Author: admin
29ನೇ ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ, 29.37 ಲಕ್ಷ ರೂಪಾಯಿ ಲಾಭ ಮಂಗಳೂರು: ಶ್ರೀ ಮಂಗಳಾಜ್ಯೋತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ, ಬಿಜೈ, ಮಂಗಳೂರು ಇದರ 29ನೇ ವಾರ್ಷಿಕ ಮಹಾಸಭೆ ಹಾಗೂ 2023-24 ನೇ ಸಾಲಿನ ವಾರ್ಷಿಕ ವರದಿ ಮಂಡನೆ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಭಾನುವಾರ ಮಂಗಳೂರು ಪೊಲೀಸ್ ಲೈನ್ನ “ನಾಸಿಕ್ ಬಿ.ಹೆಚ್. ಬಂಗೇರ ಸಭಾಭವನ”ದಲ್ಲಿ ನಡೆಯಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK 2023 – 24ರ ಸಾಲಿಗೆ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಸಂಘದ ಲೆಕ್ಕಪರಿಶೋಧನೆಯನ್ನು ಸಿಎ ಸುಜಯ ಡಿ. ಆಳ್ವ ಮಾಡಿಕೊಟ್ಟಿದ್ದು, ವರದಿ ವರ್ಷ ಸಂಘವು 98 ಕೋಟಿ ವ್ಯವಹಾರ ಮಾಡಿದ್ದು, 29.37 ಲಕ್ಷ ರೂ. ಲಾಭ ಗಳಿಸಿದೆ. ಬಿಜೈ ಶಾಖೆಯಲ್ಲಿ ಇ-ಸ್ಟಾಂಪಿಂಗ್ ಸೇವೆ ಆರಂಭಿಸಲಾಗಿದೆ. ಲೆಕ್ಕಪರಿಶೋಧನೆಯಲ್ಲಿ ಪ್ರತಿ ವರ್ಷದಂತೆ ” ಎ” ಶ್ರೇಣಿ ಪಡೆದುಕೊಂಡಿದೆ. ಅದೇ ರೀತಿ 2023 -24ರಲ್ಲಿ ಠೇವಣಿ ಸಂಗ್ರಹದಲ್ಲಿ ಶೇ.20 ಮತ್ತು ಸಾಲ ವಿತರಣೆಯಲ್ಲಿ ಶೇ.37.5 ಅಭಿವೃದ್ಧಿ ಸಾಧಿಸಿದ್ದು, ಸದಸ್ಯರ ಬೇಡಿಕೆಗೆ ಸ್ಪಂದಿಸಿ ವ್ಯವಹಾರ…
ಹಳೆಯಂಗಡಿ: ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯ ಎರಡನೇ ವರ್ಷಾಚರಣೆಯ ಅಂಗವಾಗಿ ಬಡ ಕುಟುಂಬಗಳ ಅಂಗವಿಕಲರಿಗೆ ಉಚಿತವಾಗಿ ವೀಲ್ಚೇರ್ ಅನ್ನು ಪಡುಬಿದ್ರಿ ಶಾಖೆಯಲ್ಲಿ ಸಾಂಕೇತಿಕವಾಗಿ ಇತ್ತೀಚೆಗೆ ವಿತರಿಸಲಾಯಿತು. ಮುಂದಿನ ದಿನದಲ್ಲಿ ಅಗತ್ಯವಿರುವ ಸಂಘದ ಸದಸ್ಯರ/ ಅವರ ಅವಲಂಬಿತರು ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಶಾಖೆಗಳನ್ನು ಸಂಪರ್ಕಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಎಚ್.ವಸಂತ ಬರ್ನಾರ್ಡ್ ತಿಳಿಸಿದ್ದಾರೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ ಕರ್ಣಾಟಕ ಬ್ಯಾಂಕ್ ಪಡುಬಿದ್ರಿ ಶಾಖಾ ಪ್ರಬಂಧಕ ಪ್ರವೀಣ್ ಕುಮಾರ್, ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ನಿಸ್ವಾರ್ಥ ಸೇವೆಯಿಂದ ಜನಮನ ಗೆಲ್ಲುವ ಮೂಲಕ ಉತ್ತಮ ಸಂಸ್ಥೆಯಾಗಿ ಮೂಡಿಬಂದಿದೆ. ಬ್ಯಾಂಕಿನ ಲಾಭಾಂಶದಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುವುದು ಇತರ ಸಂಘ-ಸಂಸ್ಥೆಗಳಿಗೆ ಮಾದರಿ ಎಂದು