Author: admin

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 100ನೇ ಉಚಿತ ಆರೋಗ್ಯ ಶಿಬಿರದಲ್ಲಿ ವಿಧಾನಸಭಾ ಸ್ಪೀಕರ್‌ ಯು.ಟಿ ಖಾದರ್‌ ಅಭಿಪ್ರಾಯ ಮಂಗಳೂರು: ಸಹಕಾರ ಕ್ಷೇತ್ರದ ವಿವಿಧ ಚಿಂತನೆಯಿಟ್ಟುಕೊಂಡು ಸಾಮಾಜಿಕವಾದ ಚಿಂತನೆ ಇಟ್ಟುಕೊಂಡು ಆ ನಿಟ್ಟಿನಲ್ಲಿ ಕೆಲಸ ಮಾಡಿಕೊಂಡು ಅದ್ಭುತವಾದುದನ್ನು ಸಾಧಿಸಿ ಜನರ ಪ್ರೀತಿಗೆ ಪಾತ್ರವಾಗಿ ಯಶಸ್ವಿಯಾಗಿ ಕೆಲಸ ಮಾಡಬಹುದು ಎಂಬುದನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ತೋರಿಸಿದೆ. ಸ್ಪಷ್ಟವಾದ ನಾಯಕತ್ವ, , ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಸಾಮಾಜಿಕ ಚಿಂತನೆಯ ಮನೋಭಾವ, ಪರಸ್ಪರ ಸಹಕಾರ ಇದಕ್ಕೆ ಪ್ರಮುಖ ಕಾರಣ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಪಡೀಲಿನ ಆತ್ಮಶಕ್ತಿ ಸೌಧದಲ್ಲಿ ಭಾನುವಾರ ಉಚಿತ ಆರೋಗ್ಯ ಶಿಬಿರದ 100ನೇ ಶಿಬಿರ ಆರೋಗ್ಯ ಸೇವಾ ಸಂಗಮದ ಅಂಗವಾಗಿ ಹಮ್ಮಿಕೊಂಡ ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ತಪಾಸಣೆ ಹಾಗೂ ರಕ್ತದಾನ ಶಿಬಿರ ಮತ್ತು ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರಮ ಹಾಗೂ 14ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ…

Read More

ಸ್ಥಾಪನಾ ದಿನಾಚರಣೆ ಪ್ರಯುಕ್ತ ಆರೋಗ್ಯ ಸೇವಾ ಸಂಗಮ, ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ ಮಂಗಳೂರು: ನಗರದ ಪಡೀಲ್‌ನಲ್ಲಿ ಆಡಳಿತ ಕಚೇರಿ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ಆರೋಗ್ಯ ಸೇವಾ ಸಂಗಮ “ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ , ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರಮ ಹಾಗೂ 14ನೇ ವಾರ್ಷಿಕೋತ್ಸವ ಸಮಾರಂಭʼʼ ಫೆಬ್ರವರಿ 1ರ ಭಾನುವಾರ ಬೆಳಗ್ಗೆ 9ರಿಂದ ಆತ್ಮಶಕ್ತಿ ಸೌಧ ಪಡೀಲ್, ಮಂಗಳೂರು ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕರ್ನಾಟಕ…

