Author: admin

ಹಳೆಯಂಗಡಿ: ಇಲ್ಲಿನ ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ಐದನೇ ವರ್ಷದ ಸಂಭ್ರಮಾಚರಣೆಯು ಮೇ 20ರಂದು ಹಳೆಯಂಗಡಿಯ ಹರಿ ಓಂ ಕಟ್ಟಡದ ಆವರಣದಲ್ಲಿ ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ತನಕ ಕಟೀಲಿನ ದುರ್ಗಾ ಸಂಜೀವಿನಿ ಮಣಿಪಾಲ್‌ ಆಸ್ಪತ್ರೆ ಇವರಿಂದ ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ. ಮಧ್ಯಾಹ್ನ 3ರಿಂದ ಸಂಜೆ 5ರ ತನಕ ಓಂಕಾರ್‌ ಕಲಾ ಸಂಗಮ ಪಡುಬಿದ್ರಿ ಮತ್ತು ದಿ ಡ್ಯಾನ್ಸ್‌ ಸ್ಟುಡಿಯೋ ಪಕ್ಷಿಕೆರೆ ಇವರಿಂದ ನೃತ್ಯ ಪ್ರದರ್ಶನ ಪ್ರಸ್ತುತಿಗೊಳ್ಳಲಿದೆ. ಸಂಜೆ 5ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, 6.30ರಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಪ್ರತಿಷ್ಠಿತ ನೃತ್ಯ ತಂಡ ಸಿಜ್ಲಿಂಗ್‌ ಗಯ್ಸ್‌ ಇವರಿಂದ ನೃತ್ಯ ಪ್ರದರ್ಶನವಿದೆ. ಸಭಾ ಕಾರ್ಯಕ್ರಮದಲ್ಲಿ ಮೂಲ್ಕಿ ಅರಮನೆಯ ಅರಸರು, ಶ್ರೀ ಕ್ಷೇತ್ರ ಬಪ್ಪನಾಡಿನ ಆನುವಂಶಿಕ ಮೊಕ್ತೇಸರರಾದ ಎಂ.ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್‌ ಅವರು ದೀಪ ಪ್ರಜ್ವಲನೆ ಮಾಡಲಿದ್ದು, ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್‌ ಅವರು ಸಂಭ್ರಮದ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಯಾರ್‌ಪದವು ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ ಎ.ಜೆ ಇನ್‌ಸ್ಟಿಟ್ಯೂಟ್ ಆಫ್‌ ಡೆಂಟಲ್ ಸೈನ್ಸ್ ಮಂಗಳೂರು ಹಾಗೂ ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಇವರ ನುರಿತ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಎಲ್ಯಾರ್‌ಪದವಿನ ಹೋಲಿ ಕ್ರಾಸ್ ಚರ್ಚ್ ಬಳಿಯ ಶರೂನ್ ಸ್ಟ್ರಕ್ಚರ್‌ನಲ್ಲಿ ಭಾನುವಾರ ಜರುಗಿತು. https://chat.whatsapp.com/FCEnlTkAKCC0MGPhXtX4i4 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ನ ನೋಡೆಲ್ ಅಧಿಕಾರಿ ಪ್ರಶಾಂತ್ ಪೂರ್ಜೆ ಶಿಬಿರ ಉದ್ಘಾಟಿಸಿ ಮಾತನಾಡಿ, ರೋಗ ಬಂದಿರುವವರು ಮಾತ್ರ ಚಿಕಿತ್ಸೆ ಪಡೆಯುವುದಲ್ಲದೇ, ರೋಗ ಬರುವ ಮುಂಚಿತವಾಗಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿಕೊಂಡು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ. ಈ ಶಿಬಿರದಲ್ಲಿ ಆಯುಷ್ಮಾನ್ (ಅಭಾ) ಕಾರ್ಡ್ ಮತ್ತು ಇ-ಶ್ರಮ್ ಕಾರ್ಡ್ ಉಚಿತ ನೋಂದಣಿ ಮಾಡಲಾಗುತ್ತಿದ್ದು ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸಿ.ಎಸ್.ಐ ಬೆಥಾನ್ಯ…

