Author: admin

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಪ್ರಯುಕ್ತ ಆಗಸ್ಟ್‌ ೪ರಂದು ಆಯೋಜನೆಮಂಗಳೂರು: ಒಡಿಯೂರು ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ, ಗ್ರಾಮೋತ್ಸವ, ಸೇವಾ ಸಂಭ್ರಮ ಪ್ರಯುಕ್ತ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್‌ 4ರಂದು ಭಾನುವಾರ ಬೆಳಗ್ಗೆ 9.30ರಿಂದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬೃಹತ್‌ ರಕ್ತದಾನ ಶಿಬಿರ ಮತ್ತು ಒಡಿಯೂರು ಶ್ರೀ ಬ್ಲಡ್‌ ಡೋನರ್ಸ್‌ ಗ್ರೂಪ್‌ ರಚನೆ ಹಾಗೂ ದುಶ್ಚಟಮುಕ್ತ ಸಮಾಜ ನಿರ್ಮಾಣ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ.      ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಮತ್ತು ವಿವಿಧ ಘಟಕಗಳು, ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿ, ಬಂಟರ ಸಂಘ ಜಪ್ಪು, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಶ್ರೀ ಗುರುದೇವ ಸೇವಾ ಬಳಗ ಮಂಗಳೂರು, ಜಪ್ಪಿನಮೊಗರು ಬಂಟರ ಸಂಘ, ಕ್ರೀಡಾ ಭಾರತಿ ಮಂಗಳೂರು, ಶ್ರೀ ಸಂಸ್ಥಾನ ಒಡಿಯೂರು ತುಳು…

Read More

ಇದುವರೆಗೆ 77 ಸಾಮಾನ್ಯ, 15 ಮಧ್ಯಂತರ ಆಯವ್ಯಯಗಳ ಮಂಡನೆ ಮೋಹನ್‌ದಾಸ್‌ ಮರಕಡ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಮಂಡನೆಗೆ ತಯಾರಾಗಿದ್ದಾರೆ. ಬಹುತೇಕ ಜುಲೈ 24ರಂದು ಬಜೆಟ್‌ ಮಂಡನೆಯಾಗಲಿದೆ ಎಂದು ಹೇಳಲಾಗುತ್ತಿದೆ. ಸಂಸತ್‌ನಲ್ಲಿ ಬಜೆಟ್‌ ಮಂಡಿಸುವ ಸಂಪ್ರದಾಯ ಪ್ರಾರಂಭವಾದಾಗಿನಿಂದ ಈ ತನಕ 92 ಬಜೆಟ್‌ಗಳು ಮಂಡನೆಯಾಗಿವೆ. ಈ ಬಾರಿ ಸಂಸತ್ತಿನಲ್ಲಿ ಮಂಡನೆಯಾಗಲಿರುವುದು 93ನೇ ಬಜೆಟ್‌. ಇದುವರೆಗೆ 77 ಸಾಮಾನ್ಯ ಬಜೆಟ್‌ ಮತ್ತು 15 ಮಧ್ಯಂತರ ಬಜೆಟ್‌ಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಭಾರತದಲ್ಲಿ ೧860ರಲ್ಲಿ ಬಜೆಟ್ ಅನ್ನು ಅರ್ಥಶಾಸ್ತ್ರಜ್ಞ ಜೇಮ್ಸ್ ವಿಲ್ಸನ್ ಪರಿಚಯಿಸಿದರು. ಭಾರತ ಬ್ರಿಟಿಷ್‌ ಸಂಕೋಲೆಯಿಂದ ಹೊರಬಂದು ಸ್ವತಂತ್ರ ದೇಶವಾಗಿ ಮೂಡಿಬಂದ ಬಳಿಕ 1947ರ ನವೆಂಬರ್‌ 26ರಂದು ಹಣಕಾಸು ಸಚಿವ ಆರ್.ಕೆ. ಷಣ್ಮುಖಂ ಚೆಟ್ಟಿ ಮಂಡಿಸಿದರು. ಅವರು ಮಂಡಿಸಿದ ಈ ಬಜೆಟ್‌ನ ಗಾತ್ರ 197.39 ಕೋಟಿ ರೂ. ಆಗಿತ್ತು. ಇದರಲ್ಲಿ ರಕ್ಷಣಾ ಇಲಾಖೆಯೊಂದಕ್ಕೇ 92.74 ಕೋಟಿ ರೂ. ಮೀಸಲಿಡಲಾಗಿತ್ತು. 1948ರ…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾಳಜಿಗೆ ಗಣ್ಯರ ಮೆಚ್ಚುಗೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ ಆರನೇ ವಾರ್ಷಿಕೋತ್ಸವ ಪ್ರಯುಕ್ತ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಜಂಟಿ ಸಹಯೋಗದೊಂದಿಗೆ ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್ ಇವರ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉಪ್ಪಿನಂಗಡಿ ಎಚ್. ಎಮ್.ಆಡಿಟೋರಿಯಂನಲ್ಲಿ ಭಾನುವಾರ ನಡೆಯಿತು. ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ.ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು, ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನರ ಆರೋಗ್ಯದ ದೃಷ್ಟಿಯಿಂದ ಇಂತಹ ಶಿಬಿರಗಳನ್ನು ಆಯೋಜಿಸಿ ಕಾಳಜಿ ವಹಿಸುತ್ತಿರುವುದು ಶ್ಲಾಘನೀಯ ಎಂದು ಬಣ್ಣಿಸಿದರು. ಮುಖ್ಯ ಅತಿಥಿ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ ಹಲಸು ಹಬ್ಬದ ಜೊತೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಭಾಗಿತ್ವದೊಂದಿಗೆ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರದಿಂದ ಜನರಿಗೆ…

Read More

Mangalore: Newly appointed Vidhan Parishad member Ivan D’Souza, Karnataka Konkani Sahitya Academy President Stany Alwaris and Karnataka Byari Sahitya Academy President Umar U.H. was felicitated by MCC Bank Limited on Saturday. MCC Bank Chairman Anil Lobo welcomed and said, “MCC Bank has a lot of responsibility towards the society, for the last six years the bank has been conducting several social programs for the benefit of the society. We hope to have 125 branches in the state by the silver jubilee after the centenary of the bank,” he said. Former MLA J.R. Lobo gave a congratulatory speech, recalling his relationship…

Read More

ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ ಆಶಯಅಂತಾರಾಷ್ಟ್ರೀಯ ಸಹಕಾರ ದಿನ ಪ್ರಯುಕ್ತ ಸಹಕಾರದಿಂದ ಸಮೃದ್ಧಿ ಕಾರ್ಯಕ್ರಮ ಆಯೋಜನೆ ಅಹಮದಾಬಾದ್‌: ಸಹಕಾರಿ ಕ್ಷೇತ್ರವನ್ನು ದೇಶದ ಆರ್ಥಿಕತೆಯ ಅತ್ಯಂತ ಬಲವಾದ ಸ್ತಂಭವನ್ನಾಗಿ ಮಾಡಿ ಅಭಿವೃದ್ಧಿಶೀಲ ಭಾರತದ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಆಶಯ ವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಸಹಕಾರ ದಿನದ ಪ್ರಯುಕ್ತ ಶನಿವಾರ ಗುಜರಾತ್‌ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ಆಯೋಜಿಸಿದ ‘ಸಹಕಾರದಿಂದ ಸಮೃದ್ಧಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಹಕಾರಿ ಸಂಸ್ಥೆಗಳು ಮೆಕ್ಕಜೋಳವನ್ನು ಎಂ.ಎಸ್.ಪಿ.ಯಲ್ಲಿ ಖರೀದಿಸಲಿವೆ ಮತ್ತು ಅದರಿಂದ ಎಥೆನಾಲ್ ಉತ್ಪಾದನೆ ಮಾಡಲಾಗುವುದು ಎಂದರು. ಗುಜರಾತ್‌ ಮುಖ್ಯಮಂತ್ರಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಕೇಂದ್ರ ಸಹಕಾರ ಸಚಿವ ಶ್ರೀ ಅಮಿತ್ ಶಾ ಸಹಕಾರಿ ಕ್ಷೇತ್ರದಲ್ಲಿ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮಂತ್ರವನ್ನು ಸಾಕಾರಗೊಳಿಸಿದ್ದಾರೆ. ಗುಜರಾತಿನಲ್ಲಿ ಸಹಕಾರಿ ಸಂಸ್ಥೆಗಳು ವೈದ್ಯಕೀಯ ಕಾಲೇಜುಗಳಿಂದ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಂತಹ ಸೇವಾ ಕಾರ್ಯಗಳಲ್ಲಿ ಸಹಾಯ ಮಾಡುತ್ತಿದೆ. ಗುಜರಾತಿನಲ್ಲಿ ಸಹಕಾರಿ ಆಧಾರದ ಮೇಲೆ ಪ್ರಾಕೃತಿಕ ಕೃಷಿಯನ್ನು…

