹುದು ಸಹಕಾರ ಸ್ಪಂದನ🏳‍🌈🏳‍🌈🏳‍🌈🏳‍🌈🏳‍🌈🏳‍🌈🏳‍🌈🏳‍🌈🏳‍🌈

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಟೇಟ್‌ಬ್ಯಾಂಕ್ ಶಾಖೆಯ ಎಂಟನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸ್ಟೇಟ್‌ಬ್ಯಾಂಕ್ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ರಂಜಿತ್ ಮೈರಾ, ಶ್ರೀ ಶ್ರೀಧರ್ ಪೂಜಾರಿ ಹಾಗೂ ಶ್ರೀ ಚಂದ್ರಹಾಸ್ ಕೊಟ್ಟಾರಿ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.ಸಂಘದ ಸದಸ್ಯರಾದ ಶ್ರೀ ರಾಮಕೃಷ್ಣ ಜಿ. ರವರು ಮಾತನಾಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಗ್ರಾಹಕರ ಸಭೆಗೆ ಸಂತಸವನ್ನು ವ್ಯಕ್ತ ಪಡಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ವಿಶಾಲ ಹೃದಯ ಮನೋಭಾವವನ್ನು ಪ್ರಶಂಶಿಸಿದರು. ಗ್ರಾಹಕರಾದ ಶ್ರೀ ಕೆ ಅಣ್ಣು ಪೈ ರವರು ಮಾತನಾಡಿ ಈಗಾಗಲೇ ಸಂಘವು ಪಿಗ್ಮಿಯನ್ನು ಮೊಬೈಲ್ ಆಪ್ ಮೂಲಕ ಸಂಗ್ರಹಿಸಿತ್ತಿದ್ದು,ಇನ್ನು ಮುಂದಕ್ಕೆ ಸಾಲಗಳ ಮರುಪಾವತಿ ಹಾಗೂ ಇತರ ಯಾವುದೇ ಖಾತೆಗೆ ಹಣವನ್ನು ಜಮೆಮಾಡುವ ವಿಶಿಷ್ಟ ರೀತೀಯ ಯೋಜನೆಗಳನ್ನು ರೂಪಿಸಿ ಸಮಾಜಕ್ಕೆ ಕೊಡುಗೆ ನೀಡುವಂತಾಗಲಿ ಎಂದು ಹಾರೈಸಿದರು.ಶ್ರೀ ರಂಜಿತ್ ಮೈರಾ ಗ್ರಾಹಕ…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮುಡಿಪು ಶಾಖೆಯ ೭ನೇ ವಾರ್ಷಿಕೋತ್ಸದ ಪ್ರಯುಕ್ತ ೫೫ನೇ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಕಟ್ಟೆ ಪ್ರೆಂಡ್ಸ್ (ರಿ) ಮುಡಿಪು, ಬ್ರಹ್ಮಶ್ರೀ ಬಿಲ್ಲವ ವೇದಿಕೆ (ರಿ) ಬಾಳೆಪುಣಿ, ಲಯನ್ಸ್ ಮತ್ತು ಲಿಯೋ ಕ್ಲಬ್, ಮಂಗಳೂರು , ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ , ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ದೇರಳಕಟ್ಟೆ ಇಲ್ಲಿಯ ನುರಿತ ತಜ್ಞ ವೈದ್ಯ ತಂಡದವರಿAದ ದಿನಾಂಕ ೧೪/೧೦/೨೦೨೩ ರಂದು ಗೋಪಾಲಕೃಷ್ಣ ಸಭಾಗೃಹ ಮುಡಿಪು ಇಲ್ಲಿ ಜರುಗಿತು.ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಕುರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲೋಲಾಕ್ಷಿ ರವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ನಮ್ಮ ಸಂಘವು ಹನ್ನೊಂದನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು ಸಂಘವು ತನ್ನ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ನಿರಂತರವಾಗಿ ಉಚಿತ ಆರೋಗ್ಯ…