Read More

ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರಾದ ಜಿ.ಆರ್. ಪ್ರಸಾದ್ ಘೋಷಣೆ ಮಂಗಳೂರು: ಪ್ರಣವ ಸೌಹಾರ್ದ ಸಹಕಾರಿ ಸಂಘವು ತನ್ನ ಗ್ರಾಹಕ ಸದಸ್ಯರಿಗೆ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಜ್ಯಾರಿಗೊಳಿಸಿದೆ. ಇನ್ನು ಮುಂದೆ ಸದಸ್ಯರು ಮೊಬೈಲ್ ಆ್ಯಪ್ ಬಳಸಿ ಪ್ರಣವ ಸೌಹಾರ್ದ ಸಂಸ್ತೆಯಲ್ಲಿನ ತಮ್ಮ ಉಳಿತಾಯ ಖಾತೆಯಿಂದ ಬೇರೆ ಯಾವುದೇ ಬ್ಯಾಂಕಿನ ಖಾತೆಗೆ ಆರ್‌ಟಿಜಿಎಸ್/ನೆಫ್ಟ್ ಮೂಲಕ ಹಣ ವರ್ಗಾಯಿಸಲು ಅಥವಾ ಯಾವುದೇ ಬ್ಯಾಂಕಿನ ಖಾತೆಯಿಂದ ಪ್ರಣವದ ತಮ್ಮ ಉಳಿತಾಯ ಖಾತೆಗೆ ಹಣ ವರ್ಗಾವಣೆ ಮಾಡಲು ಈ ವ್ಯವಸ್ಥೆ ಪ್ರಯೋಜನವಾಗಲಿದೆ ಎಂದು ಪ್ರಣವ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜಿ.ಆರ್.ಪ್ರಸಾದ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ 2025-26ನೇ ಸಾಲಿನ ಆರ್ಥಿಕ ವರದಿಯನ್ನು ಮಂಡಿಸುತ್ತ ಮಾತನಾಡಿದ ಅವರು, ಸಂಸ್ಥೆಯ ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಕುರಿತು ಸದಸ್ಯರಿಗೆ ವಿವರಣೆ ನೀಡಿ, ಸಂಸ್ಥೆಯು ಎಲ್ಲಾ ಸ್ತರಗಳಲ್ಲಿ ಸಾಧಾರಣ ಶೇ.15ರಿಂದ ಶೇ.20 ವಾರ್ಷಿಕ ಬೆಳವಣಿಗೆ ತೋರುತ್ತ ಬಂದಿದೆ ಎಂದರು. ಹೊಸ ಹೊಸ ತಂತ್ರಜ್ಞಾನದ ಅಳವಡಿಕೆ ಮೂಲಕ ಗ್ರಾಹಕ ಸದಸ್ಯರಿಗೆ…

Read More

ಬಂಟ್ವಾಳ: ಜನಸಾಮಾನ್ಯರಿಗೆ ಆರ್ಥಿಕವಾಗಿ ಉನ್ನತವಾದ ಸೇವೆ ಸಿಗಬೇಕು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶವನ್ನು ನೀಡುವ ಮೂಲಕ ಜನಪರ ಸೇವೆ ನೀಡಬೇಕು ಎನ್ನುವ ಉದ್ದೇಶದಿಂದ ಡಾ. ಅಮ್ಮೆಂಬಳ ಬಾಳಪ್ಪ ಹಾಗೂ ಹೂವಯ್ಯ ಮೂಲ್ಯರವರು ಸ್ಥಾಪಿಸಿದ ಸಮಾಜ ಸೇವಾ ಸಹಕಾರಿ ಸಂಘ ಇಂದು ಅದೇ ಉದ್ದೇಶದಲ್ಲಿ ಮುಂದುವರಿಯುತ್ತಿರುವುದು ಅಭಿನಂದನೀಯ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಉಳ್ಳಾಲ ತಾಲೂಕಿನ ಬೋಳಿಯಾರಿನ ಶ್ರೀ ದೇವಿಕಿರಣ್ ಸಂಕೀರ್ಣದಲ್ಲಿ ಭಾನುವಾರ ಸಮಾಜ ಸೇವಾ ಸಹಕಾರಿ ಸಂಘದ 18ನೇ ಶಾಖೆಯನ್ನು ಉದ್ಘಾಟಿಸಿ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಇಂದು ಸಮಾಜ ಸೇವಾ ಸಹಕಾರಿ ಸಂಘವು ಪ್ರಗತಿಯ ಹಾದಿಯಲ್ಲಿದ್ದು ಹೆಚ್ಚಿನ ಶಾಖೆಗಳು ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಸ್ಥಿತಿಗೆ ಅಭಿವೃದ್ದಿಯಾಗಿದೆ. ಒಳ್ಳೆಯ ಉದ್ದೇಶ ಇಟ್ಟುಕೊಂಡು ಪ್ರಾಮಾಣಿಕ ಸೇವೆ ನೀಡಿದಾಗ ಅದು ಖಂಡಿತವಾಗಿಯೂ ಪ್ರಕಾಶಕ್ಕೆ ಬರುತ್ತದೆ. ಬ್ಯಾಂಕ್ ಮುಂದಿನ ಪೀಳಿಗೆಯ ಸಮಾಜದ ಸಂಪತ್ತು. ಇದನ್ನು ಈ ಪೀಳಿಗೆಯ ಜನರು ಅರ್ಥ ಮಾಡಿಕೊಂಡು ಅಭುವೃದ್ದಿಗೆ ಶ್ರಮಿಸಬೇಕು ಎಂದು ತಿಳಿಸಿದರು. ಅಮ್ಮೆಂಬಳ…

