Author: admin
ಸಹಕಾರ ಕ್ಷೇತ್ರದ ಅತ್ಯುನ್ನತ ಗೌರವವಾದ “ಸಹಕಾರ ರತ್ನ” ಪ್ರಶಸ್ತಿಗೆ ಆಯ್ಕೆಯಾದ ನಮ್ಮ ಹೆಮ್ಮೆಯ ಸಹಕಾರಿಗಳಿಗೆ ಅಭಿನಂದನೆಗಳು
ಕರ್ನಾಟಕ ರಾಜ್ಯ ಸರಕಾರ ಈ ಬಾರಿಯ ಸಹಕಾರ ರತ್ನ ಪ್ರಶಸ್ತಿಗೆ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆಯ ಮೂವರು ಸಾಧಕರನ್ನು ಆಯ್ಕೆ ಮಾಡಿದೆ. ಹಿರಿಯ ಸಹಕಾರಿ ಸವಣೂರು ಸೀತಾರಾಮ ರೈ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಇತ್ತೀಚಿನವರೆಗೆ ಅನುಪಮ ಸೇವೆ ಸಲ್ಲಿಸಿದ ಕೆ.ರವಿರಾಜ ಹೆಗ್ಡೆ ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಇವರನ್ನು ಗುರುತಿಸಿ ಆಯ್ಕೆ ಮಾಡಿದೆ. ನಿಜವಾಗಿಯೂ ಸಹಕಾರ ಸಹಕಾರ ಕ್ಷೇತ್ರದ ವಿವಿಧ ವಲಯಗಳಲ್ಲಿ ಅನುಪಮ ಸೇವೆ ಸಲ್ಲಿಸಿ ದೃಢವಾಗಿ ತಮ್ಮದೇ ಆದ ಹೆಜ್ಜೆ ಗುರುತು ಮೂಡಿಸಿರುವ ಈ ಮೂವರು ಸಹಕಾರ ಕ್ಷೇತ್ರದ ಅನರ್ಘ್ಯ ರತ್ನಗಳೆಂದು ಗೌರವಿಸಬಹುದು. ಸವಣೂರು ಸೀತಾರಾಮ ರೈಗಳು ಜಿಲ್ಲೆಯ ಹಿರಿಯ ಸಹಕಾರಿಗಳಾಗಿ, ಪ್ರಗತಿಪರ ಕೃಷಿಕರಾಗಿ, ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾಗಿ ಸಮಾಜದಲ್ಲಿ ಅನನ್ಯ ಸೇವೆ ಸಲ್ಲಿಸಿ ಗೌರವಾದರಗಳಿಗೆ ಪಾತ್ರರಾದವರು. ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪಿಸಿ ಅದರ ಅಧ್ಯಕ್ಷರಾಗಿ ಮುನ್ನಡೆಸಿಕೊಂಡು…
ಈ ಬಾರಿಯ ಬಜೆಟ್ನಲ್ಲಿ ಸಹಕಾರ ಕ್ಷೇತ್ರದ ಬಲವರ್ಧನೆಗೆ ಕೆಲವು ಅಂಶಗಳನ್ನು ಪ್ರಕಟಿಸಿರುವುದು ಸ್ವಾಗತಾರ್ಹ. 10 ಕೋಟಿ ರೂ. ಒಳಗಿನ ಆದಾಯ ಹೊಂದಿರುವ ಸಹಕಾರ ಸಂಘಗಳ ಮೇಲಿನ ಸರ್ಚಾರ್ಜ್ ಅನ್ನು ಶೇ.12ರಿಂದ ಶೇ.7ಕ್ಕೆ ಇಳಿಸಿರುವುದು ಸಹಕಾರ ಕ್ಷೇತ್ರದ ಬಲವರ್ಧನೆಗೆ ಪೂರಕವಾಗಲಿದೆ. ಈ ತನಕ ಸಹಕಾರ ಸಂಘಗಳು ಪಾವತಿಸುತ್ತಿದ್ದ ಪರ್ಯಾಯ ಕನಿಷ್ಠ ತೆರಿಗೆ ಮಿತಿಯನ್ನು ಶೇ.18.5ರಿಂದ ಶೇ.15ಕ್ಕೆ ಇಳಿಸಲಾಗಿದೆ. ಕಳೆದ ವರ್ಷ ಹೊಸದಾಗಿ ಆರಂಭವಾಗಿರುವ ಸಹಕಾರ ಸಚಿವಾಲಯಕ್ಕೆ 900 ಕೋಟಿ ರೂ. ನೀಡಿರುವುದು ಈ ಕ್ಷೇತ್ರಕ್ಕೆ ಸಹಕಾರಿಯಾಗಲಿದೆ. ಒಟ್ಟಾರೆಯಾಗಿ ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನದಿಂದ ಕೂಡಿದ ಸಕಾರಾತ್ಮಕ ಬಜೆಟ್. ಡಾ. ಎಸ್ ಆರ್ ಹರೀಶ್ ಆಚಾರ್ಯ ಅಧ್ಯಕ್ಷರು, ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ, ಮಂಗಳೂರು
ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದ ಗಾಂಧೀಜಿ ಅಧ್ಯಯನ ಕೇಂದ್ರದಡಿ ಸಂಶೋಧನಾ ಮಹಾಪ್ರಬಂಧವನ್ನು ಮಂಡಿಸಿ ಪಿ.ಎಚ್.ಡಿ ಪದವಿ ಪಡೆದ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯರನ್ನು ಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.
“ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗಾಗಿ” ಎಂಬ ಧ್ಯೇಯದೊಂದಿಗೆ ಆರಂಭಿಸಿರುವ ಯುವ ಸ್ಪಂದನ ಕೋಆಪರೇಟಿವ್ ಸೊಸೈಟಿ ಲಿ. ನ ಜಾಲತಾಣ ಲೋಕಾರ್ಪಣೆ
ನವೆಂಬರ್ 20, ಶನಿವಾರ ಮೂಡುಬಿದ್ರೆಯ ಶ್ರೀ ಧವಲಾ ಮಹಾವಿದ್ಯಾಲಯ ಮತ್ತು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಸಹಕಾರ ತತ್ವದಡಿ “ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗಳಿಗಾಗಿ” ಎಂಬ ಧ್ಯೇಯದೊಂದಿಗೆ ಆರಂಭಿಸುತ್ತಿರುವ ಯುವ ಸ್ಪಂದನ ಸೌಹಾರ್ದ ಕೋಅಪರೆಟಿವ್ ಸೊಸೈಟಿ ಲಿ. ನ ಜಾಲತಾಣ ಲೋಕಾರ್ಪಣಾ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಶ್ರೀ ಎಸ್ ಆರ್ ಹರೀಶ್ ಆಚಾರ್ಯ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಇಂದು ಸಹಕಾರ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತ ರವಾದದ್ದು , ದೇಶದಲ್ಲಿಯೇ ಮೊದಲ ಬಾರಿಗೆ ವಿದ್ಯಾರ್ಥಿಗಳು ಯುವ ಸ್ಪಂದನದಂತಹ ಸಹಕಾರಿ ಸಂಘದ ಮೂಲಕ ತಮ್ಮ ಅಗತ್ಯತೆಯನ್ನು ತಾವೇ ಈಡೇರಿಸಲು ಹೊರಟಿರುವುದು ನಿಜಕ್ಕೂ ಅಭಿನಂದನೀಯ ಎಂದು ಹೇಳಿದರು. ಶ್ರೀ ಧವಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಸುದರ್ಶನ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಯುವಸ್ಪಂದನ ಜಾಲತಾಣದ ಲೋಕಾರ್ಪಣೆಯನ್ನು ನೆರೆವೇರಿಸಿದರು. ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಮುಖ್ಯಸ್ಥರಾದ ಡಾ. ರೂಪಾ ಕೆ ಎಲ್ಲರನ್ನೂ ಸ್ವಾಗತಿಸಿದರು. ಯುವ ಸ್ಪಂದನ ಸೌಹಾರ್ದ ಕೋಆಪರೇಟಿವ್ ನ ಮುಖ್ಯ…
ಸಹಕಾರ ಕ್ಷೇತ್ರಕ್ಕೆ ವಿಶೇಷ ಮಾನ್ಯತೆಯನ್ನು ನೀಡಿ ‘ಸಹಕಾರದಿಂದ ಸಮೃದ್ಧಿ’ ಎಂಬ ಘೋಷ ವಾಕ್ಯದೊಂದಿಗೆ ಪ್ರತ್ಯೇಕ ನೂತನ ಸಹಕಾರ ಸಚಿವಾಲಯವನ್ನು ರಚಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಒಂದು ಐತಿಹಾಸಿಕ ನಿರ್ಧಾರವೆಂದು ಬಣ್ಣಿಸಿ ಹರ್ಷ ವ್ಯಕ್ತಪಡಿಸಿ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಕೇಂದ್ರದ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್ಯ ಅವರು ಸ್ವಾಗತಿಸಿದ್ದಾರೆ. ಇದುವರೆಗೆ ಕೇಂದ್ರ ಸರಕಾರದ ಕೃಷಿ ಸಚಿವಾಲಯದ ಅಧೀನದಲ್ಲಿದ್ದ ಸಹಕಾರ ಇಲಾಖೆಯನ್ನು ಕೇಂದ್ರ ಸರಕಾರವು ಪ್ರತ್ಯೇಕಿಸಿ ಹೊಸ ಸಹಕಾರ ಸಚಿವಾಲಯ ರಚಿಸಿ ಮಾನ್ಯತೆಯನ್ನು ನೀಡಿರುವುದರಿಂದ ಸಹಕಾರ ಕ್ಷೇತ್ರಕ್ಕೆ ದೇಶಾದ್ಯಂತ ವಿಶೇಷವಾದ ಪರಿಗಣನೆ ಸಿಕ್ಕಿದಂತಾಗಿದೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಪ್ರತ್ಯೇಕ ಸಚಿವಾಲಯವನ್ನು ತೆರೆಯಲು ನಿರಂತರ ಪ್ರಯತ್ನವನ್ನು ಮಾಡಿದ ಭಾರತೀಯ ರಿಸರ್ವ್ ಬ್ಯಾಂಕ್ನ ನಿರ್ದೇಶಕರು, ಸಹಕಾರ ಭಾರತಿಯ ಸಂರಕ್ಷಕರೂ ಆದ ಶ್ರೀ ಸತೀಶ್ ಕಾಶೀನಾಥ್ ಮರಾಠೆಯವರನ್ನು ಅವರು ಈ ಸಂದರ್ಭದಲ್ಲಿ ವಿಶೇಷವಾಗಿ ಅಭಿನಂದಿಸಿದ್ದಾರೆ. ಸಹಕಾರ ವಿಷಯವು ಇಂದು ರಾಜ್ಯದ ವಿಷಯವಾಗಿದೆ. ರಾಜ್ಯ ಸರಕಾರದ ಸಹಕಾರ ನೀತಿಯು ಬೇರೆ ಬೇರೆ ರಾಜ್ಯಗಳಲ್ಲಿ ವಿಭಿನ್ನವಾಗಿದೆ. ಇದರಿಂದ…
ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಮಾರ್ಗದರ್ಶನದಲ್ಲಿ ಸಹಕಾರಿಗಳಿಗಾಗಿ ಎರಡನೇ ಲಸಿಕಾ ಶಿಬಿರವು ಯಶಸ್ವಿಯಾಗಿ ನೆರವೇರಿತು
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರೀತಿಯ ಸಹಕಾರ ಸಂಘಗಳ ಮತ್ತು ಸೌಹಾರ್ದ ಸಹಕಾರಿಗಳ ಸಿಬ್ಬಂದಿಗಳು ಮತ್ತು ಆಡಳಿತಾಧಿಕಾರಿಳಿಗೆ ಉಚಿತ ಕೋವಿಡ್ ಲಸಿಕಾ ಶಿಬಿರವು ನಗರದ ಎಮ್.ಸಿ.ಸಿ. ಬ್ಯಾಂಕ್ನ ಸಹಯೋಗದೊಂದಿಗೆ ಜರಗಿತು. ನಗರದ ಪತ್ತಿನ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳು, ವಿವಿದೋದ್ದೇಶ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕುಗಳು ಸೇರಿದಂತೆ ನಗರದ ಎಲ್ಲಾ ರೀತಿಯ ಸಹಕಾರ ಸಂಘಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಒಟ್ಟು ದಾಖಲೆಯ 473 ಜನ ಈ ಉಚಿತ ಶಿಬಿರದ ಪ್ರಯೋಜನವನ್ನು ಪಡೆದರು. ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್ ಅವರು ಮಾತನಾಡಿ ಲಸಿಕೆ ಪಡೆಯುವುದರ ಅಗತ್ಯತೆ ಬಗ್ಗೆ ಪ್ರಸ್ತುತ ಪಡಿಸಿದರು. ವೈದ್ಯಾಧಿಕಾರಿಗಳಾದ ಡಾ. ಸುಷ್ಮಾ ಜಾಸ್ಮಿನ್ ಅವರು ಆದ್ಯತಾವಲಯದ ಸಿಬ್ಬಂದಿಗಳು ಸ್ವತಃ ಲಸಿಕೆಯನ್ನು ಪಡೆಯುವುದು ಮಾತ್ರವಲ್ಲ ಮುಂದಿನ ದಿನಗಳಲ್ಲಿ ಎಲ್ಲಾ ಜನಸಮುದಾಯದಗಳಿಗೂ ಲಸಿಕೆಯ ಮಹತ್ವದ ಬಗ್ಗೆ ಅರಿವು ಮೂಡಿಸಬೇಕೆಂದು ಮನವಿ ಮಾಡಿಕೊಂಡರು. ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್ಗಳ…