Read More

ವಿಷಯಾಧಾರಿತ ತರಬೇತಿ ಕಾರ್ಯಕ್ರಮದಲ್ಲಿ ಎಚ್‌.ಎನ್‌ ರಮೇಶ್‌ ಕಿವಿಮಾತು ಮಂಗಳೂರು: ಯಾವುದೇ ಸಹಕಾರಿ ಸಂಸ್ಥೆಗಳು ಸಾಲಗಳನ್ನು ಕೊಡುವಾಗ ಅವುಗಳಿಗೆ ಸಾಲ ತೆಗೆದುಕೊಳ್ಳುವವರು ಕೊಡುವ ದಾಖಲೆಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಳ್ಳಬೇಕು. ಹಿಂದಿನ ವರದಿಗಳನ್ನು ಗಮನಿಸಿಕೊಳ್ಳಬೇಕು ಎಂದು ಸಹಕಾರ ಸಂಘಗಳ ದಕ್ಷಿಣ ಕನ್ನಡ ಜಿಲ್ಲಾ ಉಪನಿಬಂಧಕರಾದ ಎಚ್‌.ಎನ್‌ ರಮೇಶ್‌ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಮಂಗಳೂರಿನ ಶ್ರೀನಿವಾಸ ಹೋಟೆಲ್‌ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಇದರ ವತಿಯಿಂದ ಮಂಗಳೂರು, ಮೂಲ್ಕಿ, ಉಳ್ಳಾಲ ಹಾಗೂ ಮೂಡುಬಿದರೆ ತಾಲೂಕಿನ ಸೌಹಾರ್ದ ಸಹಕಾರಿಗಳಿಗಾಗಿ ಆಯೋಜಿಸಿದ ವಿಷಯಾಧಾರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾರಿಗೇ ಆಗಲಿ ಸಾಲ ಕೊಡುವಾಗ ಕನಿಷ್ಠ ದಾಖಲೆಗಳನ್ನು ಪಡೆದುಕೊಳ್ಳಲೇಬೇಕು. ಸಾಲ ತೆಗೆದುಕೊಳ್ಳವವ ಅದನ್ನು ಮರುಪಾವತಿ ಮಾಡುವಷ್ಟು ಶಕ್ತನಾಗಿದ್ದಾನೆಯೇ ಎಂದು ಗಮನಿಸಿಕೊಳ್ಳಬೇಕು. ಸಾಲ ತೆಗೆದುಕೊಳ್ಳುವವ ಮರುಪಾವತಿ ಮಾಡುವಷ್ಟು ಶಕ್ತನಲ್ಲದಿದ್ದರೆ ಮುಂದೆ ಸಮಸ್ಯೆಗೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಕಾನೂನು ಚೌಕಟ್ಟು ಬಿಗಿಯಾಗಿರುವ ಕಾರಣ ಎಲ್ಲ ಅಂಶಗಳ ಬಗ್ಗೆಯೂ ಗಮನ ಹರಿಸುವುದು ಮುಖ್ಯವಾಗುತ್ತದೆ ಎಂದು ಹೇಳಿದರು. ಈಗೀಗ…

Read More

ಹತ್ತು ವರ್ಷ: ಶತ ಶಿಬಿರ; ಆರೋಗ್ಯ ರಕ್ಷಣೆಗೆ ಆತ್ಮಶಕ್ತಿ ಸಹಕಾರಿ ಸಂಸ್ಥೆ ಕಾಳಜಿ: ಫೆ.೧ರಂದು ೧೦೦ನೇ ಬೃಹತ್‌ ಆರೋಗ್ಯ ಶಿಬಿರ -ಆರೋಗ್ಯ ಸೇವಾ ಸಂಗಮ ಮಂಗಳೂರು: ಜಗತ್ತು ಆಧುನಿಕ ಕಾಲಘಟ್ಟದ ನಾಗಾಲೋಟದಲ್ಲಿ ಓಡುತ್ತಿದೆ. ಆಧುನಿಕ ಸಲಕರಣೆಗಳು, ತಂತ್ರಜ್ಞಾನಗಳ ಉಪಯೋಗಗಳ ಭರಾಟೆಯಲ್ಲಿ ಮನುಷ್ಯ ಸ್ವಂತ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವ ತನಕ ಕಾಲ ಮುಂದುವರಿದಿದೆ. ಯಾವುದೇ ಒಬ್ಬ ವ್ಯಕ್ತಿ ತನಗೆ ಬೇಕಾದಷ್ಟು ಹಣ, ಯಶಸ್ಸು ಅಥವಾ ಭೌತಿಕ ಸೌಕರ್ಯಗಳನ್ನು ಹೊಂದಿದರೂ, ಆತ ಅನಾರೋಗ್ಯಕ್ಕೀಡಾದರೆ ಸಂತೋಷದ ಜೀವನ ನಡೆಸಲು ಸಾಧ್ಯವಿಲ್ಲ. ಆರೋಗ್ಯವು ಉತ್ತಮವಾಗಿದ್ದರಷ್ಟೇ ಮನುಷ್ಯ ಚೆನ್ನಾಗಿ ಅಧ್ಯಯನ ಮಾಡಲು, ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ಅಥವಾ ಯಾವುದೇ ಸವಾಲುಗಳನ್ನು ವಿಶ್ವಾಸದಿಂದ ಎದುರಿಸಲು ಶಕ್ತನಾಗುತ್ತಾನೆ. https://chat.whatsapp.com/FCEnlTkAKCC0MGPhXtX4i4 ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಕಷ್ಟದ ಕೆಲಸವೇನೂ ಅಲ್ಲ. ಪೌಷ್ಟಿಕ ಆಹಾರ ಸೇವನೆ, ನಿಯಮಿತ ದೈಹಿಕ ವ್ಯಾಯಾಮ, ಸರಿಯಾದ ವಿಶ್ರಾಂತಿ, ಸ್ವಚ್ಛ ಪರಿಸರ  ಇವೆಲ್ಲವೂ ಸಿಕ್ಕರೆ ಆರೋಗ್ಯ ಚೆನ್ನಾಗಿರುತ್ತದೆ. ಆದರೆ ವರ್ತಮಾನದ ತಲ್ಲಣಗಳು ಈ ಮೇಲಿನ ಅಂಶಗಳನ್ನು ನಿಯಮಿತವಾಗಿ ಮಾಡುವುದಕ್ಕೆ ತಡೆಯೊಡ್ಡುತ್ತಲೇ…