Read More

ವಿಶ್ವಕರ್ಮ ಸಹಕಾರ ಬ್ಯಾಂಕ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಎಸ್.ಪಿ. ಗುರುದಾಸ್ ಅಭಿಪ್ರಾಯ ಮಂಗಳೂರು: ಯಾವುದೇ ಒಂದು ಸಂಸ್ಥೆಯ ಸ್ಥಾಪನೆಯ ಹಿನ್ನೆಲೆ ಮತ್ತು ಉದ್ದೇಶವನ್ನು ಅರಿತುಕೊಂಡು ಸಿಬ್ಬಂದಿಗಳು ಅದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಿದರೆ ಸಂಸ್ಥಾಪಕರ ಆಶಯವು ಪೂರ್ಣಗೊಳ್ಳುತ್ತದೆ ಎಂದು ವಿಶ್ವಕರ್ಮ ಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ.ಎಸ್.ಪಿ.ಗುರುದಾಸ್ ಅಭಿಪ್ರಾಯಪಟ್ಟರು. ವಿಶ್ವಕರ್ಮ ಸಹಕಾರ ಬ್ಯಾಂಕಿನ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಬ್ಯಾಂಕಿನ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದರು. https://chat.whatsapp.com/FCEnlTkAKCC0MGPhXtX4i4 ಬ್ಯಾಂಕ್ ನಡೆದು ಬಂದ ಹಾದಿ ಹಾಗೂ ಸಂಸ್ಥಾಪಕರಿಂದ ಹಿಡಿದು ಇಂದಿನವರೆಗಿನ ಆಡಳಿತ ನಿರ್ದೇಶಕರು ಮತ್ತು ಸಿಬ್ಬಂದಿಗಳು ಬ್ಯಾಂಕಿನ ಬೆಳವಣಿಗೆಗಾಗಿ ಸಲ್ಲಿಸಿದ ತ್ಯಾಗ ಮತ್ತು ಅವಿರತ ಶ್ರಮವನ್ನು ಅವರು ಸ್ಮರಿಸಿದರು. ಸಿಬ್ಬಂದಿಗಳ ಮಾನವೀಯ ಸ್ಪರ್ಶದಿಂದ ಸಮರ್ಪಿತ ಸೇವೆಯಿಂದ ಗ್ರಾಹಕರ ವಿಶ್ವಾಸಾರ್ಹತೆ ಬೆಳೆಯುತ್ತದೆ. ಮಧ್ಯಮ ಮತ್ತು ಕೆಳವರ್ಗದ ಸದಸ್ಯರಿಂದ ಕೂಡಿದ ಸಂಸ್ಥೆಯಲ್ಲಿ ಸದಸ್ಯರಿಗೆ ಹಣಕಾಸು ವ್ಯವಸ್ಥೆಯ ಅರಿವು ಮತ್ತು ಜಾಗೃತಿಯನ್ನು ಸಿಬ್ಬಂದಿಗಳು ಮೂಡಿಸಬೇಕಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್.…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಂಪನಕಟ್ಟೆ ಶಾಖೆಯ ದಶಮಾನೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಹಂಪನಕಟ್ಟೆಯ ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಎನ್.ಜಿ.ಒ ಕಟ್ಟಡದಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದ.ಕ ಜಿಲ್ಲೆಯ ಅಧ್ಯಕ್ಷ ನವೀನ್ ಕುಮಾರ್ ಎಂ.ಎಸ್‌, ಸಂಘದ ಗ್ರಾಹಕರಾದ ರಾಜಗೋಪಾಲ್ ಬಿ.ಎಂ, ಚೂಡಾಮಣಿ, ಮೋಹನದಾಸ್ ಎಂ, ಬೋಳಾರ್ ರಮಣಿ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಸದಸ್ಯರಾದ ಮಾಧವ ಎಂ.ಅಮೀನ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉತ್ತಮ ಬ್ಯಾಂಕಿಂಗ್ ಸೇವೆಯೊಂದಿಗೆ ೧೪ ವರ್ಷಗಳಲ್ಲಿ ೩೫ ಶಾಖೆಗಳನ್ನು ತೆರೆದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ತೆರೆದು ಸಾರ್ವಜನಿಕರಿಗೆ ಸೇವೆ ನೀಡುವಂತಾಗಲಿ” ಎಂದು ಶುಭ ಹಾರೈಸಿದರು. ಸದಸ್ಯರಾದ ರಾಜಗೋಪಾಲ್ ಬಿ.ಎಂ ಹಾಗೂ ರಾಮಚಂದ್ರ ರಾವ್ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಗ್ರಾಹಕರ ಪ್ರೋತ್ಸಾಹದಿಂದ…

