Author: admin

ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವದಲ್ಲಿ ಮಾಧವ ಅಮೀನ್ ಬಣ್ಣನೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನೀಡುತ್ತಿರುವ ಬ್ಯಾಂಕಿಂಗ್ ಸೇವೆಗಳು, ರಾಷ್ಟ್ರೀಕೃತ ಬ್ಯಾಂಕುಗಳು ನೀಡುವ ಬ್ಯಾಂಕಿಂಗ್ ಸೇವೆಗಳಿಗೆ ಸರಿಸಮನಾಗಿದೆ ಎಂದು ಸಂಘದ ಗ್ರಾಹಕ ಮಾಧವ ಅಮೀನ್‌ ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯನ್ನು ಸಂಘದ ಗ್ರಾಹಕರಾದ ಪ್ರದೀಪ್ ಕುಮಾರ್ ಸುವರ್ಣ, ವಿಶ್ವನಾಥ್ ರೆಂಜಾಳ, ಕೇಶವ ಹೆಚ್, ಬಾಲಕೃಷ್ಣ ಸುವರ್ಣ ಹಾಗೂ ದಯಾನಂದ ಎಸ್ ಅಮೀನ್ ಅವರ ಜೊತೆ ಜಂಟಿಯಾಗಿ ಉದ್ಘಾಟಿಸಿ ಅವರು ಮಾತನಾಡಿದರು. https://chat.whatsapp.com/FCEnlTkAKCC0MGPhXtX4i4 ಸಂಘದ ಸದಸ್ಯ ಪ್ರದೀಪ್ ಕುಮಾರ್ ಸುವರ್ಣ ಮಾತನಾಡಿ, ಆತ್ಮಶಕ್ತಿ ಸಹಕಾರ ಸಂಘವು ಕಡಿಮೆ ಅವಧಿಯಲ್ಲೇ ಸಾಧಿಸಿರುವ ಪ್ರಗತಿ ಶ್ಲಾಘನೀಯ. ಇಲ್ಲಿನ ಸಿಬ್ಬಂದಿ ವರ್ಗದವರ ಸೇವೆಯು ಅಮೂಲ್ಯವಾಗಿದ್ದು, ಇದು ಈ ಶಾಖೆಯಲ್ಲಿ ಸಾಕಾರಗೊಂಡಿದೆ ಎಂದರು. ವಿಶ್ವನಾಥ್ ರೆಂಜಾಳ ಮಾತನಾಡಿ, ಆತ್ಮಶಕ್ತಿಗೆ ಮತ್ತಷ್ಟು ಶಕ್ತಿ ತುಂಬುವ ಕೆಲಸವನ್ನು ಸಂಘದ ಸದಸ್ಯರಾದ ನಾವೆಲ್ಲರೂ ಮಾಡೋಣ. ಮತ್ತಷ್ಟು ಎತ್ತರಕ್ಕೆ ಆತ್ಮಶಕ್ತಿ ವಿವಿಧೋದ್ದೇಶ…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡೀಲ್ ಮಂಗಳೂರು ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಆತ್ಮಸಮ್ಮಾನ” ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸಾಮರಸ್ಯ ಬಳಗ ಮಂಗಳೂರು ಇದರ ಅಧ್ಯಕ್ಷರಾದ ಮಂಜುಳಾ ನಾಯಕ್ ಉದ್ಘಾಟಿಸಿ, ಮಹಿಳಾ ದಿನಾಚರಣೆಯಂದು ಮಾತ್ರ ಮಹಿಳೆಯರನ್ನು ಗೌರವಿಸುವುದಲ್ಲ, ಪ್ರತಿನಿತ್ಯವೂ ಮಹಿಳೆಯರನ್ನು ಗೌರವದಿಂದ ಕಾಣಬೇಕು. ಮಹಿಳೆಯರು ತೊಂದರೆಯಲ್ಲಿದ್ದ ಸಂದರ್ಭದಲ್ಲಿ ಸ್ಪಂದಿಸಿದಾಗ ಮಾತ್ರ ಮಹಿಳಾ ದಿನಾಚರಣೆಯ ಅರ್ಥಪೂರ್ಣವಾಗುತ್ತದೆ. ಸಹಕಾರಿ ಸಂಘದಲ್ಲಿ 95% ಮಹಿಳೆಯರಿಗೆ ಉದ್ಯೋಗ ನೀಡಿರುವುದು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗಿದೆ. ಇದು ಮಹಿಳೆಯರಿಗೆ ನೀಡಿದ ಗೌರವವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿ, ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುಮನಾ ಶರಣ್ ಮಾತನಾಡಿ ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಉದ್ಯೋಗದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಈ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಡ ಮಹಿಳೆಯೇ ಆಗಿದ್ದಾರೆ. ಮಹಿಳೆಯರು ಉನ್ನತ…