Read More

ಮಂಗಳೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಮೇಘರಾಜ್ ಜೈನ್ ಅವರು ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್‌ ಇದರ ಮ್ಯಾನೇಜಿಂಗ್ ಟ್ರಸ್ಟಿ ಆಗಿದ್ದಾರೆ. ಉಪಾಧ್ಯಕ್ಷರಾಗಿ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ರತ್ನಾಕರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗೆ ಚುನಾವಣಾ ಪ್ರಕ್ರಿಯೆ ನಡೆಯಿತು. ಚುನಾವಣಾ ಪ್ರಕ್ರಿಯೆಯನ್ನು ಸಹಾಯಕ ನಿಬಂಧಕರ ಕಚೇರಿ ಅಧೀಕ್ಷಕ ಬಿ.ನಾಗೇಂದ್ರ ಅವರು ನಡೆಸಿಕೊಟ್ಟರು. ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಡಾ। ಎಂ.ಎನ್. ರಾಜೇಂದ್ರ ಕುಮಾರ್, ವಿನಯ ಕುಮಾರ್‌ ಸೂರಿಂಜೆ, ರತ್ನಾಕರ ಶೆಟ್ಟಿ, ರಾಘವ ಶೆಟ್ಟಿ, ಮೋನಪ್ಪ ಶೆಟ್ಟಿ, ಸುನೀಲ್ ಕುಮಾರ್, ನಜೀ‌ರ್ ಹುಸೈನ್, ಎಂ.ಮಹೇಶ್ ಹೆಗ್ಡೆ, ಎಸ್.ರಾಜು ಪೂಜಾರಿ, ಎಂ. ವಾದಿರಾಜ ಶೆಟ್ಟಿ, ಮೇಘರಾಜ್…

Read More

ರಿಸರ್ವ್‌ ಬ್ಯಾಂಕ್‌ ಕರಡು ಮಾರ್ಗಸೂಚಿ: ಗ್ರಾಮೀಣ, ಪಟ್ಟಣ ಸಹಕಾರಿ ಬ್ಯಾಂಕುಗಳಲ್ಲಿ ಏಕರೂಪದ ಪರಿಹಾರದ ಗುರಿ ನವದೆಹಲಿ: ಪ್ರವಾಹ, ಚಂಡಮಾರುತ, ಬರ ಮತ್ತು ಇತರ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ಸಾಲಗಾರರಿಗೆ ಹೊರೆಯಾಗದಂತೆ ಸಾಲ ಮರುಪಾವತಿ ಮಾಡಲು ಪರಿಹಾರ ಕ್ರಮಗಳನ್ನು ಪ್ರಸ್ತಾಪಿಸುವ ಕರಡು ಮಾರ್ಗಸೂಚಿಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬಿಡುಗಡೆ ಮಾಡಿದೆ. ಪ್ರಸ್ತಾವಿತ ಮಾರ್ಗಸೂಚಿಗಳು ನೈಸರ್ಗಿಕ ವಿಕೋಪಗಳಾದಂಥ ಸಂದರ್ಭದಲ್ಲಿ ಮರುಪಾವತಿ ಸಾಮರ್ಥ್ಯವು ತಾತ್ಕಾಲಿಕವಾಗಿ ಪರಿಣಾಮ ಬೀರುವ ಗ್ರಾಹಕರನ್ನು ಗ್ರಾಮೀಣ, ಪಟ್ಟಣ ಸಹಕಾರಿ ಬ್ಯಾಂಕ್‌ಗಳಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿದೆ. https://chat.whatsapp.com/FCEnlTkAKCC0MGPhXtX4i4 ಕರಡು ಮಾರ್ಗಸೂಚಿಗಳು ಗ್ರಾಮೀಣ ಸಹಕಾರಿ ಬ್ಯಾಂಕ್‌ಗಳು ಮತ್ತು ಪಟ್ಟಣ ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸಲಿದ್ದು, ನಿಯಂತ್ರಿತ ಘಟಕಗಳಲ್ಲಿ ಪರಿಹಾರ ಕ್ರಮಗಳಲ್ಲಿ ಹೆಚ್ಚಿನ ಏಕರೂಪತೆಯನ್ನು ತರಲು ಪ್ರಯತ್ನಿಸಲಿವೆ. ಸಾರ್ವಜನಿಕ ಸಮಾಲೋಚನೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಏಪ್ರಿಲ್ 1, 2026ರಿಂದ ಈ ಮಾರ್ಗಸೂಚಿಗಳನ್ನು ಜಾರಿಗೆ ಬರಲು ಯೋಜಿಸಲಾಗಿದೆ. ಕರಡು ಮಾನದಂಡಗಳ ಪ್ರಕಾರ, ಸಾಲ ಖಾತೆಗಳನ್ನು ಪ್ರಮಾಣಿತ ಎಂದು ವರ್ಗೀಕರಿಸಿ, ಪ್ರಕೃತಿ ವಿಕೋಪ ಸಂಭವಿಸಿದ…