Read More

ಮಂಗಳೂರು: ಮಂಗಳೂರು ಸ್ಟೋರ್ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡಕ ಉಚಿತ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಇದೇ ವೇಳೆ ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಕನ್ನಡಕ ಒದಗಿಸಲು ಪ್ರಸಾದ ನೇತ್ರಾಲಯ ಬದ್ಧವಾಗಿದೆ ಪ್ರಸಾದ್ ನೇತ್ರಾಲಯದ ವ್ಯವಸ್ಥಾಪಕ ನಿರ್ದೇಶಕ, ನಾಡೋಜ ಪ್ರಶಸ್ತಿ ಪುರಸ್ಕೃತ ಡಾ.ಕೃಷ್ಣಪ್ರಸಾದ್ ಕೂಡ್ಲು ತಿಳಿಸಿದರು. https://chat.whatsapp.com/FCEnlTkAKCC0MGPhXtX4i4 ಪ್ರಸಾದ್ ನೇತ್ರಾಲಯದ ವ್ಯವಸ್ಥಾಪಕ ನಿರ್ದೇಶಕ, ನಾಡೋಜ ಪ್ರಶಸ್ತಿ ಪುರಸ್ಕೃತ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕೃಷ್ಣಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಸ್ಟೋರ್ ಗ್ರಾಹಕರ ಪರವಾಗಿ ಡಾ.ಕೃಷ್ಣಪ್ರಸಾದ್‌ ಅವರನ್ನು ಅಭಿನಂದಿಸಲಾಯಿತು. ಸುವರ್ಣ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ, ಮಾಜಿ ಕಾರ್ಪೊರೇಟರ್‌ ಕೆ.ಭಾಸ್ಕರ್ ರಾವ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಭರತನಾಟ್ಯದಲ್ಲಿ ಪ್ರಶಸ್ತಿ ಪಡೆದ ರೆಮೋನಾ ಪಿರೇರ, ವಕೀಲರಾದ ನಾರಾಯಣ ಕೇಶವ್, ವೆಂಕಟೇಶ್ ಜಪ್ಪು, ಕೆ.ರವೀಂದ್ರ ರಾವ್- ಪೂರ್ಣಿಮಾ ಬಿ ರಾವ್‌ ಮುಖ್ಯ ಅತಿಥಿಗಳಾಗಿದ್ದರು. ಉಷಾ ಭವಾನಿಶಂಕರ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ…