Read More

ಬೈಂದೂರು ಶಾಖೆ ರೂ. 10 ಕೋಟಿ ವ್ಯವಹಾರ ಗುರಿ ಸಾಧನೆಯ ಬಗ್ಗೆ ಅಧ್ಯಕ್ಷ ಅನಿಲ್‌ ಲೋಬೊ ಹರ್ಷ ಬೈಂದೂರು: ಎಂಸಿಸಿ ಬ್ಯಾಂಕ್ ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಅಂಗವಾಗಿ ಭಾನುವಾರ ಬೈಂದೂರು ಶಾಖೆಯ ಆವರಣದಲ್ಲಿ ಸಂಭ್ರಮಾಚರಣೆ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಉಚಿತ ವೈದ್ಯಕೀಯ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಹೋಲಿಕ್ರಾಸ್ ಚರ್ಚ್‌ ಧರ್ಮಗುರುಗಳಾದ ಫಾದರ್ ವಿನ್ಸೆಂಟ್ ಕುವೆಲ್ಲೊ, ರಂಗಭೂಮಿ ಕಲಾವಿದ ಗಣೇಶ್ ಕಾರಂತ್, ಸಮಾಜ ಸೇವಕ ಫಯಾಜ್ ಅಲಿ ಮತ್ತು ಬೈಂದೂರು ಯೆಡ್ತರೆಯ ಶ್ರೀ ಧರ್ಮಸ್ಥಳ ಸ್ವಸಹಾಯ ಗುಂಪಿನ ಅಧ್ಯಕ್ಷೆ ಶೈಲಾ ಮುಖ್ಯ ಅತಿಥಿಗಳಾಗಿದ್ದರು. ಫಾದರ್‌ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಡಾ|ಎಲ್‌ರಾಯ್ ಸಲ್ಡಾನ್ಹಾ, ಶಾಖಾ ನಿರ್ದೇಶಕರಾದ ಎಲ್ರಾಯ್ ಕೆ.ಕ್ರಾಸ್ಟೊ, ಜನರಲ್ ಮ್ಯಾನೇಜರ್ ಶ್ರೀ ಸುನಿಲ್ ಮಿನೇಜಸ್ ಮತ್ತು ಬೈಂದೂರ್ ಶಾಖೆಯ ಹಿರಿಯ…

Read More

ಬಿ.ಸಿ.ರೋಡ್‌ ಶಾಖೆಯ ನವೀಕೃತ, ಹವಾನಿಯಂತ್ರಿತ ಶಾಖೆ ಉದ್ಘಾಟಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಶ್ಲಾಘನೆ ಬಂಟ್ವಾಳ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತರಿತ ಹಾಗೂ ಹವಾನಿಯಂತ್ರಿತ ಬಿ.ಸಿ.ರೋಡ್ ಶಾಖೆಯ ಉದ್ಘಾಟನಾ ಸಮಾರಂಭ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. ಬಿ.ಸಿ.ರೋಡ್‌ನಲ್ಲಿ 2012ರಿಂದ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಿ.ಸಿ.ರೋಡ್ ಶಾಖೆಯು ಸಂಘದ ಸದಸ್ಯರ ಅಪೇಕ್ಷೆಯಂತೆ ವಿಸ್ತಾರಗೊಂಡು ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಯಾಗಿ ಪರಿವರ್ತಿತಗೊಂಡಿದೆ. https://chat.whatsapp.com/FCEnlTkAKCC0MGPhXtX4i4 ಮಾಜಿ ಸಚಿವರಾದ ಬಿ.ರಮಾನಾಥ ರೈಯವರು ನವೀಕೃತ, ವಿಸ್ತರಿತ ಹಾಗೂ ಹವಾನಿಯಂತ್ರಿತ ಬಿ.ಸಿ.ರೋಡ್ ಶಾಖೆಯನ್ನು ಉದ್ಘಾಟಿಸಿ, ಮಾತನಾಡಿ ಆತ್ಮಶಕ್ತಿ ಸಹಕಾರ ಸಂಘವು ಮಂಗಳೂರಿನ ಪಡೀಲ್‌ನಲ್ಲಿ ಸ್ವಂತ ಕಟ್ಟಡ ಹೊಂದಿದ್ದು, ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ 33 ಶಾಖೆಗಳನ್ನು ಹೊಂದಿದೆ. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಸಾಧನೆ ಮಾಡಿರುವ ಸಂಘವಾಗಿ ಹೆಸರು ಮಾಡಿದೆ. ಈ ಕಾರ್ಯಕ್ರಮವು ಸಹಕಾರಿ ಸಂಘಗಳ ಸೌಹಾರ್ದತೆಗೆ ಉತ್ತಮ…