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕ್ಗಳ ಸಿಬ್ಬಂದಿಗಳು ಮತ್ತು ಆಡಳಿತಾಧಿಕಾರಿಳಿಗೆ ಉಚಿತ ಕೋವಿಡ್ ಲಸಿಕಾ ಶಿಬಿರವು ನಗರದ ಎಮ್.ಸಿ.ಸಿ. ಬ್ಯಾಂಕ್ನ ಸಹಯೋಗದೊಂದಿಗೆ ಜರಗಿತು. ಪಟ್ಟಣ ಸಹಕಾರ ಬ್ಯಾಂಕ್ಗಲೋಂದಿಗೆ ನಗರದ ಹಲವಾರು ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳು ಹಾಗೂ ಕೆಲವೊಂದು ರಾಷ್ಟ್ರೀಕೃತ ಬ್ಯಾಂಕುಗಳ ಸಿಬ್ಬಂದಿಗಳು ಕೂಡಾ ಈ ಶಿಬಿರದ ಪ್ರಯೋಜನವನ್ನು ಪಡೆದರು. ಒಟ್ಟು ದಾಖಲೆಯ 401 ಜನ ಈ ಉಚಿತ ಶಿಬಿರದ ಪ್ರಯೋಜನವನ್ನು ಪಡೆದರು. ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ಮಂಗಳೂರು ಮಹಾನಗರದ ಮಹಾಪೌರರಾದ ಶ್ರೀ ಪ್ರೇಮಾನಂದ ಶೆಟ್ಟಿಯವರು ಲಸಿಕೆ ಪಡೆಯುವುದರ ಅಗತ್ಯತೆ ಬಗ್ಗೆ ಸ್ಪಷ್ಟ ಪಡಿಸಿದರು. ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್ಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಹರೀಶ್ ಆಚಾರ್ಯ, ಎಮ್.ಸಿ.ಸಿ. ಬ್ಯಾಂಕ್ನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೋ, ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಚಿತ್ತರಂಜನ್ ಬೋಳಾರ್, ಜಿಲ್ಲಾ ಲೀಡ್ ಬ್ಯಾಂಕ್ ಮೇನೆಜರ್ ಶ್ರೀ ಪ್ರವೀಣ್ ಕುಮಾರ್, ಎಮ್.ಸಿ.ಸಿ ಬ್ಯಾಂಕ್ನ ಉಪ ಮಹಾಪ್ರಬಂಧಕ ಶ್ರೀ ರಾಜ್ ಮತ್ತು…
https://www.youtube.com/watch?v=D7bXO1G03N4
ಕಾರ್ಯದರ್ಶಿ ಶ್ರೀ ಜತಿನ್ ಜಿಜೋ ಅವರಿಂದ ‘ಸ್ಪಂದನʼ ಸಂಸ್ಥೆಯ ಪರಿಚಯ | About ‘Spandana’ | Secretary JITHIN JEIJO
https://www.youtube.com/watch?v=DKXuwVhZPGA
ಶ್ರೀ ರವಿರಾಜ್ ಹೆಗ್ಡೆ | ಅಧ್ಯಕ್ಷರು – ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ | ಸ್ಪಂದನ |
https://www.youtube.com/watch?v=cjmsdujKvKk&t=163s