Read More

ಮಂಗಳೂರು: ನೂತನವಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್‌ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಅವರಿಗೆ ಎಂಸಿಸಿ ಬ್ಯಾಂಕ್ ಲಿಮಿಟೆಡ್ ವತಿಯಿಂದ ಸನ್ಮಾನ ಕಾರ್ಯಕ್ರಮ ಶನಿವಾರ ನಡೆಯಿತು. ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಸ್ವಾಗತಿಸಿ ಮಾತನಾಡಿ, “ಎಂ.ಸಿ.ಸಿ ಬ್ಯಾಂಕ್ ಸಮಾಜದ ಬಗ್ಗೆ ಹೆಚ್ಚಿನ ಜವಾಬ್ದಾರಿ ಹೊಂದಿದೆ, ಕಳೆದ ಆರು ವರ್ಷಗಳಿಂದ ಸಮಾಜದ ಒಳಿತಿಗಾಗಿ ಬ್ಯಾಂಕ್ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಬ್ಯಾಂಕಿನ ಶತಮಾನೋತ್ಸವದ ನಂತರದ ರಜತ ಮಹೋತ್ಸವದ ಸಂದರ್ಭ ರಾಜ್ಯದಲ್ಲಿ 125 ಶಾಖೆಗಳನ್ನು ಹೊಂದುವ ಆಶಯವಿದೆ” ಎಂದು ಹೇಳಿದರು. ಮಾಜಿ ಶಾಸಕ ಜೆ.ಆರ್.ಲೋಬೊ ಅಭಿನಂದನಾ ಭಾಷಣ ಮಾಡಿ, ಸನ್ಮಾನಿತರೊಂದಿಗಿನ ತಮ್ಮ ಸಂಬಂಧವನ್ನು ಸ್ಮರಿಸಿ, ಗಣ್ಯ ವ್ಯಕ್ತಿಗಳಿಗೆ ನೀಡುವ ಸನ್ಮಾನಗಳು ಸಮಾಜದ ಮೇಲಿನ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಎಂದರು.ಐವನ್ ಡಿಸೋಜ, ಸ್ಟ್ಯಾನಿ ಅಲ್ವಾರಿಸ್ ಮತ್ತು ಉಮರ್ ಯು.ಎಚ್. ಅವರನ್ನು ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ…

