Author: admin

ಆರೋಗ್ಯ ಶಿಬಿರ ಉದ್ಘಾಟಿಸಿ ಬ್ರಹ್ಮಕುಮಾರಿ ಜಯಶ್ರೀ ಶ್ಲಾಘನೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತ ಒಳ್ಳಯೆ ಕೆಲಸಗಳನ್ನು ಮಾಡುತ್ತ ಬರುತ್ತಿದೆ. ಆರೋಗ್ಯ ಸಮಸ್ಯೆಗಳು ಕಾಡುತ್ತಿರುವ ಸಂದರ್ಭದಲ್ಲಿ ಇಂಥ ಶಿಬಿರಗಳನ್ನು ಆಯೋಜಿಸುವ ಮೂಲಕ ಸ್ವಸ್ಥ, ಆರೋಗ್ಯಪೂರ್ಣ ಸಮಾಜಕ್ಕೆ ಮಹತ್ತರ ಕೊಡುಗೆ ನೀಡುತ್ತಿದೆ ಎಂದು ಬ್ರಹ್ಮಕುಮಾರಿ ಜಯಶ್ರೀ ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಹಿಳಾ ಘಟಕ, ಪ್ರಗತಿ ಮಹಿಳಾ ಮಂಡಲ ಉರ್ವಸ್ಟೋರ್ ಹಾಗೂ ಬ್ರಹ್ಮಕುಮಾರೀಸ್ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ಉರ್ವಸ್ಟೋರ್‌ನ ಪ್ರಗತಿ ಮಹಿಳಾ ಮಂಡಲದಲ್ಲಿ ಭಾನುವಾರ ಉಚಿತ ನೇತ್ರ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ಉದ್ಘಾಟಿಸಿ ಮಾತನಾಡಿದರು.ನಿಧಿಲ್ಯಾಂಡ್ ಇನ್‌ಫ್ರಾಸ್ಟçಕ್ಚರ್ ಡೆವಲಪರ್ಸ್ ಇಂಡಿಯಾ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಪ್ರಶಾಂತ್ ಕುಮಾರ್ ಸನಿಲ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಆಯೋಜಿಸುತ್ತಿರುವ ಇಂಥ ಸಮಾಜಮುಖಿ ಕಾರ್ಯಕ್ರಮಗಳು…

Read More

ಮಂಗಳೂರು: ಸಹಕಾರ ಸಂಘಗಳು ಉತ್ತಮ ಸೇವೆ ನೀಡುವಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸರಿಸಮನಾಗಿ ಕೆಲಸ ಮಾಡುತ್ತವೆ. ಸಹಕಾರಿ ಸಂಘಗಳು ರೈತರ ಹಣವನ್ನು ರೈತರಿಗೆ ನೀಡುವ ಕಾರ್ಯ ಮಾಡುತ್ತವೆ. ಹೊಸಮಠ ಕೃಷಿ ಪತ್ತಿನ ಸಹಕಾರಿ ಸಂಘ ರೈತರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸಮೃದ್ಧಿ ಸಹಕಾರ ಸೌಧ”ವನ್ನು ಭಾನುವಾರ ಲೋಕಾರ್ಪಣೆ ಮಾಡಿ ಮಾತನಾಡಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳು ವಿಲೀನ ಆಗುವ ದಿನಗಳಲ್ಲಿ ಜನ ಸಹಕಾರಿ ಸಂಘಗಳ ಕಡೆ ಮುಖ ಮಾಡುತ್ತಿದ್ದಾರೆ. ಕೃಷಿ ಪತ್ತಿನ ಸಹಕಾರಿ ಸಂಘಗಳು ಸರಕಾರದ ಸಾಲ ಸೌಲಭ್ಯಗಳನ್ನು ಸಮರ್ಪಕವಾಗಿ ಕೃಷಿಕರಿಗೆ ವಿತರಿಸುತ್ತಿವೆ. ಸಾಲಮನ್ನಾ, ಬೆಳೆ ವಿಮೆಯಂಥ ಸೌಲಭ್ಯಗಳು ರೈತರಿಗೆ ನೇರವಾಗಿ ಸಿಗುತ್ತವೆ ಎಂದು ಬಣ್ಣಿಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಗೋದಾಮು ಉದ್ಘಾಟಿಸಿ ಮಾತನಾಡಿ ಸಹಕಾರಿ ಸಂಘಗಳು ಇಂದು…

Read More

ಕುಂದಾಪುರ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ದೇಶದಲ್ಲಿ ಅತಿಹೆಚ್ಚು ರಾಷ್ಟ್ರೀಕೃತ ಬ್ಯಾಂಕ್‌ಗಳ ಸೃಷ್ಟಿಗೆ ಕಾರಣವಾಗಿದ್ದರೂ ಇಂದು ಅವುಗಳು ಒಂದರಲ್ಲೊಂದು ವಿಲೀನಗೊಳ್ಳುವ ಪ್ರಮೇಯ ಎದುರಾಗಿದೆ. ಇಂಥ ಸಂದರ್ಭದಲ್ಲಿ ಉಭಯ ಜಿಲ್ಲೆಗಳಲ್ಲಿ ಸಹಕಾರಿ ಬ್ಯಾಂಕ್‌ಗಳು ಜನರಿಗೆ ಉತ್ತಮ ಸೇವೆ ಒದಗಿಸುತ್ತ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರ ಸಂಘದ ನವೀಕೃತ ಸುವರ್ಣ ಸೌಧ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆಯ ಜೊತೆಗೆ ಮಹಿಳಾ ಸಬಲೀಕರಣವೂ ಆಗಿದೆ. ನವೋದಯ ಗುಂಪುಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ. ರಾಜ್ಯದಲ್ಲಿ ಏಳು ಜಿಲ್ಲೆಗಳಲ್ಲಿ ನವೋದಯ ಸ್ವಸಹಾಯ ಗುಂಪುಗಳು ಇಂದು ಪ್ರಬಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ ಡಾ.ರಾಜೇಂದ್ರ ಕುಮಾರ್, ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಕಟ್ಟಡಕ್ಕೆ ೧೦ ಲಕ್ಷ ರೂ. ದೇಣಿಗ ನೀಡುವುದಾಗಿ ಘೋಷಿಸಿದರು.ಸಂಸದ ಕೋಟ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಜೂನ್ ೧೬ರಂದು ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಹಿಳಾ ಘಟಕ, ಪ್ರಗತಿ ಮಹಿಳಾ ಉರ್ವಸ್ಟೋರ್ ಹಾಗೂ ಬ್ರಹ್ಮಕುಮಾರೀಸ್ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನ ಸಮೀಪದ ಪ್ರಗತಿ ಮಹಿಳಾ ಮಂಡಲ ಕಟ್ಟಡದಲ್ಲಿ ಕೆಎಂಸಿ ಆಸ್ಪತ್ರೆ ಅತ್ತಾವರ ಇದರ ನುರಿತ ತಜ್ಞ ವೈದ್ಯರಿಂದ ಬೆಳಗ್ಗೆ ೯.೩೦ರಿಂದ ಮಧ್ಯಾಹ್ನ ೧೨.೩೦ರ ತನಕ ನೇತ್ರ ಉಚಿತ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕನ್ನಡಕ ಉಚಿತ ವಿತರಣೆ ಹಾಗೂ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆ ಮಾಡಲಾಗುವುದು. ಬಿ.ಪಿ., ಮಧುಮೇಹ, ಸಾಮಾನ್ಯ ರೋಗ ತಪಾಸಣೆ ಮತ್ತು ಔಷಧ ವಿತರಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ: ೦೮೨೪-೨೦೦೩೨೦೦ ಇದಕ್ಕೆ ಸಂಪರ್ಕಿಸಬಹುದು. ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ವಿಳಾಸಕ್ಕೆ ಮೇಲ್ ಮಾಡಿ: sahakaraspandana@gmail.com ಮಾಹಿತಿಗೆ: 9901319694.