Read More

ಮಂಗಳೂರು: ಇಲ್ಲಿನ ಮಂಗಳೂರು ಸೌಹಾರ್ದ ಸಹಕಾರಿ ಸಂಘ ಇವರ ವತಿಯಿಂದ ಜಪ್ಪು ಮಂಗಳೂರು ಸ್ಟೋರ್‌ ಸಭಾಂಗಣದಲ್ಲಿ ಭಾನುವಾರ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಲತಾ ನಾರಾಯಣ ಆಳ್ವ, ಪೂರ್ಣಿಮಾ ಬಿ.ರಾವ್‌, ಧನ್ವಿ ಎಸ್.‌ಜೆ ರಾವ್‌, ವಿಜೇತಾ ರಾವ್‌, ಚಂದ್ರಿಕಾ ಡಿ.ರಾವ್‌ ಅವರನ್ನು ಮಹಿಳಾ ದಿನಾಚರಣೆ ಅಂಗವಾಗಿ ಸನ್ಮಾನಿಸಲಾಯಿತು. ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಮಾಜಿ ಕಾರ್ಪೊರೇಟರ್‌ ಕೆ.ಭಾಸ್ಕರ ರಾವ್‌ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಂಘದ ನಿರ್ದೇಶಕರಾದ ಜಯಪ್ರಕಾಶ್‌, ಎ.ಕೃಷ್ಣ ಭಟ್‌, ಸುಂದರ ಸಾಲ್ಯಾನ್‌, ಸುಪ್ರೀತ್‌ ಜೆಕೆ, ಸದಾಶಿವ ಅಮೀನ್‌ ಹಾಜರಿದ್ದರು. ಸನ್ಮಾನಿತರ ಪರವಾಗಿ ಚಂದ್ರಿಕಾ ಡಿ.ರಾವ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಹರೀಶ್‌ ಕಾರ್ಯಕ್ರಮ ಸಂಯೋಜಿಸಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಸಹಕಾರಿ ಸಂಘಗಳ ಮೂಲಕ ವಿತರಿಸಲು ಬಜೆಟ್‌ನಲ್ಲಿ ಘೋಷಣೆ ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿರುವ ಬಜೆಟ್‌ನಲ್ಲಿ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿ 38 ಲಕ್ಷ ರೈತರಿಗೆ ಸಹಕಾರಿ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡುವ ಯೋಜನೆಯನ್ನು ಪ್ರಕಟಿಸಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿ ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ರೈತರು ತಮ್ಮ ಹತ್ತಿರದ ಸಹಕಾರ ಬ್ಯಾಂಕ್‌ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವ್ಯವಸಾಯ ಸೇವಾ ಸಹಕಾರಿ ಸಂಘಗಳನ್ನು ಸಂಪರ್ಕಿಸಿ ಅಲ್ಲಿ ಹೊಸದಾಗಿ ಈ ಕೃಷಿ ಸಾಲ ಪಡೆಯಬಹುದು ಅಥವಾ ಹಳೆಯ ಸಾಲವನ್ನು ನವೀಕರಿಸಬಹುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ. ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಈ ಸಾಲ ಸೌಲಭ್ಯದಿಂದ ರಾಜ್ಯದ ರೈತಾಪಿ ಸಮುದಾಯಕ್ಕೆ ಸಾಕಷ್ಟು ನೆರವಾಗಲಿದೆ. ಅಲ್ಲದೆ ಸಹಕಾರ ಸಂಘಗಳ ನಿಬಂಧಕರ ಹಂತದಲ್ಲಿನ ವಿವಿಧ ಸೇವೆಗಳನ್ನು…