ಬಣ್ಣಿಸಿದರು. ಮುಖ್ಯ ಅಥಿತಿಯಾಗಿ ಪಡುಬಿದ್ರಿ ರೋಟರಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷೆ ಗೀತಾ ಅರುಣ್, ಮಾತೃಸಂಸ್ಥೆಯ ಕಾರ್ಯನಿರ್ವಾಹಣಾಧಿಕಾರಿ ಸುದರ್ಶನ್, ಶಾಖಾ ಪ್ರಬಂಧಕಿ ಪ್ರಜ್ಞಾಶ್ರೀ, ನಿರ್ದೇಶಕರಾದ ಉಮಾನಾಥ್ ಜೆ. ಶೆಟ್ಟಿಗಾರ್ ಹಾಗೂ ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ…
ಮಂಗಳೂರು: ಸೈಂಟ್ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಮೊದಲನೇ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 1ರಂದು ಭಾನುವಾರ ಬೆಳಗ್ಗೆ 11 ಗಂಟೆಯಿಂದ ಕಂಕನಾಡಿಯ ಸೈಂಟ್ ಅಲ್ಫೋನ್ಸಾ ಚರ್ಚ್ ಹಾಲ್ನಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಮುಂಡಟ್ಟು ವರ್ಕೀ ಜೇಮ್ಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾರ್ಥನೆ, ಸ್ವಾಗತದ ಬಳಿಕ ಸಾಮಾನ್ಯ ಸಭೆಯ ನೋಟಿಸ್ ಓದಿ ಅನುಮೋದಿಸಿದ ಬಳಿಕ ಹಿಂದಿನ ಸಭೆಯ ನಡಾವಳಿ ಓದಿ ಅನುಮೋದಿಸವುದು. 2023-24ನೇ ಸಾಲಿನ ಆಡಳಿತ ಮಂಡಳಿಯ ವರದಿ ಮಂಡನೆಯ ಬಳಿಕ ಅನುಮೋದಿಸಿದ ನಂತರ, 2023-24ನೇ ಲೆಕ್ಕ ಪರಿಶೋಧನಾ ವರದಿಯ ಮಂಡನೆ ಹಾಗೂ ಪರಿಶೋಧಿತ ಲೆಕ್ಕಪತ್ರ ಮಂಡನೆ ಮತ್ತು ಅನುಮೋದನೆ, 2024-25ನೇ ಸಾಲಿನ ಲೆಕ್ಕಪರಿಶೋಧಕರ ನೇಮಕಾತಿ, ಕೊನೆಯಲ್ಲಿ ಅಧ್ಯಕ್ಷರ ಭಾಷಣ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಟಿ.ಬಂಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ನವದೆಹಲಿ: ಸಹಕಾರ ಸಚಿವಾಲಯದ ಸಹಕಾರ ಸಂಘಗಳ ಕೇಂದ್ರ ರಿಜಿಸ್ಟ್ರಾರ್ (ಸಿಆರ್ಸಿಎಸ್) ಆಗಿ ಕೇರಳ ಕೇಡರ್ನ 1997ರ ಬ್ಯಾಚ್ನ ಐಎಎಸ್ ಅಧಿಕಾರಿ ರವೀಂದ್ರ ಕುಮಾರ್ ಅಗರ್ವಾಲ್ ನೇಮಕಗೊಂಡಿದ್ದಾರೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಅಗರ್ವಾಲ್ ಸಿಆರ್ಸಿಎಸ್ನ ನೂತನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದು ಇವರು, ಆನಂದ್ ಕುಮಾರ್ ಝಾ(ಅರಣ್ಯಾಧಿಕಾರಿ) ಅವರ ಸ್ಥಾನ ತುಂಬಲಿದ್ದಾರೆ. ಆಗರ್ವಾಲ್ ಆಗಸ್ಟ್ ಮೊದಲ ವಾರದಲ್ಲಿ ಸಹಕಾರ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇರ್ಪಡೆಯಾಗಿದ್ದರು. ಇದಾದ ಕೆಲವೇ ದಿನಗಳಲ್ಲಿ ಕೇಂದ್ರ ರಿಜಿಸ್ಟ್ರಾರ್ ಆಗಿ ನೇಮಕಗೊಂಡಿದ್ದು ಸಹಕಾರ ಸಂಘಗಳ ಕಾರ್ಯಚಟುವಟಿಕೆಗಳ ವಿಸ್ತರಣೆಯ ಮಹತ್ವದ ಜವಾಬ್ದಾರಿ ಹೊರಲಿದ್ದಾರೆ. 