Read More

ಮಂಗಳೂರು: ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ (ಎಂ.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಇತ್ತೀಚೆಗೆ ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆಯಲ್ಲಿ ನಡೆಯಿತು. ಮಂಗಳೂರು ಧರ್ಮಪ್ರಾಂತ ಮಾಜಿ ಪ್ರೊ ಕುರೇಟರ್ ಜಾನ್ ವಾಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬ್ಯಾಂಕಿನ ಸಿಬ್ಬಂದಿ ಬ್ಯಾಂಕಿನಲ್ಲಿ ಕೆಲಸ ಮಾಡಲು ಉತ್ತಮ ಮನೋಭಾವ ಹೊಂದಿರಬೇಕು ಹಾಗೂ ಕೆಲಸದ ಮೇಲೆ ಅವರಿಗೆ ತೃಪ್ತಿ ಇರಬೇಕು. ಬ್ಯಾಂಕಿನ ಪ್ರಗತಿ ಹೆಚ್ಚಿಸಲು ನಿಗದಿತ ಗುರಿ ಸಾಧಿಸುವುದು ಅತಿ ಆಗತ್ಯ ಎಂದು ಬಣ್ಣಿಸಿದರು. ಆಕಾಶದತ್ತ ಗುರಿಯಿಡಿ, ನೀವು ಮರದ ತುದಿಯನ್ನು ತಲುಪುತ್ತೀರಿ ಎಂಬ ಮಾತು ನೆನಪಿಸಿಕೊಂಡ ಅವರು, ಕಳೆದ ದಶಕದಲ್ಲಿ ಎಂ.ಸಿ.ಸಿ ಬ್ಯಾಂಕಿನ ಸಾಧಿಸಿದ ಅಗಾಧ ಪ್ರಗತಿಗಾಗಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗವನ್ನು ಅಭಿನಂದಿಸಿದರು. ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಸಮರ್ಪಿತ ಸೇವೆಗಾಗಿ ಬ್ಯಾಂಕಿನ ಸಿಬ್ಬಂದಿಯನ್ನು ಶ್ಲಾಘಿಸಿ, ಅಬಿನಂದಿಸಿದರು. ಬಳಿಕ ಮಾತನಾಡಿದ ಅವರು,…

Read More

ನಿರಂತರ ಉನ್ನತ ಸಾಧನೆಯ ಹಾದಿಯಲ್ಲಿ ಸಾಗಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ೨೦೨೩-೨೪ನೇ ಸಾಲಿನಲ್ಲಿ ೨೦೦೦ ಕೋಟಿ ರೂ.ಗೂ ಮೀರಿ ವಾರ್ಷಿಕ ವಹಿವಾಟು ನಡೆಸಿದೆ. ವರದಿ ಸಾಲಿನಲ್ಲಿ ೨೨೫ ಕೋಟಿ ರೂ.ಗೂ ಅಧಿಕ ಠೇವಣಿ, ೧೭೮ ಕೋಟಿ ರೂ.ಗೂ ಮಿಕ್ಕಿ ಸಾಲ, ೧.೪೮ ಕೋಟಿ ರೂ. ಪಾಲು ಬಂಡವಾಳದೊAದಿಗೆ ಸಂಘವು ೩.೩ ಕೋಟಿ ರೂ. ಗೂ ಮಿಕ್ಕಿ ಲಾಭ ಗಳಿಸಿದೆ. ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ೧೪,೦೦೦ ಚದರಡಿಯ ಸ್ವಂತ ಕಟ್ಟಡ ಹೊಂದಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿ ಸಾಧನೆ ಮಾಡಿದ ಏಕಮಾತ್ರ ವಿವಿಧೋದ್ದೇಶ ಸಹಕಾರಿ ಸಂಘ ಎನಿಸಿದೆ. ಅಲ್ಪಾವಧಿಯಲ್ಲೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೩೦ ಶಾಖೆಗಳು ಆರಂಭವಾಗಿ ನುರಿತ ಸಿಬ್ಬಂದಿ ವರ್ಗದ ಅತ್ಯುತ್ತಮ ಗುಣಮಟ್ಟದ ಸೇವೆಗಾಗಿ ರಾಜ್ಯ ಹಾಗೂ ರಾಷ್ಟçಮಟ್ಟದ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಆತ್ಮಶಕ್ತಿ ಸಹಕಾರಿ ಸಂಘವು ಮಹಿಳಾ ಸಬಲೀಕರಣ ಧ್ಯೇಯದೊಂದಿಗೆ ಶೇ. ೯೫ ಮಹಿಳಾ ಸಿಬ್ಬಂದಿಗಳಿಂದಲೇ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ. ಸಂಘವು ಮುಂದಿನ ದಿನಗಳಲ್ಲಿ…