Read More

ಹೆಸರೇ ಸೂಚಿಸುವಂತೆʻಬ್ರಹ್ಮಚಾರಿಣಿ’ಬ್ರಹ್ಮ:-ಎಂದರೆ ತಪಸ್ಸು ಅಥವ ಜ್ಞಾನ ಎಂದು ಅರ್ಥಚಾರಿಣಿ:- ಎಂದರೆ ನಡೆಯುವುದು.”ಬ್ರಹ್ಮಚಾರಿಣಿ” :- ಎಂದರೆ ಜ್ಞಾನಮಾರ್ಗದಲ್ಲಿ ನಡೆಯವುದು ಎಂದರ್ಥ. ತಾಯಿ ಬ್ರಹ್ಮಚಾರಿಣಿ ದೇವಿಯು ದೃಢತೆ ಮತ್ತು ನಡವಳಿಕೆಯ ಸಂಕೇತ. ತಾಯಿಯು ಒಂದು ಕೈಯಲ್ಲಿ ಜಪಮಾಲೆಯನ್ನು ಮತ್ತು ಇನ್ನೊಂದು ಕೈಯಲ್ಲಿ ಕಮಂಡಲವನ್ನು ಹಿಡಿದಿರುತ್ತಾಳೆ. ಪಾರ್ವತಿ ದೇವಿಯು ಶಿವನನ್ನು ಪತಿಯಾಗಿ ಪಡೆಯಲು ನಾರದರ ಉಪದೇಶದಂತೆ ಕಠಿಣ ತಪಸ್ಸನ್ನು ಮಾಡುತ್ತಾಳೆ ಈ ಕಾರಣದಿಂದ ದೇವಿಗೆ ತಪಶ್ಚಾರಿಣೀ ಅರ್ಥಾತ್‌ ಬ್ರಹ್ಮಚಾರಿಣೀ ಎನ್ನುವ ಹೆಸರು ಬಂತು. ತಪಸ್ಸು ಮಾಡುತ್ತಿರುವ ಕಾಲದಲ್ಲಿ ಬರೀ ಹೂವು, ಹಣ್ಣುಗಳನ್ನು ಹಾಗೂ ಎಲೆಗಳನ್ನು ಮಾತ್ರ ಒಂದು ಕಾಲದವರೆಗೂ ಸೇವಿಸುತ್ತಿದ್ದಳು, ನಂತರದಲ್ಲಿ ಎಲೆಯ ಸೇವನೆಯನ್ನೂ ನಿಲ್ಲಿಸಿದಳು, ʻಪರ್ಣʼವೆಂದರೆ ಎಲೆ, ಹಾಗಾಗಿ ಈಕೆಯನ್ನು ʻಅಪರ್ಣಾʼ ಎಂದೂ ಕರೆಯುತ್ತಾರೆ.ನಂತರ ಶಿವನೇ ಒಂದು ಸನ್ಯಾಸಿಯ ರೂಪವನ್ನು ತಾಳಿ ಈಕೆಯ ನಿಷ್ಠೆಯನ್ನು ಪರೀಕ್ಷಿಸುವನು ಹಾಗು ಪಾರ್ವತಿಯ ಅಖಂಡ ನಿಷ್ಠೆಗೆ ಮೆಚ್ಚಿ ಶಿವನು ಆಕೆಗೆ ಒಲಿಯುತ್ತಾನೆ. ನವರಾತ್ರಿಯ ಸಂದರ್ಭದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಪೂಜಿಸುವುದರಿಂದ ಸಂಯಮ, ಪರಿತ್ಯಾಗ ಮತ್ತು ನಿರ್ಲಿಪ್ತತೆಯೊಂದಿಗೆ ವ್ಯಕ್ತಿಯಲ್ಲಿ ಸದ್ಗುಣದ ಭಾವನೆಗಳು…

Read More

ದೇಶ ಕಂಡ ಅಪ್ರತಿಮ ಶಿಕ್ಷಕ, ರಾಷ್ಟ್ರ ಸಂತ, ವಿದ್ವಾಂಸ, ಶಿಕ್ಷಣ ತಜ್ಞ, ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ. ಎ.ಪಿ ಜೆ ಅಬ್ದುಲ್ ಕಲಾಂ ಅವರ ಜನ್ಮದಿನ ಇಂದು. ಈ ದೇಶದ ಎಲ್ಲ ನಾಗರಿಕರಿಗೆ ಮುಖ್ಯವಾಗಿ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಆದರ್ಶವಾಗಿರುವ ಮೇರು ವ್ಯಕ್ತಿತ್ವ ಹೊಂದಿರುವ ನಮ್ಮ ಹೆಮ್ಮೆಯ ಮಾಜಿ ರಾಷ್ಟ್ರಪತಿಯವರ ಹುಟ್ಟಿದ ದಿನ ಒಂದು ರಾಷ್ಟ್ರೀಯ ಹಬ್ಬದಂತೆ ನಾಡೆಲ್ಲಾ ಆಚರಿಸಬೇಕಿತ್ತು! ಭಾರತ ಚಂದ್ರನ ಅಂಗಳದಲ್ಲಿ ಧ್ವಜವನ್ನು ಹಾರಿಸಿರುವ ಈ ಸಂದರ್ಭದಲ್ಲಿ ದೇಶದ ವೈಜ್ಞಾನಿಕ ಬೆಳವಣಿಗೆಗೆ ತಳಹದಿಯನ್ನು ಹಾಕಿಕೊಟ್ಟ, ಭವ್ಯ- ನವ ಭಾರತದ ಕಲ್ಪನೆಯನ್ನು ಬಿತ್ತಿದ ಆ ರಾಷ್ಟ್ರಸಂತನ ಜನ್ಮ ದಿನ ಕೇವಲ ಒಂದು ಶುಭಾಶಯದ ಸಂದೇಶದಲ್ಲಿ ಮುಗಿಸಬೇಕಾಗಿ ಬಂದದ್ದು ನೋವಿನ ಸಂಗತಿ! ಇಂದಿನ ವಿಧ್ಯಾರ್ಥಿ ಸಮೂಹ ಅರಿಯ-ತಿಳಿಯ ಬೇಕಾದದ್ದು ಈ ಮಹಾತ್ಮನ ಜೀವನ ಗಾಥೆಯನ್ನು. ಬಹುಶ ಈ ಮಹಾತ್ಮನ ಹೆಸರಿನಲ್ಲಿ ಯಾವುದೆ ಒಟ್ ಬ್ಯಾಂಕ್ (Vote Bank) ರಾಜಕೀಯಕ್ಕೆ ಅವಕಾಶ ಇಲ್ಲದಿರುವ ಕಾರಣ ಇರಬಹುನೋ ಈ ಪುಣ್ಯ ದಿನ ಮರೆತು…