Read More

ಉಪ್ಪಿನಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ, ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಸಹಯೋಗದೊಂದಿಗೆ ಹಲಸು ಹಬ್ಬ ಕಾರ್ಯಕ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಜುಲೈ 7ರಂದು ಬೆಳಗ್ಗೆ 9.30ರಿಂದ ಅಪರಾಹ್ನ 2ರವರೆಗೆ ಉಪ್ಪಿನಂಗಡಿಯ ಎಚ್.ಎಂ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ. ದ್ಯಕೀಯ ಶಿಬಿರದಲ್ಲಿ ದೇರಳಕಟ್ಟೆಯ ನಾಟೆಕಲ್‌ ಕಣಚೂರು ಆಯುರ್ವೇದ ಆಸ್ಪತ್ರೆಯ ನುರಿತ ವೈದರ ತಂಡದವರಿಂದ ಸಾಮಾನ್ಯ ವೈದ್ಯಕೀಯ ಪರೀಕ್ಷೆ, ಮಧುಮೇಹ ರಕ್ತ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಕೀಲು ಮತ್ತು ಗಂಟುನೋವು ತಪಾಸಣೆ, ಮೂಲವ್ಯಾದಿ ತಪಾಸಣೆ, ಸ್ತ್ರೀರೋಗ ಮತ್ತು ಪ್ರಸೂತಿ ತಪಾಸಣೆ, ಉಚಿತ ಔಷಧ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡಲಾಗುವುದು, ಇದರ ಜೊತೆಗೆ ಇತರ ವೈದ್ಯಕೀಯ ಸೌಲಭ್ಯವೂ ಇರಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:ಇಮೇಲ್:   sahakaraspandana@gmail.comಮಾಹಿತಿಗೆ ಸಂಪರ್ಕಿಸಿ:…

Read More

ಸತತ ಏಳನೇ ಬಾರಿ ಮುಂಗಡ ಪತ್ರ ಮಂಡಿಸಿ ದಾಖಲೆ ಬರೆಯಲಿದ್ದಾರೆ ನಿರ್ಮಲಾ ಸೀತಾರಾಮನ್‌ ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 24ರಂದು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜುಲೈ 22ರಂದು ಮುಂಗಾರು ಅಧಿವೇಶನ ಆರಂಭವಾಗಲಿದ್ದು, 23ರಂದು ಆರ್ಥಿಕ ಸಮೀಕ್ಷೆಯನ್ನು ಮಂಡಿಸಬಹುದು ಮತ್ತು ಜುಲೈ 24ರಂದು ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡಿಸುವ ಸಾಧ್ಯತೆ ಇದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಆದಾಗ್ಯೂ, ಎರಡು ದಿನಾಂಕಗಳ ಕುರಿತು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಮತ್ತು ಶೀಘ್ರದಲ್ಲೇ ಬಜೆಟ್ ಮಂಡಿಸುವ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ ಎಂದೂ ಮೂಲಗಳು ತಿಳಿಸಿವೆ. ವಾಡಿಕೆ ಪ್ರಕಾರ ಸಂಸತ್ತಿನ ಎರಡು ಅಧಿವೇಶನಗಳ ನಡುವೆ 15 ದಿನಗಳ ಅಂತರ ಇರಬೇಕು. ಜುಲೈ 2ರಂದು 18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಮುಕ್ತಾಯಗೊಂಡಿದೆ. ಮುಂದಿನ ಅಧಿವೇಶನ ಜುಲೈ 18ರಿಂದ 22ರ ನಡುವೆ ಪ್ರಾರಂಭವಾಗಬೇಕು. ಆದರೆ, ಈ ಬಾರಿ ಅಧಿವೇಶನ…