1999ರಲ್ಲಿ ಸಬ್ ಡಿವಿಜನಲ್ ಮ್ಯಾಜಿಸ್ಟ್ರೇಟ್ ಆಗಿ ಕೆಲಸ ಆರಂಭಿಸಿದ್ದ ಇವರು, 2001ರಲ್ಲಿ ಕೇರಳ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಇದೇ ಅವಧಿಯಲ್ಲಿ ಅವರು ಬೇಕಲ್ ರೆಸಾರ್ಟ್ಸ್ ಡೆವಲಪ್ಮೆಂಟ್ ಕಾರ್ಪೊರೇಶನ್ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿಯೂ ಕೆಲಸ ಮಾಡಿದ್ದರು. ನಗರಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಣಕಾಸು ಮತ್ತು ನೀರಾವರಿ ಇಲಾಖೆಗಳಲ್ಲೂ ಕೆಲಸ ಮಾಡಿದ್ದರು. ಕೇರಳ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕಮಿಷನರ್,…
ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಂಘ ನಿಯಮಿತದ 21ನೇ ನೂತನ ಶಾಖೆ ಆಗಸ್ಟ್ 30ರಂದು ನಿಂತಿಕಲ್ಲಿನಲ್ಲಿ ಉದ್ಘಾಟನೆಯಾಗಲಿದೆ. ಬೆಳಗ್ಗೆ 10.30ಕ್ಕೆ ಮುರುಳ್ಯ -ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಧನಾ ಸಹಕಾರ ಸೌಧದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡುವರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಂಘದ ಗೌರವ ಮಾರ್ಗದರ್ಶಕಿ ಸಾಧ್ವಿ ಶ್ರೀ ಮಾತಾನಂದಮಯಿ ಅನುಗ್ರಹ ಸಂದೇಶ ನೀಡುವರು. ಸಂಘದ ಅಧ್ಯಕ್ಷ ಸಹಕಾರ ರತ್ನ ಲಯನ್ ಎ.ಸುರೇಶ್ ರೈ ಅಧ್ಯಕ್ಷತೆ ವಹಿಸುವರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಶಾಸಕಿ ಭಾಗೀರಥಿ ಮುರುಳ್ಯ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲ್, ಮುರುಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ ಸುವರ್ಣ ಬಾಮೂಲೆ, ಮುರುಳ್ಯ -ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಕುಸುಮಾವತಿ ರೈ ಕೆ.ಜಿ ಎಣ್ಮೂರುಗುತ್ತು, ಎಣ್ಮೂರು…
ಒಡಿಯೂರು ಸೊಸೈಟಿಯ ಕಿನ್ನಿಗೋಳಿ ಶಾಖೆ ಉದ್ಘಾಟಿಸಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯ ಕಿನ್ನಿಗೋಳಿ: ಸಂಘ ಸಂಸ್ಥೆಗಳು ಸಮಾಜಮುಖಿಯಾದರೆ ಉನ್ನತಿ ಆಗುತ್ತದೆ. ಪುರುಷಾರ್ಥಗಳ ಪೈಕಿ ಅರ್ಥ ಅಂದರೆ ಆರ್ಥಿಕ ವ್ಯವಸ್ಥೆಯ ಜೊತೆಗೆ ಧರ್ಮ ಬೇಕು. ಧರ್ಮಯುಕ್ತವಾದ ಅರ್ಥಕ್ಕೆ ಅಪಾಯವಿಲ್ಲ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಕಿನ್ನಿಗೋಳಿಯಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 20ನೇ ನೂತನ ಶಾಖೆಯನ್ನು ಬುಧವಾರ ಉದ್ಘಾಟಿಸಿ ಆಶೀರ್ವಚನ ನೀಡಿದರು. ಅರ್ಥದ ಸರಿಯಾದ ಬಳಕೆಯಿಂದ ಜೀವನದಲ್ಲಿ ಶಾಂತಿ, ನೆಮ್ಮದಿ ಸಿಗುತ್ತದೆ. ಧರ್ಮಶ್ರದ್ಧೆಯ ಕೊರತೆಯಿಂದ ಈಗ ಜಗತ್ತಿನಲ್ಲಿ ಕೆಲವೊಂದು ಅಧ್ವಾನಗಳು ನಡೆಯುತ್ತಿದೆ. ರಾಮಾಯಣ, ಭಾಗವತ, ಭಗವದ್ಗೀತೆಗಳ ಅಧ್ಯಯನದಿಂದ ಇದನ್ನು ತಡೆಯಬಹುದು. ಸಹಕಾರಿಗೆ ಜೀವಾಳವೇ ಗ್ರಾಹಕರು. ಠೇವಣಿ ಎಂದರೆ ನಗು ಇದ್ದಂತೆ. ಸಾಲ ಎಂದರೆ ಕೋಪ ಇದ್ದಂತೆ. ಸಾಲ ಮರುಪಾವತಿ ಸರಿಯಾಗಿ ಆಗುತ್ತಿದ್ದರೆ ಮಾತ್ರ ಸಹಕಾರಿಯ ಚಟುವಟಿಕೆಗಳು ಮುಂದುವರಿಯುತ್ತದೆ. ಶ್ರದ್ಧೆಯ ಕೆಲಸವೇ ಯಶಸ್ಸಿನ ಗುಟ್ಟು. ವ್ಯವಸ್ಥಿತ ಸೇವೆ ಆದರೆ ಬೆಳವಣಿಗೆ ಸಾಧ್ಯ. ಇದಕ್ಕಾಗಿ…
ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 20ನೇ ಶಾಖೆ ಕಿನ್ನಿಗೋಳಿಯಲ್ಲಿ ಆಗಸ್ಟ್ 28ರಂದು ಕಿನ್ನಿಗೋಳಿ ಬಸ್ಸ್ಟ್ಯಾಂಡ್ ಬಳಿಯ ದುರ್ಗಾದಯಾ ಬಿಲ್ಡಿಂಗ್ನಲ್ಲಿ ಬೆಳಗ್ಗೆ 10.30ಕ್ಕೆ ಉದ್ಘಾಟನೆಯಾಗಲಿದೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಗೌರವ ಮಾರ್ಗದರ್ಶಕಿ, ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಉಪಸ್ಥಿತಿ ವಹಿಸುವರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಸಹಕಾರ ರತ್ನ ಲಯನ್ ಎ.ಸುರೇಶ್ ರೈ ಅಧ್ಯಕ್ಷತೆ ವಹಿಸುವರು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಕೆ.ಲಕ್ಷ್ಮೀನಾರಾಯಣ ಆಸ್ರಣ್ಣ, ಶಾಸಕ ಉಮಾನಾಥ ಕೋಟ್ಯಾನ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ದುರ್ಗಾದಯ ಕಾಂಪ್ಲೆಕ್ಸ್ನ ಮಾಲಕ ಕೆ.ಸೀತಾರಾಮ್ ಶೆಟ್ಟಿ, ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಗುತ್ತಿಗೆದಾರ, ಕಿನ್ನಿಗೋಳಿ ಬಂಟರ ಸಂಘದ ಮಾಜಿ ಅಧ್ಯಕ್ಷ ಸಂತೋಷ್ ಹೆಗ್ಡೆ, ಕಟೀಲು ಶ್ರೀ…
ನವದೆಹಲಿ: ಮೊಬೈಲ್ ನಂಬರ್ ಗಳಿಗೆ ಬ್ಯಾಂಕ್ ಹಾಗೂ ಇತರ ಕಡೆಗಳಿಂದ ಬರುವ ಒನ್ ಟೈಮ್ ಪಾಸ್ ವರ್ಡ್(ಒಟಿಪಿ) ಶೀಘ್ರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಸೆಪ್ಟೆಂಬರ್ ಒಂದರಿಂದಲೇ ಅಂದರೆ ಮುಂದಿನ ಭಾನುವಾರದಿಂದಲೇ ಇದು ಜಾರಿಯಾಗುವ ಸಾಧ್ಯತೆ ಇದೆ. ಒಂದು ವೇಳೆ ಇದು ಜಾರಿಯಾದಲ್ಲಿ ಮುಂದೆ ಲಾಗ್ಇನ್, ಆರ್ಥಿಕ ವಹಿವಾಟುಗಳಿಗೆ ಸಂಬಂಧಿಸಿ ಕೊಂಚಮಟ್ಟಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಸ್ಪಾಮ್ ಮೆಸೇಜ್ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಟ್ರಾಯ್ (ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ) ಹೊರಡಿಸಿದ್ದ ಆದೇಶ ಸೆ.1ರಿಂದ ಜಾರಿಯಾಗಲಿದೆ. ಮೊಬೈಲ್ ಕಂಪೆನಿಗಳ ಜತೆ ನೋಂದಣಿ ಮಾಡಿಕೊಂಡಿಲ್ಲದಿದ್ದರೆ, ಅಂತಹ ಕಂಪೆನಿಗಳ ಮೆಸೇಜನ್ನು ನಿರ್ಬಂಧಿಸುವಂತೆ ಟ್ರಾಯ್ ಸೂಚಿಸಿತ್ತು. ಆದರೆ ಕಂಪನಿಗಳು ಇನ್ನೂ ಸಹ ತಮ್ಮ ಮೆಸೇಜ್ನ ಶೈಲಿಯನ್ನು ಮೊಬೈಲ್ ನೆಟ್ವರ್ಕ್ ಕಂಪೆನಿಗಳಿಗೆ ನೀಡಿ ನೋಂದಣಿ ಮಾಡಿಕೊಂಡಿಲ್ಲ. ಹೀಗಾಗಿ ಇಂತಹ ಮೆಸೇಜ್ಗಳಿಗೆ ನಿರ್ಬಂಧ ಹೇರುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಎಚ್.ಗಣೇಶ್ ರಾವ್ ಅಭಿಪ್ರಾಯ ಮಂಗಳೂರು: ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಜಂಟಿ ಸಹಯೋಗದೊಂದಿಗೆ ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಇಲ್ಲಿನ ವೈದ್ಯರ ತಂಡದಿಂದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡದ ಎರಡನೇ ಮಹಡಿಯಲ್ಲಿ ಭಾನುವಾರ ಜರುಗಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಎಚ್.ಗಣೇಶ್ ರಾವ್ ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಶ್ಲಾಘನೀಯ ಕೆಲಸ ಎಂದರು. ದ ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ…
ಎಸ್.ಕೆ.ಜಿ.ಐ.ಕೋ-ಆಪ್ ಸೊಸೈಟಿಗೆ 4.95 ಕೋಟಿ ರೂ. ಲಾಭ ಎಸ್.ಕೆ.ಜಿ.ಐ.-ಪಾಲ್ಕೆ ಪ್ರಶಸ್ತಿ ಪ್ರದಾನ, ಸಾಧನೆಗೈದ ಸಾಧಕರಿಗೆ ಗೌರವ ಸನ್ಮಾನ ಮಂಗಳೂರು: ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆಯಲ್ಲಿ ಉರ್ವ ಚರ್ಚ್ ಸೆಂಟೆನರಿ ಹಾಲ್ನಲ್ಲಿ ಜರಗಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ, ವಾರ್ಷಿಕ ವರದಿ, ಲೆಕ್ಕಪರಿಶೋಧಿತ ಆರ್ಥಿಕ ತ:ಖ್ತೆಗಳು, ಅನುಪಾಲನಾ ವರದಿ, ಲಾಭಾಂಶದ ವಿಂಗಡಣೆ, 2024-2025ನೇ ಸಾಲಿನ ಆಯ-ವ್ಯಯ ಪಟ್ಟಿ ಹಾಗೂ 2024-2025ರ ಸಾಲಿನ ಕಾರ್ಯಚಟುವಟಿಕೆಗಳನ್ನು ಸಭೆಯಲ್ಲಿ ಮಂಡಿಸಿದರು. ವಜ್ರಮಹೋತ್ಸವ ವರ್ಷದ ಪ್ರಯುಕ್ತ 2023-2024ರ ಸಾಲಿಗೆ ಸದಸ್ಯರಿಗೆ ಶೇ.20ರಷ್ಟು ಡಿವಿಡೆಂಡ್ ಪಾವತಿಗೆ ಮಂಜೂರಾತಿ ಪಡೆಯಲಾಯಿತು. ಪಂಚ ಕಸುಬುಗಳಲ್ಲಿ ಸಾಧನೆಗೈದ ಐದು ಮಂದಿ ಶಿಲ್ಪಿಗಳಾದ ಸ್ವರ್ಣಶಿಲ್ಪ- ಎಚ್. -ಗೋಪಾಲ ಆಚಾರ್ಯ-ಬೆಳ್ತಂಗಡಿ, ಕಾಷ್ಠಶಿಲ್ಪ- ಮಾಧವ ಆಚಾರ್ಯ- ಸಂತೆಕಟ್ಟೆ ಉಡುಪಿ, ಎರಕ ಶಿಲ್ಪ- ರಾಮಚಂದ್ರ ಆಚಾರ್ಯ ಕುಂಟಾಡಿ ಕಾರ್ಕಳ, ಅಯಸ್ ಶಿಲ್ಪ- ಸೀತಾರಾಮ ಆಚಾರ್ಯ- ಗುಂಡಮಜಲು ಮುಡಿಪು, ಶಿಲಾ ಶಿಲ್ಪ-…