Read More

ನಾಡಿನ ಸಮಸ್ತ ಜನತೆಗೆ ನವರಾತ್ರಿಯ ಮೊದಲ ದಿನದ ಶುಭಾಶಯಗಳು ದುರ್ಗೆಯ ನವ ಅವತಾರಗಳಲ್ಲಿ ಒಬ್ಬಳು ಶೈಲಪುತ್ರಿ. ಪರ್ವತರಾಜ ಹಿಮವಂತನ ಮಗಳು ಈಕೆ. ಶೈಲ ಎಂದರೆ ಬೆಟ್ಟ (ಪರ್ವತ) ಎಂದರ್ಥ. ಪ್ರಜಾಪ್ರತಿ ಬ್ರಹ್ಮನ ಮಗ ದಕ್ಷ ತನ್ನ 27 ಹೆಣ್ಣು ಮಕ್ಕಳನ್ನು ಚಂದ್ರನಿಗೆ ಕೊಟ್ಟು ಮದುವೆ ಮಾಡಿಸಿದ್ದ ಹಾಗೂ ಮತ್ತೊಬ್ಬ ಮಗಳು ದಾಕ್ಷಾಯಿಣಿಯನ್ನು ಸ್ಮಶಾನವಾಸಿ ಶಿವನನ್ನು ವರಿಸುತ್ತಾಳೆ. ಶಿವನನ್ನು ಕಂಡರೆ ದಕ್ಷನಿಗೆ ಬಹಳಾ ಸಿಟ್ಟು. ತನ್ನ ಸೌಂದರ್ಯವತಿ ಮಗಳು ಸ್ಮಶಾನವಾಸಿಯಾದ ಶಿವನು ಮದುವೆಯಾಗಿದ್ದನ್ನು ಸಹಿಸಲಲಾಗಲಿಲ್ಲಾ. ಒಂದು ಬಾರಿ ದಕ್ಷ ಮಹಾ ಯಜ್ಞವೊಂದನ್ನು ಆಯೋಜಿಸಿ ಸಕಲರನ್ನೂ ಆಹ್ವಾನಿಸಿದ್ದನು. ಬ್ರಹ್ಮ, ಶಿವಾದಿಯಾಗಿ ಎಲ್ಲರೂ ಬಂದಿದ್ದರು. ಯಜ್ಞಕ್ಕೆ ದಕ್ಷ ಆಗಮಿಸಿದಾಗ ಗೌರವಾರ್ಥವಾಗಿ ಬ್ರಹ್ಮ ಮತ್ತು ಶಿವನನ್ನು ಬಿಟ್ಟು ಉಳಿದೆಲ್ಲರೂ ಎದ್ದು ನಿಂತರು. ಶಿವ ಏಳದೇ ಇದ್ದದ್ದು ಹಮನಿಸಿದ ದಕ್ಷನಿಗೆ ಕೋಪ ನೆತ್ತಿಗೇರಿತು. ಇದರ ಪ್ರತೀಕಾರಕ್ಕಾಗಿ ದಕ್ಷ ಮತ್ತೊಂದು ಯಜ್ಞವನ್ನು ಆಯೋಜಿಸಿ ಅದಕ್ಕೆ ಶಿವ ಮತ್ತು ತನ್ನ ಮಗಳು ದಾಕ್ಷಾಯಿಣಿಯನ್ನು ಹೊರತುಪಡಿಸಿ ಉಳಿದೆಲ್ಲರನ್ನು ಆಹ್ವಾನಿಸುವನು. ತನ್ನ ತಂದೆಯವರು ಯಜ್ಞ…