Read More

ಗುರುವಾಯನಕೆರೆ: ಇಲ್ಲಿನ ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ 21ನೇ ನೂತನ ಶಾಖೆ ವಾಮಂಜೂರಿನಲ್ಲಿ ಆರಂಭವಾಗಲಿದ್ದು ಫೆಬ್ರವರಿ 5ರಂದು ಉದ್ಘಾಟನೆಗೊಳ್ಳಲಿದೆ. https://chat.whatsapp.com/FCEnlTkAKCC0MGPhXtX4i4 ವಾಮಂಜೂರಿನ ಸ್ಮಾರ್ಟ್‌ ಸಿಟಿ ಕಮರ್ಷಿಯಲ್‌ ಕಾಂಪ್ಲೆಕ್ಸ್‌ನ ಒಂದನೇ ಮಹಡಿಯಲ್ಲಿ ಫೆ.5ರ ಗುರುವಾರ ಬೆಳಗ್ಗೆ 10.30ಕ್ಕೆ ಶಾಸಕರಾದ ಡಾ.ವೈ.ಭರತ್‌ ಶೆಟ್ಟಿಯವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷರಾದ ಅಜಿತ್‌ ಜಿ.ಶೆಟ್ಟಿ ಕೋರ್ಯಾರು ಅಧ್ಯಕ್ಷತೆ ವಹಿಸಲಿದ್ದಾರೆ. ವಾಮಂಜೂರು ಚರ್ಚ್‌ನ ಧರ್ಮಗುರುಗಳಾದ ರೆವರೆಂಡ್‌ ಫಾದರ್‌ ಜೇಮ್ಸ್‌ ಡಿಸೋಜ, ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶೆಡ್ಡೆ ಮಂಜುನಾಥ ಭಂಡಾರಿ, ಮೂಡುಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎಸ್‌.ಶಿವರಾಮ ಮಲ್ಲಿ, ಗುರುಪುರ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್‌ ಶೆಟ್ಟಿ ಶೆಡ್ಡೆ, ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಓಂಪ್ರಕಾಶ್‌ ಶೆಟ್ಟಿ ವಾಮಂಜೂರು, ನಿಕಟಪೂರ್ವ ಕಾರ್ಪೊರೇಟರ್‌ ಹೇಮಲತಾ ರಘು ಸಾಲ್ಯಾನ್‌, ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ದಿನೇಶ್‌ ಜೆ.ಕರ್ಕೇರ ಸಾನದ…