Read More

ಕಂಕನಾಡಿಯಲ್ಲಿ ಐದನೇ ಶಾಖೆ ಶೀಘ್ರ ಮಂಗಳೂರು: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಆರಂಭವಾದ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ 2023 – 24ನೇ ಸಾಲಿನ ಆರ್ಥಿಕ ವರ್ಷ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ.ಠೇವಣಿ ಸಂಗ್ರಹದಲ್ಲಿ ಕಳೆದ ಸಾಲಿನ 16.6 ಕೋಟಿಯಿಂದ ಈ ವರ್ಷ 31.07 ಕೋಟಿ ಏರಿಕೆಯೊಂದಿಗೆ ಶೇ.86 ಸಾಧನೆ ಮಾಡಿದೆ. ಸಾಲ ವಿತರಣೆಯಲ್ಲಿ ಶೇ.87 ಪ್ರಗತಿ ಮತ್ತು 122 ಲಕ್ಷ ರೂ. ನಿವ್ವಳ ಲಾಭ ಗಳಿಸಿ ಕಳೆದ ವರ್ಷಕ್ಕಿಂತ ಈ ಬಾರಿ ಶೇ.60 ಏರಿಕೆಯಾಗಿದೆ. ಶೇ.99 ಸಾಲ ವಸೂಲಾತಿ ಸೊಸೈಟಿಯ ಕಾರ್ಯಕ್ಷಮತೆ, ಕಾರ್ಯದಕ್ಷತೆಗೆ ಹಿಡಿದ ಕನ್ನಡಿಯಾಗಿದೆ.ಆರಂಭದ ವರ್ಷಗಳಿಂದಲೂ ಸದಸ್ಯರಿಗೆ ಡಿವಿಡೆಂಡ್ ನೀಡುತ್ತಿದ್ದು, ಕಳೆದ ವರ್ಷ ಶೇ.20 ಡಿವಿಡೆಂಡ್ ನೀಡಿತ್ತು. ಈ ವರ್ಷ ಇನ್ನೂ ಹೆಚ್ಚಿನ ಡಿವಿಡೆಂಡ್ ನೀಡಲು ಅವಕಾಶವಿದೆ. ಮುಂದಿನ ತಿಂಗಳು ಕಂಕನಾಡಿಯಲ್ಲಿ ಐದನೇ ಶಾಖೆ ತೆರೆಯಲು ನಿಶ್ಚಯಿಸಿದೆ.ಉರ್ವಸ್ಟೋರ್‌ನಲ್ಲಿ ಪ್ರಧಾನ ಕಚೇರಿ ಹಾಗೂ ಶಾಖೆಯೊಂದಿಗೆ 2019ರಲ್ಲಿ ಆರಂಭವಾದ ಶ್ರೀಶಾ ಸೊಸೈಟಿ ನಾಲ್ಕು ವರ್ಷಗಳಲ್ಲಿ ನಾಲ್ಕು ಸುಸಜ್ಜಿತ ಶಾಖೆಗಳನ್ನು ಹೊಂದಿದ್ದು…

Read More

ಬ್ಯಾಂಕ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮಾಹಿತಿ ಉಡುಪಿ: ಕರಾವಳಿ ಭಾಗದ ಪ್ರತಿಷ್ಠಿತ ಪಟ್ಟಣ ಸಹಕಾರಿ ಸಂಸ್ಥೆ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ 2023-24ನೇ ಸಾಲಿನಲ್ಲಿ 921 ಕೋಟಿ ರೂ. ವ್ಯವಹಾರ ನಡೆಸಿದ್ದು, 17.50 ಕೋಟಿ ರೂ. ಲಾಭ ಗಳಿಸಿದೆ. ಕಳೆದ 14 ವರ್ಷಗಳಿಂದ ನಿರಂತರ ಸದಸ್ಯ, ಗ್ರಾಹಕರಿಗೆ ಅತಿ ಹೆಚ್ಚು ಡಿವಿಡೆಂಡ್ ನೀಡುತ್ತಿರುವ ಕರಾವಳಿ ಭಾಗದ ಏಕೈಕ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಪಾತ್ರವಾಗಿದೆ. ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿ ಗಳಿಸಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮಿ ಕೋ- ಆಪರೇಟಿವ್ ಬ್ಯಾಂಕ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ಶಾಖೆಗಳನ್ನು ಹೊಂದಿದ್ದು 40 ಸಾವಿರ ಗ್ರಾಹಕರ ಮೂಲಕ ವ್ಯವಹಾರ ನಡೆಸುತ್ತಿದೆ. 2023-24ನೇ ಸಾಲಿನಲ್ಲಿ 532 ಕೋಟಿ ರೂ. ಠೇವಣಿ, 389 ಕೋಟಿ ರೂ. ಸಾಲ ಮತ್ತು ಮುಂಗಡ, 34 ಕೋಟಿ ರೂ. ಪಾಲು ಬಂಡವಾಳ ಹಾಗೂ ಶೂನ್ಯ ನಿವ್ವಳ…