Read More

ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘ(ನಿ.) ಮಂಗಳೂರು ಇದರ ಮುಡಿಪು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ, ಕಟ್ಟೆ ಫ್ರೆಂಡ್ಸ್ (ರಿ.) ಮುಡಿಪು, ಬ್ರಹ್ಮಶ್ರೀ ಬಿಲ್ಲವ ವೇದಿಕೆ (ರಿ.) ಬಾಳೆಪುಣಿ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಹಾಗೂ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ದಿನಾಂಕ ೧೪.೧೦.೨೦೨೩ ನೇ ಶನಿವಾರ ಬೆಳಗ್ಗೆ ಸಮಯ ೯.೩೦ರಿಂದ ಮಧ್ಯಾಹ್ನ ೧.೦೦ರ ವರೆಗೆ ಗೋಪಾಲಕೃಷ್ಣ ಸಭಾಗೃಹ, ಅಮ್ಮೆಂಬಳ, ಮುಡಿಪು ಇಲ್ಲಿ ಆಯೋಜಿಸಲಾಗಿದೆ. ಈ ವೈದ್ಯಕೀಯ ಶಿಬಿರದಲ್ಲಿ ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತç ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ. ಪಿ ತಪಾಸಣೆ , ಜನರಲ್ ವೈದ್ಯಕೀಯ…

Read More

ತಾ:11-10-2023,ಬೆಂಗಳೂರು: ಮುಂದಿನ ದಿನಗಳಲ್ಲಿ ನಡೆಯಬಹುದಾದ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ಸಲುವಾಗಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು, ವಿಶಿಷ್ಟವಾದ ಧ್ವನಿ ಮತ್ತು ಕಂಪನ ಮೂಲಕ ಮುನ್ನೆಚ್ಚರಿಕೆ ನೀಡಲು ಮುಂದಾಗಿದೆ. ಅದರಂತೆ ರಾಜ್ಯದಲ್ಲಿ ಇಂದು ಅಂದರೆ ಅ. 12ರಂದು ಸದ್ರಿ ವ್ಯವಸ್ಥೆಯ ಪರೀಕ್ಷೆ ನಡೆಸಲಿದೆ. ಈಗಾಗಲೇ ಮೊಬೈಲ್‌ ಬಳಕೆದಾರರಿಗೆ ಈ ಕುರಿತಾದ ಸಂದೇಶಗಳು ರವಾನೆಯಾಗಿದೆ. ಫೋನ್‌ನಲ್ಲಿ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್‌ ಶಬ್ದ ಹಾಗೂ ಸಂದೇಶ ಫ್ಲಾಶ್‌ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್‌ ಇರಲಿದೆ. ಇದು ದೂರಸಂಪರ್ಕ ಇಲಾಖೆಯ ಸೆಲ್‌ ಬ್ರಾಡ್‌ಕಾಸ್ಟಿಂಗ್‌ ಸಿಸ್ಟಮ್‌ ಮೂಲಕ ಕಳುಹಿಸಿದ ಸ್ಯಾಂಪಲ್‌ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಬಹುದಾಗಿದೆ ಮತ್ತು ಬಳಕೆದಾರರು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಎಚ್ಚರಿಕೆಯನ್ನು ಹಾಗೂ ಮಾಹಿತಿಯನ್ನು ನೀಡುವ ಉದ್ದೇಶವನ್ನು ಹೊಂದಿದೆ. ಭೂಕಂಪ, ಸುನಾಮಿ, ಅಥವಾ ಯಾವುದೇ ಇನ್ನಿತರ ಅನಾಹುತಗಳು ನಡೆಯಬಹುದಾದ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಾಟೆಕಲ್ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ನಾಟೆಕಲ್ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಹಾಗೂ ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರೋಜಿನಿ, ಶ್ರೀ ಆನಂದ ಕೆ ಹಾಗೂ ಶ್ರೀ ಅಬ್ಬಾಸ್ ಎಮ್ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ನಾಟೆಕಲ್ ಶಾಖೆಯು ವ್ಯವಸ್ಥಿತವಾಗಿ ರೂಪಿಸಲು ಹಾಗೂ ಹೆಚ್ಚಿನ ಪ್ರಗತಿ ಹೊಂದಲು ನಾಟೆಕಲ್ ಪರಿಸರದವರ ಸಹಕಾರವೇ ಕಾರಣ. ಗ್ರಾಹಕರು ಒಳ್ಳೆಯ ವ್ಯವಹಾರವನ್ನು ನೀಡುತ್ತಿದ್ದು ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿ ಮಾಡುವುದರ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ಸಂಘದ ಪ್ರತಿ ಶಾಖೆಗಳಲ್ಲೂ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮುಡಿಪು ಪರಿಸರದಲ್ಲೂ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗುವುದು…

Read More