Read More

ದೇಶದಲ್ಲಿ ಅತ್ಯಧಿಕ ಬಜೆಟ್ ಮಂಡಿಸಿದ್ದು ವಜುಬಾಯಿ ವಾಲಾ, 18 ಬಜೆಟ್‌ ಮಂಡಿಸಿದ ದಾಖಲೆ ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯ ಬಜೆಟ್‌ ಮಂಡಿಸಿದ್ದಾರೆ. ತನ್ಮೂಲಕ ಅವರು 17ನೇ ರಾಜ್ಯ ಬಜೆಟ್ ಮಂಡಿಸಿದ್ದು ಮತ್ತೊಂದು ದಾಖಲೆ ಬರೆದಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂದು ಅವರು ಗುರುತಿಸಿಕೊಂಡಿದ್ದಾರೆ. https://chat.whatsapp.com/FCEnlTkAKCC0MGPhXtX4i4 ದೇಶದ ವಿವಿಧ ರಾಜ್ಯಗಳಲ್ಲಿ ಹಣಕಾಸು ಸಚಿವರಾಗಿ ಹಾಗೂ ಮುಖ್ಯಮಂತ್ರಿಗಳಾಗಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಯಾ ಹೆಸರಲ್ಲಿದೆ ಎಂಬ ಕುತೂಹಲ ಸಹಜ. ಈ ಪಟ್ಟಿಯನ್ನು ನೋಡೊದರೆ, ರಾಷ್ಟ್ರಮಟ್ಟದಲ್ಲಿ ಅತಿಹೆಚ್ಚು ಬಜೆಟ್ ಮಂಡಿಸಿದ ಗುಜರಾತ್‌ನ ಮಾಜಿ ಹಣಕಾಸು ಸಚಿವ, ಕರ್ನಾಟಕದ ಮಾಜಿ ರಾಜ್ಯಪಾಲರೂ ಆಗಿದ್ದ ವಜುಭಾಯಿ ವಾಲಾ ಅವರ ಹೆಸರಲ್ಲಿದೆ. ಅವರು 18 ಬಾರಿ ಬಜೆಟ್ ಮಂಡಿಸಿ ಮೊದಲ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಹಾಲಿ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಒಟ್ಟು 17 ಬಾರಿ ಬಜೆಟ್ ಮಂಡಿಸುವ ಮೂಲಕ ದೇಶದಲ್ಲೇ ಎರಡನೇ ಅತಿ…

Read More

ಮಂಗಳೂರು: ಅಡ್ಯಾರಿನ ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜು ಮೈದಾನದಲ್ಲಿ ಭಾನುವಾರ ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕಗಳ ವತಿಯಿಂದ ನಡೆದ ಸಹಕಾರಿ ಕ್ರೀಡೋತ್ಸವದಲ್ಲಿ  ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. https://chat.whatsapp.com/FCEnlTkAKCC0MGPhXtX4i4 ಆರೆಸ್ಸೆಸ್ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಿ.ಎಸ್. ಪ್ರಕಾಶ್, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯ ಕ್ಯಾ.ಬ್ರಿಜೇಶ್‌ ಚೌಟ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ.ಸುಧಾಕರ ರೈ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಿ.ಆರ್‌ ಪ್ರಸಾದ್‌, ಜನತಾ ಬಜಾರ್ ಅಧ್ಯಕ್ಷ ಪ್ರಸನ್ನ ಕೆ., ಬಿಲ್ಡಿಂಗ್ ಸೊಸೈಟಿ ಅಧ್ಯಕ್ಷ ರಂಜನ್ ಮಿಜಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕಾರ್ಯದರ್ಶಿ ಸುರೇಶ್ ಆಳ್ವ ಮೊದಲಾದವರು ಬಹುಮಾನ ವಿತರಣಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಹಕಾರ ಭಾರತಿ ರಾಜ್ಯ ಸಹ ಕಾರ್ಯದರ್ಶಿ ಗಣೇಶ್‌ ಶೆಣೈ, ಮಂಗಳೂರು ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ…

Read More

ಬಳ್ಳಾರಿ: ಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್‌ ಮತ್ತು ಕಿಷ್ಕಿಂಧಾ ವಿಶ್ವವಿದ್ಯಾಲಯವು ಬ್ಯಾಂಕಿಂಗ್‌ ಮತ್ತು ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ವೃತ್ತಿ ನೈಪುಣ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಜ್ಞಾನ ವಿನಿಮಯದ ಒಪ್ಪಂದ ಮಾಡಿಕೊಂಡಿವೆ. https://chat.whatsapp.com/FCEnlTkAKCC0MGPhXtX4i4 ಸುಕೋ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಜಿ.ಎಸ್‌ ರವಿಸುಧಾಕರ ಕಿಷ್ಕಿಂಧಾ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಟಿ.ಎನ್‌ ನಾಗಭೂಷಣ ಅವರು ಈ ಒಪ್ಪಂದಕ್ಕೆ ಗುರುವಾರ ಸಹಿ ಹಾಕಿದ್ದಾರೆ. ಸುಕೋ ಬ್ಯಾಂಕಿನ ಅಧ್ಯಕ್ಷರಾದ ಮೋಹಿತ್‌ ಮಸ್ಕಿ ಅವರು, ಬ್ಯಾಂಕಿಂಗ್‌ ಮತ್ತು ಉನ್ನತ ಶಿಕ್ಷಣದ ಜ್ಞಾನ ವಿನಿಮಯವನ್ನು ಉತ್ತೇಜಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಕಿಷ್ಕಿಂಧಾ ವಿಶ್ವವಿದ್ಯಾಲಯದ ಸಹಕುಲಪತಿಗಳಾದ ಅಮರರಾಜ್‌ ಭೂಪಾಲ್ ಅವರು, ಕಿಷ್ಕಿಂಧಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಚಟುವಟಿಕೆಗಳಲ್ಲಿ ಪ್ರಾಯೋಗಿಕ ಅನುಭವದ ಅವಕಾಶ ಒದಗಿಸುವ ಶೈಕ್ಷಣಿಕ ಕಲಿಕೆ ಮತ್ತು ಬ್ಯಾಂಕಿಂಗ್ ಕ್ಷೇತ್ರದ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಈ ಒಡಂಬಡಿಕೆ ಹೊಂದಿದೆ ಎಂದು ತಿಳಿಸಿದ್ದಾರೆ. ಸುಕೋ ಬ್ಯಾಂಕ್, ಕಿಷ್ಕಿಂಧಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಅತಿಥಿ ಉಪನ್ಯಾಸಗಳನ್ನು, ತಜ್ಞರ…