Read More

ಮಂಗಳೂರು: ಉಪ್ಪಿನಂಗಡಿಯ ಅನುಗ್ರಹ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ರಾಬರ್ಟ್‌ ಡಿಸೋಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಇವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಯಿತು. ಇವರು 1978ರಿಂದ 2004ರವರೆಗೆ 26 ವರ್ಷ ಕಾಲ ಗ್ರಾಮಲೆಕ್ಕಿಗರಾಗಿ, 2004ರಿಂದ ಎಂಟು ವರ್ಷ ಪುತ್ತೂರು ತಾಲೂಕು ಕಚೇರಿಯ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಥಮದರ್ಜೆ ಸಹಾಯಕರಾಗಿ, 2012ರಿಂದ ಉಪತಹಸೀಲ್ದಾರ್‌ ಆಗಿ 2013ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ಒಟ್ಟು 35 ವರ್ಷ ಕಾಲ ಸರಕಾರಿ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. ಈ ಅವಧಿಯಲ್ಲಿ ಉಪ್ಪಿನಂಗಡಿ ಕ್ರೈಸ್ತ ದೇವಾಲಯದ ಪಾಲನಾ ಸಮಿತಿಯ ಉಪಾಧ್ಯಕ್ಷರಾಗಿ ಒಟ್ಟು 9 ವರ್ಷ(ಮೂರು ವರ್ಷದ ಮೂರು ಅವಧಿ) ಸೇವೆ ಸಲ್ಲಿಸಿದ್ದರು. ಅನುಗ್ರಹ ಕ್ರೆಡಿಟ್‌ ಸೌಹಾರ್ದ ಸಹಕಾರಿಯಲ್ಲಿ ಎಂಟು ವರ್ಷಗಳಿಂದ ನಿರ್ದೇಶಕರಾಗಿದ್ದ ಈಗ ಅಧ್ಯಕ್ಷರಾಗಿದ್ದಾರೆ. ಉಪ್ಪಿನಂಗಡಿ ಕೆಥೊಲಿಕ್‌ ವಿವಿಧೋದ್ದೇಶ ಸಹಕಾರಿ ಸಂಘದಲ್ಲೂ ನಿರ್ದೇಶಕರಾಗಿದ್ದಾರೆ. ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:ಇಮೇಲ್: editor@sahakaraspandana.in , sahakaraspandana@gmail.comಮಾಹಿತಿಗೆ ಸಂಪರ್ಕಿಸಿ: 9901319694.

Read More

ಶೇ.5ರಿಂದ 2ಕ್ಕೆ ಇಳಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮನವಿ ಮಂಗಳೂರು: ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವುದೂ ಸೇರಿದಂತೆ ಅಡಿಕೆ ಮಾರುಕಟ್ಟೆಯ ಚೇತರಿಕೆಗೆ ಕ್ರಮ ಕೈಗೊಳ್ಳಬೇಕೆಂದು ಕ್ಯಾಂಪ್ಕೊ ನಿಯೋಗವು ಮಂಗಳವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಮಾಡಿದೆ. ವಿತ್ತ ಸಚಿವರಾಗಿ ಮರು ನೇಮಕಗೊಂಡಿರುವ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸಿದ ಕ್ಯಾಂಪ್ಕೊ ಆಡಳಿತ ಮಂಡಳಿ, ಅಡಿಕೆ ಮಾರುಕಟ್ಟೆಯ ಚೇತರಿಕೆಗೆ ಉತ್ತೇಜನ ನೀಡಲು ಮತ್ತು ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡಲು ಮನವಿ ಸಲ್ಲಿಸಿತು. ಅಡಿಕೆಯ ಮೇಲಿನ ಜಿಎಸ್‌ಟಿಯನ್ನು ಶೇ.5ರಿಂದ 2ಕ್ಕೆ ಇಳಿಸಬೇಕು. ಇದರಿಂದ ರೈತರು ಸಹಕಾರಿ ಸಂಸ್ಥೆಗಳಲ್ಲಿ ಅಡಿಕೆ ಖರೀದಿಸಲು ಸಹಕಾರಿಯಾಗುತ್ತದೆ. ಇದರಿಂದ ತೆರಿಗೆ ಕಳ್ಳತನಕ್ಕೂ ಕಡಿವಾಣ ಬೀಳಲಿದ್ದು, ಸರಕಾರಕ್ಕೂ ಹೆಚ್ಚುವರಿ ಆದಾಯ ಬರಲಿದೆ. ಮೈಲುತುತ್ತು ಮೇಲಿನ ಜಿಎಸ್‌ಟಿಯನ್ನು ಶೇ.18ರಿಂದ ಶೇ.5ಕ್ಕೆ ಇಳಿಸಬೇಕು, ಕಾರ್ಬನ್ ಫೈಬರ್ ದೋಟಿಯ ಆಮದು ಸುಂಕವನ್ನೂ ಕಡಿಮೆ ಮಾಡಬೇಕು ಎಂದು ಕ್ಯಾಂಪ್ಕೊ ನಿಯೋಗ ಮನವಿ ಮಾಡಿದೆ. ಅಡಿಕೆ ಮತ್ತು ಕರಿಮೆಣಸಿನ ಅಕ್ರಮ ಆಮದು…

Read More