Read More

ಬೆಂಗಳೂರು: ಬನವಾಸಿ ಸೌಹಾರ್ದ ಸಹಕಾರ ಸಂಘ ನಿಯಮಿತ ಅಧ್ಯಕ್ಷರಾಗಿ ಮಂಜುನಾಥ ಎನ್ ಮತ್ತು ಉಪಾಧ್ಯಕ್ಷರಾಗಿ ಬಾಬು ಎಸ್ ಕುಂಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಭಾನುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಇಬ್ಬರ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು. ಆರ್‌.ಎಲ್‌ ವಿಮಲಾ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆಗಳನ್ನು ನೆಡಸಿಕೊಟ್ಟರು. ನಿರ್ದೇಶಕರಾಗಿ ಅನಿಲ್ ಕುಮಾರ್ ಬಿ, ಚಂದ್ರಶೇಖರ ಅಕ್ಕಿ, ತುಳಸಿ ರಾಮ್ ಮೌರ್ಯ, ಡಿ.ಎಂ. ಭತ್ತದ, ಶೋಭಾರಾಣಿ ಎಂ, ರೂಪಶ್ರೀ, ಭೀಮಪ್ಪ, ಸಂಜೀವ ಕುಮಾರ್, ನಾರಾಯಣ ಸ್ವಾಮಿ ಹೆಚ್, ಸರೋಜ ಬಿ ಕೋಷ್ಠಿ, ಉಮೇಶಯ್ಯ ಎಂ ವಿ, ಮಾರೇಗೌಡ ಕೆ ಎನ್, ಶಿವಕುಮಾರ ಸ್ವಾಮಿ ಕೆ ಜಿ ಆಯ್ಕೆಯಾಗಿರುತ್ತಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಬಂಟ್ವಾಳ: ಮೆದುಳಿನ ರಕ್ತಸ್ರಾವದಿಂದ ಕೋಮಾದ ಸ್ಥಿತಿಯಲ್ಲಿ ಇದ್ದ ತನ್ನ ಅವಿವಾಹಿತ ಮಗಳ ಅಂಗಾಂಗಗಳಾದ ಹೃದಯ, ಶ್ವಾಸಕೋಶ, ಕಿಡ್ನಿ, ಲಿವರ್ ಹಾಗೂ ಕಣ್ಣುಗಳನ್ನು ದಾನ ಮಾಡುವ ದಿಟ್ಟ ನಿರ್ಧಾರ ತೆಗೆದುಕೊಂಡಿರುವ ಮಮತಾ ಶೆಟ್ಟಿಯವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವತಿಯಿಂದ ಮಂಗಳವಾರ ಸಂಘದ ಸಭಾಂಗಣದಲ್ಲಿ ಗೌರವಿಸಿ ಆರ್ಥಿಕ ನೆರವನ್ನು ನೀಡಲಾಯಿತು. https://chat.whatsapp.com/FCEnlTkAKCC0MGPhXtX4i4 ಮಗಳ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಇತರರ ಜೀವಗಳಿಗೆ ಜೀವದಾನ ನೀಡಿದ ಸಾರ್ಥಕತೆಯ, ತಾಯಿ ಹೃದಯದ ಶ್ರೀಮಂತಿಕೆಯ ಮಮತಾ ಶೆಟ್ಟಿಯವರ ಧೈರ್ಯದ ದಿಟ್ಟ ನಿರ್ಧಾರವು ಇತರರಿಗೆ ಮಾದರಿಯಾಗಿದೆ. ಇದು ಪ್ರೇರಣಾದಾಯಿ ನಡೆಯಾಗಿದ್ದು, ಇತರರಿಗೆ ಅನುಕರಣೀಯವೂ ಹೌದು. ಈ ಹೃದಯ ವೈಶಾಲ್ಯತೆಯನ್ನು ಗೌರವಿಸಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಮಮತಾ ಶೆಟ್ಟಿಯವರನ್ನು ಗೌರವಿಸಿದೆ. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸಂದೇಶ ಶೆಟ್ಟಿ, ನಿರ್ದೇಶಕರಾದ ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಶಿವ ಗೌಡ, ವೀರಪ್ಪ ಪರವ, ಜಾರಪ್ಪ…

Read More

ಸುರತ್ಕಲ್: ಇಲ್ಲಿನ ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ನಾಗೇಶ್‌ ಕುಲಾಲ್‌, ಉಪಾಧ್ಯಕ್ಷರಾಗಿ ಮಾಧವ ಬಂಗೇರ ಆಯ್ಕೆಯಾಗಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷ -ಉಪಾಧ್ಯಕ್ಷರ ಹಾಗೂ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ಚುನಾವಣಾಧಿಕಾರಿ ನಾಗೇಂದ್ರ ಇವರ ಸಮ್ಮುಖದಲ್ಲಿ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಿತು. ಆಯ್ಕೆ ಪ್ರಕ್ರಿಯೆ ವೇಳೆ ಸಂಘದ ನಿರ್ದೇಶಕರಾದ, ಮುದ್ದು ಮೂಲ್ಯ, ಭೋಜ ಬಂಗೇರ, ಮೋಹನ್ ಐ, ಗಂಗಾಧರ ಬಂಜನ್, ವಾಸು ಬಂಜನ್, ಲೀಲಾ ಬಂಜನ್, ಉಷಾ ಆರ್‌ ಬಂಗೇರ, ಮಮತಾ ಗಣೇಶ್, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮೂಲ್ಯ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More