Read More

ಬಂಟ್ವಾಳ: ಇಲ್ಲಿನ ಬೈಪಾಸ್‌ ಜಂಕ್ಷನ್‌ನಲ್ಲಿ ಸ್ವಂತ ಕಟ್ಟಡದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘದ ನೂತನ 18ನೇ ಶಾಖೆಯು ಮೇ 17ರಂದು ಭಾನುವಾರ ಉಳ್ಳಾಲ ತಾಲೂಕಿನ ಬೋಳಿಯಾರು ಎಂಬಲ್ಲಿ ದೇವಿಕಿರಣ್ ಸಂಕೀರ್ಣದಲ್ಲಿ ಕಾರ್ಯಾರಂಭ ಮಾಡಲಿದೆ. https://chat.whatsapp.com/FCEnlTkAKCC0MGPhXtX4i4 ಅಂದು ಬೆಳಗ್ಗೆ 10.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಲಿದ್ದಾರೆ. ಸಂಸದ ಕ್ಯಾ| ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದು, ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ ಖಾದರ್‌ ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದು, ಸೇಫ್ ಲಾಕರ್ ಉದ್ಘಾಟನೆಯನ್ನು ಶಾಸಕ ರಾಜೇಶ್ ನಾಯ್ಕ್‌, ಕಂಪ್ಯೂಟರ್ ಉದ್ಘಾಟನೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ, ಠೇವಣಿ ಪತ್ರ ಬಿಡುಗಡೆಯನ್ನು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್ ಕೆ. ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಮ್ಮೆಂಬಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ರಾಜಾರಾಮ ಭಟ್,…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕರಂಗಲ್ಪಾಡಿ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಕರಂಗಲ್ಪಾಡಿ ಶಾಖೆಯಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಸಂಘದ ಸದಸ್ಯರುಗಳಾದ ಪುಟ್ಟಸ್ವಾಮಿ ಹೆಚ್, ಬಿ.ಸತೀಶ್ ಶೆಟ್ಟಿ, ಮಾರಪ್ಪ ಪೂಜಾರಿ, ಸುಮ ಪ್ರಸಾದ್ ಹಾಗೂ ಶಾಲಿನಿ ಉದ್ಘಾಟಿಸಿದರು. ಸಂಘದ ಸದಸ್ಯ ಮಾರಪ್ಪ ಪೂಜಾರಿ ಮಾತನಾಡಿ ಸಂಘದ ಬೆಳವಣಿಗೆಯನ್ನು ಶ್ಲಾಘಿಸಿ, ಆತ್ಮಶಕ್ತಿ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದರ ಮಾಹಿತಿಯನ್ನು ಪ್ರತಿಕೆಗಳಲ್ಲಿ ಗಮನಿಸುತ್ತಿದ್ದೇನೆ. ಸಂಘವು ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ ಎಂದು ಶುಭ ಹಾರೈಸಿದರು. ನಾಗೇಶ್ ಶೆಣೈ ಮಾತನಾಡಿ, ಸಂಘದ ಸಿಬ್ಬಂದಿಗಳು ನಗುಮೊಗದಿಂದ ಗ್ರಾಹಕರಿಗೆ ಗುಣಮಟ್ಟದ ಬ್ಯಾಂಕಿಂಗ್ ಸೇವೆನೀಡುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಎನ್.ಪಿ ಪೂವಪ್ಪ ಮಾತನಾಡಿ, ಆತ್ಮಶಕ್ತಿ ಸಹಕಾರಿ ಸಂಘವು ಹೆಸರಿಗೆ ತಕ್ಕಂತೆ ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಸಂದರ್ಭದಲ್ಲಿಯೂ ಕೂಡ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದರು. ಸುಮನ್…

Read More

ಮಂಗಳೂರು: ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಕಾಯ್ದೆ 2025ಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯ ಕೆಲವು ತಿದ್ದುಪಡಿಗಳ ಜಾರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ತಡೆ ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ಪೀಠ, ಸರ್ಕಾರದ ಅಧಿಸೂಚನೆಯ ಜಾರಿಗೆ ಮಧ್ಯಂತರ ತಡೆ ಆದೇಶ ಹೊರಡಿಸಿದೆ. https://chat.whatsapp.com/FCEnlTkAKCC0MGPhXtX4i4 ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಜಯಕುಮಾರ್‌ ಎಸ್. ಪಾಟೀಲ್, ರಾಜ್ಯ ಸರ್ಕಾರ 20250 ಸೆಪ್ಟೆಂಬರ್ 12ರಂದು ಹೊರಡಿಸಿದ ತಿದ್ದುಪಡಿ ಅಧಿಸೂಚನೆಯ ಮೂಲಕ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 53-ಅ ಮೂಲಕ ಸಹಕಾರ ಸಂಘಗಳ ಸಮಿತಿಗಳಿಗೆ ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡುವ ಅಧಿಕಾರ ಪಡೆದಿರುವುದು, ಸಹಕಾರ ಸಂಘಗಳ ಮೂಲ ತತ್ವಗಳನ್ನೇ ದುರ್ಬಲಗೊಳಿಸುವ ಕ್ರಮವಾಗಿದೆ. ಇದು ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆ ತಂದಿದೆ ಎಂದು…

Read More