Read More

ಕೇಂದ್ರ ಹಣಕಾಸು ಸಚಿವರಿಗೆ ಕರ್ನಾಟಕದ ಪಟ್ಟಣ ಸಹಕಾರಿ ಬ್ಯಾಂಕುಗಳ ಮನವಿ ಬೆಂಗಳೂರು: 2025ರ ಆದಾಯ ತೆರಿಗೆ ಕಾಯ್ದೆಯ ಅಡಿಯಲ್ಲಿ ಸಹಕಾರಿ ಸಂಘಗಳಿಗೆ ರಿಯಾಯಿತಿಯ ತೆರಿಗೆ ಚೌಕಟ್ಟನ್ನು ತರ್ಕಬದ್ಧಗೊಳಿಸುವಂತೆ ಕೋರಿ ಹಲವಾರು ಪಟ್ಟಣ ಸಹಕಾರಿ ಬ್ಯಾಂಕುಗಳು (ಯುಸಿಬಿ) ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದಿದ್ದು, ಶೇ.22ರ ತೆರಿಗೆ ದರವನ್ನು ಶೇ.18ಕ್ಕೆ ಇಳಿಸುವಂತೆ ಮನವಿ ಮಾಡಿದೆ. https://chat.whatsapp.com/FCEnlTkAKCC0MGPhXtX4i4 ಕಾರ್ಪೊರೇಟ್ ಬ್ಯಾಂಕುಗಳೊಂದಿಗೆ ಸ್ಪರ್ಧಾತ್ಮಕ ಸಮಾನತೆ ಹೊಂದಲು ಮತ್ತು ಸಹಕಾರಿ ಬ್ಯಾಂಕಿಂಗ್ ಪರಿಸರ ವ್ಯವಸ್ಥೆಯ ದೀರ್ಘಕಾಲದ ಸ್ಥಿರತೆ ಕಾಯ್ದುಕೊಳ್ಳಲು ಕರ್ನಾಟಕದ ನಗರ ಸಹಕಾರಿ ಬ್ಯಾಂಕಿಂಗ್ ವಲಯವು ತೆರಿಗೆ ಪ್ರಮಾಣವನ್ನು ಕಡಿಮೆ ಮಾಡಲು ಕೋರಿದೆ. ತೆರಿಗೆ ವಿನಾಯಿತಿಯ ವಿಷಯದಲ್ಲಿ ಪಟ್ಟಣ ಸಹಕಾರಿ ಸಂಘಗಳು ಕೆಲವು ಷರತ್ತುಗಳಿಗೆ ಒಳಪಟ್ಟು ರಿಯಾಯಿತಿ ತೆರಿಗೆ ಆಡಳಿತವನ್ನು ಆಯ್ಕೆ ಮಾಡಲು ಅನುವು ಮಾಡಿಕೊಡುತ್ತದೆ. ತೆರಿಗೆ ರಿಯಾಯಿತಿಯನ್ನು ಮುಂದುವರಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪಟ್ಟಣ ಸಹಕಾರಿ ಬ್ಯಾಂಕುಗಳು ಸ್ವಾಗತಿಸಿದರೂ, ಸಹಕಾರಿ ಬ್ಯಾಂಕುಗಳ ಮೇಲಿನ ಪರಿಣಾಮಕಾರಿ ತೆರಿಗೆ ಹೊರೆ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು…

Read More