Read More

ವರದಿ ವರ್ಷದಲ್ಲಿ 13.12 ಕೋಟಿ ರೂ. ಲಾಭ ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಂ.ಸಿ.ಸಿ ಬ್ಯಾಂಕ್ ಲಿಮಿಟೆಡ್ ಮಾ.31ಕ್ಕೆ ಅಂತ್ಯಗೊಂಡ ವಿತ್ತೀಯ ವರ್ಷದಲ್ಲಿ ಲೆಕ್ಕ ಪರಿಶೋಧನಾ ಪೂರ್ವ 13.12 ಕೋಟಿ ರೂ. ವ್ಯವಹಾರಿಕ ಲಾಭ ಗಳಿಸಿದೆ. ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕಿನ 17ನೇ ಶಾಖೆಯನ್ನ ಇತ್ತೀಚೆಗೆ ತೆರೆಯಲಾಗಿದ್ದು, ಕಾವೂರು, ಬೆಳ್ತಂಗಡಿ ಮತ್ತು ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಶಾಖೆಗಳನ್ನು ತೆರೆಯಲಾಗುವುದು ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸತತವಾಗಿ ಎನ್.ಪಿ.ಎ. ಪ್ರಮಾಣ ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪ್ರಥಮ ಬಾರಿ ಶೇ.1.07 ಎನ್.ಪಿ.ಎ. ದಾಖಲಿಸಿದೆ. ಬ್ಯಾಂಕಿನ ವ್ಯವಹಾರ ಡಿಸೆಂಬರ್ ಅಂತ್ಯಕ್ಕೆ 1000 ಕೋಟಿ ರೂ. ತಲುಪಿದ್ದು, ಈ ಆರ್ಥಿಕ ವರ್ಷದ ಇನ್ನೊಂದು ಮಹತ್ವದ ಸಾಧನೆ ಎಂದು ಅವರು ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯಕ್ಷೇತ್ರವನ್ನು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು,…

Read More

ಮಂಗಳೂರು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಾದ ಹಾಗೂ ಸಾಧ್ವಿ ಮಾತಾನಂದಮಯಿ ಅವರ ಮಾರ್ಗದರ್ಶನದಲ್ಲಿ 2011ರಲ್ಲಿ ಪ್ರಾರಂಭವಾದ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ವರದಿ ಸಾಲಿನಲ್ಲಿ 546 ಕೋಟಿ ರೂ. ವ್ಯವಹಾರ ದಾಖಲಿಸಿದ್ದು, ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಶೇ.26 ಏರಿಕೆ ಕಂಡಿದೆ. ಸಂಘದ ಪ್ರಧಾನ ಕಚೇರಿಯಲ್ಲಿ ಇತ್ತೀಚೆಗೆ ಅವಲೋಕನ ಸಭೆಯಲ್ಲಿ ಮಾಹಿತಿ ನೀಡಿದ ಡಿಯೂರು ಸಹಕಾರಿಯ ಅಧ್ಯಕ್ಷ ಎ.ಸುರೇಶ್ ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು 2023-24ನೇ ಸಾಲಿನಲ್ಲಿ 4.50 ಕೋಟಿ ರೂ. ಲಾಭ ಗಳಿಸಿದೆ. ಕಳೆದ ಸಾಲಿಗೆ ಹೋಲಿಸಿದರೆ ಶೇ.43 ಪ್ರಗತಿ ಸಾಧಿಸಿದೆ. 19 ಶಾಖೆಗಳ ಮೂಲಕ 302 ಕೋಟಿ ರೂ. ಠೇವಣಿ ಸಂಗ್ರಹಿಸಿದೆ. 244 ಕೋಟಿ ರೂ. ಸಾಲ ಮತ್ತು ಮುಂಗಡಗಳೊಂದಿಗೆ, ಪಾಲು ಬಂಡವಾಳ 2 ಕೋಟಿ ರೂ., ನಿಧಿಗಳು 12.14 ಕೋಟಿ ರೂ. ಮತ್ತು ದುಡಿಯುವ ಬಂಡವಾಳ 320 ಕೋಟಿ ರೂ. ಹೊಂದಿದೆ ಎಂದು ಹೇಳಿದರು. ಎಲ್ಲ ಶಾಖೆಗಳು ಗಣಕೀಕೃತಗೊಂಡು…

Read More